Uncategorized

ನಾನು ಸಿಎಂ ಆದ್ರೆ ಭ್ರಷ್ಟಾಚಾರಿಗಳಿಗೆ ಜೈಲೂಟ ಗ್ಯಾರೆಂಟಿ – ವಾಟಾಳ್

ಮೈಸೂರು: ನಾನು ಮುಖ್ಯಮಂತ್ರಿಯಾದರೆ ಭೂಗಳ್ಳರು, ಖನಿಜ ಕಳ್ಳರನ್ನು ಜೈಲಿಗಟ್ಟಿ, ಖಾಸಗಿ ಶಿಕ್ಷಣ ಸಂಸ್ಥೆಗಳ ವಿರುದ್ಧ ತನಿಖೆ ನಡೆಸುತ್ತೇನೆ. ನನಗೆ 5 ವರ್ಷಗಳ ಕಾಲಾವಕಾಶ ಬೇಕಿಲ್ಲ, ಕೇವಲ 5 ತಿಂಗಳು ಅವಕಾಶ ಕೊಟ್ಟರೆ ಸಾಕು ಎಂದು ಮಾಜಿ ಶಾಸಕ, ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಗುಡುಗಿದ್ದಾರೆ. ಮೈಸೂರಿನಲ್ಲಿ ಭೂ ಮಾಫಿಯಾ ವಿರುದ್ಧ ಪ್ರತಿಭಟನೆ ನಡೆಸಿದ ಅವರು, ಮೂಡಾ ಅಧ್ಯಕ್ಷ ಹೆಚ್.ವಿ.ರಾಜೀವ್ ವಿರುದ್ಧವೂ ಭೂ ಹಗರಣ ಆರೋಪ ಕೇಳಿಬಂದಿದೆ. ಹೀಗಾಗಿ ಅವರು ತಕ್ಷಣ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು.ಅಕ್ರಮಗಳನ್ನು ತಡೆಗಟ್ಟುವ […]

ನಾನು ಸಿಎಂ ಆದ್ರೆ ಭ್ರಷ್ಟಾಚಾರಿಗಳಿಗೆ ಜೈಲೂಟ ಗ್ಯಾರೆಂಟಿ – ವಾಟಾಳ್ Read More »

ಆನ್ಲೈನ್ ನಲ್ಲಿ ಮಗು ಖರೀದಿಸಿದ ದಂಪತಿ | ಸಿಕ್ಕಿಬಿದ್ದಳು 1.5 ಲಕ್ಷಕ್ಕೆ ಡೆಲಿವರಿ ಕೊಟ್ಟ ಮಹಾತಾಯಿ

ಎಚ್.ಡಿ. ಕೋಟೆ: ಅಕ್ರಮವಾಗಿ ತನ್ನ ಕರುಳಕುಡಿಯನ್ನೇ ಹಣದಾಸೆಗೆ ಮಾರಾಟ ಮಾಡಿ ತಾಯಿಯೊಬ್ಬಳು ಪೊಲೀಸರ ಅತಿಥಿಯಾದ ಘಟನೆ ನಡೆದಿದೆ. ಆನ್ಲೈನ್ ಮೂಲಕ ಗಿಡಮೂಲಿಕೆ ತೈಲ, ಕೇಶ ತೈಲ ಇತ್ಯಾದಿ ಮಾರಾಟ ಮಾಡುತ್ತಿದ್ದ ಹಾಸನ ಮೂಲದ ರೋಜಾ ಎಂಬಾಕೆಯೇ ಮಗು ಮಾರಾಟ ಮಾಡಿ ಸಿಕ್ಕಿ ಬಿದ್ದವಳು. ಆಕೆಗೆ ವ್ಯವಹಾರದ ಸಮಯದಲ್ಲಿ ಎಚ್ ಡಿ ಕೋಟೆ ಸಮೀಪದ ಟೈಗರ್‌ಬ್ಲಾಕ್‌ನ ನಿವಾಸಿಗಳಾದ ಅಂಬರೀಶ್‌ ಹಾಗೂ ಮಧುಮಾಲತಿ ದಂಪತಿಯ ಪರಿಚವಾಗಿದೆ. ಆಗಾಗ ರೋಜಾ ಬಳಿ ವ್ಯವಹಾರ ನಡೆಸುತ್ತಿದ್ದ ದಂಪತಿಗೆ 7 ತಿಂಗಳ ಹಿಂದೆ ಆಕೆಗೆ

ಆನ್ಲೈನ್ ನಲ್ಲಿ ಮಗು ಖರೀದಿಸಿದ ದಂಪತಿ | ಸಿಕ್ಕಿಬಿದ್ದಳು 1.5 ಲಕ್ಷಕ್ಕೆ ಡೆಲಿವರಿ ಕೊಟ್ಟ ಮಹಾತಾಯಿ Read More »

ಮಾತೃಪಕ್ಷಕ್ಕೆ ಜಂಪ್ ಹೊಡೆದ ಮುಕುಲ್ ರಾಯ್ , ಬಿಜೆಪಿಗೆ ಆಘಾತ

ತೃಣ ಮೂಲ ಕಾಂಗ್ರೆಸ್ ಪಕ್ಷ ಬಿಟ್ಟು ಬಿಜೆಪಿಗೆ ಜಿಗಿದು ರಾಷ್ಟ್ರೀಯ ಉಪಾಧ್ಯಕ್ಷರಾಗಿದ್ದ ಮುಕುಲ್ ರಾಯ್ ಇಂದು ಟಿಎಂಸಿ ಪಕ್ಷ ಸೇರ್ಪಡೆಯಾಗುವ ಮೂಲಕ ಮರಳಿ ಗೂಡಿಗೆ ಸೇರ್ಪಡೆಯಾಗಿದ್ದಾರೆ.ಮುಕುಲ್ ರಾಯ್ ಮತ್ತು ಅವರ ಪುತ್ರ ಸುಬ್ರಾಂಶು ರಾಯ್ ಅವರು ಕೋಲ್ಕತ್ತಾ ದಲ್ಲಿರುವ ಟಿಎಂಸಿ ಪಕ್ಷದ ಕಚೇರಿಯಲ್ಲಿ ಅಧಿಕೃತವಾಗಿ ಸೇರ್ಪಡೆಯಾದರು.ವಿಧಾನಸಭಾ ಚುನಾವಣೆಗೂ ಮುನ್ನ ಟಿಎಂಸಿ ಇಂದ ಬಿಜೆಪಿಗೆ ಜಿಗಿದ ಅನೇಕ ಮುಖಂಡರು ಇದೀಗ ಮರಳಿ ಮೂಲ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಲು ತುದಿಗಾಲ ಮೇಲೆ ನಿಂತಿದ್ದಾರೆ. ಅದಕ್ಕೆ ಮುಕುಲ್ ರಾಯ್ ಆರಂಭ ನೀಡಿದ್ದಾರೆ.ಒಂದು

ಮಾತೃಪಕ್ಷಕ್ಕೆ ಜಂಪ್ ಹೊಡೆದ ಮುಕುಲ್ ರಾಯ್ , ಬಿಜೆಪಿಗೆ ಆಘಾತ Read More »

ಇದೊಂದು ಪಿಕ್ ಪಾಕೇಟ್ ಸರ್ಕಾರ, ತೆರಿಗೆ ಏರಿಸಿ ತಿಗಣೆಗಳಂತೆ ಜನರ ರಕ್ತ ಕುಡಿಯುತ್ತಿರುವ ಬಿಜೆಪಿ – ಕೇಂದ್ರದ ಮೇಲೆ ಹರಿಹಾಯ್ದ ಕಾಂಗ್ರೆಸ್.

ಬೆಂಗಳೂರು. ಪೆಟ್ರೋಲ್-ಡೀಸೆಲ್ ದರ ಏರಿಕೆಯಿಂದ ಕೇಂದ್ರ ಸರ್ಕಾರ ಜನರ ಜೇಬಿಗೆ ಕನ್ನ ಹಾಕುತ್ತಿದೆ. ಇದು ಪಿಕ್‌ಪಾಕೆಟ್ ಸರ್ಕಾರ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ವಾಗ್ದಾಳಿ ನಡೆಸಿದ್ದಾರೆ. ಪೆಟ್ರೋಲ್-ಡೀಸೆಲ್ ದರ ಏರಿಕೆ ವಿರೋಧಿಸಿ ಕೇಂದ್ರ ಸರ್ಕಾರದ ವಿರುದ್ಧ ನಡೆಸಿರುವ 100 ನಾಟ್‌ಔಟ್ ಆಂದೋಲನದ ಭಾಗವಾಗಿ ಇಂದು ಬೆಂಗಳೂರಿನ ಶಿವಾನಂದ ವೃತ್ತ ಪೆಟ್ರೋಲ್ ಬಂಕ್ ಎದುರು ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಪೆಟ್ರೋಲ್-ಡೀಸೆಲ್ ದರ ಏರಿಕೆಯಿಂದ ಕೇವಲ ವಾಹನ ಹೊಂದಿರುವವರಿಗೆ ಮಾತ್ರ ಹೊರೆಯಾಗುತ್ತಿಲ್ಲ. ಈ ದರ ಏರಿಕೆಯಿಂದ

ಇದೊಂದು ಪಿಕ್ ಪಾಕೇಟ್ ಸರ್ಕಾರ, ತೆರಿಗೆ ಏರಿಸಿ ತಿಗಣೆಗಳಂತೆ ಜನರ ರಕ್ತ ಕುಡಿಯುತ್ತಿರುವ ಬಿಜೆಪಿ – ಕೇಂದ್ರದ ಮೇಲೆ ಹರಿಹಾಯ್ದ ಕಾಂಗ್ರೆಸ್. Read More »

ನಮ್ ಸಿಎಮ್ಮೂ ನಗ್ತಾರೆ ಗೊತ್ತಾ? ಅವ್ರ ಮುಖದಲ್ಲಿ ನಗು ಹರಿಸಿದಾಕೆ ಯಾರು? ಇಲ್ಲಿದೆ ಇಂಟ್ರೆಸ್ಟಿಂಗ್ ಸ್ಟೋರಿ…

ಬೆಂಗಳೂರು: ಸದಾ ಬಿಗಿದ ಮೊಗ, ಗಂಟಿಕ್ಕಿದ ಹುಬ್ಬು. ಯಾವಾಗಲೋ ಒಮ್ಮೆ ನಸುನಗು. ಇಷ್ಟು ಹೇಳಿದರೆ ಸಾಕು, ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮುಖದರ್ಶನವಾಗಿ ಬಿಡುತ್ತದೆ. ಯಡಿಯೂರಪ್ಪ ಏನೇ ಆದ್ರೂ ನಗಲ್ಲ ಅಂತ ಹಲವರು ಅಂದ್ಕೊಂಡಿದಾರೆ. ಆದ್ರೆ ಇದಕ್ಕೆ ವ್ಯತಿರಿಕ್ತ ಎಂಬಂತೆ ಇವತ್ತೊಂದು ಘಟನೆ ನಡೆಯಿತು.ಎಲ್ಲರ ಭಾವನೆಗಳಿಗೆ ತದ್ವಿರುದ್ಧವಾಗಿ ಮನಸಾರೆ ನಕ್ಕು, ಉಳಿದವರನ್ನು ಸಂತಸದ ಅಲೆಯಲ್ಲಿ ತೇಲಿಸಿದ ಸಿಎಂ ಬಿಎಸ್ ವೈ ಬುಧವಾರ ಕಂಡರು. ಅಷ್ಟಕ್ಕೂ ಇಂಥದ್ದೊಂದು ಅನಿರೀಕ್ಷಿತ ಬೆಳವಣಿಗೆಗೆ ಕಾರಣವೇನು ಗೊತ್ತಾ? ಇಲ್ಲಿದೆ ನೋಡಿ ಆ ಘಟನೆ… ಸಿಎಂ ಗೃಹ

ನಮ್ ಸಿಎಮ್ಮೂ ನಗ್ತಾರೆ ಗೊತ್ತಾ? ಅವ್ರ ಮುಖದಲ್ಲಿ ನಗು ಹರಿಸಿದಾಕೆ ಯಾರು? ಇಲ್ಲಿದೆ ಇಂಟ್ರೆಸ್ಟಿಂಗ್ ಸ್ಟೋರಿ… Read More »

ಬಿಜೆಪಿ ಶಾಸಕ ಹಾಗೂ ಮಾಜಿ ಸಚಿವ ಸಿ.ಎಂ‌ ಉದಾಸಿ ಇನ್ನಿಲ್ಲ

ಬೆಂಗಳೂರು : ಅನಾರೋಗ್ಯದಿಂದ ಬಳಲುತ್ತಿದ್ದಂತ ಹಾನಗಲ್ ಕ್ಷೇತ್ರದ ಬಿಜೆಪಿ ಶಾಸಕ ಸಿಎಂ ಉದಾಸಿ ಚಿಕಿತ್ಸೆ ಫಲಕಾರಿಯಾಗದೇ ನಿಧನರಾಗಿದ್ದಾರೆ. ಕಳೆದ ಕೆಲ ದಿನಗಳಿಂದ ಅನಾರೋಗ್ಯ ಪೀಡಿತರಾಗಿದ್ದ ಹಾವೇರಿ ಜಿಲ್ಲೆಯ ಹಾನಗಲ್ ಕ್ಷೇತ್ರದ ಬಿಜೆಪಿ ಶಾಸಕ ಸಿಎಂ ಉದಾಸಿ(77)ಯವರು ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಇಂತಹ ಶಾಸಕ ಸಿಎಂ ಉದಾಸಿ, ಚಿಕಿತ್ಸೆ ಫಲಕಾರಿಯಾಗದೇ ಇಂದು ನಿಧನರಾಗಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿರುವ ಹಾವೇರಿ ಜಿಲ್ಲೆ, ಹಾನಗಲ್ ಕ್ಷೇತ್ರದ ಬಿಜೆಪಿ ಶಾಸಕ ಹಾಗೂ ಮಾಜಿ ಸಚಿವ ಸಿ.ಎಂ.ಉದಾಸಿ ಅವರ ಪರಿಸ್ಥಿತಿ ಗಂಭೀರವಾಗಿದ್ದು, ವೆಂಟಿಲೇಟರ್ ಮೂಲಕ

ಬಿಜೆಪಿ ಶಾಸಕ ಹಾಗೂ ಮಾಜಿ ಸಚಿವ ಸಿ.ಎಂ‌ ಉದಾಸಿ ಇನ್ನಿಲ್ಲ Read More »

ಮುಖ್ಯಮಂತ್ರಿ ಆಮೇಲೆ ಆಗುವಿರಂತೆ, ಮೊದಲು ಕೋವಿಡ್ ನಿಯಂತ್ರಣದ ಕೆಲಸ ಮಾಡಿ: ಶಾಸಕರ ಕಿವಿಹಿಂಡಿದ ಯಡ್ಡಿ

ಬೆಂಗಳೂರು: ನಾಯಕತ್ವ ಬದಲಾವಣೆ, ಸಹಿ ಸಂಗ್ರಹಣೆ, ರಾಜಕೀಯ ಹೇಳಿಕೆಗಳನ್ನು ನೀಡುವುದನ್ನು ಬಿಟ್ಟು ನಿಮ್ಮ ಕ್ಷೇತ್ರದಲ್ಲಿ ಕೋವಿಡ್ ನಿಯಂತ್ರಣಕ್ಕೆ ಕೆಲಸ ಮಾಡಿ ಎಂದು ತಮ್ಮ ಶಾಸಕರಿಗೆ ಬಿಎಸ್ ಯಡಿಯೂರಪ್ಪ ಬುದ್ದಿವಾದ ಹೇಳಿದ್ದಾರೆ. ಯಡಿಯೂರಪ್ಪ ಅವರ ಪರವಾಗಿ ಸಹಿ ಸಂಗ್ರಹಿಸಿ ಹೈಕಮಾಂಡ್ ಗೆ ನೀಡುತ್ತೇವೆ ಎಂದು ಮಾಜಿ ಸಚಿವ ಹಾಗೂ ಹೊನ್ನಾಳಿ ಶಾಸಕ ರೇಣುಕಾಚಾರ್ಯ ಹೇಳಿದ್ದರು. ಕೋವಿಡ್ ಸಂಕಷ್ಟದ ಸಂದರ್ಭದಲ್ಲಿ ಬಿಜೆಪಿಯೊಳಗಡೆ ಅಧಿಕಾರ ಕಿತ್ತಾಟದ ಮಧ್ಯೆ ಈ ಹೇಳಿಕೆ ಬಂದಿತ್ತು. ಇದಕ್ಕೆ ಪ್ರತಿಪಕ್ಷಗಳು ಕೂಡ ಭಾರೀ ಟೀಕೆಯನ್ನು ಮಾಡಿದ್ದರು. ಇದರಿಂದ

ಮುಖ್ಯಮಂತ್ರಿ ಆಮೇಲೆ ಆಗುವಿರಂತೆ, ಮೊದಲು ಕೋವಿಡ್ ನಿಯಂತ್ರಣದ ಕೆಲಸ ಮಾಡಿ: ಶಾಸಕರ ಕಿವಿಹಿಂಡಿದ ಯಡ್ಡಿ Read More »

ಜೂನ್ 21ರಿಂದ ದೇಶವಾಸಿಗಳಿಗೆ ಉಚಿತ ಲಸಿಕೆ: ಪ್ರಧಾನಿ ಮೋದಿ ಘೋಷಣೆ

ನವದೆಹಲಿ: ಜೂನ್ 21ರಿಂದ ಕೇಂದ್ರದಿಂದಲೇ ಎಲ್ಲರಿಗೂ ಉಚಿತ ಕೊರೊನಾ ಲಸಿಕೆ ನೀಡಲಾಗುವುದು ಎಂದು ಪ್ರಧಾನಿ ನರೇಂದ್ರ ಮೋದಿ ಘೋಷಿಸಿದ್ದಾರೆ. ಇಂದು ರಾಷ್ಟ್ರವನ್ನುದ್ದೇಶಿಸಿ ಮಾತನಾಡಿದ ಮೋದಿ ದೀಪಾವಳಿವರೆಗೂ ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ್ ಅನ್ನ ಯೋಜನೆಯಡಿಯಲ್ಲಿ ಉಚಿತ ಪಡಿತರ ವಿತರಿಸಲಾಗುವುದು ಎಂದು ತಿಳಿಸಿದರು. ಮೋದಿ ಭಾಷಣದ ಸಾರಾಂಶವೇನು?:ಕೊರೊನಾ ಎರಡನೇ ಅಲೆಯ ವಿರುದ್ಧ ಭಾರತ ಹೋರಾಡುತ್ತಿದ್ದು, ಅನೇಕು ತಮ್ಮವರನ್ನು ಕಳೆದುಕೊಂಡಿದ್ದಾರೆ. ಇದು 100 ವರ್ಷಗಳಲ್ಲಿಯೇ ಅತಿ ದೊಡ್ಡ ಮಹಾಮಾರಿ. ಕೋವಿಡ್ ವಿರುದ್ಧ ಹೋರಾಟದ ವೇಳೆ ದೇಶದಲ್ಲಿಯೇ ಹೊಸ ಆರೋಗ್ಯ ವ್ಯವಸ್ಥೆ

ಜೂನ್ 21ರಿಂದ ದೇಶವಾಸಿಗಳಿಗೆ ಉಚಿತ ಲಸಿಕೆ: ಪ್ರಧಾನಿ ಮೋದಿ ಘೋಷಣೆ Read More »

ಕೋವಿಡ್ ಮಾರ್ಗಸೂಚಿಗಳನ್ನು ಸರಿಯಾಗಿ ಪಾಲಿಸೋಣ | ಲಾಕ್ಡೌನ್ ನಿಂದ ಹಿಂದೆ ಸರಿದ ಉದ್ಧವ್ ಠಾಕ್ರೆ

ಮಹಾರಾಷ್ಟ್ರ: ರಾಜ್ಯದಲ್ಲಿ ಸದ್ಯ ಲಾಕ್ಡೌನ್ ಇದ್ದು ಹಂತಹಂತವಾಗಿ ಅನ್ಲಾಕ್ ಮಾಡಲು ರಾಜ್ಯಸರ್ಕಾರ ನಿರ್ಧರಿಸಿದೆ. ಇನ್ನು ಕೋವಿಡ್ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ರಾಜ್ಯದ ಜನತೆಗೆ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಕರೆ ನೀಡಿದ್ದಾರೆ. ಸೋಮವಾರದಿಂದ ಮಹಾರಾಷ್ಟ್ರದಲ್ಲಿ ಹಂತಹಂತವಾಗಿ ಅನ್ಲಾಕ್ ಪ್ರಕ್ರಿಯೆ ಆರಂಭವಾಗಲಿದೆ. ಒಂದೇ ಬಾರಿಗೆ ಯಾವ ನಿರ್ಧಾರವನ್ನೂ ತೆಗೆದುಕೊಳ್ಳುತ್ತಿಲ್ಲ. ಸೋಂಕು ದೃಢೀಕರಣ ಪ್ರಮಾಣ ಮತ್ತು ಆಮ್ಲಜನಕ, ಹಾಸಿಗೆಗಳ ಲಭ್ಯತೆ ಆಧಾರದಲ್ಲಿ ರಾಜ್ಯವನ್ನು ಐದು ಹಂತಗಳಲ್ಲಿ ವಿಂಗಡಿಸಿ ಲಾಕ್‌ಡೌನ್ ತೆರವು ಪ್ರಕ್ರಿಯೆ ಕೈಗೊಳ್ಳಲಾಗುತ್ತಿದೆ.ಯಾವ ರೀತಿಯ ನಿರ್ಬಂಧಗಳ ಅಗತ್ಯವಿದೆಯೆಂದು ಸ್ಥಳಿಯಾಡಳಿತ ನಿರ್ಧರಿಸಲಿದೆ. ಲಾಕ್ಡೌನ್

ಕೋವಿಡ್ ಮಾರ್ಗಸೂಚಿಗಳನ್ನು ಸರಿಯಾಗಿ ಪಾಲಿಸೋಣ | ಲಾಕ್ಡೌನ್ ನಿಂದ ಹಿಂದೆ ಸರಿದ ಉದ್ಧವ್ ಠಾಕ್ರೆ Read More »

ಶ್ರೀಲಂಕಾದಲ್ಲಿ ಭಾರೀ ಮಳೆ: ಅಪಾರ ಹಾನಿ, ಹಲವರ ಸಾವು

ಕೊಲಂಬೊ:ಶ್ರೀಲಂಕಾದಲ್ಲಿ ಭಾರಿ ಮಳೆಯಿಂದಾಗಿ 14 ಜನರು ಸಾವನ್ನಪ್ಪಿದ್ದಾರೆ ಮತ್ತು 2,45,000 ಜನರು ಹಾನಿಗೊಳಗಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.ಕೊಲ್ಲಲ್ಪಟ್ಟ 14 ಜನರಲ್ಲಿ, ಐದು ಸಾವುಗಳು ರಾಜಧಾನಿ ಕೊಲಂಬೊದಿಂದ 88 ಕಿಲೋಮೀಟರ್ ದೂರದಲ್ಲಿರುವ ಕೆಗಲ್ಲೆಯಿಂದ ವರದಿಯಾಗಿದ್ದರೆ, ಮೂರು ಸಾವುಗಳು ರತ್ನಪುರ ಜಿಲ್ಲೆಯಿಂದ ವರದಿಯಾಗಿದೆ ಎಂದು ಕ್ಸಿನ್ಹುವಾ ವರದಿ ಮಾಡಿದೆ.ಇಬ್ಬರು ನಾಪತ್ತೆಯಾಗಿದ್ದು, ಇಬ್ಬರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.ಡಿಎಂಸಿ ಅಂಕಿಅಂಶಗಳ ಪ್ರಕಾರ, 15,658 ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಗಿದ್ದು, 800 ಕ್ಕೂ ಹೆಚ್ಚು ಮನೆಗಳಿಗೆ ಹಾನಿಯಾಗಿದೆ.

ಶ್ರೀಲಂಕಾದಲ್ಲಿ ಭಾರೀ ಮಳೆ: ಅಪಾರ ಹಾನಿ, ಹಲವರ ಸಾವು Read More »