Uncategorized

ದೇಶದ 14ನೇ ಉಪರಾಷ್ಟ್ರಪತಿಯಾಗಿ ಜಗದೀಪ್ ಧಂಕರ್ ಪ್ರಮಾಣವಚನ ಸ್ವೀಕಾರ

ಸಮಗ್ರ ನ್ಯೂಸ್: ಭಾರತದ ಹದಿನಾಲ್ಕನೇ ಉಪರಾಷ್ಟ್ರಪತಿಯಾಗಿ ಜಗದೀಪ್ ಧಂಕರ್ ಅವರು ಗುರುವಾರ ಪ್ರಮಾಣ ವಚನ ಸ್ವೀಕರಿಸಿದರು ಮತ್ತು ಕಳೆದ ತಿಂಗಳು ದೇಶದ ಹದಿನೈದನೇ ಮತ್ತು ಎರಡನೇ ಮಹಿಳಾ ರಾಷ್ಟ್ರಪತಿಯಾದ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಂದ ಪ್ರಮಾಣ ವಚನ ಸ್ವೀಕರಿಸಿದ‌್ದರು. ಮಾಜಿ ರಾಜ್ಯಪಾಲ ಮತ್ತು ಮಾಜಿ ಕೇಂದ್ರ ಸಚಿವ ಧಂಕರ್ ಅವರನ್ನು ಬಿಜೆಪಿ ನೇತೃತ್ವದ ಆಡಳಿತಾರೂಢ ಎನ್ಡಿಎ ದೇಶದ ಎರಡನೇ ಅತ್ಯುನ್ನತ ಸಾಂವಿಧಾನಿಕ ಹುದ್ದೆಗೆ ನಾಮನಿರ್ದೇಶನ ಮಾಡಿದೆ. ಆಗಸ್ಟ್ 6 ರಂದು ನಡೆದ ಚುನಾವಣೆಯಲ್ಲಿ 71 ವರ್ಷದ ಅವರು […]

ದೇಶದ 14ನೇ ಉಪರಾಷ್ಟ್ರಪತಿಯಾಗಿ ಜಗದೀಪ್ ಧಂಕರ್ ಪ್ರಮಾಣವಚನ ಸ್ವೀಕಾರ Read More »

 PUC ಪಾಸ್‌ ಆದವರಿಗೆ ಗಡಿ ಭದ್ರತಾ ಪಡೆಯಲ್ಲಿ ಉದ್ಯೋಗಾವಕಾಶ

  ಸಮಗ್ರ ನ್ಯೂಸ್: ಬಾರ್ಡರ್ ಸೆಕ್ಯುರಿಟಿ ಫೋರ್ಸ್ (BSF ನೇಮಕಾತಿ) ವಿವಿಧ ಖಾಲಿ ಹುದ್ದೆಗಳಿಗೆ ನೇಮಕ ಮಾಡಿಕೊಳ್ಳುತ್ತಿದೆ. ಒಟ್ಟು 323 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಹೆಡ್ ಕಾನ್‌ಸ್ಟೆಬಲ್ ಎಚ್‌ಸಿ ಮಿನಿಸ್ಟ್ರಿಯಲ್, ಅಸಿಸ್ಟೆಂಟ್ ಸಬ್ ಇನ್‌ಸ್ಪೆಕ್ಟರ್ ಎಎಸ್‌ಐ ಸ್ಟೆನೋಗ್ರಾಫರ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ rectt.bsf.gov.in ಗೆ ಭೇಟಿ ನೀಡಬಹುದು. ಮೂಲಕ ಅರ್ಜಿ ಸಲ್ಲಿಸಬಹುದು ಖಾಲಿ ಹುದ್ದೆಗಳ ವಿವರಗಳು ಪೋಸ್ಟ್ – ಹೆಡ್ ಕಾನ್‌ಸ್ಟೆಬಲ್  ಅಂತಿಮ ದಿನಾಂಕ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಸೆಪ್ಟೆಂಬರ್ 6. ಆಗಸ್ಟ್ 8ರಿಂದ ಅರ್ಜಿ ಸಲ್ಲಿಕೆ

 PUC ಪಾಸ್‌ ಆದವರಿಗೆ ಗಡಿ ಭದ್ರತಾ ಪಡೆಯಲ್ಲಿ ಉದ್ಯೋಗಾವಕಾಶ Read More »

ಈ ವರ್ಷದ ಸೂಪರ್ ಮೂನ್ ನೋಡಲು ಮರೆಯದಿರಿ ಮರೆತು ನಿರಾಶರಾಗದಿರಿ ! ಇಲ್ಲಿದೆ ವಿವರ

ಸೂಪರ್‌ ಮೂನ್‌ ಪ್ರಪಂಚದಾದ್ಯಂತ ಹೆಚ್ಚಿನ ಪ್ರಾಮುಖ್ಯತೆಯನ್ನು ಹೊಂದಿವೆ. ವೈಜ್ಞಾನಿಕವಾಗಿ ಸೂಪರ್‌ ಮೂನ್‌ ಗಳು ಸಾಮಾನ್ಯಕ್ಕಿಂತ 30% ಹೆಚ್ಚು ಬೆಳಕನ್ನು ಭೂಮಿಯ ಮೇಲೆ ಹೊರಸೂಸುತ್ತವೆ. ಒಂದು ವರ್ಷದಲ್ಲಿ ಬರೋಬ್ಬರಿ 3-4 ಸೂಪರ್ ಮೂನ್ ಗಳು ಕಾಣಿಸುತ್ತವೆ. ಈ ವರ್ಷ 11ನೇ ಆಗಸ್ಟ್ 2022 ರಂದು ಕಾಣಿಸಿಕೊಳ್ಳುತ್ತದೆ. 2022 ರ ಕೊನೆಯ ಸೂಪರ್‌ಮೂನ್ ಇಂದು ! ಇಂದು ನಾಸಾ ಪ್ರಕಾರ, ಚಂದ್ರನು ರಾತ್ರಿ 9:36 ಕ್ಕೆ ಕಾಣಿಸಿಕೊಳ್ಳಬಹುದು. ಅಥವಾ 6:36 p.m. ಪಿಟಿ ಸಮಯದಲ್ಲಿ ಕಾಣಿಸಬಹುದು. ಆಗಸ್ಟ್‌ ನಲ್ಲಿ ಸೂಪರ್‌ ಮೂನ್

ಈ ವರ್ಷದ ಸೂಪರ್ ಮೂನ್ ನೋಡಲು ಮರೆಯದಿರಿ ಮರೆತು ನಿರಾಶರಾಗದಿರಿ ! ಇಲ್ಲಿದೆ ವಿವರ Read More »

ಚಿಕ್ಕಮಗಳೂರು: ಕಾರನ್ನೇ‌ ಅಟ್ಟಾಡಿಸಿದ ಕಾಡಾನೆ

ಸಮಗ್ರ ನ್ಯೂಸ್: ಕಾರಿನಲ್ಲಿ ಹೋಗುತ್ತಿದ್ದಾಗ ಕಾರನ್ನೇ ಕಾಡಾನೆಯೊಂದು ಅಟ್ಟಾಡಿಸಿದ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನಲ್ಲಿ ನಡೆದಿದೆ. ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ದೇವರಮನೆ ಬಳಿ ಘಟನೆ ನಡೆದಿದ್ದು, ಭಯಗೊಂಡ ಕಾರು ಚಾಲಕ ಕಾರನ್ನು ಚರಂಡಿಗೆ ನುಗ್ಗಿಸಿದ್ದಾನೆ. ಶಿವಾಜಿ ಎಂಬುವರಿಗೆ ಸೇರಿದ ಮಾರುತಿ ಕಾರು ಇದಾಗಿದ್ದು, ಬಳಿಕ ಕಾರಿನಲ್ಲಿದ್ದ ಮೂವರು ಕಾರು ಬಿಟ್ಟು ಓಡಿ ಜೀವ ಉಳಿಸಿಕೊಂಡಿದ್ದಾರೆ.ಬಣಕಲ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ ಎಂದು ತಿಳಿದುಬಂದಿದೆ.

ಚಿಕ್ಕಮಗಳೂರು: ಕಾರನ್ನೇ‌ ಅಟ್ಟಾಡಿಸಿದ ಕಾಡಾನೆ Read More »

ಯಾರೇನೇ ಹೇಳಿದ್ರೂ ಸಿಎಂ ಬದಲಾವಣೆ ಪಕ್ಕಾ! ಯಡಿಯೂರಪ್ಪ ಕೊಟ್ಟ‌ ಸುಳಿವು ಏನದು?

ಸಮಗ್ರ ನ್ಯೂಸ್: ರಾಜ್ಯ ರಾಜಕೀಯದಲ್ಲಿ ಮತ್ತೆ ಸಿಎಂ ಬದಲಾವಣೆಯ ಸಣ್ಣದೊಂದು ಗುಸುಗುಸು ದೊಡ್ಡ ಸುದ್ದಿಯನ್ನೇ ಮಾಡ್ತಿದೆ. ಕಾಂಗ್ರೆಸ್ ನವ್ರು ಸಿಎಂ ಬದಲಾವಣೆ ಆಗ್ತಾರೆ ಎಂಬುದನ್ನು ಡಂಗುರ ಸಾರುತ್ತಿದ್ದರೆ, ಇತ್ತ ಬಿಜೆಪಿ ನಾಯಕರು ಸಿಎಂ ಬದಲಾವಣೆ ಇಲ್ಲ ಎಂದು ತೇಪೆ ಸಾರುತ್ತಿದ್ದಾರೆ. ಆದರೆ ಈ ನಡುವೆ ಮಾಜಿ‌ ಸಿಎಂ ಯಡಿಯೂರಪ್ಪ ‌ಹೇಳಿರುವ ಆ ಮಾತು ರಾಜ್ಯ ಬಿಜೆಪಿ ಮತ್ತು ಅದರ ಹೈಕಮಾಂಡ್ ನಾಯಕರಿಗೆ ಮುಟ್ಟಿನೋಡಿಕೊಳ್ಳುವಂತೆ ಮಾಡಿದೆ. ಮಂತ್ರಾಲಯದಲ್ಲಿ ಮಾತನಾಡಿದ ಯಡಿಯೂರಪ್ಪ ಚುನಾವಣೆ ಸಮಯದಲ್ಲಿ ಸಿಎಂ ಬದಲಾವಣೆ ಮಾತು ಕೇಳಿಬರ್ತಿದೆ,

ಯಾರೇನೇ ಹೇಳಿದ್ರೂ ಸಿಎಂ ಬದಲಾವಣೆ ಪಕ್ಕಾ! ಯಡಿಯೂರಪ್ಪ ಕೊಟ್ಟ‌ ಸುಳಿವು ಏನದು? Read More »

ರಾಷ್ಟ್ರಧ್ವಜಕ್ಕೆ ಅಪಮಾನ ಹಿನ್ನಲೆ| ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ದ ದೂರು

ಸಮಗ್ರ ನ್ಯೂಸ್: ರಾಷ್ಟ್ರಧ್ವಜಕ್ಕೆ ಅಪಮಾನ ಮಾಡಿದ ಹಿನ್ನೆಲೆಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ಚಿಕ್ಕಮಗಳೂರು ತಾಲೂಕಿನ ಆಲ್ದೂರು ಪೊಲೀಸ್ ಠಾಣೆಯಲ್ಲಿ ಚಿಕ್ಕಮಾಗರಹಳ್ಳಿಯ ಬಿಜೆಪಿ ಮುಖಂಡರು ದೂರು ನೀಡಿದ್ದಾರೆ. ಮಾಜಿ ಸಿಎಂ ಸಿದ್ದರಾಮಯ್ಯ ಕೇಸರಿ, ಬಿಳಿ, ಹಸಿರು ಎನ್ನುವ ಬದಲು ಕೆಂಪು, ಬಿಳಿ ಹಸಿರು ಎಂದು ತಪ್ಪಾಗಿ ಹೇಳಿ ರಾಷ್ಟ್ರಧ್ವಜಕ್ಕೆ ಅಪಮಾನ ಮಾಡಿದ್ದರು. ಇದೀಗ ಸಿದ್ದರಾಮಯ್ಯ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿ ಮುಖಂಡ ಗಿರೀಶ್, ಮನು ಹಾಗೂ ಭಜರಂಗದಳದ ಶಿವು ಎಂಬುವರು ದೂರು ನೀಡಿದ್ದಾರೆ.

ರಾಷ್ಟ್ರಧ್ವಜಕ್ಕೆ ಅಪಮಾನ ಹಿನ್ನಲೆ| ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ದ ದೂರು Read More »

ನಾಳೆ(ಆ.12)ಯಿಂದ‌ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ| ಈ ನಿಯಮಗಳು ಕಡ್ಡಾಯ

ಸಮಗ್ರ ನ್ಯೂಸ್: 2021-21ನೇ ಸಾಲಿನ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ಆ.12 ರಿಂದ 25ರವರೆಗೆ ನಡೆಯಲಿದ್ದು, ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಈ ನಿಯಮ ಪಾಲನೆ ಕಡ್ಡಾಯವಾಗಿದೆ. ಪರೀಕ್ಷಾ ಕೇಂದ್ರಗಳಲ್ಲಿ ಯಾವುದೇ ರೀತಿಯ ಅವ್ಯವಹಾರಗಳು ನಡೆಯದಂತೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದ್ದು, ಪ್ರತಿ ಕೇಂದ್ರಗಳಲ್ಲಿ ಇಬ್ಬರು ಪೊಲೀಸ್ ಸಿಬ್ಬಂದಿ ನೇಮಿಸಲಾಗಿದೆ. ಮೊಬೈಲ್ ಮತ್ತಿತರ ಎಲೆಕ್ಟ್ರಾನಿಕ್ ವಸ್ತುಗಳನ್ನು ಪರೀಕ್ಷಾ ಕೇಂದ್ರದೊಳಗೆ ವಿದ್ಯಾರ್ಥಿಗಳು ಕೊಂಡೊಯ್ಯಲು ಅವಕಾಶವಿಲ್ಲ. ಪರೀಕ್ಷಾ ಕೇಂದ್ರದ ಸುತ್ತಲಿನ 200ಮೀ ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಘೋಷಿಸಲಾಗಿದ್ದು, ಈ ವಲಯದ ಒಳಗೆ ಪರೀಕ್ಷಾರ್ಥಿಗಳು

ನಾಳೆ(ಆ.12)ಯಿಂದ‌ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ| ಈ ನಿಯಮಗಳು ಕಡ್ಡಾಯ Read More »

ಮದೆನಾಡು ಗುಡ್ಡಬಿರುಕು ಹಿನ್ನಲೆ ಮಂಗಳೂರು-ಮಡಿಕೇರಿ ರಾ.ಹೆ‌ ರಾತ್ರಿ ಸಂಚಾರಕ್ಕೆ ನಿರ್ಬಂಧ

ಸಮಗ್ರ ನ್ಯೂಸ್: ಮಡಿಕೇರಿ -ಮಂಗಳೂರು ರಾಷ್ಟ್ರೀಯ ಹೆದ್ದಾರಿಯ ಮದೆನಾಡು ಗ್ರಾಮದ ಗುಡ್ಡ ಪ್ರದೇಶದಲ್ಲಿ ಭಾರೀ ಬಿರುಕುಗಳು ಕಾಣಿಸಿಕೊಂಡಿದ್ದು, ಮಣ್ಣು ಕುಸಿಯುವ ಸಾಧ್ಯತೆ ‌ಕಾರಣ ರಾತ್ರಿ‌ ಸಂಚಾರ‌ ನಿರ್ಬಂಧಿಸಲಾಗಿದೆ ಕಳೆದ ಒಂದು ತಿಂಗಳಿಗೂ ಹೆಚ್ಚಿನ ಅವಧಿಯಿಂದ ನಿರಂತರ ಮಳೆ‌ ಹಾಗೂ‌ ಭಾರೀ ಗಾಳಿಯಿಂದಾಗಿ ಮಡಿಕೇರಿ ಸಮೀಪದ ಮದೆನಾಡು ಗ್ರಾಮದ ಕರ್ತೋಜಿ ಎಂಬಲ್ಲಿ, ರಸ್ತೆ ಪಕ್ಕದ ಗುಡ್ಡದಲ್ಲಿ ಭಾರೀ ಬಿರುಕು ಮೂಡಿದೆ. ಅಲ್ಪಸ್ವಲ್ಪ ಕುಸಿತವೂ ಸಂಭವಿಸಿದೆ. ಇದೀಗ ಯಾವುದೇ ಕ್ಷಣದಲ್ಲೂ ಮಣ್ಣು ಕುಸಿತವಾಗಿ ರಸ್ತೆ ಸಂಪರ್ಕ ಕಡಿತಗೊಳ್ಳುವ ಸಾಧ್ಯತೆ ಇರುವ

ಮದೆನಾಡು ಗುಡ್ಡಬಿರುಕು ಹಿನ್ನಲೆ ಮಂಗಳೂರು-ಮಡಿಕೇರಿ ರಾ.ಹೆ‌ ರಾತ್ರಿ ಸಂಚಾರಕ್ಕೆ ನಿರ್ಬಂಧ Read More »

ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿ ನ್ಯಾ. ಯು.ಯು ಲಲಿತ್ ನೇಮಕ

ಸಮಗ್ರ ನ್ಯೂಸ್: ಸುಪ್ರಿಂಕೋರ್ಟ್ ನ ಮುಖ್ಯ ನ್ಯಾಯಮೂರ್ತಿಯಾಗಿ ನ್ಯಾ.ಉದಯ್ ಉಮೇಶ್ ಲಲಿತ್ ಅವರನ್ನು ನೇಮಿಸಿ ಕೇಂದ್ರ ಸರ್ಕಾರದಿಂದ ಆದೇಶ ಹೋರಾಡಿಸಿದೆ. ಹಾಲಿ ಸಿಜೆಐ ರಮಣ ಸೇವಾವಧಿ ಅಂತ್ಯವಾಗುವ ಹಿನ್ನೆಲೆಯಲ್ಲಿ ಈ ನೇಮಕ ಮಾಡಲಾಗಿದೆ. ದೇಶದ‌ 49ನೇ ಸಿಜೆಐಯಾಗಿ ನ್ಯಾಯಮೂರ್ತಿ ಉದಯ್ ಲಲಿತ್ ಅವರನ್ನು ನೇಮಕ ಮಾಡಲಾಗಿದೆ ಎಂದು ಕೇಂದ್ರ ಸರ್ಕಾರ ಹೇಳಿದೆ. ಮುಖ್ಯ ನ್ಯಾಯಮೂರ್ತಿಯಾಗಿ ನ್ಯಾ.ಉದಯ್ ಲಲಿತ್ ನೇಮಿಸಿ ಕೇಂದ್ರ ಸರ್ಕಾರದಿಂದ ಆದೇಶ ಹೋರಾಡಿಸಿದೆ. ಶೀಘ್ರವೇ ಹಾಲಿ ಸಿಜೆಐ ರಮಣ ಸೇವಾವಧಿ ಅಂತ್ಯವಾಗುವ ಹಿನ್ನೆಲೆಯಲ್ಲಿ ಈ ನೇಮಕ

ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿ ನ್ಯಾ. ಯು.ಯು ಲಲಿತ್ ನೇಮಕ Read More »

ಉಳ್ಳಾಲದಲ್ಲಿ ರಿಕ್ಷಾ ಓಡಿಸಿದ ಯು.ಟಿ ಖಾದರ್

ಸಮಗ್ರ ನ್ಯೂಸ್: ಮಂಗಳೂರು ಕ್ಷೇತ್ರದ ಶಾಸಕ, ವಿಪಕ್ಷ ಉಪನಾಯಕ ಯು.ಟಿ ಖಾದರ್ ಬಸ್, ಜೆಸಿಬಿ ಚಲಾಯಿಸಿ ಒಂದೊಮ್ಮೆ ಸುದ್ದಿಯಾಗದ್ದರು, ಇದೀಗ ಮಳೆಹಾನಿಗೊಳಗಾದ ಮನೆ ವೀಕ್ಷಿಸಲು ಸ್ವತಃ ರಿಕ್ಷಾ ಚಲಾಯಿಸಿಕೊಂಡು ಹೋಗಿದ್ದಾರೆ. ಪಜೀರು ಪಾನೇಲ ಎಂಬಲ್ಲಿ ಮಿಂಗಲ್ ವೇಗಸ್ ಎಂಬವರ ಮಳೆಯಿಂದ ಹಾನಿಗೀಡಾದ ಮನೆಯ ವೀಕ್ಷಣೆಗೆ ತೆರಳಿದ್ದ ಸಂದರ್ಭ ಶಾಸಕರು, ವಾರ್ಡಿನ ಸದಸ್ಯರೊಬ್ಬರ ರಿಕ್ಷಾವನ್ನು ಚಲಾಯಿಸಿ ಮನೆಯನ್ನು ವೀಕ್ಷಿಸಿದ್ದಾರೆ. ಇವರ ಜೊತೆಗೆ ಮುಡಿಪು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪ್ರಶಾಂತ್ ಕಾಜವ, ಯೂಸುಫ್ ಪಾನೇಲ, ರೊನಾಲ್ಡ್ ಇದ್ದರು.

ಉಳ್ಳಾಲದಲ್ಲಿ ರಿಕ್ಷಾ ಓಡಿಸಿದ ಯು.ಟಿ ಖಾದರ್ Read More »