ಕ್ರೀಡೆ

ಜಸ್ಪ್ರೀತ್ ಬುಮ್ರಾ ಐಸಿಸಿ ಚಾಂಪಿಯನ್ಸ್ ನಿಂದ ಹೊರಕ್ಕೆ

ಸಮಗ್ರ ನ್ಯೂಸ್: ಭಾರತದ ವೇಗದ ಬೌಲರ್ ಜಸ್ಪ್ರೀತ್ ಬುಮ್ರಾ ಬೆನ್ನು ನೋವಿನ ಕಾರಣದಿಂದ ಮುಂಬರುವ ಐಸಿಸಿ ಚಾಂಪಿಯನ್ಸ್ ಟ್ರೋಫಿಯಿಂದ ಹೊರಗುಳಿಯಲಿದ್ದಾರೆ ಎಂದು ಮಂಗಳವಾರ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ದೃಢಪಡಿಸಿದೆ. ಬುಮ್ರಾ ಅವರ ಅಲಭ್ಯತೆಯ ಕಾರಣ, ಹಿರಿಯ ಪುರುಷರ ತಂಡದ ಆಯ್ಕೆ ಸಮಿತಿಯು ಟೂರ್ನಮೆಂಟ್‌ಗಾಗಿ ಹರ್ಷಿತ್ ರಾಣಗೆ ಬುಲಾವ್ ಕೊಟ್ಟಿದೆ. ಟೂರ್ನಿ ಫೆಬ್ರವರಿ 19 ರಂದು ಪಾಕಿಸ್ತಾನದ ಆತಿಥ್ಯದಲ್ಲಿ ಆರಂಭವಾಗಲಿದೆ. ಬದಲಾದ ತಂಡದಲ್ಲಿ ಮಿಸ್ಟರಿ ಸ್ಪಿನ್ನರ್ ವರುಣ್ ಚಕ್ರವರ್ತಿಯೂ ಸ್ಥಾನ ಪಡೆದಿದ್ದಾರೆ. ಆರಂಭಿಕ ಬ್ಯಾಟರ್​ ಯಶಸ್ವಿ ಜೈಸ್ವಾಲ್ […]

ಜಸ್ಪ್ರೀತ್ ಬುಮ್ರಾ ಐಸಿಸಿ ಚಾಂಪಿಯನ್ಸ್ ನಿಂದ ಹೊರಕ್ಕೆ Read More »

ಪುತ್ತೂರು: 38ನೇ ನ್ಯಾಷನಲ್ ಗೇಮ್ಸ್ ಗೆ ಸೌಮ್ಯ ಪೂಜಾರಿ ಆಯ್ಕೆ

ಸಮಗ್ರ ನ್ಯೂಸ್: ಉತ್ತರಾಖಂಡದ ಹರಿದ್ವಾರದಲ್ಲಿ ನಡೆಯಲಿರುವ 38ನೇ ನ್ಯಾಷನಲ್ ಗೇಮ್ಸ್ -2025 ರಲ್ಲಿ ರಾಷ್ಟ್ರೀಯ ಮಹಿಳೆಯರ ಕಬಡ್ಡಿ ಚಾಂಪಿಯನ್‌ಶಿಪ್ ನಲ್ಲಿ ಭಾಗವಹಿಸಲು ಕರ್ನಾಟಕ ತಂಡಕ್ಕೆ ಕಾಣಿಯೂರಿನ ಸೌಮ್ಯ ಪೂಜಾರಿ ರವರು ಆಯ್ಕೆ ಆಗಿರುತ್ತಾರೆ. ಇವರು ಕಾಣಿಯೂರು ಅಬೀರ ರಾಮಣ್ಣ ಪೂಜಾರಿ ಮತ್ತು ಲಲಿತಾ ದಂಪತಿಗಳ ಸುಪುತ್ರಿ ಹಾಗೂ ಸುರೇಶ್ ಅಬೀರ ಮತ್ತು ಪುತ್ತೂರು ಪೊಲೀಸ್ ಇಲಾಖೆಯ ಸಿಬ್ಬಂದಿಯಾಗಿರುವ ಸಂತೋಷ್ ಕುಮಾರ್ ರವರ ಸಹೋದರಿ. ಇವರು ಕಾಣಿಯೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ಪ್ರಗತಿ ಆಂಗ್ಲಮಾದ್ಯಮ ಶಾಲೆ ಹಾಗೂ

ಪುತ್ತೂರು: 38ನೇ ನ್ಯಾಷನಲ್ ಗೇಮ್ಸ್ ಗೆ ಸೌಮ್ಯ ಪೂಜಾರಿ ಆಯ್ಕೆ Read More »

ವ್ಯರ್ಥವಾದ ವರುಣ್ ಚಕ್ರವರ್ತಿ ಹೋರಾಟ| ಇಂಗ್ಲೆಂಡ್ ವಿರುದ್ಧ ಮಕಾಡೆ ಮಲಗಿದ ಭಾರತ

ಸಮಗ್ರ ನ್ಯೂಸ್: ಪ್ರವಾಸಿ ಇಂಗ್ಲೆಂಡ್ ವಿರುದ್ಧ ರಾಜ್‌ಕೋಟ್‌ನಲ್ಲಿ ನಡೆದ ಮೂರನೇ ಟ್ವೆಂಟಿ-20 ಅಂತರರಾಷ್ಟ್ರೀಯ ಪಂದ್ಯದಲ್ಲಿ ಟೀಮ್ ಇಂಡಿಯಾ 26 ರನ್ ಅಂತರದ ಸೋಲಿಗೆ ಶರಣಾಗಿದೆ. ಆದರೂ ಐದು ಪಂದ್ಯಗಳ ಟಿ20 ಸರಣಿಯಲ್ಲಿ 2-1ರ ಅಂತರದ ಮುನ್ನಡೆ ಕಾಯ್ದುಕೊಂಡಿದೆ. ಸರಣಿಯ ಮೊದಲೆರಡು ಪಂದ್ಯಗಳಲ್ಲಿ ಸೂರ್ಯಕುಮಾರ್ ಯಾದವ್ ಬಳಗ ಗೆಲುವು ಸಾಧಿಸಿತ್ತು. ಮತ್ತೊಂದೆಡೆ ಹ್ಯಾಟ್ರಿಕ್ ಸೋಲನ್ನು ತಪ್ಪಿಸಿರುವ ಆಂಗ್ಲರ ಪಡೆ ಸರಣಿಯನ್ನು ಜೀವಂತವಾಗಿರಿಸಿಕೊಂಡಿತು. ಇಂಗ್ಲೆಂಡ್ ಒಡ್ಡಿದ 172 ರನ್‌ಗಳ ಗುರಿ ಬೆನ್ನಟ್ಟಿದ ಭಾರತ ಒಂಬತ್ತು ವಿಕೆಟ್ ನಷ್ಟಕ್ಕೆ 145 ರನ್

ವ್ಯರ್ಥವಾದ ವರುಣ್ ಚಕ್ರವರ್ತಿ ಹೋರಾಟ| ಇಂಗ್ಲೆಂಡ್ ವಿರುದ್ಧ ಮಕಾಡೆ ಮಲಗಿದ ಭಾರತ Read More »

ಐಸಿಸಿ ಚಾಂಪಿಯನ್ಸ್‌ ಟ್ರೋಫಿ/ ಇನ್ನೂ ಸಿದ್ಧಗೊಂಡಿಲ್ಲ ಕ್ರೀಡಾಂಗಣ/ ಜನವರಿ ೩೦ರ ಗಡುವು

ಸಮಗ್ರ ನ್ಯೂಸ್‌: ಪಾಕಿಸ್ತಾನದ ಆತಿಥ್ಯದಲ್ಲಿ ನಡೆಯುವ ಐಸಿಸಿ ಚಾಂಪಿಯನ್ಸ್‌ ಟ್ರೋಫಿ ಆರಂಭಕ್ಕೆ ಕೆಲವೇ ದಿನಗಳು ಮಾತ್ರ ಬಾಕಿ ಉಳಿದಿದ್ದು, ಪಂದ್ಯಾವಳಿ ನಡೆಯುವ ಕರಾಚಿ, ಲಹೋರ್‌ ಮತ್ತು ರಾವಲ್ಪಿಂಡಿ ಕ್ರೀಡಾಂಗಣಗಳ ನವೀಕರಣ ಕಾರ್ಯ ಸಂಪೂರ್ಣಗೊಂಡಿಲ್ಲ. ಕ್ರೀಡಾಂಗಣಗಳ ನವೀಕರಣ ಕೆಲಸ ಪೂರ್ತಿಗೊಳಿಸಲು ಐಸಿಸಿ, ಪಾಕಿಸ್ತಾನ ಕ್ರಿಕೆಟ್‌ ಮಂಡಳಿಗೆ ಜ.30ರ ಗುಡುವು ನೀಡಿತ್ತು. ಆದರೆ ಇನ್ನೂ ಕೆಲಸ ಬಾಕಿ ಇರುವ ಕಾರಣ ಕೆಲವು ಪಂದ್ಯವನ್ನು ದುಬೈಗೆ ಸ್ಥಳಾಂತರಿಸುವ ಸಾಧ್ಯತೆ ಇದೆ ಎಂದು ವರದಿಯಾಗಿದೆ. ಆದರೆ ಪಾಕ್‌ ಕ್ರಿಕೆಟ್‌ ಮಂಡಳಿ ಮಾತ್ರ ಯಾವುದೇ

ಐಸಿಸಿ ಚಾಂಪಿಯನ್ಸ್‌ ಟ್ರೋಫಿ/ ಇನ್ನೂ ಸಿದ್ಧಗೊಂಡಿಲ್ಲ ಕ್ರೀಡಾಂಗಣ/ ಜನವರಿ ೩೦ರ ಗಡುವು Read More »

ಭಾರತ ಹಾಗೂ ಇಂಗ್ಲೆಂಡ್‌ ನಡುವೆ ಟಿ20 ಸರಣಿ/ ನಾಳೆ ಮೊದಲ ಪಂದ್ಯ

ಸಮಗ್ರ ನ್ಯೂಸ್‌: ಭಾರತ ಹಾಗೂ ಇಂಗ್ಲೆಂಡ್‌ ನಡುವೆ ಐದು ಪಂದ್ಯಗಳ ಟಿ20 ಸರಣಿಯು ನಾಳೆಯಿಂದ ಆರಂಭವಾಗಲಿದ್ದು, ಮೊದಲನೇ ಪಂದ್ಯ ಈಡನ್‌ ಗಾರ್ಡನ್ಸ್‌ ಕ್ರೀಡಾಂಗಣದಲ್ಲಿ ನಡೆಯಲಿದೆ. 2024ರ ಐಸಿಸಿ ಟಿ20 ವಿಶ್ವಕಪ್‌ ಸೆಮಿಫೈನಲ್‌ ಪಂದ್ಯದಲ್ಲಿ ಇಂಗ್ಲೆಂಡ್‌ ತಂಡವನ್ನು ಭಾರತ ತಂಡ ಸೋಲಿಸಿತ್ತು. ಇದಾದ ಬಳಿಕ ಇದೇ ಮೊದಲ ಬಾರಿ ಉಭಯ ತಂಡಗಳು ಮುಖಾಮುಖಿಯಾಗುತ್ತಿವೆ. ಐಸಿಸಿ ಟಿ20ಐ ಶ್ರೇಯಾಂಕದಲ್ಲಿ ಸೂರ್ಯಕುಮಾರ್‌ ಯಾದವ್‌ ನಾಯಕತ್ವದ ಭಾರತ ತಂಡ ಅಗ್ರ ಸ್ಥಾನವನ್ನು ಅಲಂಕರಿಸಿದೆ. ಜೋಸ್‌ ಬಟ್ಲರ್‌ ನಾಯಕತ್ವದ ಇಂಗ್ಲೆಂಡ್‌ ತಂಡ ಮೂರನೇ ಸ್ಥಾನದಲ್ಲಿದೆ.

ಭಾರತ ಹಾಗೂ ಇಂಗ್ಲೆಂಡ್‌ ನಡುವೆ ಟಿ20 ಸರಣಿ/ ನಾಳೆ ಮೊದಲ ಪಂದ್ಯ Read More »

ಐಸಿಸಿ ಟೆಸ್ಟ್‌ ಶ್ರೇಯಾಂಕ/ ೨೭ನೇ ಸ್ಥಾನಕ್ಕೆ ಕುಸಿದ ಕೊಹ್ಲಿ

ಸಮಗ್ರ ನ್ಯೂಸ್‌: ಐಸಿಸಿ ಪ್ರಕಟಿಸಿರುವ ನೂತನ ಟೆಸ್ಟ್‌ ಶ್ರೇಯಾಂಕದಲ್ಲಿ ಟೀಮ್‌ ಇಂಡಿಯಾದ ಅನುಭವಿ ಬ್ಯಾಟರ್‌ ವಿರಾಟ್‌ ಕೊಹ್ಲಿ 12 ವರ್ಷಗಳ ಬಳಿಕ ಮತ್ತೊಮ್ಮೆ ಪಾತಾಳಕ್ಕೆ ಕುಸಿದಿದ್ದಾರೆ. ನೂತನ ಬ್ಯಾಟರ್‌ಗಳ ಶ್ರೇಯಾಂಕದಲ್ಲಿ ಕೊಹ್ಲಿ ಮೂರು ಸ್ಥಾನಗಳ ಕುಸಿತದೊಂದಿಗೆ 27ನೇ ಸ್ಥಾನದಲ್ಲಿದ್ದಾರೆ. ಡಿಸೆಂಬರ್ 2012ರಲ್ಲಿ ಕಿಂಗ್‌ ಕೊಹ್ಲಿ 36ನೇ ಸ್ಥಾನ ಪಡೆದಿದ್ದ ಬಳಿಕ ಅತ್ಯಂತ ಕ್ರಮಾಂಕಕ್ಕೆ ಕುಸಿದದ್ದು ಇದೇ ಮೊದಲ ಬಾರಿ. ವಿಕೆಟ್‌ ಕೀಪರ್‌ ರಿಷಭ್‌ ಪಂತ್ ಅಗ್ರ 10ರಲ್ಲಿ ಸ್ಥಾನ ಪಡೆದಿದ್ದಾರೆ. ಆಸ್ಟ್ರೇಲಿಯಾ ವಿರುದ್ಧದ ಸರಣಿಯಲ್ಲಿ ಅವರ ಪ್ರದರ್ಶನ

ಐಸಿಸಿ ಟೆಸ್ಟ್‌ ಶ್ರೇಯಾಂಕ/ ೨೭ನೇ ಸ್ಥಾನಕ್ಕೆ ಕುಸಿದ ಕೊಹ್ಲಿ Read More »

ಅಂತಾರಾಷ್ಟ್ರೀಯ ಕ್ರಿಕೆಟ್‌ ಗೆ ವಿದಾಯ ಹೇಳಿದ ಆರ್. ಅಶ್ವಿನ್

ಸಮಗ್ರ ನ್ಯೂಸ್: ಟೀಮ್ ಇಂಡಿಯಾದ ಹಿರಿಯ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ದಿಢೀರ್ ವಿದಾಯ ಹೇಳಿದ್ದಾರೆ. ಆಸ್ಟ್ರೇಲಿಯಾ ವಿರುದ್ಧದ ಮೂರನೇ ಟೆಸ್ಟ್ ಪಂದ್ಯದ ಬಳಿಕ ಸುದ್ದಿಗೋಷ್ಠಿಯಲ್ಲಿ ಕಾಣಿಸಿಕೊಂಡ ಅಶ್ವಿನ್ ಟೆಸ್ಟ್ ಕ್ರಿಕೆಟ್​ಗೆ ನಿವೃತ್ತಿ ಘೋಷಿಸಿದ್ದಾರೆ. ಈ ಮೂಲಕ 14 ವರ್ಷಗಳ ತಮ್ಮ ಅಂತಾರಾಷ್ಟ್ರೀಯ ಕ್ರಿಕೆಟ್ ಕೆರಿಯರ್ ಅನ್ನು ಅಂತ್ಯಗೊಳಿಸಿದ್ದಾರೆ. ಇದಾಗ್ಯೂ ಅವರು ಐಪಿಎಲ್​ನಲ್ಲಿ ಮುಂದುವರೆಯುವುದಾಗಿ ತಿಳಿಸಿದ್ದಾರೆ. 106 ಟೆಸ್ಟ್ ಪಂದ್ಯಗಳನ್ನಾಡಿದ್ದು, ಈ ವೇಳೆ 200 ಇನಿಂಗ್ಸ್​ಗಳಲ್ಲಿ ಬೌಲಿಂಗ್ ಮಾಡಿದ್ದಾರೆ. ಅಲ್ಲದೆ ತಮ್ಮ ಕೆರಿಯರ್​ನಲ್ಲಿ 27246 ಎಸೆತಗಳನ್ನು

ಅಂತಾರಾಷ್ಟ್ರೀಯ ಕ್ರಿಕೆಟ್‌ ಗೆ ವಿದಾಯ ಹೇಳಿದ ಆರ್. ಅಶ್ವಿನ್ Read More »

WPL 2025: Rs. 16000000 ಕೊಟ್ಟು 16 ವರ್ಷದ ಬಾಲಕಿಯನ್ನು ಕರೆತಂದ ನೀತಾ ಅಂಬಾನಿ! ಅಷ್ಟಕ್ಕೂ ಆ ಬಾಲಕಿ ಯಾರು ಗೊತ್ತಾ?

ಸಮಗ್ರ ನ್ಯೂಸ್ : (WPL 2025) ಡಿ.15 ರಂದು ಬೆಂಗಳೂರಿನಲ್ಲಿ ನಡೆದ ಮಹಿಳಾ ಪ್ರೀಮಿಯರ್ ಲೀಗ್ 2025 ಮಿನಿ ಹರಾಜಿನಲ್ಲಿ, ನೀತಾ ಅಂಬಾನಿ ಅವರು 1.6 ಕೋಟಿ ಕೊಟ್ಟು 16 ವರ್ಷದ ಬಾಲಕಿಯನ್ನು ಮುಂಬೈ ತಂಡಕ್ಕೆ ಖರೀದಿಸಿದ್ದಾರೆ. ಇದರ ಬಗ್ಗೆ ನೀತಾ ಅಂಬಾನಿ ಮಾತನಾಡಿ ಸಂತೋಷ ವ್ಯಕ್ತ ಪಡಿಸಿದ್ದಾರೆ. ಮುಂಬೈ ಇಂಡಿಯನ್ಸ್‌ನ ಮಾಲೀಕ ಮತ್ತು ರಿಲಯನ್ಸ್ ಗ್ರೂಪ್ ಮಾಲೀಕ ಮುಖೇಶ್ ಅಂಬಾನಿ ಅವರ ಪತ್ನಿ ನೀತಾ ಎಂ. ಅಂಬಾನಿ, WPL 2025 ಸೀಸನ್‌ಗಾಗಿ ಮುಂಬೈ ಇಂಡಿಯನ್ಸ್ ತಂಡವನ್ನು

WPL 2025: Rs. 16000000 ಕೊಟ್ಟು 16 ವರ್ಷದ ಬಾಲಕಿಯನ್ನು ಕರೆತಂದ ನೀತಾ ಅಂಬಾನಿ! ಅಷ್ಟಕ್ಕೂ ಆ ಬಾಲಕಿ ಯಾರು ಗೊತ್ತಾ? Read More »

ಚೆಸ್ ಚಾಂಪಿಯನ್ ಗುಕೇಶ್ ಗೆ ಭಾರೀ ತೆರಿಗೆ ಹೊರೆ| ಹಣಕಾಸು ಸಚಿವಾಲಯಕ್ಕೆ ಶುಭಾಶಯ ಹೇಳಿದ ನೆಟ್ಟಿಗರು

ಸಮಗ್ರ ನ್ಯೂಸ್: ನೂತನ ವಿಶ್ವ ಚಾಂಪಿಯನ್ ಗುಕೇಶ್ ದೊಮ್ಮರಾಜು, ಡಿಸೆಂಬರ್‌ 16ರ ಸೋಮವಾರ ಭಾರತಕ್ಕೆ ಮರಳಿದ್ದಾರೆ. ಡಿಸೆಂಬರ್ 12ರಂದು ಸಿಂಗಾಪುರದಲ್ಲಿ ನಡೆದ ವಿಶ್ವ ಟೆಸ್ಟ್‌ ಚಾಂಪಿಯನ್‌ಶಿಪ್‌ ಫೈನಲ್‌ನಲ್ಲಿ ಚೀನಾದ ಡಿಂಗ್ ಲಿರೆನ್ ಅವರನ್ನು ಸೋಲಿಸಿದ ಗುಕೇಶ್‌, ಫಿಡೆ ವಿಶ್ವ ಚಾಂಪಿಯನ್‌ಶಿಪ್ ಗೆದ್ದರು. ಆ ಮೂಲಕ ವಿಶ್ವ ಚಾಂಪಿಯನ್‌ ಆದ ವಿಶ್ವದ ಅತ್ಯಂತ ಕಿರಿಯ ಚೆಸ್ ಗ್ರ್ಯಾಂಡ್ ಮಾಸ್ಟರ್ ಎನಿಸಿಕೊಂಡರು. ಚಾಂಪಿಯನ್‌ ಆಗುವುದರೊಂದಿಗೆ 18 ವರ್ಷದ ಭಾರತೀಯ ಚೆಸ್ ಗ್ರ್ಯಾಂಡ್ ಮಾಸ್ಟರ್, ಕೋಟ್ಯಾಧಿಪತಿಯಾಗಿದ್ದಾರೆ. ಅಂತಾರಾಷ್ಟ್ರೀಯ ಚೆಸ್ ಫೆಡರೇಶನ್ ಅವರಿಗೆ

ಚೆಸ್ ಚಾಂಪಿಯನ್ ಗುಕೇಶ್ ಗೆ ಭಾರೀ ತೆರಿಗೆ ಹೊರೆ| ಹಣಕಾಸು ಸಚಿವಾಲಯಕ್ಕೆ ಶುಭಾಶಯ ಹೇಳಿದ ನೆಟ್ಟಿಗರು Read More »

ವಿಶ್ವ ಚೆಸ್ ಚಾಂಪಿಯನ್ ಶಿಪ್ ಗೆದ್ದ ಗುಕೇಶ್

ಸಮಗ್ರ ನ್ಯೂಸ್ ಭಾರತದ ಗ್ರ್ಯಾಂಡ್ ಮಾಸ್ಟರ್ ಡಿ ಗುಕೇಶ್ ಗುರುವಾರ ವಿಶ್ವ ಚೆಸ್​ ಚಾಂಪಿಯನ್​ಶಿಪ್​ನಲ್ಲಿ ವಿನೂತನ ದಾಖಲೆ ಮಾಡಿದ್ದಾರೆ. ಸಿಂಗಾಪುರದಲ್ಲಿ ನಡೆದ ವಿಶ್ವ ಚೆಸ್ ಚಾಂಪಿಯನ್ ಶಿಪ್​ನಲ್ಲಿ ಚೀನಾದ ಡಿಂಗ್ ಲಿರೆನ್ ಅವರನ್ನು ಸೋಲಿಸುವ ಮೂಲಕ ಇತಿಹಾಸ ನಿರ್ಮಿಸಿದ್ದಾರೆ. ಗುರುವಾರ ನಡೆದ 14ನೇ ಹಾಗೂ ಅಂತಿಮ ಸುತ್ತಿನ ಪಂದ್ಯದಲ್ಲಿ ಚೀನಾದ ಡಿಂಗ್ ಲಿರಿನ್ ಅವರನ್ನು ಮಣಿಸಿದರು. ಈ ಮೂಲಕ ೧೮ನೇ ವಯಸ್ಸಿಗೆ ವಿಶ್ವ ಚಾಂಪಿಯನ್ ಆಗಿ ಹೊರಹೊಮ್ಮಿದರು. ಭಾರತದ ವಿಶ್ವನಾಥನ್ ಆನಂದ್ ೨೦೧೨ರಲ್ಲಿ ವಿಶ್ವ ಚಾಂಪಿಯನ್ ಪಟ್ಟ

ವಿಶ್ವ ಚೆಸ್ ಚಾಂಪಿಯನ್ ಶಿಪ್ ಗೆದ್ದ ಗುಕೇಶ್ Read More »