Uncategorized

ಭಾರೀ ಮಳೆ ಹಿನ್ನೆಲೆ| ಬೆಳ್ತಂಗಡಿ ತಾಲೂಕಿನ ಶಾಲೆಗಳಿಗೆ ರಜೆ ಘೋಷಿಸಿ ತಹಶಿಲ್ದಾರ್ ಆದೇಶ

ಸಮಗ್ರ ನ್ಯೂಸ್: ಬೆಳ್ತಂಗಡಿ ತಾಲೂಕಿನಲ್ಲಿ ನಿನ್ನೆಯಿಂದ ರಾತ್ರಿಯಿಂದ ನಿರಂತರ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ನದಿಗಳಲ್ಲಿ ನೀರು ಅಪಾಯದ ಮಟ್ಟ ಮೀರಿ ಹರಿಯುತ್ತಿವೆ. ಕೆಲವೆಡೆ ತಗ್ಗು ಪ್ರದೇಶಗಳಿಗೆ ನುಗ್ಗುತ್ತಿದೆ. ಈ ಹಿನ್ನಲೆಯಲ್ಲಿ ಬೆಳ್ತಂಗಡಿ ತಾಲೂಕಿನ ಎಲ್ಲಾ ಸರಕಾರಿ ಅನುದಾನಿತ ಹಾಗೂ ಅನುದಾನ ರಹಿತ ಶಾಲೆಗಳಿಗೆ ಜು. 30ರಂದು ತಹಶೀಲ್ದಾರ್ ರಜೆ ಘೋಷಣೆ ಮಾಡಿ ಆದೇಶಿಸಿದ್ದಾರೆ.

ಭಾರೀ ಮಳೆ ಹಿನ್ನೆಲೆ| ಬೆಳ್ತಂಗಡಿ ತಾಲೂಕಿನ ಶಾಲೆಗಳಿಗೆ ರಜೆ ಘೋಷಿಸಿ ತಹಶಿಲ್ದಾರ್ ಆದೇಶ Read More »

ಹೌರಾ – ಮುಂಬೈ ರೈಲು ಮತ್ತು ಗೂಡ್ಸ್ ರೈಲು ನಡುವೆ ಡಿಕ್ಕಿ| ದೇಶದಲ್ಲಿ ಮತ್ತೊಂದು ಭೀಕರ ರೈಲು ಅಪಘಾತ

ಸಮಗ್ರ ನ್ಯೂಸ್: ದೇಶದಲ್ಲಿ ಮತ್ತೊಂದು ಭೀಕರ ರೈಲು ಅಪಘಾತ ಸಂಭವಿಸಿದೆ. ಜಾರ್ಖಂಡ್‌ನಲ್ಲಿ ಗೂಡ್ಸ್ ರೈಲಿಗೆ ಹೌರಾ-ಮುಂಬೈ ಎಕ್ಸ್‌ ಪ್ರೆಸ್ ಡಿಕ್ಕಿ ಹೊಡೆದು ಸುಮಾರು 5 ಬೋಗಿಗಳು ಹಳಿತಪ್ಪಿ ಪಲ್ಟಿಯಾಗಿವೆ. ಅಪಘಾತದಲ್ಲಿ 10ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದು, ಅವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಜಾರ್ಖಂಡ್‌ನ ಚಕ್ರಧರಪುರದಲ್ಲಿ ರಾಜ್‌ಖರ್ಸ್ವಾನ್ ಮತ್ತು ಬಡಬಾಂಬೋ ನಡುವೆ ಬೆಳಿಗ್ಗೆ 4.45 ರ ಸುಮಾರಿಗೆ ಅಪಘಾತ ಸಂಭವಿಸಿದೆ. ರೈಲು ಸಂಖ್ಯೆ. 12810 ಹೌರಾ-CSMT ಎಕ್ಸ್‌ಪ್ರೆಸ್ ಹೊರಡುತ್ತಿದ್ದಾಗ ಚಕ್ರಧರಪುರ ಬಳಿ ರಾಜ್‌ಖರ್ಸ್ವಾನ್ ವೆಸ್ಟ್ ಔಟರ್ ಮತ್ತು ಚಕ್ರಧರಪುರ

ಹೌರಾ – ಮುಂಬೈ ರೈಲು ಮತ್ತು ಗೂಡ್ಸ್ ರೈಲು ನಡುವೆ ಡಿಕ್ಕಿ| ದೇಶದಲ್ಲಿ ಮತ್ತೊಂದು ಭೀಕರ ರೈಲು ಅಪಘಾತ Read More »

ವಯನಾಡಿನಲ್ಲಿ ಭಾರೀ ಭೂಕುಸಿತ| ನೂರಾರು ಮಂದಿ ಮಣ್ಣಿನಡಿ ಸಿಲುಕಿರುವ ಶಂಕೆ

ಸಮಗ್ರ ನ್ಯೂಸ್: ಕೇರಳದ ವಯನಾಡ್ ಜಿಲ್ಲೆಯ ಮೆಪ್ಪಾಡಿ ಬಳಿ ಮಂಗಳವಾರ (ಜು.30) ಮುಂಜಾನೆ ಭಾರೀ ಭೂಕುಸಿತ ಸಂಭವಿಸಿದ್ದು, ನೂರಾರು ಮಂದಿ ಸಿಕ್ಕಿಹಾಕಿಕೊಂಡಿದ್ದಾರೆ ಎಂದು ಶಂಕಿಸಲಾಗಿದೆ. ತೊಂದರೆಗೀಡಾಗಿರುವ ಪ್ರದೇಶಗಳಿಗೆ ಅಗ್ನಿಶಾಮಕ ದಳ ಮತ್ತು ರಾಷ್ಟ್ರೀಯ ವಿಕೋಪ ಪರಿಹಾರ ಸ್ಪಂದನೆ ಪಡೆ (ಎನ್ ಡಿಆರ್ಎಫ್) ತಂಡಗಳನ್ನು ನಿಯೋಜಿಸಲಾಗಿದ್ದು, ಹೆಚ್ಚುವರಿ ಎನ್ಡಿಆರ್ಎಫ್ ತಂಡವನ್ನೂ ಕಳುಹಿಸಿಕೊಡಲಾಗುತ್ತಿದೆ ಎಂದು ಕೇರಳ ರಾಜ್ಯ ವಿಕೋಪ ನಿರ್ವಹಣೆ ಪ್ರಾಧಿಕಾರ ಹೇಳಿದೆ. ಪರಿಹಾರ ಕಾರ್ಯಾಚರಣೆಗೆ ನೆರವಾಗುವಂತೆ ಕಣ್ಣೂರು ಡಿಫೆನ್ಸ್ ಸೆಕ್ಯುರಿಟಿ ಕಾಪ್ಸ್ನ ಎರಡು ತಂಡಗಳಿಗೆ ಈಗಾಗಳೇ ಸೂಚನೆ ನೀಡಲಾಗಿದೆ.

ವಯನಾಡಿನಲ್ಲಿ ಭಾರೀ ಭೂಕುಸಿತ| ನೂರಾರು ಮಂದಿ ಮಣ್ಣಿನಡಿ ಸಿಲುಕಿರುವ ಶಂಕೆ Read More »

ರಾಜ್ಯಾದ್ಯಂತ ಅಬ್ಬರಿಸುತ್ತಿರುವ ಮಳೆ| ಈ ಜಿಲ್ಲೆಗಳಲ್ಲಿ ಶಾಲೆ, ಕಾಲೇಜುಗಳಿಗೆ ರಜೆ

ಸಮಗ್ರ ನ್ಯೂಸ್: ಕೊಡಗು, ಚಿಕ್ಕಮಗಳೂರು, ಹಾವೇರಿ, ಧಾರವಾಡ ಮುಂತಾದ ಜಿಲೆಗಳಲ್ಲಿ ಭಾರೀ ಮಳೆಯ ಹಿನ್ನೆಲೆ ಶಾಲಾ ಪಿಯು ಕಾಲೇಜುಗಳಿಗೆ ಇಂದು ರಜೆ ನೀಡಲಾಗಿದೆ. ಕೊಡಗು ಜಿಲ್ಲೆಯಾದ್ಯಂತ ಭಾರೀ ಮಳೆಯಾಗುತ್ತಿದ್ದು, ಹವಾಮಾನ ಇಲಾಖೆ ಜಿಲ್ಲೆಗೆ ಆರೆಂಜ್ ಅಲರ್ಟ್ ಘೋಷಿಸಿದೆ. ಈ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಜೆಲ್ಲೆಯ ಎಲ್ಲಾ ಅಂಗನವಾಡಿ, ಶಾಶೆ, ಪಿಯು ಕಾಲೇಜುಗಳಿಗೆ ದಿನಾಂಕ 26-7-2024 ರಂದು ರಜೆ ಘೋಷಿಸಲಾಗಿದೆ. ಕೊಡಗಿನಲ್ಲಿ ಕಳೆದ ಕೆಲ ದಿನಗಳಿಂದ ಮಳೆ ಅಧಿಕಗೊಂಡಿದೆ. ಇದರಿಂದ ಸಂಚಾರಕ್ಕೆ ಮಳೆ ಅಡ್ಡಿಯನ್ನುಂಟು ಮಾಡಿದ್ದು ಅಲ್ಲಲ್ಲಿ ಮರ

ರಾಜ್ಯಾದ್ಯಂತ ಅಬ್ಬರಿಸುತ್ತಿರುವ ಮಳೆ| ಈ ಜಿಲ್ಲೆಗಳಲ್ಲಿ ಶಾಲೆ, ಕಾಲೇಜುಗಳಿಗೆ ರಜೆ Read More »

ಕೊಡಗಿನಲ್ಲಿ ಮುಂದುವರಿದ ವರ್ಷಧಾರೆ| ಜು.26ರಂದು ಶಾಲೆ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ

ಸಮಗ್ರ ನ್ಯೂಸ್ : ಕೊಡಗು ಜಿಲ್ಲೆಯಾದ್ಯಂತ ಭಾರೀ ಮಳೆಯಾಗುತ್ತಿರುವ ಹಿನ್ನಲೆಯಲ್ಲಿ ಪದವಿ ಮತ್ತು ಸ್ನಾತಕೋತ್ತರ ಪದವಿ ಕಾಲೇಜುಗಳನ್ನು ಹೊರತು ಪಡಿಸಿ ಉಳಿದಂತೆ ಎಲ್ಲಾ ಅಂಗನವಾಡಿ ಮತ್ತು ಶಾಲಾ, ಕಾಲೇಜುಗಳಿಗೆ(ಪಿಯುಸಿ) ಜು.26ರಂದು ರಜೆ ಘೋಷಿಸಿ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ಆದೇಶಿಸಿದ್ದಾರೆ. ಜಿಲ್ಲೆಯಾದ್ಯಂತ ವ್ಯಾಪಕ ಮಳೆಯಾಗುತ್ತಿದ್ದು ಕಾವೇರಿ, ಲಕ್ಷ್ಮಣತೀರ್ಥ ನದಿಗಳು ಉಕ್ಕಿ ಹರಿಯುತ್ತಿವೆ. ಹಾರಂಗಿ ಜಲಾಶಯ ಭರ್ತಿಯಾಗಿದ್ದು, ಹೆಚ್ಚುವರಿ ನೀರು ಹೊರಬಿಡಲಾಗುತ್ತಿದೆ. ಅಲ್ಲಲ್ಲಿ ಮಳೆ ಕಾರಣದಿಂದ ಅವಘಡಗಳು, ಹಾನಿ ಸಂಭವಿಸಿದೆ.

ಕೊಡಗಿನಲ್ಲಿ ಮುಂದುವರಿದ ವರ್ಷಧಾರೆ| ಜು.26ರಂದು ಶಾಲೆ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ Read More »

ಶಾಲಾ ವರ್ಗಾವಣೆ ಪ್ರಕ್ರಿಯೆಗೆ ವರ್ಗಾವಣೆ ಪ್ರಮಾಣ ಪತ್ರಗಳ ಅಗತ್ಯವಿಲ್ಲ/ ಮದ್ರಾಸ್ ಹೈಕೋರ್ಟ್ ನಿರ್ದೇಶನ

ಶಾಲಾ ವರ್ಗಾವಣೆ ಪ್ರಕ್ರಿಯೆಗೆ ವರ್ಗಾವಣೆ ಪ್ರಮಾಣ ಪತ್ರಗಳ ಅಗತ್ಯವಿಲ್ಲ/ ಮದ್ರಾಸ್ ಹೈಕೋರ್ಟ್ ನಿರ್ದೇಶನ ಸಮಗ್ರ ನ್ಯೂಸ್‌: ಶಾಲಾ ವರ್ಗಾವಣೆ ಪ್ರಕ್ರಿಯೆಯನ್ನು ಸರಳಗೊಳಿಸುವ ಹಿನ್ನಲೆಯಲ್ಲಿ ಇನ್ಮುಂದೆ ಶಾಲಾ ಪ್ರವೇಶಕ್ಕೆ ಯಾವುದೇ ರೀತಿಯ ವರ್ಗಾವಣೆ ಪ್ರಮಾಣ ಪತ್ರಗಳ ಅಗತ್ಯವಿಲ್ಲ ಎಂದು ಮದ್ರಾಸ್ ಹೈಕೋರ್ಟ್ ತಮಿಳುನಾಡಿನ ಎಲ್ಲ ಶಾಲೆಗಳಿಗೆ ನಿರ್ದೇಶನ ನೀಡಿದೆ. ಜೊತೆಗೆ ಹೊಸ ವಿದ್ಯಾರ್ಥಿಗಳ ಸೇರ್ಪಡೆಗೆ ವರ್ಗಾವಣೆ ಪ್ರಮಾಣ ಪತ್ರ ತರಲು ಒತ್ತಾಯಿಸದಂತೆ ಸೂಚಿಸಿದೆ. ತಮಿಳುನಾಡಿನಲ್ಲಿ ಹೊಸ ವಿದ್ಯಾರ್ಥಿಗಳನ್ನು ಸೇರಿಸಿಕೊಳ್ಳಲು ಹಿಂದಿನ ಶಿಕ್ಷಣ ಸಂಸ್ಥೆಗಳಿಂದ ವರ್ಗಾವಣೆ ಪ್ರಮಾಣಪತ್ರಗಳನ್ನು ತಯಾರಿಸಲು ಒತ್ತಾಯಿಸದಂತೆ

ಶಾಲಾ ವರ್ಗಾವಣೆ ಪ್ರಕ್ರಿಯೆಗೆ ವರ್ಗಾವಣೆ ಪ್ರಮಾಣ ಪತ್ರಗಳ ಅಗತ್ಯವಿಲ್ಲ/ ಮದ್ರಾಸ್ ಹೈಕೋರ್ಟ್ ನಿರ್ದೇಶನ Read More »

ಸುಳ್ಯ: ಎಸ್ ಡಿಪಿಐ ನ 16ನೇ ಸಂಸ್ಥಾಪನಾ ದಿನಾಚರಣೆ| ಜೂ.21ರಂದು ವಿವಿಧ ಕಾರ್ಯಕ್ರಮ

ಸಮಗ್ರ ನ್ಯೂಸ್: ಸುಳ್ಯ ಜೂನ್ 19.ಸೋಶಿಯಲ್ ಡೆಮಾಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾ ಇದರ 16ನೇ ಸಂಸ್ಥಾಪನಾ ದಿನಾಚರಣೆಯ ಅಂಗವಾಗಿ ತಾಲೂಕಿನಾದ್ಯಂತ ವಿವಿಧ ಕಾರ್ಯಕ್ರಮಗಳು ಜೂ. 21 ರಂದು ಗಾಂಧಿನಗರದಲ್ಲಿ ನಡೆಯಲಿದೆ. ಸುಳ್ಯ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಪ್ರತಿ ಬೂತ್ ಗಳಲ್ಲಿ ಬೆಳಿಗ್ಗೆ 7:00 ರಿಂದ 9:00 ಗಂಟೆಯವರೆಗೆ ಧ್ವಜಾರೋಹಣ ಕಾರ್ಯಕ್ರಮ ನಡೆಯಲಿದ್ದು,ಸುಳ್ಯ ವಿಧಾನಸಭಾ ಕ್ಷೇತ್ರ ಸಮಿತಿ ವತಿಯಿಂದ ಸುಳ್ಯ ಗಾಂಧಿನಗರದ ಪೆಟ್ರೋಲ್ ಪಂಪ್ ಮುಂಭಾಗದಲ್ಲಿ ಧ್ವಜಾರೋಹಣ ಕಾರ್ಯಕ್ರಮ ನಡೆಯಲಿದೆ. ಸಾಯಂಕಾಲ ಕೊಟ್ಯಾಡಿ ಟರ್ಫ್ ನಲ್ಲಿ ಆಟೋಟ ಸಾಂಸ್ಕೃತಿಕ

ಸುಳ್ಯ: ಎಸ್ ಡಿಪಿಐ ನ 16ನೇ ಸಂಸ್ಥಾಪನಾ ದಿನಾಚರಣೆ| ಜೂ.21ರಂದು ವಿವಿಧ ಕಾರ್ಯಕ್ರಮ Read More »

ಯುವ ದಾಂಪತ್ಯದಲ್ಲಿ ಬಿರುಕು… ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ ರಾಜ್ ಕುಟುಂಬದ ಕುಡಿ…

ಸಮಗ್ರ ನ್ಯೂಸ್: ಇತ್ತೀಚೆಗಷ್ಟೇ ಚಂದನ್ ಶೆಟ್ಟಿ ಹಾಗೂ ನಿವೇದಿತಾ ಗೌಡ ಅವರು ವಿಚ್ಛೇದನ ಪಡೆದಿದ್ದಾರೆ. ಈ ವಿಚಾರದ ಬೆನ್ನಲ್ಲೇ ಇದೀಗ ಮತ್ತೊಂದು ಜೋಡಿಯು ವಿಚ್ಛೇದನಕ್ಕೆ ಮುಂದಾಗಿದೆ. ಹೌದು ರಾಜ್ ಕುಮಾರ್ ಕುಟುಂಬದ ಕುಡಿ ಯುವ ಅವರು ವಿಚ್ಛೇದನ ಪಡೆಯಲು ಮುಂದಾಗಿದ್ದಾರೆ. ಪತ್ನಿ ಶ್ರೀದೇವಿಯಿಂದ ಡಿವೋರ್ಸ್ ಕೋರಿ ಅವರು ಕೌಟುಂಬಿಕ ನ್ಯಾಯಾಲಯದ ಮೆಟ್ಟಿಲೇರಿದ್ದಾರೆ. ಇಬ್ಬರ ಮಧ್ಯೆ ಕೆಲವು ವಿಚಾರಕ್ಕೆ ಮನಸ್ತಾಪ ಬಂದಿತ್ತು ಎನ್ನಲಾಗಿದೆ. ಯುವ ಹಾಗೂ ಶ್ರೀದೇವಿ ನಾಲ್ಕು ವರ್ಷಗಳ ಹಿಂದೆ ಪ್ರೀತಿಸಿ ವಿವಾಹ ಆಗಿದ್ದರು. ಅನೇಕ ಸೆಲೆಬ್ರಿಟಿಗಳು

ಯುವ ದಾಂಪತ್ಯದಲ್ಲಿ ಬಿರುಕು… ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ ರಾಜ್ ಕುಟುಂಬದ ಕುಡಿ… Read More »

‘ನಮೋ’ 3.0 ಸರ್ಕಾರದಲ್ಲಿ ರಾಜ್ಯದ ಐವರಿಗೆ ಮಂತ್ರಿ ಸ್ಥಾನ…!

ಸಮಗ್ರ ನ್ಯೂಸ್: ಇಂದು ನರೇಂದ್ರ ಮೋದಿ ಅವರು ಸಂಜೆ 7.15ಕ್ಕೆ ಮೂರನೇ ಬಾರಿಗೆ ಪ್ರಧಾನ ಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಇದೇ ಸಂದರ್ಭದಲ್ಲಿ ಕೆಲ ಸಂಸದರು ಮೋದಿ ಸಂಪುಟದ ಸಚಿವರಾಗಿ ಪ್ರಮಾಣ ಸ್ವೀಕರಿಸಲಿದ್ದಾರೆ. ಹೀಗಾಗಿ ಸಚಿವರಾಗುವ ಸಂಸದರಿಗೆ ಕರೆ ಮಾಡಿ ಮಾಹಿತಿ ತಿಳಿಸಲಾಗಿದೆ ಎಂದು ತಿಳಿದುಬಂದಿದೆ. ಅದರಲ್ಲೂ ಪ್ರಮುಖವಾಗಿ ಕರ್ನಾಟಕದ ಐವರಿಗೆ ಮೋದಿ ಸಂಪುಟದಲ್ಲಿ ಅವಕಾಶ ಸಿಕ್ಕಿದೆ ಎಂದು ತಿಳಿದುಬಂದಿದೆ. ಮುಖ್ಯವಾಗಿ ಪ್ರಲ್ಹಾದ್ ಜೋಶಿ, ವಿ. ಸೋಮಣ್ಣ, ಶೋಭಾ ಕರಂದ್ಲಾಜೆ, ನಿರ್ಮಲಾ ಸೀತಾರಾಮನ್, ಎಚ್.ಡಿ ಕುಮಾರಸ್ವಾಮಿಗೆ ಈ ಬಾರಿ

‘ನಮೋ’ 3.0 ಸರ್ಕಾರದಲ್ಲಿ ರಾಜ್ಯದ ಐವರಿಗೆ ಮಂತ್ರಿ ಸ್ಥಾನ…! Read More »

ಹಿಮಾಚಲ ಪ್ರದೇಶದಲ್ಲಿ ಗೆಲುವು/ ಗೆಲುವನ್ನು ಮೋದಿಗೆ ಅರ್ಪಿಸಿದ ಕಂಗನಾ

ಸಮಗ್ರ ನ್ಯೂಸ್: ಲೋಕಸಭಾ ಚುನಾವಣೆಯಲ್ಲಿ ಹಿಮಾಚಲ ಪ್ರದೇಶದಲ್ಲಿ ಭರ್ಜರಿ ಗೆಲುವು ಸಾಧಿಸಿರುವ ನಟಿ ಕಂಗನಾ ರನೌತ್ ತಮ್ಮ ಗೆಲುವನ್ನು ಪ್ರಧಾನಿ ಮೋದಿಗೆ ಅರ್ಪಿಸಿದ್ದಾರೆ. ನನ್ನ ಜನ್ಮಭೂಮಿ ಹಿಮಾಚಲ ಪ್ರದೇಶದಲ್ಲಿ ಜನರ ಸೇವೆಯನ್ನು ಮುಂದುವರಿಸುತ್ತೇನೆ, ಪ್ರಧಾನಿ ನರೇಂದ್ರ ಮೋದಿಯವರ ‘ಸಲ್ಮಾ ಸಾಥ್, ಸಬ್ಬಾ ವಿಕಾಸ್’ ಗುರಿಯಲ್ಲಿ ನಾನು ಸೈನಿಕನಾಗಿ ಕೆಲಸ ಮಾಡುತ್ತೇನೆ. ಬಹುಶಃ ಬೇರೊಬ್ಬರು ತಮ್ಮ ಬ್ಯಾಗ್ ವ್ಯಾಕ್ ಮಾಡಿ ಹೊರಡಬೇಕಾಗುತ್ತದೆ. ಆದರೆ ನಾನು ಇಲ್ಲಿ ಇದ್ದೇ ಇರುತ್ತೇನೆ ಎಂದು ಹೇಳಿದೆ. ಹಾಗೆಯೇ ಆಗಲಿದೆ, ಪ್ರಧಾನಿ ಮೋದಿಗೆ ನನ್ನ

ಹಿಮಾಚಲ ಪ್ರದೇಶದಲ್ಲಿ ಗೆಲುವು/ ಗೆಲುವನ್ನು ಮೋದಿಗೆ ಅರ್ಪಿಸಿದ ಕಂಗನಾ Read More »