Uncategorized

ಕೇಂದ್ರ ಸಚಿವೆಯಾಗಿ ಶೋಭಾ ಕರಂದ್ಲಾಜೆ ?ಪ್ರಧಾನಿ ನಿವಾಸಕ್ಕೆ ಶೋಭಾ ಸ್ಮೈಲ್ ಗೌಡರಿಗೆ ಗೇಟ್ ಪಾಸ್? ಸಿ.ಡಿ ತಂದಿತೇ ಕಂಠಕ?

ಮಂಗಳೂರು : ಉಡುಪಿ ಚಿಕ್ಕಮಗಳೂರು ಸಂಸದೆ ಶೋಭಾ ಕರಂದ್ಲಾಜೆ ಮೋದಿ ಸಂಪುಟಕ್ಕೆ ಸೇರುವುದು ಬಹುತೇಕ ಖಚಿತವಾಗಿದೆ. ಮೂಲತ ಕಡಬ ತಾಲೂಕಿನ ಚಾರ್ವಾಕ ಗ್ರಾಮದ ಕರಂದ್ಲಾಜೆ ದಿ. ಮೋನಪ್ಪ ಗೌಡ ಹಾಗೂ ಪೂವಕ್ಕ ದಂಪತಿಯ ಪುತ್ರಿಯಾದ ಕರಂದ್ಲಾಜೆ ಮೊದಲ ಭಾರಿಗೆ ಎಂಎಲ್‌ಸಿಯಾಗಿ ರಾಜಕೀಯಕ್ಕೆ ಎಂಟ್ರಿಕೊಟ್ಟಿದ್ದರು. ಇದೀಗ ರಾಜಕೀಯದಲ್ಲಿ ಹೋರಾಟದ ಮೂಲಕ ಹಂತ ಹಂತವಾಗಿ ಮೇಲೇರಿದರು. ಯಶವಂತಪುರದ ಶಾಸಕಿಯಾಗಿ ಯಡಿಯೂರಪ್ಪ ಸರ್ಕಾರದಲ್ಲಿ ಮೊದಲ ಬಾರಿ ಸಚಿವೆಯಾದರು. ಗ್ರಾಮೀಣಾಭಿವೃದ್ಧಿ, ಇಂಧನ ಸಚಿವೆಯಾಗಿ ಕರ್ತವ್ಯ ನಿರ್ವಹಿಸಿದರು. ನಂತರ ರಾಜಕೀಯ ಅಸ್ಥಿರತೆ ಎದುರಾದಾಗ ಯಡಿಯೂರಪ್ಪರ […]

ಕೇಂದ್ರ ಸಚಿವೆಯಾಗಿ ಶೋಭಾ ಕರಂದ್ಲಾಜೆ ?ಪ್ರಧಾನಿ ನಿವಾಸಕ್ಕೆ ಶೋಭಾ ಸ್ಮೈಲ್ ಗೌಡರಿಗೆ ಗೇಟ್ ಪಾಸ್? ಸಿ.ಡಿ ತಂದಿತೇ ಕಂಠಕ? Read More »

ಬಾಲಿವುಡ್ ಲೆಜೆಂಡ್ ಕಿಂಗ್ ದಿಲೀಪ್ ಕುಮಾರ್ ವಿಧಿವಶ, ಕಣ್ಣೀರಲ್ಲಿ ಮುಳುಗಿದ ಚಿತ್ರರಂಗ

ಮುಂಬೈ: ಬಾಲಿವುಡ್‌ ಹಿರಿಯ ನಟ ದಿಲೀಪ್‌ ಕುಮಾರ್‌ ಇಂದು ವಿಧಿವಶರಾಗಿದ್ದಾರೆ. ವಯೋಸಹಜ ಕಾಯಿಲೆಗಳಿಂದ ಬಳಲುತ್ತಿದ್ದ 98 ವರ್ಷದ ದಿಲೀಪ್‌ ಕುಮಾರ್‌ ಅವರನ್ನು ಎರಡು ದಿನಗಳ ಹಿಂದಷ್ಟೇ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಪಾಕಿಸ್ತಾನದ ಪೇಶಾವರದಲ್ಲಿ ಡಿಸೆಂಬರ್‌ 11, 1922 ರಲ್ಲಿ ಜನಿಸಿದ್ದ ಮಹಮ್ಮದ್‌ ಯೂಸೂಫ್‌ ಖಾನ್‌ ವಿಭಜನೆ ವೇಳೆ ಭಾರತಕ್ಕೆ ಬಂದಿದ್ದು ಬಾಲಿವುಡ್‌ ಚಿತ್ರರಂಗದಲ್ಲಿ ತಮ್ಮನ್ನು ಗುರುತಿಸಿಕೊಂಡ ಬಳಿಕ ದಿಲೀಪ್‌ ಕುಮಾರ್‌ ಎಂಬ ಹೆಸರಿನಿಂದಲೇ ಖ್ಯಾತರಾಗಿದ್ದರು. ಪತ್ನಿ ಸಾಯಿರಾಬಾನು ಜೊತೆ ಮುಂಬೈನಲ್ಲಿ ನೆಲೆಸಿದ್ದ ದಿಲೀಪ್‌ ಕುಮಾರ್‌ ಇಂದು ಬಾರದ ಲೋಕಕ್ಕೆ

ಬಾಲಿವುಡ್ ಲೆಜೆಂಡ್ ಕಿಂಗ್ ದಿಲೀಪ್ ಕುಮಾರ್ ವಿಧಿವಶ, ಕಣ್ಣೀರಲ್ಲಿ ಮುಳುಗಿದ ಚಿತ್ರರಂಗ Read More »

ಲಸಿಕೆ ಹಾಕಿಸಿದ ಬಳಿಕ ಹೋಗಿದ್ದ ದೃಷ್ಟಿ ಮರಳಿ ಬಂತು! ಹೀಗೊಂದು ಪವಾಡವೇ?

ಮುಂಬೈ: ಕರೊನಾ ಲಸಿಕೆ ಪಡೆದ ನಂತರ ದೇಹದಲ್ಲಿ ಅಯಸ್ಕಾಂತೀಯ ಶಕ್ತಿ ಕಾಣಿಸಿಕೊಂಡಿದೆ ಎಂದಿರುವ ಅನೇಕರನ್ನು ನೀವು ನೋಡಿರುತ್ತೀರಿ. ಆದರೆ ವರ್ಷಗಳ ಹಿಂದೆ ಹೋಗಿದ್ದ ದೃಷ್ಟಿಯೇ ವಾಪಸು ಬಂದಿದೆ ಎಂದರೆ ನಂಬುತ್ತೀರಾ? ನಂಬಲೇ ಬೇಕು. ಏಕೆಂದರೆ ಅಂತದ್ದೊಂದು ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ. ಮಹಾರಾಷ್ಟ್ರದ ವಾಶಿಮ್ ಜಿಲ್ಲೆಯ ನಿವಾಸಿ ಮಥುರಾಬಾಯಿ ಬಿಡ್ವೆ(70)ಗೆ ಒಂಬತ್ತು ವರ್ಷಗಳ ಹಿಂದೆ ಎರಡೂ ಕಣ್ಣುಗಳ ದೃಷ್ಟಿ ಹೋಗಿತ್ತಂತೆ. ಆಕೆ ಜೂನ್ 26ರಂದು ಹತ್ತಿರದ ಕರೊನಾ ಲಸಿಕಾ ಕೇಂದ್ರಕ್ಕೆ ತೆರಳಿ ಕೋವಿಶೀಲ್ಡ್ ಲಸಿಕೆಯ ಮೊದಲನೇ ಡೋಸೇಜ್ ಪಡೆದುಕೊಂಡು

ಲಸಿಕೆ ಹಾಕಿಸಿದ ಬಳಿಕ ಹೋಗಿದ್ದ ದೃಷ್ಟಿ ಮರಳಿ ಬಂತು! ಹೀಗೊಂದು ಪವಾಡವೇ? Read More »

‘ನಾ ನಿನ್ನ ಬಿಡಲಾರೆ’ ಅಂತ ಸುತ್ತಿಕೊಳ್ತಿದೆ ಅಕ್ರಮ ಭೂ ಡಿನೋಟಿಫಿಕೇಶನ್ ಪ್ರಕರಣ, ಮತ್ತೆ ತನಿಖೆಗೆ ಆದೇಶಿಸಿದ ಕೋರ್ಟ್, ಸಿಎಂಗೆ ಹಿನ್ನಡೆ

ಬೆಂಗಳೂರು. ಅಕ್ರಮ ಭೂ ಡಿನೋಟಿಫಿಕೇ‍ಷನ್‌ಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪನವರಿಗೆ ಹಿನ್ನಡೆಯಾಗಿದ್ದು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಬಿಎಸ್‌ವೈ ವಿರುದ್ಧ ಮರು ತನಿಖೆಗೆ ಆದೇಶಿಸಿದೆ. ಅಕ್ರಮ ಭೂ ಡಿನೋಟಿಫಿಕೇ‍ಷನ್‌ಗೆ ಸಂಬಂಧಿಸಿದಂತೆ ತನಿಖಾ ಅಧಿಕಾರಿ ಸಲ್ಲಿಸಿದ್ದ ‘ಬಿ’ ರಿಪೋರ್ಟ್‌ಅನ್ನು ರದ್ದುಗೊಳಿಸಿ ಆದೇಶ ಹೊರಡಿಸಿದೆ. ಮುಖ್ಯಮಂತ್ರಿ ಯಡಿಯೂರಪ್ಪನವರ ಮೇಲಿನ ಆರೋಪ ಗಂಭೀರ ಸ್ವರೂಪದ್ದಾಗಿದ್ದು ಸಮರ್ಪಕ ತನಿಖೆಯನ್ನು ನಡೆಸದೇ ಕ್ಲೀನ್‌ ಚೀಟ್‌ ನೀಡಿರುವುದು ಸರಿಯಲ್ಲ ಎಂದಿರುವ ನ್ಯಾಯಾಲಯ ಹೆಚ್ಚಿನ ತನಿಖೆಗೆ ಇಂದು ಆದೇಶ ನೀಡಿತು. ನ್ಯಾಯಮೂರ್ತಿ ಶ್ರೀಧರ್ ಗೋಪಾಲಕೃಷ್ಣ ಭಟ್ ಪ್ರಕರಣದ ತನಿಖೆ ಕುರಿತು

‘ನಾ ನಿನ್ನ ಬಿಡಲಾರೆ’ ಅಂತ ಸುತ್ತಿಕೊಳ್ತಿದೆ ಅಕ್ರಮ ಭೂ ಡಿನೋಟಿಫಿಕೇಶನ್ ಪ್ರಕರಣ, ಮತ್ತೆ ತನಿಖೆಗೆ ಆದೇಶಿಸಿದ ಕೋರ್ಟ್, ಸಿಎಂಗೆ ಹಿನ್ನಡೆ Read More »

ಕೈದಿಗಳೊಂದಿಗೆ ಕಾಮಕೇಳಿ‌ ನಡೆಸಿದ ಮಹಿಳಾ ಪೊಲೀಸ್…!

ಕ್ಯಾಲಿಫೋರ್ನಿಯಾ(ಅಮೆರಿಕ): ಕರ್ತವ್ಯನಿರತ ಮಹಿಳಾ ಪೊಲೀಸ್​ ಅಧಿಕಾರಿಯೊಬ್ಬಳು ಜೈಲಿನಲ್ಲಿ ಕೈದಿ ಜತೆ ಲೈಂಗಿಕ ಕ್ರಿಯೆ ನಡೆಸಿದ್ದಾಳೆ. ಆ ವೇಳೆ ಇತರ 11 ಕೈದಿಗಳಿದ್ದರೂ ಅವರ ಎದುರೇ ಕಾಮದಾಟ ನಡೆಸಿ ಜೈಲುಶಿಕ್ಷೆಗೆ ಗುರಿಯಾಗಿದ್ದಾಳೆ. ಕೈದಿ ಜತೆ ಸೆಕ್ಸ್​ ಮಾಡಿ ಜೈಲು ಸೇರಿದವಳ ಹೆಸರು ಟೀನಾ ಗೊನ್ಜಾಲೆಜ್​. 26 ವರ್ಷದ ಈಕೆ ಪ್ರೆಸ್ನೊ ಕೌಂಟಿ ಠಾಣೆಯ ಕರೆಕ್ಷನ್​ ಅಧಿಕಾರಿ. 2016ರಿಂದ ಕೌಂಟಿ ಜೈಲಿನಲ್ಲಿ ಕೆಲಸ ಮಾಡುತ್ತಿದ್ದ ಟೀನಾ, ತನಗೆ ಮೂಡ್ ಬಂದಾಗಲೆಲ್ಲ ಕೈದಿಗಳ ಜತೆ ಅಸಭ್ಯವಾಗಿ ನಡೆದುಕೊಳ್ಳುತ್ತಿದ್ದಂತೆ. ಕೆಲವರೊಂದಿಗೆ ಲೈಂಗಿಕ ಕ್ರಿಯನ್ನೂ

ಕೈದಿಗಳೊಂದಿಗೆ ಕಾಮಕೇಳಿ‌ ನಡೆಸಿದ ಮಹಿಳಾ ಪೊಲೀಸ್…! Read More »

ಕರ್ನಾಟಕದ ನೂತನ ರಾಜ್ಯಪಾಲರಾಗಿ ತಾವರಚಂದ್ ಗೆಹ್ಲೋಟ್

ನವದೆಹಲಿ: ಕೇಂದ್ರದ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಖಾತೆ ಸಚಿವ ತಾವರ್‌ಚಂದ್‌ ಗೆಹ್ಲೋಟ್‌ ಅವರು ಕರ್ನಾಟಕದ ನೂತನ ರಾಜ್ಯಪಾಲರಾಗಿ ನೇಮಕಗೊಂಡಿದ್ದಾರೆ. ರಾಷ್ಟ್ರಪತಿ ರಾಮನಾಥ್‌ ಕೋವಿಂದ್ ಅವರು ಮಂಗಳವಾರ ನೇಮಕಾತಿ ಆದೇಶ ಮಾಡಿದ್ದಾರೆ. ಹಾಲಿ ರಾಜ್ಯಪಾಲ ವಜುಭಾಯಿವಾಲಾ ಅವರ ಅವಧಿ ಪೂರ್ಣಗೊಂಡಿದೆ. ಅವರ ಸ್ಥಾನಕ್ಕೆ ತಾವರ್‌ಚಂದ್‌ ಗೆಹ್ಲೋಟ್‌ ಅವರನ್ನು ನೇಮಕ ಮಾಡಲಾಗಿದೆ. ಕೇಂದ್ರ ಸಚಿವ ಸಂಪುಟದ ಪುನರ್‌ರಚನೆ ಚರ್ಚೆ ನಡೆಯುತ್ತಿರುವ ಸಂದರ್ಭದಲ್ಲೇ ಈ ನೇಮಕಾತಿ ಆದೇಶ ಹೊರಬಂದಿದೆ. ಮೂರು ಬಾರಿ ಮಧ್ಯಪ್ರದೇಶ ಶಾಸಕರಾಗಿ, ನಾಲ್ಕು ಬಾರಿ ಲೋಕಸಭಾ ಸದಸ್ಯರಾಗಿ

ಕರ್ನಾಟಕದ ನೂತನ ರಾಜ್ಯಪಾಲರಾಗಿ ತಾವರಚಂದ್ ಗೆಹ್ಲೋಟ್ Read More »

ಮುಸ್ಲಿಮರು ಭಾರತದಲ್ಲಿ ಇರಬಾರದು ಎನ್ನುವವ ಹಿಂದೂ ಅಲ್ಲ- ಮೋಹನ್ ಭಾಗವತ್

ಭಾರತೀಯರ ಡಿಎನ್​ಎ ಒಂದೇ ಅಂತ ಆರ್​ಎಸ್​​ಎಸ್​ ಮುಖ್ಯಸ್ಥ ಮೋಹನ್ ಭಾಗವತ್ ಹೇಳಿದ್ದಾರೆ. ಮುಸ್ಲಿಂ ರಾಷ್ಟ್ರೀಯ ಮಂಚ್ ಆಯೋಜಿಸಿದ್ದ ಹಿಂದುಸ್ತಾನಿ ಫಸ್ಟ್​, ಹಿಂದುಸ್ತಾನ್ ಫಸ್ಟ್​ ಕಾರ್ಯಕ್ರಮದಲ್ಲಿ ಭಾಗಿಯಾಗಿ ಮಾತನಾಡಿದ ಅವರು, ಜನ ಪೂಜೆ ಮಾಡುವ ವಿಧಾನದಿಂದ ಅವರನ್ನು ವಿಂಗಡಿಸಲು ಸಾಧ್ಯವಿಲ್ಲ. ಗೋರಕ್ಷಣೆ ನೆಪದಲ್ಲಿ ಹತ್ಯೆ ಮಾಡುವವರು ಹಿಂದುತ್ವಕ್ಕೆ ವಿರುದ್ಧವಾಗಿದ್ದಾರೆ. ಮುಸ್ಲಿಮರು ಭಾರತದಲ್ಲಿ ಇರಬಾರದು ಅಂತ ಹೇಳುವವನು ಹಿಂದೂನೇ ಅಲ್ಲ. ಭಾರತದಲ್ಲಿ ಇಸ್ಲಾಂ ಅಪಾಯದಲ್ಲಿದೆ ಅನ್ನೋ ಭಯದ ಸುಳಿಯಲ್ಲಿ ಸಿಲುಕಬೇಡಿ..ಐಕ್ಯತೆ ಇದ್ರೆ ಮಾತ್ರವೇ ದೇಶದ ಅಭಿವೃದ್ಧಿ ಸಾಧ್ಯ. ಆದ್ರೆ ಆ

ಮುಸ್ಲಿಮರು ಭಾರತದಲ್ಲಿ ಇರಬಾರದು ಎನ್ನುವವ ಹಿಂದೂ ಅಲ್ಲ- ಮೋಹನ್ ಭಾಗವತ್ Read More »

ಯಡಿಯೂರಪ್ಪ ಕುಟುಂಬ ಸಮೇತ ಜೈಲುಪಾಲಾಗ್ತಾರೆ – ಹೆಚ್.ವಿಶ್ವನಾಥ್

ಮೈಸೂರು: ಯಡಿಯೂರಪ್ಪ ಅವರನ್ನು ಜೈಲಿಗೆ ಕಳುಹಿಸಿದ್ದೆ ಅವರ ಪುತ್ರ ಬಿ.ವೈ. ವಿಜಯೇಂದ್ರ. ಸಿಎಂ ಯಡಿಯೂರಪ್ಪನವರ ನಕಲಿ ಸಹಿ ಮಾಡಿ ಯಡಿಯೂರಪ್ಪರನ್ನು ಜೈಲಿಗೆ ಕಳುಹಿಸಿದ್ದು, ಇದೀಗ ಇಡೀ ಕುಟುಂಬವನ್ನೇ ಜೈಲಿಗೆ ಕಳುಹಿಸುತ್ತಾರೆ ಎಂದು ಬಿಜೆಪಿ ವಿಧಾನಪರಿಷತ್ ಸದಸ್ಯ ಹೆಚ್. ವಿಶ್ವನಾಥ್ ಹೇಳಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ ಅವರು ವಿಜಯೇಂದ್ರ ವಿರುದ್ಧ ಗಂಭೀರ ಆರೋಪ ಮಾಡಿ, ಸಿಎಂ ಪುತ್ರ ವಿಜಯೇಂದ್ರ ಭ್ರಷ್ಟಾಚಾರ ಮುಗಿಲು ಮುಟ್ಟಿದೆ ಎಂದು ಆರೋಪಿಸಿದ್ದಾರೆ. ಹಿಂದುಳಿದ ನಾಯಕರನ್ನು ತುಳಿಯುವ ಕೆಲಸ ನಡೆಯುತ್ತಿದೆ. ಶ್ರೀರಾಮುಲು ಮತ್ತು ರಮೇಶ್ ಜಾರಕಿಹೊಳಿ ಅವರನ್ನು

ಯಡಿಯೂರಪ್ಪ ಕುಟುಂಬ ಸಮೇತ ಜೈಲುಪಾಲಾಗ್ತಾರೆ – ಹೆಚ್.ವಿಶ್ವನಾಥ್ Read More »

ಕೆಆರ್’ಎಸ್ ಸೋರದಂತೆ ಸುಮಲತಾರನ್ನು ಅಡ್ಡ ಮಲಗಿಸಬೇಕು: ಎಚ್’ಡಿಕೆ

ಬೆಂಗಳೂರು: ಜಿಲ್ಲೆಯ ಜೀವನಾಡಿ ಕೆಆರ್’ಎಸ್ ಸೋರುತ್ತಿದ್ದರೆ ಮಂಡ್ಯ ಸಂಸದೆ ಸುಮಲತಾ ಅವರನ್ನು ಅಡ್ಡ ಮಲಗಿಸಿ ಸೋರಿಕೆ ತಡೆಯಬೇಕು ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಕಿಡಿ ಕಾರಿದ್ದಾರೆ. ಕೆಆರ್’ಎಸ್ ಸುತ್ತಮುತ್ತ ನಡೆಯುತ್ತಿರುವ ಅಕ್ರಮ ಗಾಣಿಗಾರಿಕೆಯಿಂದ ಡ್ಯಾಮ್ ಬಿರುಕು ಬಿಟ್ಟಿದೆ. ತಜ್ಞರಿಂದ ಹೆಚ್ಚಿನ ತನಿಖೆ ನಡೆಸಲು ಪ್ರಭಾವಿ ರಾಜಕಾರಣಿಗಳು ಅಡ್ಡಿಪಡಿಸುತ್ತಿದ್ದಾರೆ ಎಂದು ಸಂಸದೆ ಸುಮಲತಾ ಆರೋಪಿಸಿದ್ದರು. ಇದಕ್ಕೆ ಎಚ್’ಡಿಕೆ ತಿರುಗೇಟು ನೀಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಮಂಡ್ಯ ಇಂತಹ ಸಂಸದರನ್ನು ಇದುವರೆಗೆ ಕಂಡಿಲ್ಲ. ಕಾಣೋದೂ ಇಲ್ಲ. ಕೆಆರ್’ಎಸ್ ನ್ನು ಇವರೇ

ಕೆಆರ್’ಎಸ್ ಸೋರದಂತೆ ಸುಮಲತಾರನ್ನು ಅಡ್ಡ ಮಲಗಿಸಬೇಕು: ಎಚ್’ಡಿಕೆ Read More »

ಅಪ್ರಾಪ್ತ ತಂಗಿಯನ್ನೇ ಹರಿದು‌ ಮುಕ್ಕಿದ ಪಾಪಿ‌ ಅಣ್ಣ…! ಗರ್ಭವತಿಯಾದ ಬಾಲಕಿ

ತಿರುಪತಿ​: ಸ್ವಂತ ತಂಗಿಯ ಮೇಲೆ ಅಣ್ಣನೊಬ್ಬ ನಿರಂತರ ಅತ್ಯಾಚಾರವೆಸಗಿ, ಆಕೆಯನ್ನು ಗರ್ಭವತಿಯನ್ನಾಗಿಸಿದ ಘಟನೆ ತಿರುಪತಿ ಅಲಿಪಿರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಮನೆಯಲ್ಲಿ ಯಾರೂ ಇಲ್ಲದ ವೇಳೆ ಬಾಲಕ ತನ್ನ ತಂಗಿಯನ್ನು ಹೆದರಿಸಿ ನಿರಂತರವಾಗಿ ಅತ್ಯಾಚಾರ ಎಸಗುತ್ತಿದ್ದನಂತೆ. ಪರಿಣಾಮ ಬಾಲಕಿ ಗರ್ಭವತಿಯಾಗಿದ್ದಾಳೆ. ಇವರ ತಂದೆ 20 ವರ್ಷಗಳ ಹಿಂದೆ ಮದುವೆಯಾಗಿದ್ದ. ಈತನಿಗೆ ಇಬ್ಬರು ಗಂಡು ಮಕ್ಕಳಿದ್ದಾರೆ. ಈತನ ಮೊದಲನೇ ಹೆಂಡತಿ ಮನೆ ಬಿಟ್ಟು ಹೋಗಿದ್ದು ಎರಡನೇ ಮದುವೆಯಾಗಿದ್ದ. ಎರಡನೇ ಹೆಂಡತಿಗೆ ಇಬ್ಬರು ಹೆಣ್ಣು ಮಕ್ಕಳಿದ್ದರು.ಮೊದಲನೇ ಹೆಂಡತಿಯ ಮಗ

ಅಪ್ರಾಪ್ತ ತಂಗಿಯನ್ನೇ ಹರಿದು‌ ಮುಕ್ಕಿದ ಪಾಪಿ‌ ಅಣ್ಣ…! ಗರ್ಭವತಿಯಾದ ಬಾಲಕಿ Read More »