Uncategorized

ಸರ್ಕಾರಿ ಕಛೇರಿಗಳಲ್ಲಿ ಸಾರ್ವಜನಿಕರು ಪೋಟೋ, ವಿಡಿಯೋ ತೆಗೆಯುವುದು ನಿಷೇಧ ಆದೇಶ ವಾಪಸ್ ಪಡೆದ ರಾಜ್ಯ ಸರ್ಕಾರ

ಬೆಂಗಳೂರು :ರಾಜ್ಯದ ಎಲ್ಲಾ ಸರ್ಕಾರಿ ಇಲಾಖೆಗಳ ಕಚೇರಿಗಳಲ್ಲಿ ಪೂರ್ವಾನುಮತಿ ಇಲ್ಲದೆ ಸಾರ್ವಜನಿಕರು ಅನಧಿಕೃತವಾಗಿ ಫೋಟೋ, ವಿಡಿಯೋ ತೆಗೆಯುವುದನ್ನು ನಿಷೇಧಿಸಿ ಆದೇಶ ಹೊರಡಿಸಿದ್ದ ರಾಜ್ಯ ಸರ್ಕಾರ ಇದೀಗ ತನ್ನ ಆದೇಶವನ್ನು ವಾಪಸ್ ಪಡೆದಿದೆ. ರಾಜ್ಯ ಸರ್ಕಾರಿ ನೌಕರರ ಮನವಿ ಮೇರೆಗೆ ರಾಜ್ಯ ಸರ್ಕಾರವು ಶುಕ್ರವಾರ ಸರ್ಕಾರಿ ಕಚೇರಿಗಳಲ್ಲಿ ಖಾಸಗಿ ವ್ಯಕ್ತಿಗಳು ಫೋಟೋ/ವಿಡಿಯೋ ಚಿತ್ರೀಕರಿಸದಂತೆ ಆದೇಶ ಹೊರಡಿಸಿತ್ತು. ಇದೀಗ ರಾಜ್ಯ ಸರ್ಕಾರದ ಈ ಆದೇಶಕ್ಕೆ ವ್ಯಾಪಕ ವಿರೋಧ ವ್ಯಕ್ತವಾದ ಹಿನ್ನೆಲೆ ತಡರಾತ್ರಿ ಈ ಆದೇಶವನ್ನು ವಾಪಸ್ ಪಡೆದಿದೆ.

ಸರ್ಕಾರಿ ಕಛೇರಿಗಳಲ್ಲಿ ಸಾರ್ವಜನಿಕರು ಪೋಟೋ, ವಿಡಿಯೋ ತೆಗೆಯುವುದು ನಿಷೇಧ ಆದೇಶ ವಾಪಸ್ ಪಡೆದ ರಾಜ್ಯ ಸರ್ಕಾರ Read More »

ಸಿಲಿಂಡರ್ ವಿಚಾರವಾಗಿ ಗಲಾಟೆ;  ತಮ್ಮ, ಅಣ್ಣನಿಗೆ ಚಾಕುವಿನಿಂದ ಇರಿದು ಹಲ್ಲೆ

ಹುಬ್ಬಳ್ಳಿ:  ಸಿಲಿಂಡರ್ ವಿಚಾರಕ್ಕೆ ಸಂಬಂಧಿಸಿದಂತೆ ಇಬ್ಬರ ನಡುವೆ ನಡೆದ ಗಲಾಟೆಯಲ್ಲಿ ತಮ್ಮ ಅಣ್ಣನಿಗೆ ಚಾಕುವಿನಿಂದ ಇರಿದು, ಸೆಂಟ್ರಿಂಗ್ ಗನ್’ನಿಂದ ಹಲ್ಲೆ ನಡೆಸಿದ ಪ್ರಕರಣ ಬೆಂಡಿಗೇರಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ. ಮುನ್ನಾ ಶಿಗ್ಗಾಂವ (27) ಹಲ್ಲೆಗೆ ಒಳಗಾಗಿದ್ದು, ಕಿಮ್ಸ್ ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ರಿಯಾಜ್ ಹಾಗೂ ಅನ್ವರ್ ಆರೋಪಿಗಳಾಗಿದ್ದು ಬಂಧಿಸಲಾಗಿದೆ.ಕಸ್ತೂರಬಾ ನಗರದ ತಾಯಿ ಮನೆಯಲ್ಲಿದ್ದ ಸಿಲಿಂಡರ್’ನ್ನು ತೆಗೆದುಕೊಂಡು ಹೋಗಲು ಬಂದಿದ್ದ ಮುನ್ನಾ ತಾಯಿ ಜೊತೆಗೆ ಜಗಳ ಮಾಡಿ ಹಲ್ಲೆಗೆ ಮುಂದಾಗಿದ್ದಾನೆ. ಈ ವೇಳೆ ತಮ್ಮ ರಿಯಾಜ್ ಹಾಗೂ ಅನ್ವರ್

ಸಿಲಿಂಡರ್ ವಿಚಾರವಾಗಿ ಗಲಾಟೆ;  ತಮ್ಮ, ಅಣ್ಣನಿಗೆ ಚಾಕುವಿನಿಂದ ಇರಿದು ಹಲ್ಲೆ Read More »

ಕಡಬ: ನಿಶ್ಚಿತಾರ್ಥ ಮಾಡಿಕೊಂಡಿದ್ದ ಯುವಕ ಆತ್ಮಹತ್ಯೆ

ಸಮಗ್ರ ನ್ಯೂಸ್: ವಿವಾಹ ನಿಶ್ಚಿತಾರ್ಥವಾಗಿದ್ದ ಯುವಕನೋರ್ವ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಕಡಬ ತಾಲೂಕಿನ ದೋಲ್ಪಾಡಿಯಲ್ಲಿ ನಡೆದಿದೆ. ಮೃತ ಯುವಕನನ್ನು ಲೋಕೇಶ್(21) ಎಂದು‌ ಗುರುತಿಸಲಾಗಿದೆ. ಕೂಲಿ ಕೆಲಸ ಮಾಡಿಕೊಂಡಿದ್ದ ಈತನಿಗೆ ಕೆಲ ತಿಂಗಳ ಹಿಂದೆ ವಿವಾಹ ನಿಶ್ಚಯವಾಗಿದ್ದು, ಕಾರಣಾಂತರಗಳಿಂದ ಮದುವೆ ಮುಂದೂಡಲಾಗಿತ್ತು. ಬುಧವಾರ(ಜು.13) ರ ತಡರಾತ್ರಿ ಈತ ವಿಷ ಸೇವಿಸಿದ್ದು, ವಾಂತಿ ಮಾಡುತ್ತಿದ್ದ ಎನ್ನಲಾಗಿದೆ. ವಿಷಯ ತಿಳಿದು ತಕ್ಷಣ ಆಸ್ಪತ್ರೆಗೆ ದಾಖಲಾಯಿಸಲಾಯಿತಾದರೂ ಅದಾಗಲೇ ಮೃತಪಟ್ಟಿದ್ದಾಗಿ‌ ಹೇಳಲಾಗಿದೆ. ಮೃತರು, ತಂದೆ, ತಾಯಿ, ಸಹೋದರ, ಸಹೋದರಿಯರನ್ನು ಅಗಲಿದ್ದಾರೆ.

ಕಡಬ: ನಿಶ್ಚಿತಾರ್ಥ ಮಾಡಿಕೊಂಡಿದ್ದ ಯುವಕ ಆತ್ಮಹತ್ಯೆ Read More »

ಕರಾವಳಿ ಭಾಗಕ್ಕೆ ಪಡಿತರ ವ್ಯವಸ್ಥೆ ಯಲ್ಲಿ ಕುಚ್ಚಿಗೆ ಅಕ್ಕಿ ನೀಡಲು ಮುಂದಾದ ರಾಜ್ಯ ಸರ್ಕಾರ- ಕೋಟ ಶ್ರೀನಿವಾಸ ಪೂಜಾರಿ

ಸಮಗ್ರ ನ್ಯೂಸ್ : ಕರಾವಳಿಯ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಜನರಿಗೆ ಪಡಿತರ ವ್ಯವಸ್ಥೆಯಲ್ಲಿ ಕುಚ್ಚಿಗೆ ಅಕ್ಕಿ ವಿತರಿಸಲು ರಾಜ್ಯ ಸರಕಾರ ಮುಂದಾಗಿದೆ. ಈ ಜಿಲ್ಲೆಗಳ ಜನರಿಗೆ ಕುಚ್ಚಿಗೆ ಅಕ್ಕಿ ನೀಡಬೇಕು ಎಂಬುದು ಬಹುದಿನಗಳ ಬೇಡಿಕೆಯಾಗಿದ್ದು, ರಾಜ್ಯ ಸರಕಾರ ಆ ನಿಟ್ಟಿನಲ್ಲಿ ಚಿಂತನೆ ನಡೆಸಿದೆ ಎಂದು ವಿಧಾನಸೌಧದಲ್ಲಿ ಗುರುವಾರ ಈ ಕುರಿತು ಸಭೆ ನಡೆಸಿದ ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು. ರಾಜ್ಯದ ನಿಯೋಗ ಈಗಾಗಲೇ ಕೇರಳಕ್ಕೆ ಭೇಟಿ

ಕರಾವಳಿ ಭಾಗಕ್ಕೆ ಪಡಿತರ ವ್ಯವಸ್ಥೆ ಯಲ್ಲಿ ಕುಚ್ಚಿಗೆ ಅಕ್ಕಿ ನೀಡಲು ಮುಂದಾದ ರಾಜ್ಯ ಸರ್ಕಾರ- ಕೋಟ ಶ್ರೀನಿವಾಸ ಪೂಜಾರಿ Read More »

ಭಾರೀ ಮಳೆಗೆ ಮನೆಯ ಗೋಡೆ ಕುಸಿದು ಬಿದ್ದು ಬಾಲಕ ಸಾವು

ಬೆಳಗಾವಿ : ಬೆಳಗಾವಿ ಜಿಲ್ಲೆಯ ಖಾನಪುರ ತಾಲೂಕಿನ ಚಂದವಾಡ ಗ್ರಾಮದಲ್ಲಿ ನಿರಂತರವಾಗಿ ಸುರಿದ ಮಳೆಯಿಂದಾಗಿ ಮನೆಗೋಡೆ ಕುಸಿದು ಬಾಲಕ ಮೃತಪಟ್ಟ ಘಟನೆಯೊಂದು ನಡೆದಿದೆ. ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ಚುಂಚವಾಡ ಗ್ರಾಮದಲ್ಲಿ ಅನಂತು ಧರ್ಮೇಂದ್ರ (15) ಜಾನುವಾರುಗಳಿಗೆ ಮೇವು ಹಾಕಲು ಹೋದಾಗ ಮನೆಯ ಗೋಡೆ ಕುಸಿದು ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ನಂದಗಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಭಾರೀ ಮಳೆಗೆ ಮನೆಯ ಗೋಡೆ ಕುಸಿದು ಬಿದ್ದು ಬಾಲಕ ಸಾವು Read More »

ಶೀಘ್ರದಲ್ಲೇ ಇತಿಹಾಸದ ಪುಟಗಳನ್ನು ಸೇರಲಿದೆ ನೂರು ವರ್ಷಗಳ ಇತಿಹಾಸವುಳ್ಳ ಸಂಸತ್ ಭವನ|ಕೊನೆಯ ಅಧಿವೇಶನಕ್ಕೆ ಸಿದ್ಧತೆ

ನವದೆಹಲಿ: ನೂರು ವರ್ಷಗಳ ಇತಿಹಾಸವುಳ್ಳ ಸಂಸತ್ ಭವನ ಶೀಘ್ರವೇ ಇತಿಹಾಸದ ಪುಟಗಳನ್ನು ಸೇರಲಿದೆ. ಮಳೆಗಾಲದ ಸಂಸತ್ ಅಧಿವೇಶನ ನಡೆಯಲಿದ್ದು, ಇದೇ ಕೊನೆಯ ಅಧಿವೇಶನ ಆಗಲಿದೆ. ಸೋಮವಾರದಿಂದ ಮಳೆಗಾಲದ ಸಂಸತ್ ಅಧಿವೇಶನ ಪ್ರಾರಂಭವಾಗುತ್ತಿದೆ. ಬಳಿಕ ಡಿಸೆಂಬರ್‌ನಲ್ಲಿ ನಡೆಯುವ ಚಳಿಗಾಲದ ಅಧಿವೇಶನವನ್ನು ಸೆಂಟ್ರಲ್ ವಿಸ್ತಾರ ಭಾಗವಾಗಿ ಮೋದಿ ಸರ್ಕಾರ ನಿರ್ಮಿಸುತ್ತಿರುವ ನೂತನ ಸಂಸತ್ ಭವನದಲ್ಲಿ ನಡೆಸುವುದಾಗಿ ಈಗಾಗಲೇ ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಘೋಷಿಸಿದ್ದಾರೆ. ಹಾಲಿ ಸಂಸತ್ ಭವನದಲ್ಲಿಯೇ ನೂತನ ರಾಷ್ಟ್ರಪತಿ ಚುನಾವಣೆ ಜುಲೈ 19 ರಂದು ನಡೆಯಲಿದೆ. ಆಗಸ್ಟ್

ಶೀಘ್ರದಲ್ಲೇ ಇತಿಹಾಸದ ಪುಟಗಳನ್ನು ಸೇರಲಿದೆ ನೂರು ವರ್ಷಗಳ ಇತಿಹಾಸವುಳ್ಳ ಸಂಸತ್ ಭವನ|ಕೊನೆಯ ಅಧಿವೇಶನಕ್ಕೆ ಸಿದ್ಧತೆ Read More »

ನಟ, ನಿರ್ಮಾಪಕ ವೀರೇಂದ್ರ ಬಾಬು ಬಂಧನ

ಬೆಂಗಳೂರು : ವಂಚನೆ ಪ್ರಕರಣ ಸಂಬಂಧಿಸಿ ಬೆಂಗಳೂರಿನಲ್ಲಿ ರಾಷ್ಟ್ರ ಜನಹಿತ ಪಕ್ಷ ಸ್ಥಾಪಿಸಿದ್ದ ನಟ, ನಿರ್ಮಾಪಕ ವಿರೇಂದ್ರ ಬಾಬು ಪೊಲೀಸರು ಬಂಧಿಸಿದ ಘಟನೆಯೊಂದು ನಡೆದಿದೆ. ಬೆಂಗಳೂರಿನ ಕೊಡಿಗೆಹಳ್ಳಿ ಪೊಲೀಸರು ವಿರೇಂದ್ರ ಬಾಬು ಬಂಧಿಸಿದ್ದಾರೆ. ರಾಷ್ಟ್ರ ಜನಹಿತ ಪಕ್ಷ ಸ್ಥಾಪಿಸಿದ್ದ ಆರೋಪಿ ವಿರೇಂದ್ರ ಬಾಬು, ಚುನಾವಣೆ ಟಿಕೆಟ್ ಕೊಡುವುದಾಗಿ ನಂಬಿಸಿ ಬಸವರಾಜ್ ಘೋಷಾಲ್ ಎಂಬುವರಿಗೆ 1.88 ಕೋಟಿ ರೂ. ವಂಚಿಸಿದ್ದಾರೆ ಎಂದು ಆರೋಪದ ಹಿನ್ನೆಲೆಯಲ್ಲಿ ಪೊಲೀಸರು ಬಂಧಿಸಿದ್ದಾರೆ. ವಿರೇಂದ್ರ ಬಾಬು ವಿರುದ್ಧ ಬಸವರಾಜ ಘೋಷಾಲ್ ಎಂಬವರು ದೂರು ನೀಡಿದ್ದ

ನಟ, ನಿರ್ಮಾಪಕ ವೀರೇಂದ್ರ ಬಾಬು ಬಂಧನ Read More »

ಬಂಟ್ವಾಳ: ಜೇನುತುಪ್ಪ ಬದಲು ಬೆಲ್ಲದ ಪಾಕ ಮಾರಾಟ; ಕಾರ್ಮಿಕರಿಗೆ ಧರ್ಮದೇಟು

ಸಮಗ್ರ ನ್ಯೂಸ್: ಬಿ.ಸಿ.ರೋಡ್‌ ಸಮೀಪದ ಕೈಕಂಬದಲ್ಲಿ ಗುರುವಾರ ಬೆಳಗ್ಗೆ ಕಟ್ಟಡದ ಮೇಲೆ ಕಟ್ಟಿದ್ದ ಜೇನುಗೂಡಿಂದ ಜೇನು ತೆಗೆದು ಕೊಡುತ್ತೇವೆ ಎಂದು ಜನರನ್ನು ವಂಚಿಸಿ ಬೆಲ್ಲದ ಪಾಕ ಮಾರಾಟ ಮಾಡುತ್ತಿದ್ದ ನಕಲಿ ಜೇನು ಮಾರಾಟಗಾರರ ತಂಡಕ್ಕೆ ಜನರು ಧರ್ಮದೇಟು ನೀಡಿ ಓಡಿಸಿದ್ದಾರೆ. ಕೈಕಂಬ ಜಂಕ್ಷನ್‌ನಲ್ಲಿರುವ ಕಟ್ಟಡದ ಮೇಲಂತಸ್ತಿನಲ್ಲಿ ಜೇನು ಗೂಡು ಕಟ್ಟಿತ್ತು. ಜೇನು ಗೂಡನ್ನು ತೆರವುಗೊಳಿಸಿಕೊಡುವುದಾಗಿ ಅನ್ಯರಾಜ್ಯದ ಕಾರ್ಮಿಕರ ತಂಡ ಆಗಮಿಸಿತ್ತು. ಇತ್ತೀಚೆಗಷ್ಟೆ ಗೂಡು ಕಟ್ಟಿದ್ದರಿಂದ ಅದರಲ್ಲಿ ಜೇನು ಸಂಗ್ರಹಗೊಂಡಿರಲಿಲ್ಲ. ಈ ನಡುವೆ ತಂಡ ಬೆಲ್ಲಪಾಕ ಹಾಗೂ ಜೇನು

ಬಂಟ್ವಾಳ: ಜೇನುತುಪ್ಪ ಬದಲು ಬೆಲ್ಲದ ಪಾಕ ಮಾರಾಟ; ಕಾರ್ಮಿಕರಿಗೆ ಧರ್ಮದೇಟು Read More »

ನಟ ಪ್ರತಾಪ್ ಅವರು ಚೆನ್ನೈ ಅಪಾರ್ಟ್ಮೆಂಟ್ ನಲ್ಲಿ ಶವವಾಗಿ ಪತ್ತೆ

ಮಲಯಾಳಂ ಚಿತ್ರರಂಗದಲ್ಲಿ ನಟ ಮತ್ತು ನಿರ್ದೇಶಕನಾಗಿ ತೊಡಗಿಸಿಕೊಂಡಿರುವ ನಟ ಪ್ರತಾಪ್ ಪೋಥೆನ್ ಚೆನ್ನೈ ಅಪಾರ್ಟ್‌ಮೆಂಟ್‌ನಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. 69 ವರ್ಷದ ನಟ ಸುಮಾರು 12 ಸಿನಿಮಾಗಳನ್ನು ನಿರ್ದೇಶನ ಮಾಡಿದ್ದಾರೆ. ಎಂದಿನಂತೆ ಮನೆ ಕೆಲಸ ಮಾಡಲು ಕೆಲಸದವರು ಬಂದಾಗ ಪ್ರತಾಪ್ ಪೋಥೆನ್ ಮೃತ ದೇಹವನ್ನು ಬೆಡ್‌ರೂಮ್‌ನಲ್ಲಿ ನೋಡಿ ಶಾಕ್ ಆಗಿದ್ದಾರೆ. 100ಕ್ಕೂ ಹೆಚ್ಚು ಮಲಯಾಳಂ, ಹಿಂದಿ, ತೆಲುಗು ಮತ್ತು ತಮಿಳು ಸಿನಿಮಾಗಳಲ್ಲಿ ಪ್ರತಾಪ್ ಪೋಥೆನ್ ಅಭಿನಯಿಸಿದ್ದಾರೆ. 1979ರಲ್ಲಿ ಆರವ್‌ ಸಿನಿಮಾ ಮೂಲಕ ಪ್ರತಾಪ್ ಪೋಥೆನ್ ಅವರನ್ನು ಭರತ್ ಚಿತ್ರರಂಗಕ್ಕೆ

ನಟ ಪ್ರತಾಪ್ ಅವರು ಚೆನ್ನೈ ಅಪಾರ್ಟ್ಮೆಂಟ್ ನಲ್ಲಿ ಶವವಾಗಿ ಪತ್ತೆ Read More »

ರಾಜ್ಯದಲ್ಲಿಯೇ ಮದ್ಯ ಸೇವನೆಯಲ್ಲಿ ಅಗ್ರಸ್ಥಾನ ಪಡೆದ ದಕ್ಷಿಣ ಕನ್ನಡ ಜಿಲ್ಲೆ

ಸಮಗ್ರ ನ್ಯೂಸ್:  ವಿವಿಧ ವಿಷಯಗಳಲ್ಲಿ ಸದಾ ಸುದ್ದಿಯಲ್ಲಿರುವ ದಕ್ಷಿಣ ಕನ್ನಡ ಇದೀಗ ಮತ್ತೊಂದು ದಾಖಲೆ ಬರೆದಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮದ್ಯ ಸೇವನೆ ಪ್ರಮಾಣ ಜಾಸ್ತಿಯಾಗಿದ್ದು, ಪ್ರತಿ ವರ್ಷ ಸುಮಾರು 2.2 ಕೋಟಿ ಲೀಟರ್ (ದಿನಕ್ಕೆ ಸುಮಾರು 60 ಲೀಟರ್‍ ಹಾರ್ಡ್ ಲಿಕ್ಕರ್, 1.4 ಕೋಟಿ ಲೀಟರ್ ಬಿಯರ್ ಮದ್ಯ ಮಾರಾಟವಾಗಿದೆ. ಆ ಮೂಲಕ ದಕ್ಷಿಣ ಕನ್ನಡ ಮದ್ಯ ಸೇವನೆಯಲ್ಲಿ ರಾಜ್ಯದಲ್ಲಿಯೇ ಅಗ್ರಸ್ಥಾನ ಪಡೆದಿದೆ. ಅಬಕಾರಿ ಇಲಾಖೆಯ ಅಂಕಿಅಂಶಗಳ ಪ್ರಕಾರ, ಜಿಲ್ಲೆಯಲ್ಲಿ ಕಳೆದ ಐದು ವರ್ಷಗಳಲ್ಲಿ ಸರಾಸರಿ

ರಾಜ್ಯದಲ್ಲಿಯೇ ಮದ್ಯ ಸೇವನೆಯಲ್ಲಿ ಅಗ್ರಸ್ಥಾನ ಪಡೆದ ದಕ್ಷಿಣ ಕನ್ನಡ ಜಿಲ್ಲೆ Read More »