Uncategorized

ಮಡಿಕೇರಿ; ಕೆಎಸ್ ಆರ್ ಟಿಸಿ ಬಸ್ ರಸ್ತೆ ಬದಿ ಉರುಳಿ ಬಿದ್ದು, 21 ಪ್ರಯಾಣಿಕರಿಗೆ ಗಾಯ

ಮಡಿಕೇರಿ : ಮೈಸೂರಿಗೆ ತೆರಳುತ್ತಿದ ಕೆಎಸ್ಸಾರ್ಟಿಸಿ ಬಸ್ ಇಲ್ಲಿನ ಬೋಯಿಕೇರಿ ಬಳಿಯ ರಸ್ತೆ ಬದಿ ಉರುಳಿ ಬಿದ್ದ ಪರಿಣಾಮ 21 ಪ್ರಯಾಣಿಕರು ಗಾಯಗೊಂಡಿದ್ದಾರೆ. ಮಡಿಕೇರಿಯಿಂದ ಮೈಸೂರಿಗೆ ತೆರಳುತ್ತಿದ್ದ ಬಸ್‌ ಗೆ ಬೋಯಿಕೇರಿ ತಿರುವಿನಲ್ಲಿ ಮಡಿಕೇರಿ ಕಡೆ ಬರುತ್ತಿದ್ದ ಬೈಕ್‌ ಅಡ್ಡ ಬಂದ ಪರಿಣಾಮ ಬಸ್ ನ ಚಕ್ರಕ್ಕೆ ಬೈಕ್ ಸಿಲುಕಿ ಮಗುಚಿ ಬಿದ್ದಿದೆ ಎಂದು ಹೇಳಲಾಗಿದೆ. ಸದ್ಯ ಬೈಕ್ ಸವಾರ ಸಣ್ಣ ಪುಟ್ಟಗಾಯಗಳಿಂದ ಪಾರಾಗಿದ್ದಾನೆ ಎಂದು ತಿಳಿದು ಬಂದಿದೆ. ಮಡಿಕೇರಿ ಗ್ರಾಮಂತರ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಮಡಿಕೇರಿ; ಕೆಎಸ್ ಆರ್ ಟಿಸಿ ಬಸ್ ರಸ್ತೆ ಬದಿ ಉರುಳಿ ಬಿದ್ದು, 21 ಪ್ರಯಾಣಿಕರಿಗೆ ಗಾಯ Read More »

ಹೊಸ ಅತಿಥಿಯ ಆಗಮನದ ನಿರೀಕ್ಷೆಯಲ್ಲಿ ನಟ ಧೃವಾ ಸರ್ಜಾ ಹಾಗೂ ಪ್ರೇರಣಾ ದಂಪತಿ

ಬೆಂಗಳೂರು: ಧೃವಾ ಸರ್ಜಾ ಹಾಗೂ ಪ್ರೇರಣಾ ಮನೆಗೆ ಹೊಸ ಅತಿಥಿಯನ್ನು ಬರಮಾಡಿಕೊಳ್ಳುವ ಖುಷಿಯಲ್ಲಿದ್ದಾರೆ. ತಾವು ಪೋಷಕರಾಗುತ್ತಿರುವ ವಿಚಾರವನ್ನು ಪತ್ನಿ ಪ್ರೇರಣಾ ಬೇಬಿ ಬಂಪ್ ಫೋಟೋ ಶೂಟ್ ಮೂಲಕ ಧೃವಾ ಸರ್ಜಾ ತಿಳಿಸಿದ್ದಾರೆ. ಕನ್ನಡ ಚಿತ್ರರಂಗದ ಸ್ಟಾರ್ ನಟ ಧೃವಾ ಸರ್ಜಾ ತಂದೆಯಾಗುತ್ತಿದ್ದಾರೆ. ಈ ಸಿಹಿ ಸುದ್ದಿಯನ್ನು ಸೋಷಿಯಲ್ ಮೀಡಿಯಾ ಮೂಲಕ ಅಭಿಮಾನಿಗಳಿಗೆ ತಿಳಿಸಿದ್ದಾರೆ. ನಾವು ಜೀವನದ ಹಂತಕ್ಕೆ ಪ್ರವೇಶಿಸಿದ್ದೇವೆ. ಶೀಘ್ರದಲ್ಲಿ ಬರಲಿರುವ ಮಗುವನ್ನು ಆಶೀರ್ವದಿಸಿ ಎಂದು ಧೃವಾ ಸರ್ಜಾ ತಮ್ಮ ಪೋಸ್ಟ್‌ನಲ್ಲಿ ಬರೆದುಕೊಂಡಿದ್ದಾರೆ. ಸದ್ಯ ಈ ಬೇಬಿ

ಹೊಸ ಅತಿಥಿಯ ಆಗಮನದ ನಿರೀಕ್ಷೆಯಲ್ಲಿ ನಟ ಧೃವಾ ಸರ್ಜಾ ಹಾಗೂ ಪ್ರೇರಣಾ ದಂಪತಿ Read More »

ಮನೆಯಲ್ಲಿದ್ದ ಕುರಿಯನ್ನು ಮಾರಿದ ತಾಯಿ| ಸಿಟ್ಟಿಗೆದ್ದ ಮಗ ಮಾಡಿದ್ದೇನು ಗೊತ್ತ..?

ಸಮಗ್ರ ನ್ಯೂಸ್ : ಮನೆಯಲ್ಲಿದ್ದ ಕುರಿ ಮಾರಿದಳು ಎಂಬ ಸಿಟ್ಟಿನಿಂದ ಮಗನೇ ತಾಯಿಯನ್ನು ಕೊಂದ ಘಟನೆಯೊಂದು ರಾಜಸ್ಥಾನದ ಜಲ್ವಾರ ಜಿಲ್ಲೆಯಲ್ಲಿ ನಡೆದಿದೆ. ಸೆಮ್ಲಿಯಾ ಗ್ರಾಮದ ನೊದಯಾಂಭಿ ಮೇಘ್ವಾಲ್‌(40) ಮೃತ ಮಹಿಳೆ. ಆಕೆಯ ಪುತ್ರ 12ನೇ ತರಗತಿಯಲ್ಲಿ ಓದುತ್ತಿದ್ದು, ಅಮ್ಮ ಮನೆಯಲ್ಲಿದ್ದ ಕುರಿಯನ್ನು ಮಾರಿದ್ದರಿಂದಾಗಿ ಸಿಟ್ಟಾಗಿದ್ದ ಆತ ಗುರುವಾರ ಸಂಜೆ ಅಮ್ಮನಿಗೆ ಚಾಕು ಚುಚ್ಚಿದ್ದಾನೆ.ನಂತರ ಆಕೆಯ ಶವವನ್ನು ಬಾಕ್ಸ್‌ ಒಂದರಲ್ಲಿ ಮುಚ್ಚಿಟ್ಟಿದ್ದಾನೆ. ಮನೆಗೆ ಬಂದ ತಂದೆಯು ತಾಯಿಯ ಬಗ್ಗೆ ವಿಚಾರಿಸಿದಾಗ ಆಕೆ ಹೊಲಕ್ಕೆ ತೆರಳಿದ್ದಾಳೆ ಎಂದು ಹೇಳಿದ್ದಾನೆ. ಗದರಿಸಿ ಕೇಳಿದಾಗ

ಮನೆಯಲ್ಲಿದ್ದ ಕುರಿಯನ್ನು ಮಾರಿದ ತಾಯಿ| ಸಿಟ್ಟಿಗೆದ್ದ ಮಗ ಮಾಡಿದ್ದೇನು ಗೊತ್ತ..? Read More »

ನಿಂತಿದ್ದ ಬಸ್ ಗೆ ಟ್ರಕ್ ಡಿಕ್ಕಿ, 4 ಮಂದಿ ಸಾವು, 24 ಮಂದಿಗೆ ಗಾಯ

ಸಮಗ್ರ ನ್ಯೂಸ್:  ಶನಿವಾರ ಮುಂಜಾನೆ ಉತ್ತರ ಪ್ರದೇಶದ ಬಾರಾಬಂಕಿ ಜಿಲ್ಲೆಯಲ್ಲಿ ನಿಂತಿದ್ದ ಬಸ್‌ಗೆ ವೇಗವಾಗಿ ಬಂದ ಟ್ರಕ್ ಒಂದು ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ನೇಪಾಳಿ ಪ್ರಯಾಣಿಕರು ಸಾವನ್ನಪ್ಪಿದ್ದು, 24 ಮಂದಿ ಗಾಯಗೊಂಡಿದ್ದಾರೆ. ಪೊಲೀಸ್ ವರದಿ ಪ್ರಕಾರ, 60 ನೇಪಾಳದ ವಲಸೆ ಕಾರ್ಮಿಕರನ್ನು ಹೊತ್ತ ಸ್ಲೀಪರ್ ಬಸ್ ಗೋವಾಕ್ಕೆ ತೆರಳುತ್ತಿದ್ದಾಗ ರಾಮನಗರ ಪೊಲೀಸ್ ಠಾಣೆ ವ್ಯಾಪ್ತಿಯ ಮಹಾಂಗುಪುರ ಗ್ರಾಮದಲ್ಲಿ ಅದರ ಒಂದು ಟೈರ್ ಪಂಕ್ಚರ್ ಆಗಿದೆ. ಬಸ್ಸಿನ ಚಾಲಕ ವಾಹನವನ್ನು ರಸ್ತೆಬದಿಯಲ್ಲಿ ನಿಲ್ಲಿಸಿ ಟೈರ್ ಬದಲಾಯಿಸುವ ವೇಳೆ

ನಿಂತಿದ್ದ ಬಸ್ ಗೆ ಟ್ರಕ್ ಡಿಕ್ಕಿ, 4 ಮಂದಿ ಸಾವು, 24 ಮಂದಿಗೆ ಗಾಯ Read More »

ಪ್ರಧಾನಿ ಮೋದಿಗೆ ಮಾಜಿ ಸಿಎಂ ಸಿದ್ದರಾಮಯ್ಯ ಟ್ವೀಟ್ ಚಾಟಿ| ಇದು ವಿಕಾಸ ದರ್ಶನವೋ ವಿನಾಶ ದರ್ಶನವೋ ಉತ್ತರಿಸಿ ಮೋದಿ ಎಂದು ಪ್ರಶ್ನೆಗಳ ಸುರಿಮಳೆಗೈದ ಸಿದ್ದು

ಸಮಗ್ರ ನ್ಯೂಸ್: ಪ್ರಧಾನ ಮಂತ್ರಿ ನರೇಂದ್ರ ಮೋದಿ ಮಂಗಳೂರಿಗೆ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಮಾಜಿ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ. ಸನ್ಮಾನ್ಯ ಪ್ರಧಾನಮಂತ್ರಿ ನರೇಂದ್ರ ಮೋದಿಯವರಿಗೆ ಮಂಗಳೂರಿಗೆ ಸ್ವಾಗತ, ನಿಮ್ಮ ಭೇಟಿ ವಿಕಾಸ ದರ್ಶನಕ್ಕೋ, ವಿನಾಶ ದರ್ಶನಕ್ಕೋ? ಎಂದು ಪ್ರಶ್ನಿಸಿದ್ದಾರೆ. ಈ ಸಂಬಂಧ ಸಾಮಾಜಿಕ ಮಾಧ್ಯಮಗಳಲ್ಲಿ ಬರೆದುಕೊಂಡಿರುವ ಸಿದ್ದರಾಮಯ್ಯ ನಿಮ್ಮ ಇಂದಿನ ಭಾಷಣದಲ್ಲಿ ಈ ಪ್ರಶ್ನೆಗೆ ಉತ್ತರ ಕೊಡಬೇಕೆಂದು ವಿನಯಪೂರ್ವಕ ಮನವಿ. ದಕ್ಷಿಣ ಕನ್ನಡದ ಉದ್ಯಮ ಶೀಲ ಹಿರಿಯರು ಸಿಂಡಿಕೇಟ್, ಕಾರ್ಪೋರೇಷನ್, ವಿಜಯಾ, ಕೆನರಾ ಮತ್ತು ಕರ್ನಾಟಕ ಹೀಗೆ ಐದು

ಪ್ರಧಾನಿ ಮೋದಿಗೆ ಮಾಜಿ ಸಿಎಂ ಸಿದ್ದರಾಮಯ್ಯ ಟ್ವೀಟ್ ಚಾಟಿ| ಇದು ವಿಕಾಸ ದರ್ಶನವೋ ವಿನಾಶ ದರ್ಶನವೋ ಉತ್ತರಿಸಿ ಮೋದಿ ಎಂದು ಪ್ರಶ್ನೆಗಳ ಸುರಿಮಳೆಗೈದ ಸಿದ್ದು Read More »

ರಾಷ್ಟ್ರಗೀತೆಗೆ ಅಪಮಾನ; ಬರಗೂರು ರಾಮಚಂದ್ರಪ್ಪ ವಿರುದ್ದ ದೂರು

ಸಮಗ್ರ ನ್ಯೂಸ್: ರಾಷ್ಟ್ರಗೀತೆಗೆ ಅಪಮಾನ ಆರೋಪದ ಮೇಲೆ ಸಾಹಿತಿ ಬರಗೂರು ರಾಮಚಂದ್ರಪ್ಪ ಅವರ ವಿರುದ್ಧ ದೂರು ದಾಖಲಿಸಲಾಗಿದೆ. ಸಾಹಿತಿ ಬರಗೂರು ರಾಮಚಂದ್ರಪ್ಪ ವಿರುದ್ಧ ದೂರು ಬಿಜೆಪಿ ಈ ದೂರು ನೀಡಿದ್ದು, ಬೆಂಗಳೂರು ನಗರ ಪೊಲೀಸ್‌ ಆಯುಕ್ತ ಪ್ರತಾಪ್‌ ರೆಡ್ಡಿಗೆ ದೂರು ಸಲ್ಲಿಸಲಾಗಿದೆ. ಸಾಹಿತಿ ಬರಗೂರು ರಾಮಚಂದ್ರಪ್ಪ ರಾಷ್ಟ್ರಗೀತೆಗೆ ಅಪಮಾನ ಮಾಡಿದ್ದಾರೆ ಎಂದು ಆರೋಪಿಸಿ ಎಂಎಲ್‌ಸಿಗಳಾದ ರವಿಕುಮಾರ್‌, ಛಲವಾದಿ ನಾರಾಯಣಸ್ವಾಮಿ ಇಂದು ಬೆಂಗಳೂರು ನಗರ ಪೊಲೀಸ್‌ ಆಯುಕ್ತ ಪ್ರತಾಪ್‌ ರೆಡ್ಡಿ ಅವ್ರಿಗೆ ದೂರು ಸಲ್ಲಿಸಿದ್ದಾರೆ.

ರಾಷ್ಟ್ರಗೀತೆಗೆ ಅಪಮಾನ; ಬರಗೂರು ರಾಮಚಂದ್ರಪ್ಪ ವಿರುದ್ದ ದೂರು Read More »

ಅಧಿಕಾರಿಗಳ ಕಿರುಕುಳಕ್ಕೆ ಬಿಎಂಟಿಸಿ ಚಾಲಕ ನೇಣಿಗೆ ಶರಣು

ಬೆಂಗಳೂರು: ಬಿಎಂಟಿಸಿ ಚಾಲಕ ನೇಣಿಗೆ ಶರಣಾದ ಘಟನೆಯೊಂದು ಬೆಂಗಳೂರಿನಲ್ಲಿ ನಡೆದಿದೆ. ರಾಜರಾಜೇಶ್ವರಿ ನಗರ ಬಸ್ ಡಿಪೋ 21 ರ ಬಿಎಂಟಿಸಿ ಬಸ್​ ಚಾಲಕ ಮೃತ ದುರ್ದೈವಿ ಎಂದು ಗುರುತಿಸಲಾಗಿದೆ. ಅಧಿಕಾರಿಗಳ ಕಿರುಕುಳಕ್ಕೆ ಬೇಸತ್ತು ಸಾವಿಗೆ ಶರಣಾಗಿರುವ ಶಂಕೆ ವ್ಯಕ್ತವಾಗಿದೆ. ಈ ಹಿಂದೆಯೂ ಮೇಲಾಧಿಕಾರಿಗಳ ಕಿರುಕುಳಕ್ಕೆ ಬೇಸತ್ತು ಅನೇಕ ಬಿಎಂಟಿಸಿ ನೌಕರರು ಸಾವಿಗೆ ಶರಣಾಗಿದ್ದರು. ಅದರಂತೆ ಹೊಳೆಬಸಪ್ಪ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ. ಇದೇ ತಿಂಗಳ ಕಳೆದ 21 ರಂದು ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.

ಅಧಿಕಾರಿಗಳ ಕಿರುಕುಳಕ್ಕೆ ಬಿಎಂಟಿಸಿ ಚಾಲಕ ನೇಣಿಗೆ ಶರಣು Read More »

ಇಂಜಿನಿಯರ್ ಯುವತಿ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ

ಸಮಗ್ರ ನ್ಯೂಸ್ : ಇಂಜಿನಿಯರ್ ಯುವತಿ ಆತ್ಮಹತ್ಯೆ ಮಾಡಿಕೊಂಡ ಘಟನೆಯೊಂದು ಭುವನೇಶ್ವರದಲ್ಲಿ ನಡೆದಿದೆ. ಸ್ಥಳದಲ್ಲಿ ಡೆತ್ ನೋಟು ಸಿಕ್ಕಿದ್ದು, ಪ್ರೇಮ ವೈಫಲ್ಯದ ಬಗ್ಗೆ ಬರೆಯಲಾಗಿದೆ‌. ಶ್ವೇತಾ ಆತ್ಮಹತ್ಯೆ ಮಾಡಿಕೊಂಡ ಯುವತಿ. ಈಕೆ ಸ್ವತಃ ಉಸಿರು ಕಟ್ಟಿಸಿಕೊಂಡು‌ ಆತ್ಮಹತ್ಯೆ ಮಾಡಿಕೊಂಡಿದ್ದಾರೆ‌. ಘಟನೆ ಬಗ್ಗೆ ಈಕೆಯ ಪ್ರಿಯಕರ‌ ಸೌಮ್ಯಜಿತ್ ಮೇಲೆ‌ ಕುಟುಂಬಸ್ಥರು ದೂರು‌ ದಾಖಲಿಸಿದ್ದಾರೆ. ಶ್ವೇತಾ ಭುವನೇಶ್ವರದ ಪ್ರತಿಷ್ಠಿತ ಕಂಪೆನಿಯಲ್ಲಿ ಕೆಲಸ‌ ಮಾಡುತ್ತಿದ್ದರು. ಸೌಮ್ಯಜಿತ್ ನನ್ನು ಪ್ರೀತಿಸುತ್ತಿದ್ದು, ಆತ ಇದನ್ನೇ‌ ಬಂಡವಾಳವಾಗಿ ಬಳಸಿ ಆಕೆಯ ಖಾಸಗಿ ಚಿತ್ರ ತೆಗೆದು ಹಣಕ್ಕಾಗಿ

ಇಂಜಿನಿಯರ್ ಯುವತಿ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ Read More »

ಒಂದೇ ತರಗತಿಯ 3 ವಿದ್ಯಾರ್ಥಿಗಳು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನ

ಸಮಗ್ರ ನ್ಯೂಸ್: ಒಂದೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದ ಮೂವರು ವಿದ್ಯಾರ್ಥಿನಿಯರು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ಪಟ್ಟಣದಲ್ಲಿ ನಡೆದಿದೆ. ಪಟ್ಟಣದ ಹಿಂದುಳಿದ ವರ್ಗಗಳ ವಸತಿ ನಿಲಯದಲ್ಲಿ ಇದ್ದುಕೊಂಡು ಸರ್ಕಾರಿ ಪಿಯು ಕಾಲೇಜಿನಲ್ಲಿ ದ್ವಿತೀಯ ವರ್ಷದ ಕಲಾ ವಿಭಾಗದಲ್ಲಿ ವ್ಯಾಸಂಗ ಮಾಡುತ್ತಿದ್ದ ಈ ವಿದ್ಯಾರ್ಥಿನಿಯರು ಮಂಗಳವಾರ ಸಂಜೆ ಇಲಿ ಪಾಷಾಣ ಸೇವಿಸಿದ್ದು, ಅಸ್ವಸ್ಥಗೊಂಡಿದ್ದ ಅವರನ್ನು ಮೊದಲಿಗೆ ಜೆಸಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿದ ಬಳಿಕ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಮಂಗಳವಾರ ಸಂಜೆ

ಒಂದೇ ತರಗತಿಯ 3 ವಿದ್ಯಾರ್ಥಿಗಳು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನ Read More »

ರಾಜ್ಯ ಪ್ರಶಸ್ತಿ ನೀಡಲು ನಾಮ ನಿರ್ದೇಶನ ಸಲ್ಲಿಸಲು ಅರ್ಜಿ ಆಹ್ವಾನ

ಸಮಗ್ರ ನ್ಯೂಸ್ : ಪ್ರಸಕ್ತ ಸಾಲಿಗೆ ಮಕ್ಕಳ ಕಲ್ಯಾಣ ಕ್ಷೇತ್ರದಲ್ಲಿ ಕನಿಷ್ಠ 5 ವರ್ಷಗಳ ಕಾಲ ಅತ್ಯುತ್ತಮ ಸೇವೆ ಸಲ್ಲಿಸಿರುವಂತಹ ವ್ಯಕ್ತಿ ಹಾಗೂ ಸಂಸ್ಥೆಗಳಿಗೆ ರಾಜ್ಯ ಪ್ರಶಸ್ತಿ ನೀಡಲು ನಾಮ ನಿರ್ದೇಶನ ಸಲ್ಲಿಸಲು ಅರ್ಜಿ ಆಹ್ವಾನಿಸಲಾಗಿದೆ. ಸೆಪ್ಟಂಬರ್ 31 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಮಕ್ಕಳ ಕಲ್ಯಾಣ ಕ್ಷೇತ್ರದಲ್ಲಿ ಕನಿಷ್ಠ 5 ವರ್ಷಗಳ ಕಾಲ ಅತ್ಯುತ್ತಮ ಸೇವೆ ಸಲ್ಲಿಸಿರುವಂತಹ ವ್ಯಕ್ತಿಗಳಿಗೆ ತಲಾ ರೂ.25,000/-ಗಳ ನಗದು ಬಹುಮಾನ ಮತ್ತು ಪ್ರಶಸ್ತಿ ಪತ್ರ ಹಾಗೂ ಸಂಸ್ಥೆಗಳಿಗೆ ತಲಾ ರೂ.1,00,000/- ನಗದು

ರಾಜ್ಯ ಪ್ರಶಸ್ತಿ ನೀಡಲು ನಾಮ ನಿರ್ದೇಶನ ಸಲ್ಲಿಸಲು ಅರ್ಜಿ ಆಹ್ವಾನ Read More »