Uncategorized

ಇಂದಿನ ಚಿನ್ನ ಬೆಳ್ಳಿಯ ಬೆಲೆ ಹೀಗಿದೆ

ಕಳೆದ ವಾರಕ್ಕೆ ಹೋಲಿಸಿದರೆ ಈ ವಾರದ ಆರಂಭದಿಂದಲೇ ಆಭರಣ ಚಿನ್ನದ ಬೆಲೆ ಪ್ರತಿ ಗ್ರಾಂಗೆ ನೂರು ರೂ.ಗಿಂತಲೂ ಹೆಚ್ಚಾಗಿದೆ. ಇತ್ತೀಚೆಗೆ ಚಿನ್ನ, ಬೆಳ್ಳಿ ದರದಲ್ಲಿ ಭಾರಿ ವ್ಯತ್ಯಾಸವಾಗುತ್ತಿದೆ. ಶ್ರಾವಣ ಮಾಸ ಆರಂಭವಾಗಿರುವುದರಿಂದ ಸಾಲು ಸಾಲು ಹಬ್ಬಗಳು ಹಾಗೂ ಶುಭ ಸಮಾರಂಭಗಳ ಸಂಖ್ಯೆಯೂ ಹೆಚ್ಚಾಗಿದೆ. ಈ ಹಿನ್ನೆಲೆ ಚಿನ್ನದ ಬೆಲೆಯೂ ಹೆಚ್ಚಾಗುತ್ತಿದೆ. ಶ್ರಾವಣ ಮಾಸದಲ್ಲಿ ಆಭರಣ ಖರೀದಿ, ವಹಿವಾಟು ಸಹಜವಾಗೇ ಹೆಚ್ಚಿರುತ್ತದೆ. ರಾಜಧಾನಿ ನಗರ ಬೆಂಗಳೂರಿನಲ್ಲಿ ಇಂದು 22 ಕ್ಯಾರಟ್ ಬಂಗಾರದ ಬೆಲೆ (ಹತ್ತು ಗ್ರಾಂ) ರೂ. 48,200 […]

ಇಂದಿನ ಚಿನ್ನ ಬೆಳ್ಳಿಯ ಬೆಲೆ ಹೀಗಿದೆ Read More »

ಶಿವಮೊಗ್ಗ ನಗರದಲ್ಲಿ ಸಂಚಾರ ನಿಯಮಗಳಲ್ಲಿ ಬದಲಾವಣೆ| ಬೈಕ್ ಹಿಂಬದಿ ಸವಾರರಿಗೆ ನಿರ್ಬಂಧ

ಸಮಗ್ರ ನ್ಯೂಸ್: ವೀರ ಸಾವರ್ಕರ್‌ ಫೊಟೋ ಅಳವಡಿಸುವ ವಿವಾದದ ಹಿನ್ನೆಲೆಯಲ್ಲಿ ಶಿವಮೊಗ್ಗ ನಗರದ ವ್ಯಾಪ್ತಿಗೆ ಒಳಪಡುವ ಎಲ್ಲಾ ಪ್ರದೇಶಗಳಲ್ಲಿ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವ ದೃಷ್ಠಿಯಿಂದ ಆ. 15 ರ ಮದ್ಯಾಹ್ನ 3 ಗಂಟೆಯಿಂದ ಆ. 18 ರಂದು ರಾತ್ರಿ 10 ಗಂಟೆಯವರೆಗೆ ಈ ಕೆಳಕಂಡ ನಿಭಂದನೆಗಳನ್ನು ವಿಧಿಸಿ ನಿಷೇದಾಜ್ಞೆಯನ್ನು ಜಾರಿಗೊಳಿಸಿ ಆದೇಶಿಸಲಾಗಿರುತ್ತದೆ. 5 ಅಥವಾ ಐದಕ್ಕಿಂತ ಹೆಚ್ಚು ಜನರು ಗುಂಪು ಸೇರುವುದು ನಿರ್ಬಂಧಿಸಿದೆ. ಯಾವುದೇ ಮೆರವಣಿಗೆ, ಸಭೆ, ಸಮಾರಂಭ ಮತ್ತು ವಿಜಯೋತ್ಸವ ಹಾಗೂ ಇತರೆ ಸಾರ್ವಜನಿಕ

ಶಿವಮೊಗ್ಗ ನಗರದಲ್ಲಿ ಸಂಚಾರ ನಿಯಮಗಳಲ್ಲಿ ಬದಲಾವಣೆ| ಬೈಕ್ ಹಿಂಬದಿ ಸವಾರರಿಗೆ ನಿರ್ಬಂಧ Read More »

ಕಾರು ಮತ್ತು ಟೆಂಪೋ ಅಪಘಾತ; 6 ಮಂದಿ ಸಾವು

ಬೀಡ್: ಮಹಾರಾಷ್ಟ್ರದ ಬೀಡ್ ಜಿಲ್ಲೆಯಲ್ಲಿ ರವಿವಾರ ಬೆಳಿಗ್ಗೆ ಕಾರು ಹಾಗೂ ಟೆಂಪೋ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಆರು ಮಂದಿ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಮಂಜರಸುಂಬ-ಪಟೋಡ ಹೆದ್ದಾರಿಯಲ್ಲಿ ಮುಂಜಾನೆ 5.30ರ ಸುಮಾರಿಗೆ ಅಪಘಾತ ಸಂಭವಿಸಿದೆ. ಪ್ರಾಥಮಿಕ ಮಾಹಿತಿಯ ಪ್ರಕಾರ, ಕೇಜ್ ತಹಸಿಲ್‌ನ ಜಿವಾಚಿವಾಡಿ ಗ್ರಾಮದ ಕುಟುಂಬವೊಂದು ಮದುವೆ ಸಮಾರಂಭದಲ್ಲಿ ಭಾಗವಹಿಸಲು ಪುಣೆಗೆ ಕಾರಿನಲ್ಲಿ ಹೋಗುತ್ತಿದ್ದಾಗ ಅವರ ವಾಹನ ಹಾಗೂ ಟೆಂಪೋ ಪರಸ್ಪರ ಡಿಕ್ಕಿ ಹೊಡೆದಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಕುಟುಂಬದ ಐವರು ಹಾಗೂ ಇನ್ನೊಬ್ಬ ವ್ಯಕ್ತಿ

ಕಾರು ಮತ್ತು ಟೆಂಪೋ ಅಪಘಾತ; 6 ಮಂದಿ ಸಾವು Read More »

20 ಕೋಟಿಗೂ ರೂ. ಅಧಿಕ ಕಲೆಕ್ಷನ್ ಪಡೆದ ಗೋಲ್ಡನ್ ಸ್ಟಾರ್ ಗಣೇಶ್ ಅಭಿನಯದ ಗಾಳಿಪಟ – 2 ಸಿನಿಮಾ

ಬೆಂಗಳೂರು : ನಟ ಗೋಲ್ಡನ್ ಸ್ಟಾರ್ ಗಣೇಶ್ ಅಭಿನಯದ, ಯೋಗರಾಜ್ ಭಟ್ ನಿರ್ದೇಶನದ ‘ಗಾಳಿಪಟ 2’ ಮೊದಲ ದಿನವೇ ನಿರೀಕ್ಷೆಗೂ ಮೀರಿದ ಯಶಸ್ಸು ಕಂಡಿದ್ದು ಸುಮಾರು 20 ಕೋಟಿ ರೂ.ಗೂ ಅಧಿಕ ಕಲೆಕ್ಷನ್ ಮಾಡಿದೆ. ಗಣೇಶ್ ಹಾಗೂ ಯೋಗರಾಜ್ ಭಟ್ ಕಾಂಬಿನೇಷನ್ ಮತ್ತೊಮ್ಮೆ ಗೆದ್ದಿದೆ. ಈ ಹಿಂದೆ ಇವರಿಬ್ಬರ ಕಾಂಬಿನೇಷನ್ ನಲ್ಲಿ ಮೂಡಿ ಬಂದಿದ್ದ ‘ಮುಂಗಾರು ಮಳೆ’, ‘ಗಾಳಿಪಟ 2’ ಸೂಪರ್ ಹಿಟ್ ಆಗಿದ್ದವು. ಈಗ ‘ಗಾಳಿಪಟ 2’ ಬಿಡುಗಡೆಯಾದಗಲೇ ಯಶಸ್ವಿ ಪ್ರದರ್ಶನ ಕಾಣುತ್ತಿದೆ. ಮೊದಲ ದಿನವೇ ‘ಗಾಳಿಪಟ

20 ಕೋಟಿಗೂ ರೂ. ಅಧಿಕ ಕಲೆಕ್ಷನ್ ಪಡೆದ ಗೋಲ್ಡನ್ ಸ್ಟಾರ್ ಗಣೇಶ್ ಅಭಿನಯದ ಗಾಳಿಪಟ – 2 ಸಿನಿಮಾ Read More »

ಸುಳ್ಯ: ಅಪಾಯದ ಪರಿಸ್ಥಿತಿಯಲ್ಲಿನ ಮನೆಗಳಿಗೆ ಪರ್ಯಾಯ ವ್ಯವಸ್ಥೆಗೆ ಡಿಸಿ ಚಿಂತನೆ

ಸಮಗ್ರ ನ್ಯೂಸ್: ಪ್ರಾಕೃತಿಕ ವಿಕೋಪಗಳಿಂದ ಹಾನಿಗೊಳಗಾಗಿರುವ ಸುಳ್ಯ ತಾಲೂಕಿನ ಕೆಲವು ಮನೆಗಳಿಗೆ ಪರ್ಯಾಯ ಜಾಗದ ವ್ಯವಸ್ಥೆಗೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಂದಾಗಿದ್ದಾರೆ. ‘ತಾಲೂಕಿನ ಕಲ್ಮಕಾರಿನಲ್ಲಿ ಭೂಕುಸಿತದಿಂದ ಅಪಾಯ ಎದುರಿಸುತ್ತಿರುವ ಎಂಟು ಕುಟುಂಬಗಳನ್ನು ಮುಂದಿನ ಮುಂಗಾರಿನ ಒಳಗೆ ಸ್ಥಳಾಂತರಿಸಲಾಗುವುದು. ಈ ಕುಟುಂಬಗಳಿಗೆ ಪರ್ಯಾಯ ಜಮೀನು ನೀಡಲಿದ್ದೇವೆ. ಜಮೀನು ಗುರುತಿಸುವ ಕಾರ್ಯ ಪ್ರಗತಿಯಲ್ಲಿದೆ’ ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ. ತಿಳಿಸಿದರು. ಮಂಗಳೂರಿನಲ್ಲಿ ಸುದ್ದಿಗಾರರ ಜೊತೆ ಮಾತನಾಡಿ ಡಿಸಿ, ‘ಬೆಳ್ತಂಗಡಿ ತಾಲ್ಲೂಕಿನ ಮಿತ್ತಬಾಗಿಲು ಗಣೇಶನಗರದಲ್ಲೂ ಕೆಲವು ಮನೆಗಳು ಭೂಕುಸಿತದ

ಸುಳ್ಯ: ಅಪಾಯದ ಪರಿಸ್ಥಿತಿಯಲ್ಲಿನ ಮನೆಗಳಿಗೆ ಪರ್ಯಾಯ ವ್ಯವಸ್ಥೆಗೆ ಡಿಸಿ ಚಿಂತನೆ Read More »

ದರ್ಪ ತೋರಿದ ಪಿಎಸ್ಐ ಅಮಾನತುಗೊಳಿಸಿದ ಬಳ್ಳಾರಿ ಎಸ್ಪಿ

ಸಮಗ್ರ ನ್ಯೂಸ್: ಕುರುಗೋಡು ಪಿ ಎಸ್ ಐ ಆಗಿದ್ದ ಮಣಿಕಂಠ ಅವರನ್ನು ಬಳ್ಳಾರಿ ಎಸ್ ಪಿ ಸೈದುಲು ಅಡಾವತ್ ಅವರು ಅಮಾನತುಗೊಳಿಸಿ ಶುಕ್ರವಾರ ಆದೇಶ ಹೊರಡಿಸಿದ್ದಾರೆ. ಮೂರು ದಿನಗಳ ಹಿಂದೆ ಬ್ಯಾನರ್ ಹರಿದ ಪ್ರಕರಣಕ್ಕೆ ಸಂಬಂಧಿಸಿ ನಡೆದ ಸಾರ್ವಜನಿಕ ಸಭೆ ವೇಳೆ ಕಾನೂನು ಸುವ್ಯವಸ್ಥೆ ವಿಚಾರವಾಗಿ ಹೋದಾಗ ಸಾರ್ವಜನಿಕರ ಎದುರಲ್ಲೇ ವ್ಯಕ್ತಿಯೊಬ್ಬರ ಮೇಲೆ ಪಿ ಎಸ್ ಐ ಮಣಿಕಂಠ ಹಲ್ಲೆ ಮಾಡಿ ಅವಾಚ್ಯ ಶಬ್ದ ಗಳಿಂದ ನಿಂದಿಸಿದ್ದರು. ಇದಕ್ಕೆ ಸಂಬಂಧಿಸಿದ ವಿಡಿಯೋ ನಿನ್ನೆಯಿಂದ ವೈರಲ್ ಆಗಿತ್ತು. ದೂರು

ದರ್ಪ ತೋರಿದ ಪಿಎಸ್ಐ ಅಮಾನತುಗೊಳಿಸಿದ ಬಳ್ಳಾರಿ ಎಸ್ಪಿ Read More »

ಸೊಸೆಯ ತಲೆಯನ್ನೇ ಕತ್ತರಿಸಿ ಪೊಲೀಸ್ ಠಾಣೆಗೆ ತಂದ ಅತ್ತೆ

ಸಮಗ್ರ ನ್ಯೂಸ್: ಮಹಿಳೆಯೊಬ್ಬಳು ತನ್ನ ಸೊಸೆಯ ಕತ್ತರಿಸಿ, ಆ ತಲೆಯೊಂದಿಗೆ ಪೊಲೀಸ್ ಠಾಣೆಗೆ ಬಂದಿರುವ ಆಘಾತಕಾರಿ ಘಟನೆ ಆಂಧ್ರಪ್ರದೇಶದ ಅಣ್ಣಮಯ್ಯ ಜಿಲ್ಲೆಯಲ್ಲಿ ನಡೆದಿದೆ. ಆಂಧ್ರದ ರಾಯಚೋಟಿ ಪುರಸಭಾ ವ್ಯಾಪ್ತಿಯ ಕೊತ್ತಕೋಟ ರಾಮಪುರಂ ನಿವಾಸಿ ಸುಬ್ಬಮ್ಮ ಎಂಬ ಮಹಿಳೆ ಆಸ್ತಿ ವಿವಾದಕ್ಕೆ ಸಂಬಂಧಿಸಿದಂತೆ ತನ್ನ ಸೊಸೆ ವಸುಂಧರಾಳನ್ನು ಕೊಂದಿರುವುದಾಗಿ ತಪ್ಪೊಪ್ಪಿಕೊಂಡಿದ್ದು, ಶರಣಾಗಲು ಪೊಲೀಸ್ ಠಾಣೆಗೆ ಬಂದಿದ್ದಾಳೆ. ಅಣ್ಣಮಯ್ಯ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರ್ಷವರ್ಧನ್ ರಾಜು ಪ್ರಕಾರ, ಆರೋಪಿಗಳು ಆಸ್ತಿ ವಿವಾದದಿಂದಾಗಿ ಸೊಸೆಯ ತಲೆ ಕತ್ತರಿಸಿ ಕೊಂದಿದ್ದಾರೆ. ಮೃತ ಮಹಿಳೆ

ಸೊಸೆಯ ತಲೆಯನ್ನೇ ಕತ್ತರಿಸಿ ಪೊಲೀಸ್ ಠಾಣೆಗೆ ತಂದ ಅತ್ತೆ Read More »

ಶಿರಸಿ ಮಾರಿಕಾಂಬೆ ಭಕ್ತರಿಗೆ ಸಿಹಿ ಸುದ್ದಿ. ದೇವಾಲಯದ ಕೀರ್ತಿಗೆ ಸೇರಿತು ಮತ್ತೊಂದು ಗರಿಮೆ

ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕು ಎಂದರೆ ಸಾಕು ಮೊದಲು ನೆನಪಾಗುವುದೇ ಪುರಾಣ ಪ್ರಸಿದ್ಧ ಶ್ರೀ ಮಾರಿಕಾಂಬಾ ದೇವಾಲಯ. ಶಿರಸಿ ಮಾರಿಕಾಂಬೆ ಎರಡು ವರ್ಷಕ್ಕೊಮ್ಮೆ ನಡೆಯುವ ಜಾತ್ರೆ ಹಾಗು ಮಾರಿಕೋಣ ಹೀಗೆ ಹಲವಾರಿ ವಿಷಯಕ್ಕೆ ಪ್ರಸಿದ್ದಿ. ಇದೀಗ ಮಾರಿಕಾಂಬಾ ದೇವಾಲಯಕ್ಕೆ ಮತ್ತೊಂದು ಹಿರಿಮೆ ದೊರೆತಿದೆ. ಇದೀಗ ಮಾರಿಕಾಂಬಾ ದೇವಸ್ಥಾನದಲ್ಲಿ ಭಕ್ತರಿಗೆ ನೀಡಲಾಗುವ ಪ್ರಸಾದಕ್ಕೆ ಬಿಎಚ್​​ಒಜಿ ಪ್ರಮಾಣ ದೊರಕಿದ್ದು ದೇಗುಲದ ಹಿರಿಮೆ ಹೆಚ್ಚಾಗಿದೆ. ದೇವಸ್ಥಾನಗಳಲ್ಲಿ ಪ್ರಸಾದ ರೂಪದಲ್ಲಿ ನೀಡಲಾಗುವ ಆಹಾರದ ಗುಣಮಟ್ಟ, ದೇವರಿಗೆ ಅರ್ಪಿಸಲಾಗುವ ನೈವೇದ್ಯದ ಗುಣಮಟ್ಟ , ಪ್ರಸಾದ

ಶಿರಸಿ ಮಾರಿಕಾಂಬೆ ಭಕ್ತರಿಗೆ ಸಿಹಿ ಸುದ್ದಿ. ದೇವಾಲಯದ ಕೀರ್ತಿಗೆ ಸೇರಿತು ಮತ್ತೊಂದು ಗರಿಮೆ Read More »

ಮಂಗಳೂರು: ಗೆಳೆಯನ ಪ್ರಾಣ ಕಸಿದ ಹೆದ್ದಾರಿ ಗುಂಡಿ| ಮಿತ್ರನ ಸಾವಿಗೆ ನ್ಯಾಯ ಕೊಡಿಸಲು ಏಕಾಂಗಿ ಹೋರಾಟ

ಸಮಗ್ರ ನ್ಯೂಸ್: ನಗರದೊಳಗಿನ ಮತ್ತು ರಾಷ್ಟ್ರೀಯ ಹೆದ್ದಾರಿಯಲ್ಲಿನ ಗುಂಡಿಗಳ ದುರಸ್ತಿ ಮಾಡುವಂತೆ ಹಾಗೂ ಸಮರ್ಪಕ ರಸ್ತೆಗೆ ಆಗ್ರಹಿಸಿ ಯುವಕನೋರ್ವ ಮಂಗಳೂರು ಮಹಾನಗರ ಪಾಲಿಕೆ ಮುಂಭಾಗ ಏಕಾಂಗಿ ಪ್ರತಿಭಟನೆ ನಡೆಸಿದ ಘಟನೆ ನಡೆದಿದೆ. ಮಂಗಳೂರಿನ ಲಿಖಿತ್ ಎಂಬ ಯುವಕ ಈ ಏಕಾಂಗಿ ಹೋರಾಟ ನಡೆಸಿದ್ದು, ಇತ್ತೀಚೆಗೆ ನಂತೂರಿನಲ್ಲಿ ರಸ್ತೆಗುಂಡಿಗೆ ಬಿದ್ದು ಮೃತಪಟ್ಟ ಗೆಳೆಯ ಆತಿಷ್‌ನ ನ್ಯಾಯಕ್ಕಾಗಿ ಆಗ್ರಹಿಸಿ ಈ ವಿನೂತನ ಶೈಲಿಯ ಪ್ರತಿಭಟನೆ ನಡೆಸಿದ್ದಾನೆ. ಈ ವೇಳೆ ಮಾಧ್ಯಮದ ಜೊತೆ ಮಾತನಾಡಿದ ಲಿಖಿತ್, ಮಿತ್ರ ಆತಿಷ್ ನಂತೂರ್‌ನಲ್ಲಿ ರಸ್ತೆಯಲ್ಲಿದ್ದ

ಮಂಗಳೂರು: ಗೆಳೆಯನ ಪ್ರಾಣ ಕಸಿದ ಹೆದ್ದಾರಿ ಗುಂಡಿ| ಮಿತ್ರನ ಸಾವಿಗೆ ನ್ಯಾಯ ಕೊಡಿಸಲು ಏಕಾಂಗಿ ಹೋರಾಟ Read More »

ಮಂಗಳೂರು:ಹಿಟ್ ಆಂಡ್ ರನ್, ಯುವಕ ಸಾವು

ಸಮಗ್ರ ನ್ಯೂಸ್: ಅಪರಿಚಿತ ವಾಹನವೊಂದು ಹುಲ್ಲುಗಳನ್ನು ಕಟಾವು ನಡೆಸುತ್ತಿದ್ದ ಇಬ್ಬರು ಕಾರ್ಮಿಕರಿಗೆ ಢಿಕ್ಕಿ ಹೊಡೆದ ಪರಿಣಾಮ ಓರ್ವ ಸ್ಥಳದಲ್ಲೇ ಮೃತಪಟ್ಟು ಇನ್ನೋರ್ವ ಗಾಯಗೊಂಡಿರುವ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಜೆಪ್ಪಿನಮೊಗರು ಬಳಿ ನಡೆದಿದೆ. ಬಿಹಾರ ಮೂಲದ ವಿಕ್ಕಿ ಖಾನ್ (23)ಮೃತ ಕಾರ್ಮಿಕ. ಘಟನೆಯಲ್ಲಿ ಗೋಪಾಲ್ ಪೂಜಾರಿ ಎಂಬವರು ಗಾಯಗೊಂಡಿದ್ದಾರೆ‌. ಇವರು ಹೆದ್ದಾರಿ ಬಳಿ ಬೆಳಿಗ್ಗೆ ಹುಲ್ಲುಗಳನ್ನು ಕಟಾವು ನಡೆಸುತ್ತಿದ್ದಾಗ, ತೊಕ್ಕೊಟ್ಟು ಕಡೆಯಿಂದ ಮಂಗಳೂರು ಕಡೆಗೆ ತೆರಳುತ್ತಿದ್ದ ವಾಹನ ಢಿಕ್ಕಿ ಹೊಡೆದಿದೆ.ಪಿಕಪ್ ವಾಹನದ ಮೇಲೆ ಸಂಶಯ ವ್ಯಕ್ತಪಡಿಸಿರುವ ಪೊಲೀಸರು

ಮಂಗಳೂರು:ಹಿಟ್ ಆಂಡ್ ರನ್, ಯುವಕ ಸಾವು Read More »