ಕರಾವಳಿಯಲ್ಲಿ ಮತ್ತೆ ನೈತಿಕ ಪೊಲೀಸ್ ಗಿರಿ| ಮಹಿಳೆಯನ್ನು ಕಾರಿನಲ್ಲಿ ಕರೆದೊಯ್ದ ಆರೋಪದಲ್ಲಿ ಅನ್ಯಕೋಮಿನ ಕಾರು ಚಾಲಕನ ಮೇಲೆ ಹಲ್ಲೆ
ಸಮಗ್ರ ನ್ಯೂಸ್: ಮಹಿಳೆಯನ್ನು ತನ್ನ ಕಾರಲ್ಲಿ ಕರೆದೊಯ್ಯುತ್ತಿದ್ದ ಎಂಬ ಕಾರಣಕ್ಕೆ ಕಾರಲ್ಲಿ ಹೋಗುತ್ತಿದ್ದ ಅನ್ಯಕೋಮಿನ ವ್ಯಕ್ತಿಗೆ ಕೆಲ ಯುವಕರು ತಡೆದು ಹಲ್ಲೆ ನಡೆಸಿದ್ದಾರೆನ್ನಲಾದ ಘಟನೆ ದ.ಕ ಜಿಲ್ಲೆಯ ಸುಳ್ಯ ತಾಲೂಕಿನ ತೊಡಿಕಾನದಿಂದ ವರದಿಯಾಗಿದೆ. ಸದ್ಯ ಸುಳ್ಯ ಪೋಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆಂದು ತಿಳಿದುಬಂದಿದೆ. ತಾಲೂಕಿನ ಅರಂತೋಡು ಕಡೆ ಟ್ಯಾಪಿಂಗ್ ಕೆಲಸ ವಹಿಸಿಕೊಂಡು ಮಾಡುತ್ತಿದ್ದ ಅನ್ಯಕೋಮಿನ ವ್ಯಕ್ತಿ ಮಹಿಳೆಯೊಬ್ಬರನ್ನು ತನ್ನ ಕಾರಲ್ಲಿ ಸುತ್ತಾಡಿಸುತ್ತಿದ್ದಾನೆ ಎಂಬ ಅನುಮಾನದಿಂದ ಕೆಲ ಯುವಕರು ಕಾರನ್ನು ಹಿಂಬಾಲಿಸುತ್ತಿದ್ದರು ಎನ್ನಲಾಗಿದೆ. ಇಂದು ಸಂಜೆ ಆತ ಮಹಿಳೆಯನ್ನು ಸುಳ್ಯಕ್ಕೆ […]









