ಭಾರೀ ಮಳೆಗೆ ರಸ್ತೆಗೆ ಉರುಳಿ ಬಿದ್ದ ಬೃಹದಾಕಾರದ ಮರ
ಶಿವಮೊಗ್ಗ: ನಗರದ ರಾಜೇಂದ್ರ ನಗರ ಬಡಾವಣೆಯಲ್ಲಿ ಭಾರೀ ಮಳೆಯಿಂದಾಗಿ ಬೃಹದಾಕಾರದ ಮರವೊಂದು ಇಂದು ಬೆಳಗಿನ ಜಾವ ಬುಡ ಸಮೇತ ಬಿದ್ದಿದೆ. ಕೆ.ಹೆಚ್.ಬಿ. ಕ್ವಾಟ್ರಸ್ ಮನೆ ಹಾಗೂ ರಸ್ತೆ ಮೇಲೆ ಮರ ಬಿದ್ದಿದ್ದು, ಮರ ಬಿದ್ದಿರುವ ಮನೆಯಲ್ಲಿ ಯಾರೂ ಇಲ್ಲದ ಕಾರಣ ಹೆಚ್ಚಿನ ಅನಾಹುತ ತಪ್ಪಿದೆ. ಸ್ಥಳಕ್ಕೆ ಮೆಸ್ಕಾಂ ಅಧಿಕಾರಿಗಳು ಮತ್ತು ಸಂಬಂಧಪಟ್ಟ ಅಧಿಕಾರಿಗಳು ಧಾವಿಸಿ ಮರ ತೆರವುಗೊಳಿಸಿದ್ದಾರೆ. ಮರ ಬಿದ್ದಿದ್ದರಿಂದ ವಿದ್ಯುತ್ ಸಂಪರ್ಕ ಕಡಿತಗೊಂಡಿತ್ತು. ಸಂಚಾರಕ್ಕೆ ತೊಂದರೆಯಾಗಿತ್ತು.
ಭಾರೀ ಮಳೆಗೆ ರಸ್ತೆಗೆ ಉರುಳಿ ಬಿದ್ದ ಬೃಹದಾಕಾರದ ಮರ Read More »










