ಶಾಲಾ ವಾಹನ ಮತ್ತು ಬೈಕ್ ಅಪಘಾತ; ಬೈಕ್ ಸವಾರ ಸಾವು, ಓರ್ವನ ಸ್ಥಿತಿ ಗಂಭೀರ
ಮಡಿಕೇರಿ : ಬೆಳ್ಳಂಬೆಳಗ್ಗೆ ಚೆಟ್ಟಳ್ಳಿ ಸಮೀಪದ ಕತ್ತಲೆಕಾಡು ತಿರುವಿನಲ್ಲಿ ಶಾಲಾ ವಾಹನ – ಬೈಕ್ ನಡುವೆ ಅಪಘಾತ ಸಂಭವಿಸಿದ್ದು, ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮತ್ತೋರ್ವ ವ್ಯಕ್ತಿಯ ಸ್ಥಿತಿ ಗಂಭೀರವಾಗಿದೆ ಎಂಬ ಘಟನೆ ಬೆಳಕಿಗೆ ಬಂದಿದೆ. ಮಡಿಕೇರಿ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಕೂಲಿ ಕೆಲಸಕ್ಕೆ ತೆರಳುವಾಗ ದುರಂತ ಸಂಭವಿಸಿದೆ. ಮಕ್ಕಂದೂರು ನಿವಾಸಿ ಕೂಲಿ ಕಾರ್ಮಿಕ ಲಿತೀಶ್ ಪೂಜಾರಿ (22) ಮೃತ ದುರ್ದೈವಿ, ಮೂರನೇ ಮೈಲು ನಿವಾಸಿ ಬಿ.ಎನ್.ಕೋಟಿ (60 )ಗಾಯಗೊಂಡ ಕಾರ್ಮಿಕರಾಗಿದ್ದಾರೆ.
ಶಾಲಾ ವಾಹನ ಮತ್ತು ಬೈಕ್ ಅಪಘಾತ; ಬೈಕ್ ಸವಾರ ಸಾವು, ಓರ್ವನ ಸ್ಥಿತಿ ಗಂಭೀರ Read More »










