Uncategorized

ಧರ್ಮಸ್ಥಳ: ದೀಪಾವಳಿ ಬಳಿಕ ದೇವರ ದರ್ಶನದ ಸಮಯ ಬದಲು

ಧರ್ಮಸ್ಥಳ: ದೀಪಾವಳಿ (ನ. 4)ರ ಬಳಿಕ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥೇಶ್ವರ ದೇವಸ್ಥಾನದಲ್ಲಿ ರಂಗಪೂಜೆ, ಬೆಳ್ಳಿ ರಥೋತ್ಸವ, ಪಲ್ಲಕ್ಕಿ ಉತ್ಸವ ಸೇರಿದಂತೆ ವಿಶೇಷಪೂಜೆ, ಉತ್ಸವಾದಿ ಸೇವೆಗಳು ಆರಂಭವಾಗಲಿವೆ ಎಂದು ದೇವಸ್ಥಾನದ ಪ್ರಕಟಣೆ ತಿಳಿಸಿದೆ.ವಿಶೇಷ ಪೂಜೆ, ಉತ್ಸವಾದಿ ಸೇವೆಗಳು ನಡೆಯುವ ಕಾರಣ ದೇವರ ದರ್ಶನಕ್ಕೆ ಸಮಯಾವಕಾಶ ಹೊಂದಿಸಲಾಗಿದೆ. ಬೆಳಗ್ಗೆ 6ರಿಂದ ಅಪರಾಹ್ನ 2.30, ಸಂಜೆ 5ರಿಂದ ರಾತ್ರಿ 8.30ರ ವರೆಗೆ (ವಿಶೇಷ ದಿನಗಳಲ್ಲಿ ಸಮಯ ವ್ಯತ್ಯಾಸವಾಗುವ ಸಾಧ್ಯತೆಯಿದೆ). ಅನ್ನಪೂರ್ಣ ಛತ್ರದಲ್ಲಿ ಬೆಳಗ್ಗೆ 10.30ರಿಂದ 3 ಹಾಗೂ ರಾತ್ರಿ 7ರಿಂದ […]

ಧರ್ಮಸ್ಥಳ: ದೀಪಾವಳಿ ಬಳಿಕ ದೇವರ ದರ್ಶನದ ಸಮಯ ಬದಲು Read More »

ಮಲೆನಾಡಿನ ಸೊಗಡು ಪರಿಚಯಿಸುತ್ತಿದೆ ಕಾರ್ಟೂನ್ ಚಾನೆಲ್| ಆರಂಭದಿಂದಲೇ‌ ಅದ್ಭುತ ಪ್ರತಿಕ್ರಿಯೆ ಪಡೆದ ‘ಮಲ್ನಾಡ್ ಪುಟಾಣಿಗಳು’

ಶಿವಮೊಗ್ಗ: ಮಲೆನಾಡಿನ ಭಾಷಾ ಸೊಗಡು ಹಾಗೂ ಇಲ್ಲಿನ ಆಹಾರ ಪದ್ಧತಿ ಸಂಸ್ಕೃತಿಯನ್ನು ಜಗತ್ತಿಗೆ ಪರಿಚಯಿಸಬೇಕು ಎಂಬ ಮಹತ್ವಾ ಕಾಂಕ್ಷೆಯೊಂದಿಗೆ ತೀರ್ಥಹಳ್ಳಿಯಲ್ಲಿ ಒಂದೇ ಕುಟುಂಬದವರು ‘ಮಲ್ನಾಡ್ ಪುಟಾಣಿಗಳು’ ಕನ್ನಡ ಯೂ‌ ಟ್ಯೂಬ್ ಚಾನೆಲ್ ಆರಂಭಿಸಿದ್ದಾರೆ. ಕೊರೊನಾ 2ನೇ ಅಲೆ ಸಂದರ್ಭದಲ್ಲಿ ಆರಂಭಿಸಿರುವ ಈ ಚಾನೆಲ್‌ಗೆ ವಿದೇಶದಲ್ಲೂ ವೀಕ್ಷಕರಿದ್ದಾರೆ. ವಿಶೇಷವೆಂದರೆ, ಶುರುವಾದ ಎರಡೇ ತಿಂಗಳಲ್ಲಿ 20 ಲಕ್ಷ ವೀಕ್ಷಕರನ್ನು ಚಾನೆಲ್ ಸಂಪಾದಿಸಿದೆ. ಮಲೆನಾಡಿನ ಸಂಸ್ಕೃತಿ, ಭಾಷೆಯನ್ನು ಉಳಿಸಿ ಬೆಳೆಸುವ ಹಾಗೂ ಜಾಗತಿಕ ಮಟ್ಟ ದಲ್ಲಿ ಜನರಿಗೆ ಇದನ್ನು ತಲುಪಿಸುವುದಕ್ಕಾಗಿ ಉಪನ್ಯಾಸಕಿ

ಮಲೆನಾಡಿನ ಸೊಗಡು ಪರಿಚಯಿಸುತ್ತಿದೆ ಕಾರ್ಟೂನ್ ಚಾನೆಲ್| ಆರಂಭದಿಂದಲೇ‌ ಅದ್ಭುತ ಪ್ರತಿಕ್ರಿಯೆ ಪಡೆದ ‘ಮಲ್ನಾಡ್ ಪುಟಾಣಿಗಳು’ Read More »

ಜೆಡಿಎಸ್ ಶಾಸಕ ಎಸ್.ಮಂಜುನಾಥ್ ಬಂಧನ

ಬೆಂಗಳೂರು: ಬೆಂಗಳೂರಿನ ಶಿವರಾಮ ಕಾರಂತ ಬಡಾವಣೆಯಲ್ಲಿ ಬಿಡಿಎ ಎನ್‌ಒಸಿ ಪಡೆದು ಕಟ್ಟಿದ್ದ ಮನೆಗಳನ್ನು ನೆಲಸಮ ಮಾಡುವುದನ್ನು ತಡೆಯಲು ಹೋದ ಜೆಡಿಎಸ್ ಪಕ್ಷದ ದಾಸರಹಳ್ಳಿ‌ ಕ್ಷೇತ್ರದ ಶಾಸಕ ಮಂಜುನಾಥ್‌ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಇಂದು ಬೆಂಗಳೂರಿನ ಶಿವರಾಮ ಕಾರಂತ ಬಡಾವಣೆಯಲ್ಲಿ ಬಿಡಿಎ ಎನ್‌ಒಸಿ ಪಡೆದು ಕಟ್ಟಿದ್ದಂತ ಮನೆಗಳನ್ನೇ, ಪೊಲೀಸರ ನೆರವಿನಿಂದ ಬಿಡಿಎ ಅಧಿಕಾರಿಗಳು ಅಕ್ರಮದ ಹೆಸರಿನಲ್ಲಿ ನೆಲಸಮ ಮಾಡಲು ತೊಡಗಿದ್ದರು. ಈ ಸಂದರ್ಭದಲ್ಲಿ ಸ್ಥಳಕ್ಕೆ ತೆರಳಿದಂತ ಜೆಡಿಎಸ್ ಶಾಸಕ ಮಂಜುನಾಥ್ ಅವರು ನೆಲಸಮ ಕಾರ್ಯಾಚರಣೆ ಅಡ್ಡಿ ಪಡಿಸಿದ್ದಾರೆ. ಇದರಿಂದ

ಜೆಡಿಎಸ್ ಶಾಸಕ ಎಸ್.ಮಂಜುನಾಥ್ ಬಂಧನ Read More »

ಮುಸ್ಲಿಂ ಹುಡುಗಿಯ ಪ್ರೀತಿಸುತ್ತಿದ್ದ ಹಿಂದೂ ಹುಡುಗ| ಪ್ರೀತಿ ಕೊಂದ ಕೊಲೆಗಾರರು..!?

ವಿಜಯಪುರ: ವಿಜಯಪುರದಲ್ಲಿ ಮರ್ಯಾದಾ ಹತ್ಯೆ ಪ್ರಕರಣ ನಡೆದಿರುವ ಶಂಕೆ ವ್ಯಕ್ತವಾಗಿದೆ. ಮುಸ್ಲಿಂ ಯುವತಿಯನ್ನು ಪ್ರೀತಿಸುತ್ತಿದ್ದ ಹಿಂದೂ ಯುವಕನ ಹತ್ಯ ನಡೆದಿದ್ದು, ಬಾವಿಯಲ್ಲಿ ಶವ ಸಿಕ್ಕಿದೆ. ಮೃತಪಟ್ಟ ಯುವಕನನ್ನು ಆಲಮೇಲ ತಾಲೂಕಿನ ಬಳಗಾನೂರ ಗ್ರಾಮದ ರವಿ ನಿಂಬರಗಿ (34) ಎಂದು ಗುರುತಿಸಲಾಗಿದೆ. ಅಕ್ಟೋಬರ್ 21ರಂದು ನಾಪತ್ತೆಯಾಗಿದ್ದ ರವಿ ಶವ ಹೊಲದ ಬಾವಿಯಲ್ಲಿ ಅಕ್ಟೋಬರ್ 23ರಂದು ಪತ್ತೆಯಾಗಿದೆ. ಅಕ್ಟೋಬರ್ 21ರಂದು ದಿನಸಿ ತರಲು ಮನೆಯಿಂದ ಹೊರ ಹೋಗಿದ್ದ ರವಿ ನಿಂಬರಗಿ ನಾಪತ್ತೆಯಾಗಿದ್ದ. ರವಿ ಪ್ರೀತಿಸುತ್ತಿದ್ದ ಯುವತಿ 24 ವರ್ಷದ ಅಮ್ರಿನ್

ಮುಸ್ಲಿಂ ಹುಡುಗಿಯ ಪ್ರೀತಿಸುತ್ತಿದ್ದ ಹಿಂದೂ ಹುಡುಗ| ಪ್ರೀತಿ ಕೊಂದ ಕೊಲೆಗಾರರು..!? Read More »

ಕಾಲುವೆಗೆ ಉರುಳಿದ ಕಾರು| ನಾಲ್ವರು ಸಾವು

ಬಾಗಲಕೋಟೆ : ಘಟಪ್ರಬಾ ಕಾಲುವೆಗೆ ಕಾರು ಪಲ್ಟಿಯಾಗಿ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲೂಕಿನ ಹಲಕಿ ಗ್ರಾಮದ ಬಳಿ ನಡೆದಿದೆ.ಹಲಕಿ ಗ್ರಾಮದ ಬಳಿಯ ಘಟಪ್ರಭಾ ಕಾಲುವೆಗೆ ಕಾರು ಪಲ್ಟಿಯಾಗಿ ನಾಲ್ವರು ಮೃತಪಟ್ಟಿದ್ದಾರೆ. ತಡರಾತ್ರಿ ಈ ಭೀಕರ ದುರಂತ ಸಂಭವಿಸಿದ್ದು, ನಾಲ್ವರು ಮೃತಪಟ್ಟಿರುವ ಮಾಹಿತಿ ಲಭ್ಯವಾಗಿದೆ.

ಕಾಲುವೆಗೆ ಉರುಳಿದ ಕಾರು| ನಾಲ್ವರು ಸಾವು Read More »

ನಳಿನ್ ಹೇಳಿಕೆಗೆ ಮುನಿಸಿಕೊಂಡ ಯಡಿಯೂರಪ್ಪ| ಬೇಜವಾಬ್ದಾರಿ ಹೇಳಿಕೆಗೆ ಅಸಮಾಧಾನ|

ಬೆಂಗಳೂರು : ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಡ್ರಗ್ ಅಡಿಕ್ಟ್ ಮತ್ತು ಪೆಡ್ಲರ್ ಎಂಬ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿಕೆಗೆ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅಸಮಾಧಾನ ಹೊರ ಹಾಕಿದ್ದಾರೆ. ವಿಜಯಪುರ ಜಿಲ್ಲೆಯ ಸಿಂದಗಿ ವಿಧಾನಸಭಾ ಕ್ಷೇತ್ರದ ಮೊರಟಗಿಯಲ್ಲಿ ಮಾತನಾಡಿದ ಮಾಜಿ ಸಿಎಂ ಯಡಿಯೂರಪ್ಪ, ಯಾರಿಗೂ ಅಗೌರವ ತರುವ ಹಾಗೆ ಯಾರೂ ಮಾತನಾಡಬಾರದು. ರಾಹುಲ್ ಗಾಂಧಿ ಅವರ ಬಗ್ಗೆ ನನಗೆ ಗೌರವ ಇದೆ. ನಳಿನ್ ಕುಮಾರ್ ರೀತಿ ಯಾರು ಮಾತನಾಡಬಾರದು ಎಂದಿದ್ದಾರೆ. ನಳಿನ್ ಕುಮಾರ್

ನಳಿನ್ ಹೇಳಿಕೆಗೆ ಮುನಿಸಿಕೊಂಡ ಯಡಿಯೂರಪ್ಪ| ಬೇಜವಾಬ್ದಾರಿ ಹೇಳಿಕೆಗೆ ಅಸಮಾಧಾನ| Read More »

ಮತ್ತೆ ಮತ್ತೆ ಕಂಪಿಸುತ್ತಿರುವ ಬಸವನಾಡು ವಿಜಯಪುರ| ಇದು ಅಪಾಯದ ಮುನ್ಸೂಚನೆಯೇ?

ವಿಜಯಪುರ : ಬಸವನಾಡು ವಿಜಯಪುರ ಜಿಲ್ಲೆಯಲ್ಲಿ ಮತ್ತೆ ಭೂಮಿ ಕಂಪಿಸಿರುವ ಅನುಭವವಾಗಿದ್ದು, ಆತಂಕದಿಂದ ಜನರು ಮನೆಯಿಂದ ಹೊರಗೆ ಓಡಿ ಬಂದಿದ್ದಾರೆ. ವಿಜಯಪುರ ಜಿಲ್ಲೆಯ ತಿಕೋಟಾ ತಾಲೂಕಿನ ಬಾಬಾನಗರ ಸೇರಿ ಹಲವು ಗ್ರಾಮಗಳಲ್ಲಿ ಇಂದು ಬೆಳಗ್ಗೆ 10.30 ರ ಸುಮಾರಿಗೆ ಭೂಕಂಪನದ ಅನುಭವವಾಗಿದ್ದು, ಜನರು ಆತಂಕದಿಂದ ಮನೆಯಿಂದ ಹೊರಗೆ ಓಡಿ ಬಂದಿದ್ದಾರೆ. ರಾಜ್ಯದ ಹಲವು ಜಿಲ್ಲೆಗಳಲ್ಲಿ ಭೂಕಂಪನ‌ ಅನುಭವ ಆಗುತ್ತಿರುವ ಕಾರಣ ಜನರಲ್ಲಿ ಆತಂಕ ಮನೆ ಮಾಡಿದ್ದು, ಇಂದು ಜಿಲ್ಲೆಯ ಕೊಲ್ಹಾರ ತಾಲೂಕಿನ ಮಸೂತಿ ಗ್ರಾಮಕ್ಕೆ ನ್ಯಾಶನಲ್ ಜಿಯೋಫಿಜಿಕಲ್

ಮತ್ತೆ ಮತ್ತೆ ಕಂಪಿಸುತ್ತಿರುವ ಬಸವನಾಡು ವಿಜಯಪುರ| ಇದು ಅಪಾಯದ ಮುನ್ಸೂಚನೆಯೇ? Read More »

“ನಳಿನ್ ಗೆ ಹುಚ್ಚು ಹಿಡಿದಿದೆ, ದಯವಿಟ್ಟು ನಿಮ್ಹಾನ್ಸ್ ಗೆ ಸೇರಿಸಿ”| ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆಗೆ ಕಿಡಿಕಾರಿದ‌ ಮಾಜಿ ಸಿಎಂ ಸಿದ್ದರಾಮಯ್ಯ

ಸಿಂದಗಿ: ‘ರಾಹುಲ್ ಗಾಂಧಿ ಓರ್ವ ಡ್ರಗ್ ಅಡಿಕ್ಟ್, ಪೆಡ್ಲರ್’ ಎಂಬ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಹೇಳಿಕೆಗೆ ಕೆಂಡ ಕಾರಿರುವ ಕಾಂಗ್ರೆಸ್ ನಾಯಕರು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಸಿಂದಗಿಯಲ್ಲಿ ಮಾತನಾಡಿದ ವಿಪಕ್ಷ ನಾಯಕ ಸಿದ್ದರಾಮಯ್ಯ, ನಳೀನ್ ಕುಮಾರ್ ಕಟೀಲ್ ಒಬ್ಬ ಬೇಜವಾಬ್ದಾರಿ, ಅಪ್ರಬುದ್ಧ ರಾಜಕಾರಣಿ. ರಾಷ್ಟ್ರೀಯ ಪಕ್ಷದ ರಾಜ್ಯಾಧ್ಯಕ್ಷರಾಗಿ ಹುಚ್ಚನ ತರಹ ಮಾತನಾಡುತ್ತಿದ್ದಾರೆ. ಮೊದಲು ಅವರನ್ನು ನಿಮ್ಹಾನ್ಸ್ ಗೆ ಸೇರಿಸಬೇಕು ಎಂದು ಕಿಡಿಕಾರಿದ್ದಾರೆ. ರಾಹುಲ್ ಗಾಂಧಿ ಬಗ್ಗೆ ನಳೀನ್ ಕಟೀಲ್ ನೀಡಿರುವ ಹೇಳಿಕೆ ಖಂಡನೀಯ.

“ನಳಿನ್ ಗೆ ಹುಚ್ಚು ಹಿಡಿದಿದೆ, ದಯವಿಟ್ಟು ನಿಮ್ಹಾನ್ಸ್ ಗೆ ಸೇರಿಸಿ”| ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆಗೆ ಕಿಡಿಕಾರಿದ‌ ಮಾಜಿ ಸಿಎಂ ಸಿದ್ದರಾಮಯ್ಯ Read More »

ಉತ್ತರಾಖಂಡ್ ನಲ್ಲಿ ಭಾರೀ ವರ್ಷಧಾರೆ| ಹಲವೆಡೆ ಪ್ರವಾಹ, ಅಪಾರ ನಷ್ಟ|

ಡೆಹ್ರಾಡೂನ್‌: ಉತ್ತರಾಖಂಡದಲ್ಲಿ ಭಾರೀ ಮಳೆಯಿಂದಾಗಿ, ಹಲವು ಜಿಲ್ಲೆಗಳಲ್ಲಿ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದೆ. ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ತಗೊಂಡಿದೆ. ಈ ಮಧ್ಯೆ, ಪ್ರಧಾನಿ ನರೇಂದ್ರ ಮೋದಿ ಮಂಗಳವಾರ ಉತ್ತರಾಖಂಡ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿಯೊಂದಿಗೆ ಚರ್ಚಿಸಿದ್ದು, ರಾಜ್ಯದಲ್ಲಿ ಭಾರೀ ಮಳೆಯಿಂದಾಗಿ ಉದ್ಭವಿಸಿರುವ ಪರಿಸ್ಥಿತಿಯನ್ನು ಪ್ರಧಾನಿ ಅವಲೋಕಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ. ಸೋಮವಾರ ರಾತ್ರಿಯಿಂದ ನೈನಿತಾಲ್ ಮತ್ತು ಕೌಶಾನಿಯಿಂದ ಮುನ್ಸಿವರೆಗೆ ಹೋಗುವ ದಾರಿಯಲ್ಲಿ ಹಲವಾರು ಭೂಕುಸಿತಗಳು ಸಂಭವಿಸಿವೆ. ಕೌಶನಿಯ ವಿವಿಧ ಸ್ಥಳಗಳಲ್ಲಿ ಸುಮಾರು 500 ಪ್ರವಾಸಿಗರು ಸಿಲುಕಿಕೊಂಡಿದ್ದಾರೆ. ಅಲ್ಮೋರಾ ಜಿಲ್ಲೆಯಲ್ಲಿ ಭಾರೀ

ಉತ್ತರಾಖಂಡ್ ನಲ್ಲಿ ಭಾರೀ ವರ್ಷಧಾರೆ| ಹಲವೆಡೆ ಪ್ರವಾಹ, ಅಪಾರ ನಷ್ಟ| Read More »

ಸುಬ್ರಹ್ಮಣ್ಯ: ಕುಮಾರಧಾರಾ ನದಿಯಲ್ಲಿ ಅಪರಿಚಿತ ಮಹಿಳೆಯ ಶವ ಪತ್ತೆ

ಸುಬ್ರಹ್ಮಣ್ಯ: ಇಲ್ಲಿನ ಕುಮಾರಧಾರಾ ನದಿಯಲ್ಲಿ ಅಪರಿಚಿತ ಮಹಿಳೆಯೊಬ್ವರ ಮೃತದೇಹ ಪತ್ತೆಯಾಗಿದೆ. ಗೃಹ ರಕ್ಷಕ ದಳದ ಸಿಬ್ಬಂದಿಗಳು ಸ್ಥಳೀಯರ ನೆರವಿನೊಂದಿಗೆ ಕುಮಾರಧಾರ ನದಿಯಿಂದ ಮೃತ ದೇಹವನ್ನು ಮೇಲೆಕ್ಕೆತ್ತಿದ್ದಾರೆ. ಬಳಿಕ ಸುಬ್ರಹ್ಮಣ್ಯ ಪ್ರಾಥಮಿಕ ಅರೋಗ್ಯ ಕೇಂದ್ರದ ಶವಾಗಾರದಲ್ಲಿ ಮೃತ ದೇಹವನ್ನು ಇರಿಸಲಾಗಿದೆ. ಮೃತ ಮಹಿಳೆಯ ಪ್ರಾಯ ಸುಮಾರು 55 ವರ್ಷ ಆಗಬಹುದೆಂದು ಅಂದಾಜಿಸಲಾಗಿದೆ. ವಿಳಾಸ ಪತ್ತೆ ಇನ್ನಷ್ಟೇ ಆಗಬೇಕಿದ್ದು,ಸುಬ್ರಹ್ಮಣ್ಯ ಪೊಲೀಸ್ ಠಾಣಾಧಿಕಾರಿ ಜಂಬೂರಾಜ್ ಮಹಾಜನ್, ಎ. ಎಸ್.ಐ ಮೋಹನ್. ಕೆ,ಮಹಾಲಕ್ಷ್ಮಿ, ಮಹೇಶ್ ಸ್ಥಳಕ್ಕೆ ಆಗಮಿಸಿ ತನಿಖೆ ನಡೆಸುತ್ತಿದ್ದಾರೆ.

ಸುಬ್ರಹ್ಮಣ್ಯ: ಕುಮಾರಧಾರಾ ನದಿಯಲ್ಲಿ ಅಪರಿಚಿತ ಮಹಿಳೆಯ ಶವ ಪತ್ತೆ Read More »