Uncategorized

ಪುತ್ತೂರು: ದ್ವಿಚಕ್ರ ವಾಹನಗಳ ನಡುವೆ ಆ್ಯಕ್ಸಿಡೆಂಟ್| ಒಬ್ಬ ಸಾವು, ಮತ್ತೋರ್ವ ಗಂಭೀರ|

ಪುತ್ತೂರು: ದ್ವಿಚಕ್ರ ವಾಹನಗಳ ಮಧ್ಯೆ ಡಿಕ್ಕಿ ಸಂಭವಿಸಿ ಇಬ್ಬರು ಗಾಯಗೊಂಡ ಘಟನೆ ಇಂದು ಕುಂಬ್ರ ಸಮೀಪದ ಕೊಲ್ಲಾಜೆ ಎಂಬಲ್ಲಿ ನಡೆದಿದ್ದು, ಅಪಘಾತದಿಂದ ಗಂಭೀರ ಗಾಯಗೊಂಡ ಸ್ಕೂಟರ್ ಸವಾರ ಸೆಲ್ವಂ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾನೆ ಎಂದು ತಿಳಿದು ಬಂದಿದೆ. ಕೊಲ್ಲಾಜೆ ಒಳರಸ್ತೆಯಿಂದ ಸೆಲ್ವಂ ಎಂಬಾತ ಚಲಾಯಿಸಿಕೊಂಡು ಬರುತ್ತಿದ್ದ ಟಿವಿಎಸ್ ಜುಪಿಟರ್ ದ್ವಿಚಕ್ರ ವಾಹನ ಮುಖ್ಯ ರಸ್ತೆಗೆ ಹಾದು ಬರುತ್ತಿದ್ದ ವೇಳೆ ಕೆಯ್ಯೂರು ಕಡೆಯಿಂದ ಕುಂಬ್ರ ಕಡೆಗೆ ಹೋಗುತ್ತಿದ್ದ ಕೆ.ಟಿ.ಎಂ ಬೈಕ್ ಡಿಕ್ಕಿ ಹೊಡೆದಿದ್ದು, ಡಿಕ್ಕಿಯ ರಭಸಕ್ಕೆ ಎರಡೂ ದ್ವಿಚಕ್ರ […]

ಪುತ್ತೂರು: ದ್ವಿಚಕ್ರ ವಾಹನಗಳ ನಡುವೆ ಆ್ಯಕ್ಸಿಡೆಂಟ್| ಒಬ್ಬ ಸಾವು, ಮತ್ತೋರ್ವ ಗಂಭೀರ| Read More »

ಯುವತಿಯರನ್ನು ಬಳಸಿ ಹನಿಟ್ರ್ಯಾಪ್| ಆರೋಪಿ ಕೈಗೆ ಕೋಳ ಬಿಗಿದ ಪೊಲೀಸರು|

ಉಡುಪಿ : ಹಣಕ್ಕಾಗಿ ಯುವತಿಯರನ್ನು ಬಳಸಿಕೊಂಡು ಹನಿಟ್ರ್ಯಾಪ್ ನಡೆಸಿ ಬೆದರಿಕೆ ಹಾಕುತ್ತಿದ್ದ ಆರೋಪದಲ್ಲಿ ಯುವಕನೋರ್ವನನ್ನು ಶಂಕರ ನಾರಾಯಣ ಪೊಲೀಸರು ಬಂಧಿಸಿದ್ದಾರೆ. ರಂಜಿತ್ ಎಸ್. ಹೆಂಗವಳ್ಳಿ (26) ಬಂಧಿತ ಆರೋಪಿ. ರಂಜಿತ್ ಹಣಕ್ಕಾಗಿ ಹನಿಟ್ರ್ಯಾಪ್ ನಡೆಸಿ ಬೆದರಿಕೆ ಹಾಕುತ್ತಿದ್ದನು ಎಂದು ವ್ಯಕ್ತಿಯೊಬ್ಬರು ಶಂಕರನಾರಾಯಣ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಅದರಂತೆ ತನಿಖೆ ನಡೆಸಿದ ಪೊಲೀಸರು ಆರೋಪಿಯನ್ನು ಡಿ.17ರಂದು ಸಂಜೆ ವೇಳೆ ಬಂಧಿಸಿದ್ದಾರೆ. ಆರೋಪಿಯನ್ನು ಡಿ.18ರಂದು ಕುಂದಾಪುರ ನ್ಯಾಯಾಲಯಕ್ಕೆ ಹಾಜರುಪಡಿಸಿದ ಪೊಲೀಸರು, ಹೆಚ್ಚಿನ ತನಿಖೆಗಾಗಿ ಆರೋಪಿಯನ್ನು ಆರು ದಿನಗಳ ಕಾಲ

ಯುವತಿಯರನ್ನು ಬಳಸಿ ಹನಿಟ್ರ್ಯಾಪ್| ಆರೋಪಿ ಕೈಗೆ ಕೋಳ ಬಿಗಿದ ಪೊಲೀಸರು| Read More »

ಆಟೋ ಮೇಲೆ ಮಗುಚಿ ಬಿದ್ದ ಕಂಟೈನರ್| ನಾಲ್ಕು ಮಂದಿ ದುರ್ಮರಣ|

ನವದೆಹಲಿ: ಬೃಹತ್ ಕಂಟೈನರ್ ವೊಂದು ಚಲಿಸುತ್ತಿದ್ದ ಆಟೋವೊಂದರ ಮೇಲೆ ಮಗುಚಿ ಬಿದ್ದ ಪರಿಣಾಮ ಆಟೋದಲ್ಲಿದ್ದ ನಾಲ್ವರು ದಾರುಣವಾಗಿ ಸಾವನ್ನಪ್ಪಿರುವ ಘಟನೆ ದೆಹಲಿಯ ಇಂದಿರಾ ಗಾಂಧಿ ಸ್ಟೇಡಿಯಂ ಬಳಿಯಲ್ಲಿ ಸಂಭವಿಸಿದೆ. ಶುಕ್ರವಾರ ತಡರಾತ್ರಿ ಈ ಘಟನೆ ನಡೆದಿದ್ದು, ಚಲಿಸುತ್ತಿದ್ದ ಕಂಟೈನರ್ ಆಟೋ ಮೇಲೆ ಮಗುಚಿ ಬಿದ್ದಿದ್ದು, ಈ ವೇಳೆ ಆಟೋದಲ್ಲಿದ್ದ ಮೂವರು ಪ್ರಯಾಣಿಕರು ಹಾಗೂ ಆಟೋ ಚಾಲಕ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಅಪಘಾತ ನಡೆದ ತಕ್ಷಣವೇ ಕಂಟೈನರ್ ನ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ. ಘಟನೆ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು

ಆಟೋ ಮೇಲೆ ಮಗುಚಿ ಬಿದ್ದ ಕಂಟೈನರ್| ನಾಲ್ಕು ಮಂದಿ ದುರ್ಮರಣ| Read More »

ಸುಳ್ಯ: ಗೋಡೆ ಕುಸಿದು ಇಬ್ಬರು ಮಹಿಳೆಯರು ಸಾವು

ಸುಳ್ಯ: ಇಲ್ಲಿನ ಎಣ್ಮೂರು ಸಮೀಪದ ಕರಿಂಬಿಲ ನರ್ಲಡ್ಕ ಎಂಬಲ್ಲಿ ಮನೆ ಗೋಡೆ ಕುಸಿದು ಇಬ್ಬರು ಮಹಿಳೆಯರು ಮೃತ ಪಟ್ಟ ಘಟನೆ ಇಂದು ನಡೆದಿದೆ. ಮೃತಪಟ್ಟವರನ್ನು ನೆಬಿಸಾ ಮತ್ತು ಬಿಪಾತುಮ್ಮ ಎಂದು ಗುರುತಿಸಲಾಗಿದೆ. ಈ ಮಹಿಳೆಯರಿಬ್ಬರು ತಮ್ಮ ನೆರೆಮನೆಯಲ್ಲಿ ನಡೆಯುತ್ತಿದ್ದ ಹೊಸ ಶೌಚಾಲಯ ನಿರ್ಮಾಣದ ಕಾಮಗಾರಿ ವೇಳೆ ಕೆಲಸ ಮಾಡುತ್ತಿದ್ದರು. ಈ ವೇಳೆ ಈ ಹಿಂದೆ ಇದ್ದ ಹಳೆ ಕಟ್ಟಡದ ಗೋಡೆ ಕುಸಿದು ಬಿದ್ದಿದ್ದು ಇಬ್ಬರೂ ಇಟ್ಟಿಗೆ ಗೋಡೆಯ ಕೆಳಗೆ ಸಿಲುಕಿ ಗಂಭೀರವಾಗಿ ಗಾಯಗೊಂಡಿದ್ದಾರೆ. ತಕ್ಷಣ ಅಲ್ಲಿದ್ದವರು ಇವರನ್ನು

ಸುಳ್ಯ: ಗೋಡೆ ಕುಸಿದು ಇಬ್ಬರು ಮಹಿಳೆಯರು ಸಾವು Read More »

ದತ್ತ ಜಯಂತಿ ಹಿನ್ನೆಲೆ: ಚಿಕ್ಕಮಗಳೂರಲ್ಲಿ ಕೇಸರಿ ಕಲರವ

ಚಿಕ್ಕಮಗಳೂರು: ದತ್ತ ಜಯಂತಿ ಅಂಗವಾಗಿ ಶುಕ್ರವಾರ ಜರುಗಿದ ಅನಸೂಯಾ ದೇವಿ ಪೂಜಾ ಕಾರ್ಯದಲ್ಲಿ ನಾಡಿನ ವಿವಿಧೆಡೆ ಮಹಿಳೆಯರು ಪಾಲ್ಗೊಂಡಿದ್ದರು. ಶ್ರೀಗುರು ದತ್ತಾತ್ರೇಯ ಬಾಬಾಬುಡನ್‌ ಸ್ವಾಮಿ ದರ್ಗಾದಲ್ಲಿ ದತ್ತಪಾದುಕೆ ದರ್ಶನ ಮಾಡಿ ಪುನೀತಭಾವ ಮೆರೆದರು. ಭಕ್ತೆಯರು ಬೆಳಿಗ್ಗೆ ನಗರದಲ್ಲಿ ಸಂಕೀರ್ತನಾ ಯಾತ್ರೆ ಮುಗಿಸಿ ವಾಹನಗಳಲ್ಲಿ ಗಿರಿಗೆ ತೆರಳಿದರು. ಗಿರಿಯಲ್ಲಿ ಸಾಲಾಗಿ ಗುಹೆಯೊಳಗೆ ತೆರಳಿ ದರ್ಶನ ಮಾಡಿ ಭಕ್ತಿ ಸಮರ್ಪಿಸಿದರು. ಗಿರಿಯಲ್ಲಿ ಸಭಾಮಂಟಪದಲ್ಲಿ ಅನಸೂಯಾ ದೇವಿ, ಅತ್ರಿ ಮಹರ್ಷಿ, ಶ್ರೀಗುರುದತ್ತಾತ್ರೇಯರ ಮೂರ್ತಿಗಳಿಗೆ ವಿವಿಧ ಪೂಜೆಗಳು ನೆರವೇರಿದವು. ಗಣಪತಿ ಹೋಮ, ದುರ್ಗಾ

ದತ್ತ ಜಯಂತಿ ಹಿನ್ನೆಲೆ: ಚಿಕ್ಕಮಗಳೂರಲ್ಲಿ ಕೇಸರಿ ಕಲರವ Read More »

ಗುಡ್ ನ್ಯೂಸ್| ಕುಸಿತ ಕಂಡ ಟೊಮ್ಯಾಟೊ ದರ|

ಕೋಲಾರ: ಕಳೆದ ಕೆಲ ದಿನಗಳಿಂದ ಏರುಗತಿಯಲ್ಲಿ ಸಾಗುತ್ತಿದ್ದ ಟೊಮ್ಯಾಟೊ ದರದಲ್ಲಿ ಕುಸಿತ ಕಂಡಿದೆ. ಮೂರ್ನಾಲ್ಕು ದಿನಗಳಿಂದ ಕೋಲಾರ ಮಾರುಕಟ್ಟೆಯಲ್ಲಿ ದರ ತೀವ್ರಗತಿಯಲ್ಲಿ ಇಳಿಕೆಯಾಗುತ್ತಿದೆ. ದರ ಏರಿಕೆಯಾಗುತ್ತಿದ್ದಂತೆ ಮಾರುಕಟ್ಟೆಗೆ ಟೊಮೇಟೊ ಆವಕ ಹೆಚ್ಚಾಗಿದೆ. ಮಳೆ ಪ್ರಮಾಣ ಕಡಿಮೆಯಾಗುತ್ತಿದ್ದಂತೆ ಸ್ಥಳೀಯ ರೈತರು ಹೊಲದಲ್ಲಿದ್ದ ಟೊಮೇಟೊ ಕೊಯ್ಲು ಮಾಡಿ ಮಾರುಕಟ್ಟೆಗೆ ತರಲಾರಂಭಿಸಿದ್ದಾರೆ. ಇದರ ಜೊತೆಗೆ ನೆರೆಯ ಆಂಧ್ರಪ್ರದೇಶ, ತಮಿಳುನಾಡು ಮತ್ತು ನಾಸಿಕ್ನಿಂದಲೂ ರಾಜ್ಯದ ಮಾರುಕಟ್ಟೆಗೆ ಆವಕವಾಗುತ್ತಿದೆ. ಇದರಿಂದಾಗಿ ದರ ಕುಸಿತವಾಗುತ್ತಿದೆ. ನಿರಂತರವಾಗಿ ಸುರಿದ ಮಳೆಯಿಂದಾಗಿ ಟೊಮೇಟೊ ಬೆಳೆಗೆ ತೀವ್ರ ಹಾನಿಯಾಗಿತ್ತು. ತೋಟಗಳಲ್ಲಿ

ಗುಡ್ ನ್ಯೂಸ್| ಕುಸಿತ ಕಂಡ ಟೊಮ್ಯಾಟೊ ದರ| Read More »

ಕೆಎಸ್ ಆರ್ ಟಿಸಿ ಬಸ್ ಹರಿದು ಬೈಕ್ ಸವಾರ ಸ್ಥಳದಲ್ಲೇ ಸಾವು

ಬೆಂಗಳೂರು: ಕೆಎಸ್​ಆರ್​ಟಿಸಿ ಬಸ್​ ಹರಿದು ದ್ವಿಚಕ್ರ ವಾಹನ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಕೊಡಿಗೆಹಳ್ಳಿ ಸರ್ಕಲ್ ಬಳಿ ನಡೆದಿದೆ. ಕಾವೇರಿ ಭವನದಿಂದ ದೊಡ್ಡಬಳ್ಳಾಪುರಕ್ಕೆ ತೆರಳುತ್ತಿದ್ದ ಕೆಎ 40, ಎಫ್ 0994 ನಂಬರಿನ ಬಸ್​, ಕೆಎ 43, ವಿ 8208 ನಂಬರಿನ ಡಿಯೋ ಸ್ಕೂಟರ್​ ಮೇಲೆ ಹರಿದ ಪರಿಣಾಮ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಅಪಘಾತವಾಗುತ್ತಿದ್ದಂತೆ ಕೆಎಸ್​ಆರ್​ಟಿಸಿ ಬಸ್​ ಚಾಲಕ ಹಾಗೂ ಕಂಡಕ್ಟರ್ ಪರಾರಿಯಾಗಿದ್ದಾರೆ. ಮೃತ ಸವಾರನ ಗುರುತು ಪತ್ತೆಯಾಗಿಲ್ಲ. ಸ್ಥಳಕ್ಕೆ ಹೆಬ್ಬಾಳ ಸಂಚಾರಿ ಪೊಲೀಸರು ಭೇಟಿ ನೀಡಿ

ಕೆಎಸ್ ಆರ್ ಟಿಸಿ ಬಸ್ ಹರಿದು ಬೈಕ್ ಸವಾರ ಸ್ಥಳದಲ್ಲೇ ಸಾವು Read More »

ನ.30ರವರೆಗೆ ರಾಜ್ಯದಲ್ಲಿ ಭಾರೀ ಮಳೆ ಸಾಧ್ಯತೆ

ಬೆಂಗಳೂರು: ಕರ್ನಾಟಕದಲ್ಲಿ ಮಳೆಯ ಆರ್ಭಟ ಜೋರಾಗಿದ್ದು, ಬುಧವಾರದವರೆಗೂ ಮಳೆ ಜೋರಾಗಿರಲಿದೆ. ಬೆಂಗಳೂರು ಮತ್ತು ಕರ್ನಾಟಕದ ದಕ್ಷಿಣ ಒಳನಾಡಿನ ಮತ್ತು ಕರಾವಳಿ ಪ್ರದೇಶದ ಹಲವು ಪ್ರದೇಶಗಳಲ್ಲಿ ಲಘು ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ತಮಿಳುನಾಡಿನಲ್ಲಿ ನವೆಂಬರ್ 30ರವರೆಗೂ ಮಳೆ ಮುಂದುವರೆಯುವ ನಿರೀಕ್ಷೆಯಿದೆ. ಆಂಧ್ರಪ್ರದೇಶದಲ್ಲೂ ವಿಪರೀತ ಮಳೆಯಾಗುತ್ತಿದ್ದು, ಸಾವಿನ ಸಂಖ್ಯೆ ಏರಿಕೆಯಾಗುತ್ತಿದೆ. ಮಲೆನಾಡು, ಕರಾವಳಿ, ದಕ್ಷಿಣ ಒಳನಾಡಿನಲ್ಲಿ ಇಂದು ಮಳೆ ಅಬ್ಬರಿಸಲಿದೆ. ಶ್ರೀಲಂಕಾ ಕರಾವಳಿಯ ನೈಋತ್ಯ ಬಂಗಾಳ ಕೊಲ್ಲಿಯಲ್ಲಿ ಚಂಡಮಾರುತವಿದೆ ಮತ್ತು ತಮಿಳುನಾಡು ಕರಾವಳಿ

ನ.30ರವರೆಗೆ ರಾಜ್ಯದಲ್ಲಿ ಭಾರೀ ಮಳೆ ಸಾಧ್ಯತೆ Read More »

ಹೊಟ್ಟೆನೋವು ಎಂದ ಮಗಳನ್ನು ಆಸ್ಪತ್ರೆಗೆ ಕೊಂಡೊಯ್ದರು| ಆದರೆ ಆಸ್ಪತ್ರೆಯಲ್ಲಿ ಆಗಿದ್ದೇ ಬೇರೆ…! ಪೋಷಕರಿಗೆ ಕಾದಿತ್ತು ಬಿಗ್ ಶಾಕ್|

ಕೊಪ್ಪಳ: ಹೊಟ್ಟೆನೋವು ಎಂದ ಪುತ್ರಿಯನ್ನು ಆಸ್ಪತ್ರೆಗೆ ಕರೆದುಕೊಂಡು ಹೋದ ಸಂದರ್ಭದಲ್ಲಿ ಪರೀಕ್ಷಿಸಿದ ವೈದ್ಯರು ಗರ್ಬಿಣಿಯಾಗಿರುವುದನ್ನು ತಿಳಿಸಿದ್ದಾರೆ. 17 ವರ್ಷದ ಅಪ್ರಾಪ್ತೆಗೆ ಹೆರಿಗೆಯಾಗಿದ್ದು ಜನಿಸಿದ ಕೆಲವೇ ಕ್ಷಣದಲ್ಲಿ ಮಗು ಮೃತಪಟ್ಟಿದೆ ಎಂದು ಹೇಳಲಾಗಿದೆ. ಕೊಪ್ಪಳ ಜಿಲ್ಲೆ ಗಂಗಾವತಿಯ ಕಾರಟಗಿಯಲ್ಲಿ 17 ವರ್ಷದ ಬಾಲಕಿಗೆ ನವೆಂಬರ್ 23ರಂದು ತೀವ್ರತರವಾಗಿ ಹೊಟ್ಟೆ ನೋವು ಕಾಣಿಸಿಕೊಂಡಿದೆ. ಪೋಷಕರು ಆಕೆಯನ್ನು ಕಾರಟಗಿಯ ಸರ್ಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ತಪಾಸಣೆ ಮಾಡಿದ ವೈದ್ಯರು ಗರ್ಭಿಣಿಯಾಗಿರುವುದನ್ನು ತಿಳಿಸಿದ್ದಾರೆ. ಇದರಿಂದ ಆತಂಕಗೊಂಡ ಪೋಷಕರು ಪುತ್ರಿಯನ್ನು ವಿಚಾರಿಸಿದಾಗ ಆಕೆ ಯಾವುದೇ

ಹೊಟ್ಟೆನೋವು ಎಂದ ಮಗಳನ್ನು ಆಸ್ಪತ್ರೆಗೆ ಕೊಂಡೊಯ್ದರು| ಆದರೆ ಆಸ್ಪತ್ರೆಯಲ್ಲಿ ಆಗಿದ್ದೇ ಬೇರೆ…! ಪೋಷಕರಿಗೆ ಕಾದಿತ್ತು ಬಿಗ್ ಶಾಕ್| Read More »

ರೂಪಾಂತರಿ ವೈರಸ್ ಹಿನ್ನಲೆ| ರಾಜ್ಯದ ಗಡಿ ಜಿಲ್ಲೆಗಳಲ್ಲಿ ಬಿಗಿಕ್ರಮಕ್ಕೆ ಸಿಎಂ ಸೂಚನೆ|

ಬೆಂಗಳೂರು : ರಾಜ್ಯದಲ್ಲಿ ಹೆಚ್ಚುತ್ತಿರುವ ಕೊರೊನಾ ಸೋಂಕು ಹಾಗೂ ಹೊಸ ರೂಪಾಂತರಿ ವೈರಸ್ ಭೀತಿ ಹಿನ್ನೆಲೆಯಲ್ಲಿ ಗಡಿ ಜಿಲ್ಲೆಗಳಲ್ಲಿ 24 ಗಂಟೆಗಳ ಬಿಗಿ ಕ್ರಮಕ್ಕೆ ಸಿಎಂ ಬಸವರಾಜ್ ಬೊಮ್ಮಾಯಿ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಗೃಹ ಕಚೇರಿ ಕೃಷ್ಣಾದಲ್ಲಿ ಜಿಲ್ಲಾಧಿಕಾರಿಗಳು ಹಾಗೂ ಕೋವಿಡ್ ತಾಂತ್ರಿಕ ಸಲಹಾ ಸಮಿತಿ ಸದಸ್ಯರೊಂದಿಗೆ ತುರ್ತು ಸಭೆ ನಡೆಸಿದ ಸಿಎಂ, ಕಳೆದ ಒಂದು ವಾರದಲ್ಲಿನ ಕೋವಿಡ್ ಪಾಸಿಟಿವಿಟಿ ರೇಟ್ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದರು. ರಾಜ್ಯದಲ್ಲಿ ಕೋವಿಡ್ ಟೆಸ್ಟ್, ನಿಯಂತ್ರಣದ ಬಗ್ಗೆ ವಿವರ ಪಡೆದ ಸಿಎಂ

ರೂಪಾಂತರಿ ವೈರಸ್ ಹಿನ್ನಲೆ| ರಾಜ್ಯದ ಗಡಿ ಜಿಲ್ಲೆಗಳಲ್ಲಿ ಬಿಗಿಕ್ರಮಕ್ಕೆ ಸಿಎಂ ಸೂಚನೆ| Read More »