Uncategorized

ನಟ ಪ್ರತಾಪ್ ಅವರು ಚೆನ್ನೈ ಅಪಾರ್ಟ್ಮೆಂಟ್ ನಲ್ಲಿ ಶವವಾಗಿ ಪತ್ತೆ

ಮಲಯಾಳಂ ಚಿತ್ರರಂಗದಲ್ಲಿ ನಟ ಮತ್ತು ನಿರ್ದೇಶಕನಾಗಿ ತೊಡಗಿಸಿಕೊಂಡಿರುವ ನಟ ಪ್ರತಾಪ್ ಪೋಥೆನ್ ಚೆನ್ನೈ ಅಪಾರ್ಟ್‌ಮೆಂಟ್‌ನಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. 69 ವರ್ಷದ ನಟ ಸುಮಾರು 12 ಸಿನಿಮಾಗಳನ್ನು ನಿರ್ದೇಶನ ಮಾಡಿದ್ದಾರೆ. ಎಂದಿನಂತೆ ಮನೆ ಕೆಲಸ ಮಾಡಲು ಕೆಲಸದವರು ಬಂದಾಗ ಪ್ರತಾಪ್ ಪೋಥೆನ್ ಮೃತ ದೇಹವನ್ನು ಬೆಡ್‌ರೂಮ್‌ನಲ್ಲಿ ನೋಡಿ ಶಾಕ್ ಆಗಿದ್ದಾರೆ. 100ಕ್ಕೂ ಹೆಚ್ಚು ಮಲಯಾಳಂ, ಹಿಂದಿ, ತೆಲುಗು ಮತ್ತು ತಮಿಳು ಸಿನಿಮಾಗಳಲ್ಲಿ ಪ್ರತಾಪ್ ಪೋಥೆನ್ ಅಭಿನಯಿಸಿದ್ದಾರೆ. 1979ರಲ್ಲಿ ಆರವ್‌ ಸಿನಿಮಾ ಮೂಲಕ ಪ್ರತಾಪ್ ಪೋಥೆನ್ ಅವರನ್ನು ಭರತ್ ಚಿತ್ರರಂಗಕ್ಕೆ […]

ನಟ ಪ್ರತಾಪ್ ಅವರು ಚೆನ್ನೈ ಅಪಾರ್ಟ್ಮೆಂಟ್ ನಲ್ಲಿ ಶವವಾಗಿ ಪತ್ತೆ Read More »

ರಾಜ್ಯದಲ್ಲಿಯೇ ಮದ್ಯ ಸೇವನೆಯಲ್ಲಿ ಅಗ್ರಸ್ಥಾನ ಪಡೆದ ದಕ್ಷಿಣ ಕನ್ನಡ ಜಿಲ್ಲೆ

ಸಮಗ್ರ ನ್ಯೂಸ್:  ವಿವಿಧ ವಿಷಯಗಳಲ್ಲಿ ಸದಾ ಸುದ್ದಿಯಲ್ಲಿರುವ ದಕ್ಷಿಣ ಕನ್ನಡ ಇದೀಗ ಮತ್ತೊಂದು ದಾಖಲೆ ಬರೆದಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮದ್ಯ ಸೇವನೆ ಪ್ರಮಾಣ ಜಾಸ್ತಿಯಾಗಿದ್ದು, ಪ್ರತಿ ವರ್ಷ ಸುಮಾರು 2.2 ಕೋಟಿ ಲೀಟರ್ (ದಿನಕ್ಕೆ ಸುಮಾರು 60 ಲೀಟರ್‍ ಹಾರ್ಡ್ ಲಿಕ್ಕರ್, 1.4 ಕೋಟಿ ಲೀಟರ್ ಬಿಯರ್ ಮದ್ಯ ಮಾರಾಟವಾಗಿದೆ. ಆ ಮೂಲಕ ದಕ್ಷಿಣ ಕನ್ನಡ ಮದ್ಯ ಸೇವನೆಯಲ್ಲಿ ರಾಜ್ಯದಲ್ಲಿಯೇ ಅಗ್ರಸ್ಥಾನ ಪಡೆದಿದೆ. ಅಬಕಾರಿ ಇಲಾಖೆಯ ಅಂಕಿಅಂಶಗಳ ಪ್ರಕಾರ, ಜಿಲ್ಲೆಯಲ್ಲಿ ಕಳೆದ ಐದು ವರ್ಷಗಳಲ್ಲಿ ಸರಾಸರಿ

ರಾಜ್ಯದಲ್ಲಿಯೇ ಮದ್ಯ ಸೇವನೆಯಲ್ಲಿ ಅಗ್ರಸ್ಥಾನ ಪಡೆದ ದಕ್ಷಿಣ ಕನ್ನಡ ಜಿಲ್ಲೆ Read More »

ಅಲೆಮಾರಿಗಳ ಸೋಗಿನಲ್ಲಿ ಬೆಂಗಳೂರಿನಲ್ಲಿ ಹ್ಯಾಶಿಶ್ ಆಯಿಲ್ ಮಾರಾಟ, ನಾಲ್ಕು ಮಂದಿ ಆರೋಪಿಗಳ ಬಂಧಿಸಿದ ಸಿಸಿಬಿ ಪೋಲಿಸರು

ಬೆಂಗಳೂರು: ಅಲೆಮಾರಿಗಳ ಸೋಗಿನಲ್ಲಿ ಬೆಂಗಳೂರಿಗೆ ಹ್ಯಾಶಿಶ್ ಆಯಿಲ್ ತಂದು ಮಾರಾಟ ಮಾಡುತ್ತಿದ್ದ ನಾಲ್ವರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳು ಪ್ರತಿಷ್ಠಿತ ಪಬ್, ಬಾರ್ ಆ್ಯಂಡ್ ರೆಸ್ಟೋರೆಂಟ್​ಗಳಲ್ಲಿ ಗಿರಾಗಿಗಳಿಗೆ ಹ್ಯಾಶ್ ಆಯಿಲ್ ಮಾರಾಟ ಮಾಡುತ್ತಿದ್ದರು. ಡಿಜೆ ಜೂಡ್ ಹ್ಯಾರೀಸ್ ಎಂಬಾತನನ್ನು ವಶಕ್ಕೆ ಪಡೆದು ವಿಚಾರಣೆ ಮಾಡಿದಾಗ ಅಂತರರಾಜ್ಯ ಪೆಡ್ಲರ್ಸ್ ಮಾಹಿತಿ ಹೊರಬಂದಿದೆ. ಆರೋಪಿಗಳು ಸೆಂಥಿಪಲ್ಲಿ ಅರಣ್ಯ ಪ್ರದೇಶದಲ್ಲಿ ಗಾಂಜಾ ಬೆಳೆದು ಹ್ಯಾಶಿಶ್ ಆಯಿಲ್ ತಯಾರಿಕೆ ಮಾಡಿ, ಮಾರಾಟ ಮಾಡ್ತಿದ್ದರು. ಕೊಚ್ಚಿನ್, ಚೆನೈ, ಹೈದ್ರಾಬಾದ್, ಮುಂಬೈ ಹಾಗೂ ಮೇಟ್ರೋಪಾಲಿಟನ್ ನಗರಗಳ ಡ್ರಗ್​ಗಳನ್ನು

ಅಲೆಮಾರಿಗಳ ಸೋಗಿನಲ್ಲಿ ಬೆಂಗಳೂರಿನಲ್ಲಿ ಹ್ಯಾಶಿಶ್ ಆಯಿಲ್ ಮಾರಾಟ, ನಾಲ್ಕು ಮಂದಿ ಆರೋಪಿಗಳ ಬಂಧಿಸಿದ ಸಿಸಿಬಿ ಪೋಲಿಸರು Read More »

ರಸ್ತೆ ದಾಟುತ್ತಿದ್ದ ವ್ಯಕ್ತಿಗೆ ಅಪರಿಚಿತ ವಾಹನ ಡಿಕ್ಕಿ ವ್ಯಕ್ತಿ ಸಾವು

ತುಮಕೂರು: ರಾಷ್ಟ್ರೀಯ ಹೆದ್ದಾರಿ-48ರ ಶಿರಾ ತಾಲ್ಲೂಕಿನ ಚಿಕ್ಕನಹಳ್ಳಿ ಸಮೀಪ ಬುಧವಾರ ರಾತ್ರಿ ಅಪರಿಚಿತ ವಾಹನ ಡಿಕ್ಕಿ ಹೊಡೆದು ರಸ್ತೆ ದಾಟುತ್ತಿದ್ದ ಅನ್ವರ್ ಖಾನ್ (55) ಮೃತಪಟ್ಟಿದ್ದಾರೆ. ಶಿರಾ ನಗರದ ಅನ್ವರ್ ಖಾನ್ ರಸ್ತೆ ದಾಟುತ್ತಿದ್ದ ವೇಳೆ ವೇಗವಾಗಿ ಬಂದ ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ಅನ್ನರ್ ಸ್ಥಳದಲ್ಲೇ ಮೃತ ಪಟ್ಟಿದ್ದಾರೆ. ಕಳ್ಳಂಬೆಳ್ಳ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

ರಸ್ತೆ ದಾಟುತ್ತಿದ್ದ ವ್ಯಕ್ತಿಗೆ ಅಪರಿಚಿತ ವಾಹನ ಡಿಕ್ಕಿ ವ್ಯಕ್ತಿ ಸಾವು Read More »

ಆಟ ಆಡುತ್ತಿದ್ದ ಬಾಲಕ ನೀರಿನ ಹೊಂಡಕ್ಕೆ ಬಿದ್ದು ಸಾವು

ಉಡುಪಿ: ಆಟವಾಡುತ್ತಿದ್ದ ಮಗು ನೀರಿನ‌ ಹೊಂಡಕ್ಕೆ ಬಿದ್ದು 5 ವರ್ಷದ ಬಾಲಕ ಮೃತಪಟ್ಟ‌ ಘಟನೆಯೊಂದು ಉಪ್ಪೂರು ಸಮೀಪದ ಕೆ.ಜಿ.ರೋಡ್ ಎಂಬಲ್ಲಿ ನಡೆದಿದೆ. ನಾರ್ಮನ್ ಹಾಗೂ ಸಿಲ್ವಿಯಾ ದಂಪತಿಯ ಪುತ್ರ ಲಾರೆನ್ ಲೆವಿಸ್(5) ಮೃತ ಬಾಲಕ. ಬುಧವಾರ ಸಂಜೆ ಮನೆ ಸಮೀಪ ಆಟವಾಡುತ್ತಿದ್ದ ಬಾಲಕ ನಾಪತ್ತೆಯಾಗಿತ್ತೆನ್ನಲಾಗಿದೆ. ಹುಡುಕಾಟ ನಡೆಸಿದರೂ ಪತ್ತೆಯಾಗಿರಲಿಲ್ಲ. ಇಂದು ಬೆಳಗ್ಗೆ ಮನೆ ಸಮೀಪದ ನೀರಿನ ಹೊಂಡದಲ್ಲಿ ಬಾಲಕನ ಮೃತದೇಹ ಪತ್ತೆಯಾಗಿದೆ. ಆಟ ಆಡುತ್ತಿದ್ದ ಬಾಲಕ ಆಕಸ್ಮಿಕವಾಗಿ ನೀರಿನ ಹೊಂಡಕ್ಕೆ ಬಿದ್ದು ಮುಳುಗಿ ಉಸಿರುಗಟ್ಟಿ ಮೃತಪಟ್ಟಿರಬಹುದೆಂದು ಶಂಕಿಸಲಾಗಿದೆ.

ಆಟ ಆಡುತ್ತಿದ್ದ ಬಾಲಕ ನೀರಿನ ಹೊಂಡಕ್ಕೆ ಬಿದ್ದು ಸಾವು Read More »

ಬೆಳ್ತಂಗಡಿ ; ಕಾಲೇಜಿನ ಉಪನ್ಯಾಸಕಿ ಮಲ್ಲಿಕಾ ನಿಧನ

ಬೆಳ್ತಂಗಡಿ : ಶ್ರೀ ಗುರುದೇವ ಪದವಿ ಕಾಲೇಜಿನ ಉಪನ್ಯಾಸಕಿ ಮಲ್ಲಿಕಾ (40ವ) ಅವರು ಹೃದಯಾಘಾತದಿಂದ ಜು.14 ರಂದು ಮೃತಪಟ್ಟ ಘಟನೆಯೊಂದು ನಡೆದಿದೆ. ಮಲ್ಲಿಕಾ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು, ತಕ್ಷಣ ಅವರನ್ನು ಬೆಳ್ತಂಗಡಿಯ ಸ್ಥಳೀಯ ಆಸ್ಪತ್ರೆಗೆ ಸಾಗಿಸಲಾಗಿದ್ದು, ಬಳಿಕ ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ಕೊಂಡೊಯ್ಯಲಾಯಿತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.  ಮಲ್ಲಿಕಾ ಅವರು ಪಿಲಿಚಂಡಿ ಕಲ್ಲು ನಿವಾಸಿಯಾಗಿದ್ದು, ಪ್ರಸ್ತುತ ಬೆಳ್ತಂಗಡಿಯ ಶ್ರೀ ಗುರುದೇವ ಪದವಿ ಕಾಲೇಜಿನಲ್ಲಿ ಉಪನ್ಯಾಸಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಮೃತರು ಪತಿ, ತಂದೆ, ತಾಯಿ ಹಾಗೂ

ಬೆಳ್ತಂಗಡಿ ; ಕಾಲೇಜಿನ ಉಪನ್ಯಾಸಕಿ ಮಲ್ಲಿಕಾ ನಿಧನ Read More »

ವಿದ್ಯುತ್ ತಂತಿ ಸ್ಪರ್ಶಿಸಿ ಒಂದೇ ಕುಟುಂಬದ ನಾಲ್ವರು ಸಾವು

ಹೈದರಾಬಾದ್: ವಿದ್ಯುತ್ ತಂತಿ ಸ್ಪರ್ಶದಿಂದ ಇಬ್ಬರು ಮಕ್ಕಳು ಸೇರಿ ಒಂದೇ ಕುಟುಂಬದ ನಾಲ್ವರು ಸಾವನ್ನಪ್ಪಿದ ಘಟನೆಯೊಂದು ಕಾಮರೆಡ್ಡಿ ಜಿಲ್ಲೆಯ ದೇವನಪಲ್ಲಿ ಪೊಲೀಸ್ ಠಾಣೆ ವ್ಯಾಪ್ತಿಯ ಬೀಡಿ ಕಾಲೋನಿಯಲ್ಲಿ ಮಂಗಳವಾರ ನಡೆದಿದೆ. ಇಬ್ಬರು ಮಕ್ಕಳು ತಮ್ಮ ಮನೆಯ ಬಳಿ ಆಟವಾಡುತ್ತಿದ್ದಾಗ ಆಕಸ್ಮಿಕವಾಗಿ ವಿದ್ಯುತ್ ತಂತಿ ಸ್ಪರ್ಶಕ್ಕೀಡಾಗಿದ್ದಾರೆ. ಪೋಷಕರು ತಮ್ಮ ಮಕ್ಕಳನ್ನು ರಕ್ಷಿಸಲು ಧಾವಿಸಿದಾಗ ಅವರಿಗೂ ಕೂಡ ವಿದ್ಯುತ್ ತಗುಲಿದ ಪರಿಣಾಮ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಮೃತರನ್ನು ಅಹ್ಮದ್, ಪರ್ವೀನ್ ಮತ್ತು ಅವರ ಮಕ್ಕಳಾದ ಅದ್ನಾನ್ ಮತ್ತು ಮಹಿಮ್

ವಿದ್ಯುತ್ ತಂತಿ ಸ್ಪರ್ಶಿಸಿ ಒಂದೇ ಕುಟುಂಬದ ನಾಲ್ವರು ಸಾವು Read More »

ಸದ್ಯದಲ್ಲೇ ಕ್ರೇಜಿಸ್ಟಾರ್ ಮನೆಯಲ್ಲಿ ಮದುವೆ ಸಂಭ್ರಮ

ಬೆಂಗಳೂರು: ರವಿಚಂದ್ರ ಮಗಳ ಮದುವೆ ಇತ್ತೀಚೆಗಷ್ಟೇ ಅದ್ದೂರಿಯಾಗಿ ನಡೆಸಿ, ಆರಾಮವಾಗಿದ್ದ ಕ್ರೇಜಿಸ್ಟಾರ್ ಗೆ ಇದೀಗ ಮತ್ತೆ ಅವರ ಮನೆಯಲ್ಲಿ ಮಂಗಳವಾದ್ಯ ಮೊಳಗಲಿದೆ. ಅಂದರೆ ನಟ ಕ್ರೇಜಿಸ್ಟಾರ್‌ ರವಿಚಂದ್ರನ್‌ ಹಿರಿಯ ಮಗ ಮನೋರಂಜನ್‌ ಮದುವೆಗೆ ರೆಡಿಯಾಗಿದ್ದಾರೆ. ಹೌದು ಅವರ ಮದುವೆ ಅಗಸ್ಟ್‌ 21 ಹಾಗೂ 22 ರಂದು ಬೆಂಗಳೂರಿನಲ್ಲೇ ಮನೋರಂಜನ್ ಸಪ್ತಪದಿ ತುಳಿಯಲಿದ್ದಾರೆ. ಇದೊಂದು ಅರೇಂಜ್ಡ್ ಮ್ಯಾರೇಜ್ ಆಗಿದ್ದು, ವೈದ್ಯಕೀಯ ಕ್ಷೇತ್ರದಲ್ಲಿ ಕೆಲಸ ಮಾಡುತ್ತಿರುವ ಬೆಂಗಳೂರು ಮೂಲದ ಹುಡುಗಿಯನ್ನು ಮನೋರಂಜನ್ ಕೈ ಹಿಡಿಯಲಿದ್ದಾರೆ. ಇದನ್ನು ರವಿಚಂದ್ರನ್‌ ಅವರೇ ಹುಡುಗಿಯನ್ನು

ಸದ್ಯದಲ್ಲೇ ಕ್ರೇಜಿಸ್ಟಾರ್ ಮನೆಯಲ್ಲಿ ಮದುವೆ ಸಂಭ್ರಮ Read More »

ಶಾಲಾ ವಾಹನ ಮತ್ತು ಬೈಕ್ ಅಪಘಾತ; ಬೈಕ್ ಸವಾರ ಸಾವು, ಓರ್ವನ ಸ್ಥಿತಿ ಗಂಭೀರ

ಮಡಿಕೇರಿ : ಬೆಳ್ಳಂಬೆಳಗ್ಗೆ ಚೆಟ್ಟಳ್ಳಿ ಸಮೀಪದ ಕತ್ತಲೆಕಾಡು ತಿರುವಿನಲ್ಲಿ ಶಾಲಾ ವಾಹನ – ಬೈಕ್‌ ನಡುವೆ ಅಪಘಾತ ಸಂಭವಿಸಿದ್ದು, ಬೈಕ್‌ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮತ್ತೋರ್ವ ವ್ಯಕ್ತಿಯ ಸ್ಥಿತಿ ಗಂಭೀರವಾಗಿದೆ ಎಂಬ ಘಟನೆ ಬೆಳಕಿಗೆ ಬಂದಿದೆ. ಮಡಿಕೇರಿ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಕೂಲಿ ಕೆಲಸಕ್ಕೆ ತೆರಳುವಾಗ ದುರಂತ ಸಂಭವಿಸಿದೆ. ಮಕ್ಕಂದೂರು ನಿವಾಸಿ ಕೂಲಿ ಕಾರ್ಮಿಕ ಲಿತೀಶ್‌ ಪೂಜಾರಿ (22) ಮೃತ ದುರ್ದೈವಿ, ಮೂರನೇ ಮೈಲು ನಿವಾಸಿ ಬಿ.ಎನ್‌.ಕೋಟಿ (60 )ಗಾಯಗೊಂಡ ಕಾರ್ಮಿಕರಾಗಿದ್ದಾರೆ.

ಶಾಲಾ ವಾಹನ ಮತ್ತು ಬೈಕ್ ಅಪಘಾತ; ಬೈಕ್ ಸವಾರ ಸಾವು, ಓರ್ವನ ಸ್ಥಿತಿ ಗಂಭೀರ Read More »

ಎರಡು ಮಕ್ಕಳನ್ನು ಬಾವಿಗೆ ತಳ್ಳಿ ತಾಯಿ ಆತ್ಮಹತ್ಯೆ

ವಿಜಯಪುರ : ವಿಜಯಪುರ ಜಿಲ್ಲೆಯಲ್ಲಿ ಇಬ್ಬರು ಮಕ್ಕಳನ್ನು ಬಾವಿಗೆ ತಳ್ಳಿ ತಾಯಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡ ಘಟನೆಯೊಂದು ನಡೆದಿದೆ. ವಿಜಯಪುರ ಜಿಲ್ಲೆಯ ಸಿಂದಗಿ ತಾಲೂಕಿ ಹಂದಿಗನೂರಿನಲ್ಲಿ ಈ ಘಟನೆ ನಡೆದಿದ್ದು, ಅವ್ವಮ್ಮಾ ಶ್ರೀಶೈಲ ಗುಬ್ಬೆವಾಡ (32) ತನ್ನ 3 ವರ್ಷದ ಹಾಗೂ 1 ವರ್ಷದ ಹೆಣ್ಣು ಮಗುವನ್ನು ಬಾವಿಗೆ ತಳ್ಳಿ ಬಳಿಕ ತಾನೂ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಅವ್ವಮಾ ಕಳೆದ 6 ತಿಂಗಳಿನಿಂದ ಖಿನ್ನತೆಗೆ ಒಳಗಾಗಿದ್ದು, ಪತಿ ಶ್ರೀಶೈಲ ಗುಬ್ಬೆವಾಡ ಕುರಿಮೇಯಿಸಲು ಹೋಗಿದ್ದ ವೇಳೆ ಮಕ್ಕಳನ್ನು ಬಾವಿಗೆ

ಎರಡು ಮಕ್ಕಳನ್ನು ಬಾವಿಗೆ ತಳ್ಳಿ ತಾಯಿ ಆತ್ಮಹತ್ಯೆ Read More »