Uncategorized

ಮಂಗಳೂರು: ಕೆತ್ತಿಕಲ್ ಅವೈಜ್ಞಾನಿಕ ಕಾಮಗಾರಿ ನೋಡಿ ದಂಗಾದ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್| ಉನ್ನತ ಮಟ್ಟದ ತನಿಖೆಗೆ ಸೂಚಿಸಿದ ಸಚಿವರು

ಸಮಗ್ರ ನ್ಯೂಸ್: ಮಂಗಳೂರು ನಗರದ‌‌‌ ಹೊರವಲಯದ ಕೆತ್ತಿಕಲ್‌ನಲ್ಲಿ ರಾಷ್ಟ್ರೀಯ ಹೆದ್ದಾರಿ ನಿರ್ಮಾಣಕ್ಕಾಗಿ ಗುಡ್ಡ ಕಡಿದಿರುವ ಪ್ರಕರಣದ ಬಗ್ಗೆ ಉನ್ನತ ಮಟ್ಟದ ತನಿಖೆ ನಡೆಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.‌ ಗುಡ್ಡವನ್ನು ಬೇಕಾಬಿಟ್ಟಿ ಅಗೆದು ಮಣ್ಣು ತೆಗೆಯಲಾಗಿದೆ.‌ ಇಲ್ಲಿ ಮಣ್ಣು ಲಾಬಿಯ ಕೈವಾಡವೂ ಇದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ. ನಿರಂತರ ಮಳೆಯಾಗುತ್ತಿರುವುದರಿಂದ ಇಲ್ಲಿ ಭೂ ಕುಸಿತದ ಅಪಾಯ ಇದೆ. ಈ ಅವಾಂತರಕ್ಕೆ ಯಾರು ಕಾರಣ ಎಂಬ ಬಗ್ಗೆ ತನಿಖೆ ನಡೆಸಲಾಗುವುದು ಎಂದರು. ಈ ತನಿಖೆಗೆ […]

ಮಂಗಳೂರು: ಕೆತ್ತಿಕಲ್ ಅವೈಜ್ಞಾನಿಕ ಕಾಮಗಾರಿ ನೋಡಿ ದಂಗಾದ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್| ಉನ್ನತ ಮಟ್ಟದ ತನಿಖೆಗೆ ಸೂಚಿಸಿದ ಸಚಿವರು Read More »

ಪ್ರಜ್ವಲ್ ರೇವಣ್ಣ ಪ್ರಕರಣ: ವಿಡಿಯೋ ಅಸಲಿ ಎಂದ ಎಫ್‌ಎಸ್‌ಎಲ್ ವರದಿ

ಸಮಗ್ರ ನ್ಯೂಸ್: ಮಹಿಳೆಯರ ಮೇಲೆ ಅತ್ಯಾಚಾರ ಆರೋಪದ ಮೇಲೆ ಜೈಲಿನಲ್ಲಿ ಇರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿತ್ತು, ಆದ್ರೆ ಅವು ಎಡಿಟ್ ಎಂದು ಹೇಳಲಾಗಿತ್ತು. ಆದ್ರೆ, ಇದೀಗ ಎಫ್ಎಸ್ಎಲ್ ವರದಿ ಬಂದಿದ್ದು, ಆ ವಿಡಿಯೋ ನಕಲಿ ಅಲ್ಲ ಅಸಲಿ ಎಂದು ವರದಿಯಲ್ಲಿ ಬಹಿರಂಗವಾಗಿದೆ. ವಿಡಿಯೋಗಳು ಯಾವುದೇ ಅನಿಮೇಷನ್, ಗ್ರಾಫಿಕ್ಸ್, ಎಡಿಟ್, ಮಾರ್ಫ್ ಮಾಡಿದ್ದಲ್ಲ. ಅವು ಅಸಲಿ ವಿಡಿಯೋಗಳು ಎಂದು ಎಫ್ಎಸ್ಎಲ್ ವರದಿಯಲ್ಲಿ ದೃಢಪಟ್ಟಿದೆ. ಈ ಮೂಲಕ ಪ್ರಜ್ವಲ್

ಪ್ರಜ್ವಲ್ ರೇವಣ್ಣ ಪ್ರಕರಣ: ವಿಡಿಯೋ ಅಸಲಿ ಎಂದ ಎಫ್‌ಎಸ್‌ಎಲ್ ವರದಿ Read More »

ಬೆಂಗಳೂರು: ಠಾಣೆ ಎದುರು ಹೈಡ್ರಾಮಾ ನಡೆಸಿದ ಪ್ರತಾಪ್ ಸಿಂಹ, ಹರೀಶ್ ಪೂಂಜಾ, ಪುನಿತ್ ಕೆರೆಹಳ್ಳಿ ವಿರುದ್ಧ ಪ್ರಕರಣ ದಾಖಲು

ಸಮಗ್ರ ನ್ಯೂಸ್: ರೌಡಿ ಶೀಟರ್ ಪುನೀತ್ ಕೆರೆಹಳ್ಳಿ ಪರ ಪೊಲೀಸ್ ಠಾಣೆಗೆ ಬಂದು ಅಕ್ರಮ ಕೂಟ ಸೇರಿ ಪ್ರತಿಭಟನೆ ಮಾಡಿದ್ದರಿಂದ ಪುನೀತ್ ಕೆರೆಹಳ್ಳಿ , ಪ್ರತಾಪ್ ಸಿಂಹ, ಹರೀಶ್ ಪೂಂಜ ಹಾಗೂ ಇತರರ ವಿರುದ್ಧ ಬಿಎನ್ಎಸ್ 126(2), 189(2), 191(2) 190BNS, ಮತ್ತು 103 ಕರ್ನಾಟಕ ಪೊಲೀಸ್ ಆ್ಯಕ್ಟ್ ಅಡಿ ಬೆಂಗಳೂರು ಬಸವೇಶ್ವರ ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. A1ಪುನೀತ್ ಕೆರೆಹಳ್ಳಿ, A2ಪ್ರತಾಪ್‌ ಸಿಂಹ, A3 ಹರೀಶ್ ಪೂಂಜ ಸೇರಿ ಇತರರ ವಿರುದ್ಧ ಬೆಂಗಳೂರು ಬಸವೇಶ್ವರ

ಬೆಂಗಳೂರು: ಠಾಣೆ ಎದುರು ಹೈಡ್ರಾಮಾ ನಡೆಸಿದ ಪ್ರತಾಪ್ ಸಿಂಹ, ಹರೀಶ್ ಪೂಂಜಾ, ಪುನಿತ್ ಕೆರೆಹಳ್ಳಿ ವಿರುದ್ಧ ಪ್ರಕರಣ ದಾಖಲು Read More »

ಉತ್ತರ ಕನ್ನಡ ಜಿಲ್ಲೆಯ 5 ತಾಲೂಕಿನ ಶಾಲೆ, ಕಾಲೇಜುಗಳಿಗೆ ಇಂದು (ಆ.1) ರಜೆ‌ ಘೋಷಣೆ

ಸಮಗ್ರ ನ್ಯೂಸ್: ಉತ್ತರಕನ್ನಡದಲ್ಲಿ ಮಳೆ ಮತ್ತೆ ಅಬ್ಬರಿಸುತ್ತಿದೆ. ಅಲ್ಲದೆ ಮತ್ತಷ್ಟು ಮಳೆಯಾಗುವ ಸಾದ್ಯತೆ ಹೆಚ್ಚಿರುವುದರಿಂದ ಮುನ್ನೆಚ್ಚರಿಕಾ ಕ್ರಮವಾಗಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಇಂದು ಆಗಸ್ಟ್ 1ರ ಗುರುವಾರದಂದು ಜಿಲ್ಲೆಯ ಐದು ತಾಲೂಕಿಗೆ ರಜೆ ಘೋಷಿಸಲಾಗಿದೆ. ಕಾರವಾರ, ಅಂಕೋಲಾ, ಕುಮಟಾ, ಹೊನ್ನಾವರ ಮತ್ತು ಭಟ್ಕಳ ತಾಲೂಕಿನ ಎಲ್ಲಾ ಸರ್ಕಾರಿ ಪ್ರಾಥಮಿಕ,ಪ್ರೌಡ ,ಪದವಿಪೂರ್ವ, ಐಟಿಐ, ಮತ್ತು ಡಿಪ್ಲೋಮಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳು‌ ಮಾಹಿತಿ ನೀಡಿದ್ದಾರೆ.

ಉತ್ತರ ಕನ್ನಡ ಜಿಲ್ಲೆಯ 5 ತಾಲೂಕಿನ ಶಾಲೆ, ಕಾಲೇಜುಗಳಿಗೆ ಇಂದು (ಆ.1) ರಜೆ‌ ಘೋಷಣೆ Read More »

ಮುಂದುವರಿದ ‌ವರುಣಾರ್ಭಟ| ದ.ಕ‌ ಜಿಲ್ಲೆಯಲ್ಲಿ‌ ಆ.1 ರಂದು ಶಾಲಾ ಕಾಲೇಜುಗಳಿಗೆ ರಜೆ – ಮುಲ್ಲೈ ಮುಗಿಲನ್

ಸಮಗ್ರ ನ್ಯೂಸ್: ದ.ಕ.ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ದ.ಕ.ಜಿಲ್ಲೆಯ ಎಲ್ಲ ಅಂಗನವಾಡಿ, ಸರಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ, ಪ್ರೌಢ ಶಾಲೆ, ಪದವಿಪೂರ್ವ ಕಾಲೇಜುಗಳಿಗೆ ಆ.1ರಂದು ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

ಮುಂದುವರಿದ ‌ವರುಣಾರ್ಭಟ| ದ.ಕ‌ ಜಿಲ್ಲೆಯಲ್ಲಿ‌ ಆ.1 ರಂದು ಶಾಲಾ ಕಾಲೇಜುಗಳಿಗೆ ರಜೆ – ಮುಲ್ಲೈ ಮುಗಿಲನ್ Read More »

ಮಂಗಳೂರು: ಚಲಿಸುತ್ತಿದ್ದ ಬಸ್ಸಿನಲ್ಲಿ ವಿದ್ಯಾರ್ಥಿನಿಗೆ ಹೃದಯಾಘಾತ|ನಿರ್ವಾಹಕನ ಸಮಯ ಪ್ರಜ್ಞೆಯಿಂದ ಬದುಕಿದ ಜೀವ

ಸಮಗ್ರ ನ್ಯೂಸ್: ಮಂಗಳೂರಿನಲ್ಲಿ ಚಲಿಸುತ್ತಿದ್ದ ಬಸ್ಸಿನಲ್ಲಿ ವಿದ್ಯಾರ್ಥಿನಿಗೆ ಹೃದಯಾಘಾತವಾಗಿದ್ದು, ಬಸ್ ಚಾಲಕ ಹಾಗೂ ನಿರ್ವಾಹಕ ಸಮಯ ಪ್ರಜ್ಞೆ ಮೆರೆದು ಜೀವ ರಕ್ಷಿಸಿದ ಘಟನೆ ನಡೆದಿದೆ. ಮಂಗಳೂರಿನ ಕೂಳೂರು ಮಾರ್ಗ 13ಎಫ್ನಲ್ಲಿ ಎಂದಿನಂತೆ ಕೃಷ್ಣ ಪ್ರಸಾದ್ ಬಸ್ ಪ್ರಯಾಣಿಕರೊಂದಿಗೆ ತೆರಳುತ್ತಿದ್ದಾಗ ಕಾಲೇಜು ವಿದ್ಯಾರ್ಥಿನಿಯೊಬ್ಬರಲ್ಲಿ ಹಠಾತ್ ಹೃದಯಾಘಾತದ ಲಕ್ಷಣಗಳು ಕಾಣಿಸಿವೆ. ತಕ್ಷಣವೇ ಬಸ್ ಚಾಲಕ ಗಜೇಂದ್ರ ಕುಂದರ್ ಮತ್ತು ಕಂಡಕ್ಟರ್ ಮಹೇಶ್ ಪೂಜಾರಿ ಬಸ್ ಅನ್ನು ತುರ್ತು ವಾಹನವನ್ನಾಗಿ ಪರಿವರ್ತಿಸಿದರು. ಬಸ್ನಲ್ಲಿದ್ದ ಎಮರ್ಜೆನ್ಸಿ ಸೈರನ್ ಚಾಲೂ ಮಾಡಿದ ಅವರು ಕೇವಲ

ಮಂಗಳೂರು: ಚಲಿಸುತ್ತಿದ್ದ ಬಸ್ಸಿನಲ್ಲಿ ವಿದ್ಯಾರ್ಥಿನಿಗೆ ಹೃದಯಾಘಾತ|ನಿರ್ವಾಹಕನ ಸಮಯ ಪ್ರಜ್ಞೆಯಿಂದ ಬದುಕಿದ ಜೀವ Read More »

ಉಡುಪಿ: ನಾಲ್ಕು ತಾಲೂಕಿನ ಶಾಲೆ, ಪಿಯು ಕಾಲೇಜುಗಳಿಗೆ ಇಂದು ರಜೆ ಘೋಷಣೆ

ಸಮಗ್ರ ನ್ಯೂಸ್: ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಯ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಉಡುಪಿ ಜಿಲ್ಲೆಯ ಉಡುಪಿ, ಕಾಪು,ಕಾರ್ಕಳ, ಹೆಬ್ರಿ ತಾಲೂಕುಗಳ ಅಂಗನವಾಡಿ ಪ್ರಾಥಮಿಕ ಪ್ರೌಢಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ಜು.31ರಂದು ರಜೆ ಘೋಷಿಸಿ ಆಯಾ ತಾಲೂಕಿನ ತಹಶೀಲ್ದಾರ್ ಗಳು ಆದೇಶ ನೀಡಿದ್ದಾರೆ. ಜಿಲ್ಲಾಧಿಕಾರಿ ಆದೇಶ ನೀಡದೇ ಇದ್ದರೂ ಆಯಾ ತಾಲೂಕಿನ ತಹಶೀಲ್ದಾರರಿಗೆ ಶಾಲೆಗೆ ರಜೆ ನೀಡುವ ವಿವೇಚನೆಗೆ ಬಿಡಲಾಗಿತ್ತು. ಅದರಂತೆ ನಾಲ್ಕು ತಾಲೂಕುಗಳ ತಹಶೀಲ್ದಾರರು ರಜೆ ಘೋಷಿಸಿದ್ದಾರೆ.

ಉಡುಪಿ: ನಾಲ್ಕು ತಾಲೂಕಿನ ಶಾಲೆ, ಪಿಯು ಕಾಲೇಜುಗಳಿಗೆ ಇಂದು ರಜೆ ಘೋಷಣೆ Read More »

ಭಾರೀ ಮಳೆ ಹಿನ್ನೆಲೆ| ದ.ಕ ಜಿಲ್ಲೆಯಾದ್ಯಂತ ಶಾಲೆ, ಪಿಯು ಕಾಲೇಜುಗಳಿಗೆ ಜು.31ರಂದು ರಜೆ

ಸಮಗ್ರ ನ್ಯೂಸ್: ದ.ಕ ಜಿಲ್ಲೆಯಲ್ಲಿ ರಣಭೀಕರ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲೆಯ ಸರ್ಕಾರಿ, ಅನುದಾನಿತ, ಹಾಗೂ ಖಾಸಗಿ ಶಾಲೆ ಮತ್ತು ಪಿಯುಸಿ ‌ಕಾಲೇಜುಗಳಿಗೆ ಜು.31ರಂದು ರಜೆ ಘೋಷಿಸಿ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶಿಸಿದ್ದಾರೆ. ಜಿಲ್ಲೆಯಲ್ಲಿ ಭಾರಿ ಮಳೆಯಾಗುತ್ತಿದ್ದು ಹಲವೆಡೆ ಭೂಕುಸಿತ, ಪ್ರವಾಹ ಉಂಟಾಗಿದೆ. ನೇತ್ರಾವತಿ, ಕುಮಾರಧಾರ ನದಿಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿದ್ದು, ತಗ್ಗುಪ್ರದೇಶಗಳಲ್ಲಿ ನೆರೆ ನೀರು ಆವರಿಸಿದೆ. ಮುಂಜಾಗ್ರತಾ ಕ್ರಮವಾಗಿ ಜಿಲ್ಲಾಡಳಿತ ಹಾಗೂ ಪ್ರಾಕೃತಿಕ ವಿಕೋಪ ತಂಡಗಳು ಸನ್ನದ್ದವಾಗಿದ್ದು, ರಕ್ಷಣಾ ಕಾರ್ಯಾಚರಣೆ ನಡೆಸುತ್ತಿವೆ.

ಭಾರೀ ಮಳೆ ಹಿನ್ನೆಲೆ| ದ.ಕ ಜಿಲ್ಲೆಯಾದ್ಯಂತ ಶಾಲೆ, ಪಿಯು ಕಾಲೇಜುಗಳಿಗೆ ಜು.31ರಂದು ರಜೆ Read More »

ಕೇರಳದ ವಯನಾಡ್ ನಲ್ಲಿ ತಡರಾತ್ರಿ 2 ಭೂಕುಸಿತ; 6 ಸಾವು|400ಕ್ಕೂ ಹೆಚ್ಚು ಮಂದಿ ಮಣ್ಣಿನಡಿ ಸಿಲುಕಿರುವ ಶಂಕೆ

ಸಮಗ್ರ ನ್ಯೂಸ್: ವಯನಾಡಿನ ಮೆಪ್ಪಾಡಿ ಮುಂಡಕೈಯಲ್ಲಿ ಭೂಕುಸಿತ ಉಂಟಾಗಿ ಭಾರೀ ದುರಂತ ಸಂಭವಿಸಿದೆ. ಬೃಹತ್ ಪ್ರಮಾಣದ ಎರಡು ಭೂಕುಸಿತ ಸಂಭವಿಸಿದ್ದು, ಈವರೆಗೆ ಆರು ಮೃತದೇಹಗಳು ಪತ್ತೆಯಾಗಿವೆ. 400ರಷ್ಟು ಮಂದಿ ಭೂಕುಸಿತದಿಂದ ತೊಂದರೆಗೆ ಒಳಗಾಗಿರಬಹುದೆಂದು ಶಂಕಿಸಲಾಗುತ್ತಿದೆ. ದುರಂತದಲ್ಲಿ ಹಲವು ವಾಹನಗಳು ಕೊಚ್ಚಿ ಹೋಗಿವೆ. ಚುರಲ್ಮಲಾ ಪಟ್ಟಣದ ಒಂದು ಭಾಗ ಕೊಚ್ಚಿ ಹೋಗಿದೆ. ಭೂಕುಸಿತದ ನಂತರ ಗುಡ್ಡದ ಪ್ರವಾಹದಲ್ಲಿ ಹಲವು ಮನೆಗಳು ನಾಶವಾಗಿವೆ. ವೆಲ್ಲರ್ಮಲಾ ಶಾಲೆ ಸಂಪೂರ್ಣ ಜಲಾವೃತಗೊಂಡಿದೆ. ಭೂಕುಸಿತದಿಂದ ಭಾರೀ ಹಾನಿಯಾಗಿದೆ. ವಯನಾಡು ಮೆಪ್ಪಾಡಿ ಮುಂಡಕ್ಕೆ ಪ್ರದೇಶದಲ್ಲಿ ಇಷ್ಟು

ಕೇರಳದ ವಯನಾಡ್ ನಲ್ಲಿ ತಡರಾತ್ರಿ 2 ಭೂಕುಸಿತ; 6 ಸಾವು|400ಕ್ಕೂ ಹೆಚ್ಚು ಮಂದಿ ಮಣ್ಣಿನಡಿ ಸಿಲುಕಿರುವ ಶಂಕೆ Read More »

ಭಾರೀ ಮಳೆ ಹಿನ್ನೆಲೆ| ಬೆಳ್ತಂಗಡಿ ತಾಲೂಕಿನ ಶಾಲೆಗಳಿಗೆ ರಜೆ ಘೋಷಿಸಿ ತಹಶಿಲ್ದಾರ್ ಆದೇಶ

ಸಮಗ್ರ ನ್ಯೂಸ್: ಬೆಳ್ತಂಗಡಿ ತಾಲೂಕಿನಲ್ಲಿ ನಿನ್ನೆಯಿಂದ ರಾತ್ರಿಯಿಂದ ನಿರಂತರ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ನದಿಗಳಲ್ಲಿ ನೀರು ಅಪಾಯದ ಮಟ್ಟ ಮೀರಿ ಹರಿಯುತ್ತಿವೆ. ಕೆಲವೆಡೆ ತಗ್ಗು ಪ್ರದೇಶಗಳಿಗೆ ನುಗ್ಗುತ್ತಿದೆ. ಈ ಹಿನ್ನಲೆಯಲ್ಲಿ ಬೆಳ್ತಂಗಡಿ ತಾಲೂಕಿನ ಎಲ್ಲಾ ಸರಕಾರಿ ಅನುದಾನಿತ ಹಾಗೂ ಅನುದಾನ ರಹಿತ ಶಾಲೆಗಳಿಗೆ ಜು. 30ರಂದು ತಹಶೀಲ್ದಾರ್ ರಜೆ ಘೋಷಣೆ ಮಾಡಿ ಆದೇಶಿಸಿದ್ದಾರೆ.

ಭಾರೀ ಮಳೆ ಹಿನ್ನೆಲೆ| ಬೆಳ್ತಂಗಡಿ ತಾಲೂಕಿನ ಶಾಲೆಗಳಿಗೆ ರಜೆ ಘೋಷಿಸಿ ತಹಶಿಲ್ದಾರ್ ಆದೇಶ Read More »