Uncategorized

ಬ್ಯಾಂಕಾಕ್‍ನಿಂದ ಚೆನ್ನೈಗೆ ಬ್ಯಾಗ್‍ನಲ್ಲಿ ಮುಂಗುಸಿ ಸಾಗಾಟ|ಪ್ರಯಾಣಿಕ ಅರೆಸ್ಟ್

ಚೆನ್ನೈ: ಚೆಕ್ ಇನ್ ಬ್ಯಾಗೇಜ್‍ನಲ್ಲಿ ಬ್ಯಾಂಕಾಕ್‍ನಿಂದ ಅಕ್ರಮವಾಗಿ ಸಾಗಿಸಲಾಗಿದ್ದ 5 ವಿದೇಶಿ ಪ್ರಾಣಿಗಳನ್ನು ಚೆನ್ನೈನ ಕಸ್ಟಮ್ಸ್ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. ಇದೀಗ ಈ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದು, ಹಲವಾರು ಮುಂಗುಸಿ ಹಾಗೂ ಕ್ಯೂಕಸ್ ಅನ್ನು ಚೀಲದಲ್ಲಿ ಮರೆ ಮಾಡಲಾಗಿತ್ತು. ಈ ಎಲ್ಲಾ ಪ್ರಾಣಿಗಳು ಬ್ಯಾಂಕಾಕ್‍ನಿಂದ ಬಂದ ಪ್ರಯಾಣಿಕನ ಬ್ಯಾಗ್‍ನಲ್ಲಿತ್ತು. ಅದನ್ನು ಕಸ್ಟಮ್ಸ್ ಅಧಿಕಾರಿಗಳು ವಶಪಡಿಸಿಕೊಂಡು ಥೈಲ್ಯಾಂಡ್‍ಗೆ ಕಳುಹಿಸಿದ್ದಾರೆ. ಮುಂಗುಸಿ ಅಂಗೋಲಾ, ಉತ್ತರ ನಮೀಬಿಯಾ, ದಕ್ಷಿಣ ಆಫ್ರಿಕಾದ ಕ್ವಾಝುಲು-ನಟಾಲ್, ಜಾಂಬಿಯಾ ಮತ್ತು ಪೂರ್ವ ಆಫ್ರಿಕಾಕ್ಕೆ ಸ್ಥಳೀಯವಾಗಿರುವ ಮುಂಗುಸಿ […]

ಬ್ಯಾಂಕಾಕ್‍ನಿಂದ ಚೆನ್ನೈಗೆ ಬ್ಯಾಗ್‍ನಲ್ಲಿ ಮುಂಗುಸಿ ಸಾಗಾಟ|ಪ್ರಯಾಣಿಕ ಅರೆಸ್ಟ್ Read More »

ನೀನು ನೋಡಲು ಕಪ್ಪಾಗಿದ್ಯಾ ಎಂದ ಪತಿಯನ್ನು ಕೊಚ್ಚಿ ಕೊಂದ ಪತ್ನಿ

ಚಂಡೀಗಢ: ನೀನು ನೋಡಲು ಕಪ್ಪಾಗಿದ್ಯಾ, ನಿನ್ನ ಮೈ ಬಣ್ಣ ಕಪ್ಪು ಎಂದು ಹೀಯಾಳಿಸುತ್ತಿದ್ದ ಪತಿಯನ್ನು ಪತ್ನಿ ಹತ್ಯೆಗೈದಿರುವ ಘಟನೆ ಛತ್ತೀಸ್‍ಗಢದ ದುರ್ಗ್ ಜಿಲ್ಲೆಯಲ್ಲಿ ನಡೆದಿದೆ. ಅನಂತ್ ಸೋನ್ವಾನಿ ಮೃತ ವ್ಯಕ್ತಿಯಾಗಿದ್ದಾರೆ ಮತ್ತು ಆರೋಪಿ ಪತ್ನಿಯನ್ನು ಸಂಗೀತಾ ಸೋನ್ವಾನಿ ಎಂದು ಗುರುತಿಸಲಾಗಿದೆ. ಸೋಮವಾರ ಸಂಗೀತಾಳನ್ನು ಬಂಧಿಸಿರುವುದಾಗಿ ಪೊಲೀಸ್ ಉಪವಿಭಾಗಾಧಿಕಾರಿ (ಪಟಾನ್ ಪ್ರದೇಶ) ದೇವಾಂಶ್ ರಾಥೋಡ್ ತಿಳಿಸಿದ್ದಾರೆ. ಈ ಸಂಬಂಧ ವಿಚಾರಣೆ ವೇಳೆ ಅನಂತ್ ನನ್ನನ್ನು ಯಾವಾಗಲೂ ಕೊಳಕಿ ಎಂದು ರೇಗಿಸುತ್ತಿದ್ದ ಮತ್ತು ಕಪ್ಪು ಮೈ ಬಣ್ಣ ಹೊಂದಿರುವ ಕಾರಣ

ನೀನು ನೋಡಲು ಕಪ್ಪಾಗಿದ್ಯಾ ಎಂದ ಪತಿಯನ್ನು ಕೊಚ್ಚಿ ಕೊಂದ ಪತ್ನಿ Read More »

ಮಂಗಳೂರು ವಿವಿ ವಿಭಜನೆ| ಶೀಘ್ರದಲ್ಲೇ ಕೊಡಗು ವಿಶ್ವವಿದ್ಯಾಲಯ ಅಸ್ತಿತ್ವಕ್ಕೆ

ಸಮಗ್ರ ನ್ಯೂಸ್: ದಕ್ಷಿಣ ಕನ್ನಡ, ಉಡುಪಿ ಹಾಗೂ ಕೊಡಗು ಜಿಲ್ಲೆಗಳನ್ನು ಒಳಗೊಂಡಿದ್ದ ಮಂಗಳೂರು ವಿಶ್ವವಿದ್ಯಾನಿಲಯವು ಇನ್ನು ಮುಂದೆ ಕೊಡಗು ಜಿಲ್ಲೆಯ ಶೈಕ್ಷಣಿಕ ಚಟುವಟಿಕೆಯ ಅಧಿಕಾರವನ್ನು ಕಳೆದುಕೊಳ್ಳಲಿದೆ. ಕೊಡಗು ಜಿಲ್ಲೆಗೆ ಸಂಬಂಧಿಸಿದ 24 ಕಾಲೇಜುಗಳು ಹೊಸದಾಗಿ ನಿರ್ಮಾಣವಾಗಲಿರುವ ಕೊಡಗು ವಿ.ವಿ.ಗೆ ಸೇರ್ಪಡೆಯಾಗಲಿದೆ. ಮಂಗಳೂರು ವಿ.ವಿ.ಯಲ್ಲಿ 215 ಕಾಲೇಜುಗಳು ಸಂಯೋಜಿತಗೊಂಡಿದ್ದು, ಅವುಗಳಲ್ಲಿ 24 ಕಾಲೇಜುಗಳು ಕೊಡಗು ವಿ.ವಿ.ಯ ಪಾಲಾಗಲಿವೆ. ಮಡಿಕೇರಿಯ ಫೀಲ್ಡ್‌ ಮಾರ್ಷಲ್‌ ಕಾರ್ಯಪ್ಪ ಕಾಲೇಜು, ಚಿಕ್ಕಳುವಾರದಲ್ಲಿರುವ ಮಂಗಳೂರು ವಿ.ವಿ. ಸ್ನಾತಕೊಕೋತ್ತರ ಹಾಗೂ ಸಂಶೋಧನ ಕೇಂದ್ರ ಸೇರಿದಂತೆ ಅಲ್ಲಿನ ಸರಕಾರಿ

ಮಂಗಳೂರು ವಿವಿ ವಿಭಜನೆ| ಶೀಘ್ರದಲ್ಲೇ ಕೊಡಗು ವಿಶ್ವವಿದ್ಯಾಲಯ ಅಸ್ತಿತ್ವಕ್ಕೆ Read More »

ಬೆಸ್ಕಾಂ ಗ್ರಾಹಕರಿಗೆ ಉಚಿತ ಡಿಜಿಟಲ್ ವಿದ್ಯುತ್ ಮೀಟರ್ ಅಳವಡಿಕೆ

ಸಮಗ್ರ ನ್ಯೂಸ್ : ಬೆಸ್ಕಾಂನ ಉಚಿತ ಡಿಜಿಟಲ್ ವಿದ್ಯುತ್ ಮೀಟರ್ ಅಳವಡಿಕೆಗೆ ಮುಂದಾಗಿದ್ದು, ಯಾಂತ್ರಿಕ ವಿದ್ಯುತ್ ಮೀಟರ್ ಗಳಿಗಿಂತ ಸುಧಾರಿತ ತಂತ್ರಜ್ಞಾನ ಹೊಂದಿರುವ ಡಿಜಿಟಲ್ ವಿದ್ಯುತ್ ಮೀಟರ್ ಗಳನ್ನು ಉಚಿತವಾಗಿ ಮನೆ ಬಾಗಿಲಿಗೆ ಅಳವಡಿಸಲು ಬೆಸ್ಕಾಂ ಮುಂದಾಗಿದೆ. ಈಗಾಗಲೇ ಬೆಂಗಳೂರು ಮಹಾನಗರ ವ್ಯಾಪ್ತಿಯಲ್ಲಿ 1,57,379 ಡಿಜಿಟಲ್ ಮೀಟರ್ ಗಳನ್ನು ಅಳವಡಿಸಲಾಗಿದೆ. ಈ ಡಿಜಿಟಲ್ ವಿದ್ಯುತ್ ಮೀಟರ್ ಅಳವಡಿಕೆಗೆ ಗ್ರಾಹಕರು ಯಾವುದೇ ಶುಲ್ಕ ಪಾವತಿಸುವ ಅವಶ್ಯಕತೆ ಇರುವುದಿಲ್ಲ. ಹಾಗೂ ಅರ್ಜಿ ಸಲ್ಲಿಸುವ ಅವಶ್ಯಕತೆಯೂ ಇರುವುದಿಲ್ಲ ಎಂದು ಬೆಸ್ಕಾಂ ತಿಳಿಸಿದೆ.

ಬೆಸ್ಕಾಂ ಗ್ರಾಹಕರಿಗೆ ಉಚಿತ ಡಿಜಿಟಲ್ ವಿದ್ಯುತ್ ಮೀಟರ್ ಅಳವಡಿಕೆ Read More »

ಸುಳ್ಯ : ಸರಕಾರಿ ಜಾಗ ಅತಿಕ್ರಮಣ ಪ್ರಕರಣ ಸಂಬಂಧ

ಪ್ರತಿಭಟನೆ ಕೈ ಬಿಟ್ಟ ಅಂಬೇಡ್ಕರ್ ರಕ್ಷಣಾ ವೇದಿಕೆ ಸಮಗ್ರ ನ್ಯೂಸ್: ಸುಳ್ಯ ತಾಲೂಕು ಕಸಬ ಗ್ರಾಮದ ಜಯನಗರದ ಸರಕಾರಿ ಶಾಲೆಯ ಹತ್ತಿರ ಗೋಪಾಲ್ ನಾಯಕ್ ಎಂಬವರು ಸರಕಾರಿ ಜಾಗವನ್ನು ಅತಿಕ್ರಮಣ ಮಾಡಲು ಜೆಸಿಬಿ ಮೂಲಕ ಮಣ್ಣನ್ನು ತೆರವುಗೊಳಿಸಿದ್ದರು. ಈ ಹಿನ್ನಲೆ ಅಂಬೇಡ್ಕರ್ ರಕ್ಷಣಾ ವೇದಿಕೆಯಿಂದ ಸರಕಾರಿ ಜಾಗವನ್ನು ಆಕ್ರಮಿಸಿಕೊಂಡ ಗೋಪಾಲ್ ನಾಯಕ್ ಎಂಬವರ ಮೇಲೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕೆಂದು ಮಾಧ್ಯಮದ ಮೂಲಕ ಪಿ.ಸುಂದರ ಪಾಟಾಜೆಯವರು ಪ್ರತಿಭಟನೆಯ ಎಚ್ಚರಿಕೆಯನ್ನು ನೀಡಿದ್ದರು. ಆ ವಿಚಾವಾಗಿ ಸೆ.22 ರಂದು ಪಿ.ಸುಂದರ

ಸುಳ್ಯ : ಸರಕಾರಿ ಜಾಗ ಅತಿಕ್ರಮಣ ಪ್ರಕರಣ ಸಂಬಂಧ Read More »

ಮಹಾನಗರ ಪಾಲಿಕೆಯ ಆಹಾರ ಮೇಳ ಆಯೋಜನೆ ಆಸಕ್ತರಿಂದ ಅರ್ಜಿ ಆಹ್ವಾನ

ಸಮಗ್ರ ನ್ಯೂಸ್ : ಮಹಾನಗರ ಪಾಲಿಕೆಯು ಸೆ. 24 ಮತ್ತು 27 ರಂದು ಅಡುಗೆ ಸ್ಪರ್ಧೆ ಮತ್ತು ತಿನ್ನುವ ಸ್ಪರ್ಧೆ ಹಾಗೂ ಸೆ. 26 ರಿಂದ ಅ.05 ರವರೆಗೆ ಆಹಾರ ಮೇಳವನ್ನು ಆಯೋಜನೆ ಮಾಡಲಾಗಿದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. 24/09/2022 ರಂದು ನಗರದ ಶ್ರೀ ನಿಜಲಿಂಗಪ್ಪ ಸಮುದಾಯ ಭವನದಲ್ಲಿ ಮಧ್ಯಾಹ್ನ 2 ರಿಂದ 3 ರವರೆಗೆ ಅತ್ತೆ ಸೊಸೆಯರಿಗೆ ಅಡುಗೆ ಮಾಡುವ ಸ್ಪರ್ಧೆ ಹಾಗೂ ಸಂಜೆ 04 ರಿಂದ 05ರವರೆಗೆ ಪದವಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿನಿಯರಿಗೆ ಅಡುಗೆ

ಮಹಾನಗರ ಪಾಲಿಕೆಯ ಆಹಾರ ಮೇಳ ಆಯೋಜನೆ ಆಸಕ್ತರಿಂದ ಅರ್ಜಿ ಆಹ್ವಾನ Read More »

ವಿಜಯಪುರ ಜಿಲ್ಲೆಯಲ್ಲಿ ಸೆ.26 ರಂದು 26ರಂದು ಮಿನಿ ಉದ್ಯೋಗ ಮೇಳ

ಸಮಗ್ರ ನ್ಯೂಸ್: ವಿಜಯಪುರ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದಿಂದ ಸೆಪ್ಟೆಂಬರ್ 26ರಂದು ಮಿನಿ ಉದ್ಯೋಗ ಮೇಳ ಆಯೋಜಿಸಲಾಗಿದೆ. ಬೆಳಿಗ್ಗೆ 10 ರಿಂದ ಸಂಜೆ 4ಗಂಟೆಗಳವರೆಗೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವಿಜಯಪುರದಲ್ಲಿ, ವಿವಿಧ ಖಾಸಗಿ ಕ್ಷೇತ್ರಗಳಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ ಮಾಡಿಕೊಳ್ಳಲಾಗುವುದು. ಈ ಮೇಳದಲ್ಲಿ ಎಸ್. ಎಸ್.ಎಲ್.ಸಿ., ಪಿ.ಯು.ಸಿ,ಐ.ಟಿ.ಐ, ಪದವಿ ಪಾಸ್ ಆದಂತಹ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಭಾಗವಹಿಸಬಹುದು. ಹೆಚ್ಚಿನ ಮಾಹಿತಿಗೆ ಈ ಕಚೇರಿಯನ್ನು ಖುದ್ದಾಗಿ ಅಥವಾ ದೂರವಾಣಿ ಸಂಖ್ಯೆ 08352-250383 : 9945000793

ವಿಜಯಪುರ ಜಿಲ್ಲೆಯಲ್ಲಿ ಸೆ.26 ರಂದು 26ರಂದು ಮಿನಿ ಉದ್ಯೋಗ ಮೇಳ Read More »

ಅ.2 ಕ್ಕೆ ಮುದ್ದು ಪ್ರಾಣಿಗಳ ಪ್ರದರ್ಶನ; ಚಾರ್ಲಿ 777 ಸಿನಿಮಾ ಖ್ಯಾತಿಯ ‌ಶ್ವಾನ ಭಾಗಿ

ಮೈಸೂರು: ಅ.2ರಂದು ದಸರಾ ರಾಜ್ಯ ಮಟ್ಟದಲ್ಲಿ ನಗರದ ಹಾಕಿ ಮೈದಾನದಲ್ಲಿ ಮುದ್ದು ಪ್ರಾಣಿಗಳ ಪ್ರದರ್ಶನ ನಡೆಯಲಿದ್ದು, ಇದರಲ್ಲಿ ಚಾರ್ಲಿ 777 ಸಿನಿಮಾ ಖ್ಯಾತಿಯ ಶ್ವಾನ ಭಾಗವಹಿಸುತ್ತಿರುವುದು ವಿಶೇಷವಾಗಿದೆ.

ಅ.2 ಕ್ಕೆ ಮುದ್ದು ಪ್ರಾಣಿಗಳ ಪ್ರದರ್ಶನ; ಚಾರ್ಲಿ 777 ಸಿನಿಮಾ ಖ್ಯಾತಿಯ ‌ಶ್ವಾನ ಭಾಗಿ Read More »

ನಕಲಿ ವೆಬ್ ಸೈಟ್ ತೆರೆದು ವಂಚನೆ; 3ಮಂದಿಯ ಬಂಧನ

ಬೆಂಗಳೂರು: ವಿಆರ್‌ಎಲ್‌ ಮೂವರ್ಸ್ ಅಂಡ್‌ ಪ್ಯಾಕರ್ಸ್‌ ಎಂಬ ಹೆಸರಿನಲ್ಲಿ ನಕಲಿ ವೆಬ್‌ಸೈಟ್‌ ಓಪನ್ ಮಾಡಿ ಸಾರ್ವಜನಿಕರಿಗೆ ವಂಚನೆ ಮಾಡುತ್ತಿದ್ದ ಬಿಹಾರ ಮೂಲಕ 3ಮಂದಿ ಆರೋಪಿಗಳನ್ನು ಈಶಾನ್ಯ ವಿಭಾಗದ ಸಿಇಎನ್‌ ಪೊಲೀಸರು ಬಂಧಿಸಿದ್ದಾರೆ. ಯಶವಂತಪುರದಲ್ಲಿ ನೆಲೆಸಿದ್ದ ಬ್ರಹ್ಮದೇವ್‌ ಯಾದವ್‌ (25), ಮುಕೇಶ್‌ ಕುಮಾರ್‌ ಯಾದವ್‌, ವಿಜಯ್‌ ಕುಮಾರ್‌ ಯಾದವ್‌ (22) ಬಂಧಿತರು. ನಗರದಿಂದ ಹಲವು ಕಡೆಗೆ ದ್ವಿಚಕ್ರ ವಾಹನ ಕಳುಹಿಸಲು ಗೂಗಲ್‌ಗೆ ಹೋಗಿ ಪ್ಯಾಕರ್ಸ್‌ ಅಂಡ್‌ ಮೂವರ್ಸ್‌ ಎಂದು ನಮೂದಿಸಿದರೆ ವಿಆರ್‌ಎಲ್‌ ಮೂವರ್ಸ್‌ ಅಂಡ್‌ ಪ್ಯಾಕರ್ಸ್‌ ಎಂಬ ಹೆಸರಿನಲ್ಲಿ

ನಕಲಿ ವೆಬ್ ಸೈಟ್ ತೆರೆದು ವಂಚನೆ; 3ಮಂದಿಯ ಬಂಧನ Read More »

ಕ್ರಿಕೆಟ್ ಬೆಟ್ಟಿಂಗ್ ಪ್ರಕರಣ; ಕಾನ್ಸ್ ಟೇಬಲ್ ವಿರುದ್ಧ ದೂರು ದಾಖಲು

ಬೆಂಗಳೂರು: ಕ್ರಿಕೆಟ್‌ ಬೆಟ್ಟಿಂಗ್‌ ಪ್ರಕರಣಕ್ಕೆ ಸಂಬಂಧಿಸಿ ಸದಾಶಿವನಗರ ಕಾನ್ಸ್‌ ಟೇಬಲ್‌ ಶಿವಕುಮಾರ್‌ ಮೇಲೆ ಸುಲಿಗೆ ಆರೋಪ ಕೇಳಿ ಬಂದಿದ್ದು, ಸುಮಾರು ಮೂರು ಲಕ್ಷ ಹಣ ವಸೂಲಿ ಮಾಡಿರುವ ಬಗ್ಗೆ ದೂರು ದಾಖಲಾಗಿದೆ. ಸಹಕಾರದ ನಗರದ ಉದ್ಯಮಿಗೆ ಬೆದರಿಸಿ ಹಣ ಪಡೆದ ಆರೋಪ ಕೇಳಿಬಂದಿದೆ. ಈ ಬಗ್ಗೆ ಈಶಾನ್ಯ ವಿಭಾಗ ಡಿಸಿಪಿಐಗೆ ಸಹಕಾರ ನಗರದ ಉದ್ಯಮಿ ಯೋಗೇಶ್‌ ದೂರು ನೀಡಿದ್ದಾರೆ. ಹಾಲು ಉದ್ಯಮಿಯಾಗಿರುವ ಯೋಗೇಶ್‌ ಗೆ ಪೊಲೀಸ್‌ ಪೇದೆ ಶಿವಕುಮಾರ್‌ ಕ್ರಿಕೆಟ್‌ ಬೆಟ್ಟಿಂಗ್‌ ವಿಚಾರವಾಗಿ ಹೆದರಿಸಿದ್ದರು ಎನ್ನಲಾಗಿದೆ. ಮೂರು

ಕ್ರಿಕೆಟ್ ಬೆಟ್ಟಿಂಗ್ ಪ್ರಕರಣ; ಕಾನ್ಸ್ ಟೇಬಲ್ ವಿರುದ್ಧ ದೂರು ದಾಖಲು Read More »