ಕ್ರೀಡೆ

ಪ್ಲೇ ಆಫ್ ಗೆ ಲಗ್ಗೆ ಇಟ್ಟ ರಾಯಲ್ ಚಾಲೆಂಜರ್ಸ್/ ಶುಭ ಹಾರೈಸಿದ ವಿಜಯ್ ಮಲ್ಯ

ಸಮಗ್ರ ನ್ಯೂಸ್: ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಚೆನ್ನೈ ಸೂಪರ್ ಕಿಂಗ್ಸ್ ನಡುವೆ ಬೆಂಗಳೂರಿನ ಎಂ.ಚಿನ್ನಸ್ವಾಮಿ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಜಿದ್ದಾಜಿದ್ದಿನಪಂದ್ಯದಲ್ಲಿ ಆರ್‍ಸಿಬಿ 27 ರನ್‍ಗಳಿಂದ ಚೆನ್ನೈ ತಂಡವನ್ನು ಸೋಲಿಸಿ ಪ್ಲೇ ಆಫ್ ಗೆ ಲಗ್ಗೆ ಇಟ್ಟಿದೆ. ಪ್ಲೇಆಫ್ ತಲುಪಿರುವ ಬೆಂಗಳೂರು ತಂಡವನ್ನು ಆರ್‍ಸಿಬಿಯ ಮಾಜಿ ಮಾಲೀಕ ವಿಜಯ್ ಮಲ್ಯ ಅವರು ಅಭಿನಂದಿಸಿದ್ದಾರೆ. ಆರ್‍ಸಿಬಿ ಪ್ಲೇಆಫ್‍ಗೆ ಲಗ್ಗೆ ಇಟ್ಟಿರುವುದಕ್ಕೆ ತುಂಬಾ ಖುಷಿಯಾಗಿದೆ. ನನ್ನ ಹೃದಯ ಪೂರ್ವಕ ಅಭಿನಂದನೆ ಹೇಳಲು ಬಯಸುತ್ತೇನೆ. ಸತತ ಸೋಲುಗಳ ನಂತರ ನೀವು ಎಷ್ಟು […]

ಪ್ಲೇ ಆಫ್ ಗೆ ಲಗ್ಗೆ ಇಟ್ಟ ರಾಯಲ್ ಚಾಲೆಂಜರ್ಸ್/ ಶುಭ ಹಾರೈಸಿದ ವಿಜಯ್ ಮಲ್ಯ Read More »

ದ್ರಾವಿಡ್ ಅವಧಿ ಮುಕ್ತಾಯ/ ನೂತನ ಕೋಚ್ ಆಗ್ತಾರಾ ಗೌತಮ್ ಗಂಭೀರ್?

ಸಮಗ್ರ ನ್ಯೂಸ್: ಟೀಮ್ ಇಂಡಿಯಾದ ಮುಖ್ಯ ಕೋಚ್ ಆಗಿ ಕಾರ್ಯನಿರ್ವಹಿಸುತ್ತಿರುವ ರಾಹುಲ್ ದ್ರಾವಿಡ್ ಅವರ ಅಧಿಕಾರಾವಧಿ 2024ರ ಟಿ20 ವಿಶ್ವಕಪ್ ಬಳಿಕ ಕೊನೆಗೊಳ್ಳಲಿದ್ದು, ಭಾರತ ತಂಡದ ಮಾಜಿ ಬ್ಯಾಟ್ಸ್‍ಮನ್ ಗೌತಮ್ ಗಂಭೀರ್ ಅವರು ಮುಖ್ಯ ಕೋಚ್ ಹುದ್ದೆಗೇರಬಹುದು ಎಂದು ಹೇಳಲಾಗುತ್ತಿದೆ. ದ್ರಾವಿಡ್ ಅವಧಿ ಮುಕ್ತಾಯಗೊಳ್ಳುತ್ತಿರುವ ಹಿನ್ನಲೆಯಲ್ಲಿ ಬಿಸಿಸಿಐ ಮುಖ್ಯ ಕೋಚ್ ಹುದ್ದೆಗೆ ಅರ್ಜಿ ಆಹ್ವಾನಿಸಿದೆ. ರಾಹುಲ್ ದ್ರಾವಿಡ್ ಮತ್ತೊಮ್ಮೆ ಹುದ್ದೆಯಲ್ಲಿ ಮುಂದುವರೆಯಲು ಆಸಕ್ತಿ ಹೊಂದಿಲ್ಲ ಎಂದು ವರದಿಯಾಗಿದೆ. ಅಲ್ಲದೆ ಪ್ರಸ್ತುತ ಎನ್‍ಸಿಎ ಅಧ್ಯಕ್ಷರಾಗಿರುವ ವಿವಿಎಸ್ ಲಕ್ಷ್ಮಣ್ ಕೂಡ

ದ್ರಾವಿಡ್ ಅವಧಿ ಮುಕ್ತಾಯ/ ನೂತನ ಕೋಚ್ ಆಗ್ತಾರಾ ಗೌತಮ್ ಗಂಭೀರ್? Read More »

ಶೀಘ್ರದಲ್ಲೇ ಪಾಕಿಸ್ತಾನಕ್ಕೆ ಭೇಟಿ ನೀಡುತ್ತೇನೆ ಎಂದ ಕೊಹ್ಲಿ

ಸಮಗ್ರ ನ್ಯೂಸ್ : ವಿರಾಟ್ ಕೊಹ್ಲಿ ಶೀಘ್ರದಲ್ಲೇ ಪಾಕಿಸ್ತಾನಕ್ಕೆ ಭೇಟಿ ನೀಡುತ್ತೇನೆ ಎಂದು ಹೇಳಿದ್ದಾರೆ. ಅವರು ಹೇಳಿರುವ ಆಡಿಯೋ ಸಮೇತ ದೃಶ್ಯ ವೈರಲ್ ಆಗಿದೆ. ಪಾಕ್ ಪರ್ವತಾರೋಹಿ ಶೆಹ್ರೋಜ್ ಕಾಶಿಫ್ ಅವರು ಟೀಂ ಇಂಡಿಯಾದ ಸ್ಫೋಟಕ ಆಟಗಾರ ಕೊಹ್ಲಿ ಅವರನ್ನು ವಿಡಿಯೋ ಕಾಲ್ನಲ್ಲಿ ಭೇಟಿಯಾದರು. ಇಬ್ಬರು ಸಂಭಾಷಣೆ ನಡೆಸಿದ್ದು, ಈ ವೇಳೆ ಕೊಹ್ಲಿ ‘ನಾನು ಶೀಘ್ರದಲ್ಲೇ ಪಾಕಿಸ್ತಾನಕ್ಕೆ ಭೇಟಿ ನೀಡುತ್ತೇನೆ. ಈಗಾಗಲೇ ಎಲ್ಲೂ ಭೇಟಿ ನೀಡಲು ಪ್ರಾರಂಭಿಸಿದ್ದಾರೆ’ ಎಂದು ಹೇಳಿದ್ದಾರೆ. ಅದಕ್ಕೆ ಶೆಹ್ರೋಜ್ ಕಾಶಿಫ್ ನಿಮಗೆ ಸದಾ

ಶೀಘ್ರದಲ್ಲೇ ಪಾಕಿಸ್ತಾನಕ್ಕೆ ಭೇಟಿ ನೀಡುತ್ತೇನೆ ಎಂದ ಕೊಹ್ಲಿ Read More »

ಟಿ-20 ಕ್ರಿಕೆಟ್ ವಿಶ್ವಕಪ್ ನಲ್ಲಿ ರಾರಾಜಿಸಲಿದೆ ಕನ್ನಡಿಗರ ಹೆಮ್ಮೆಯ ‘ನಂದಿನಿ’

ಸಮಗ್ರ ನ್ಯೂಸ್: ಟಿ-20 ಕ್ರಿಕೆಟ್ ವಿಶ್ವಕಪ್ ಪಂದ್ಯಾವಳಿಯಲ್ಲಿ ಕನ್ನಡಿಗರ ಹೆಮ್ಮೆಯ ನಂದಿನಿ ಬ್ರ್ಯಾಂಡ್ ಲಾಂಛನ ಐಲೆರ್ಂಡ್ ಮತ್ತು ಸ್ಕಾಟ್ಲೆಂಡ್ ಆಟಗಾರರ ಜೆರ್ಸಿಯ ಮೇಲೆ ರಾರಾಜಿಸಲಿದೆ ಎಂದು ಕೆಎಂಎಫ್ ವ್ಯವಸ್ಥಾಪಕ ನಿರ್ದೇಶಕ ಎಂ.ಕೆ.ಜಗದೀಶ್ ತಿಳಿಸಿದರು. ಜೂ.1ರಿಂದ 29ರವರೆಗೆ ಟಿ-20 ಕ್ರಿಕೆಟ್ ವಿಶ್ವಕಪ್ ಪಂದ್ಯಾವಳಿಯು ಅಮೆರಿಕ, ವೆಸ್ಟ್‍ಇಂಡೀಸ್‍ನಲ್ಲಿ ನಡೆಯಲಿದೆ. ಇದೇ ಮೊದಲ ಬಾರಿಗೆ ಕೆಎಂಎಫ್ ಐಲೆರ್ಂಡ್ ಮತ್ತು ಸ್ಕಾಟ್ಲೆಂಡ್ ಕ್ರಿಕೆಟ್ ತಂಡಗಳಿಗೆ ಪ್ರಾಯೋಜಕತ್ವ ನೀಡಲಿದೆ. ಈ ತಂಡಗಳ ಆಟಗಾರರ ಜೆರ್ಸಿಯಲ್ಲಿ ಬಲಗೈ ಆಟಗಾರನ ಎಡ ತೋಳಿನ ಮೇಲೆ ಮತ್ತು ಎಡಗೈ

ಟಿ-20 ಕ್ರಿಕೆಟ್ ವಿಶ್ವಕಪ್ ನಲ್ಲಿ ರಾರಾಜಿಸಲಿದೆ ಕನ್ನಡಿಗರ ಹೆಮ್ಮೆಯ ‘ನಂದಿನಿ’ Read More »

ಪುಟ್ಬಾಲ್ ಗೆ ವಿದಾಯ ಹೇಳಿದ ಸುನಿಲ್ ಛೆಟ್ರಿ

ಸಮಗ್ರ ನ್ಯೂಸ್: ಭಾರತದ ಪುಟ್ಬಾಲ್ ದಿಗ್ಗಜ ಸುನಿಲ್ ಛೆಟ್ರಿ ಅಂತಾರಾಷ್ಟ್ರೀಯ ಫುಟ್ಬಾಲ್ ಗೆ ವಿದಾಯ ಹೇಳಿದ್ದಾರೆ. ಕೋಲ್ಕತ್ತಾದ ಸಾಲ್ಟ್ ಲೇಕ್ ಸ್ಟೇಡಿಯಂನಲ್ಲಿ ಜೂನ್ 6 ರಂದು ನಡೆಯಲಿರುವ ಕುವೈತ್ ವಿರುದ್ಧ ಅಂತಾರಾಷ್ಟ್ರೀಯ ಫುಟ್ಬಾಲ್ ನಿಂದ ನಿವೃತ್ತಿಯಾಗುವುದಾಗಿ ಛೆಟ್ರಿ ಹೇಳಿದ್ದಾರೆ. 39 ವರ್ಷದ ಸುನಿಲ್ ಭಾರತ ಪರ ಇದುವರೆಗೆ 150 ಪಂದ್ಯಗಳನ್ನು ಆಡಿದ್ದಾರೆ. ಈ ಬಾರಿ 94 ಗೋಲು ಗಳಿಸಿ ಹೊಸ ದಾಖಲೆ ಬರೆದಿದ್ದಾರೆ. ಸುನಿಲ್ ಭೆಟ್ರಿ ಈಗ ಕುವೈತ್ ವಿರುದ್ಧದ ವಿಶ್ವಕಪ್ ಅರ್ಹತಾ ಪಂದ್ಯದೊಂದಿಗೆ ತಮ್ಮ ಅಂತಾರಾಷ್ಟ್ರೀಯ

ಪುಟ್ಬಾಲ್ ಗೆ ವಿದಾಯ ಹೇಳಿದ ಸುನಿಲ್ ಛೆಟ್ರಿ Read More »

ಸ್ಕಾಟ್ಲೆಂಡ್ ‌ತಂಡದ ಜೆರ್ಸಿಯಲ್ಲಿ ಮಿಂಚಿದ ‘ನಂದಿನಿ’ ಲೋಗೋ

ಸಮಗ್ರ ನ್ಯೂಸ್: ಮುಂದಿನ ತಿಂಗಳಿನಿಂದ ನಡೆಯಲಿರುವ ಟಿ-20 ಕ್ರಿಕೆಟ್ (T-20 World Cup) ವಿಶ್ವಕಪ್‌ಗೆ ಸಕಲ ಸಿದ್ಧತೆ ನಡೆಸಲಾಗುತ್ತಿದೆ. ಇದರ ಪ್ರಾಯೋಜಕತ್ವ ನೀಡಿರುವ ಕರ್ನಾಟಕ ಹಾಲು ಒಕ್ಕೂಟದ ನಂದಿನಿ ಬ್ರ್ಯಾಂಡ್ ಲೋಗೋ ಇರುವ ಜೆರ್ಸಿಯನ್ನು ಸ್ಕಾಟ್ಲೆಂಟ್ ತಂಡ ಅನಾವರಣಗೊಳಿಸಿದೆ. ಟಿ-20 ವಿಶ್ವಕಪ್ ಕ್ರಿಕೆಟ್ ಪಂದ್ಯಾವಳಿಯು ಜೂ. 2ರಿಂದ ವೆಸ್ಟ್‌ಇಂಡೀಸ್, ಅಮೆರಿಕದಲ್ಲಿ ನಡೆಯಲಿದೆ. ಸ್ಕಾಟ್ಲೆಂಡ್ ಪುರುಷರ ಪ್ಲೇಯಿಂಗ್ ಶರ್ಟ್‌ಗಳ ಎಡ ತೋಳಿನ ಮೇಲೆ ನಂದಿನಿ ಲೋಗೋ ಇರುತ್ತದೆ. ಲೋಗೋದಲ್ಲಿ ‘ನಂದಿನಿ’ ಎಂದು ಕನ್ನಡ ಮತ್ತು ಇಂಗ್ಲಿಷ್ ಎರಡರಲ್ಲೂ ಬರೆಯಲಾಗಿದೆ.

ಸ್ಕಾಟ್ಲೆಂಡ್ ‌ತಂಡದ ಜೆರ್ಸಿಯಲ್ಲಿ ಮಿಂಚಿದ ‘ನಂದಿನಿ’ ಲೋಗೋ Read More »

ಅದೃಷ್ಟ ನಮ್ಮ ಕೈ ಹಿಡಿಯಬೇಕಿದೆ| ಆರ್ಸಿಬಿ ನಾಯಕ ಫಾಫ್ ಡು ಪ್ಲೆಸಿಸ್

ಸಮಗ್ರ ನ್ಯೂಸ್ : ಕ್ರಿಕೆಟ್ ಅಸೋಸಿಯೇಷನ್ ಮೈದಾನದಲ್ಲಿ ನಡೆದ 17ನೇ ಆವೃತ್ತಿಯ 58ನೇ ಐಪಿಎಲ್ ಪಂದ್ಯದಲ್ಲಿ ಅಲ್ರೌಂಡ್ ಪ್ರದರ್ಶನದ ಫಲವಾಗಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಪಂಜಾಬ್ ಕಿಂಗ್ಸ್ ಎದುರು 60 ರನ್ಗಳ ಭರ್ಜರಿ ಜಯ ಗಳಿಸಿದ್ದು, ಪ್ಲೇಆಫ್ ಹಾದಿಯನ್ನು ಸುಗಮವಾಗಿಸಿಕೊಳ್ಳುವಲ್ಲಿ ಯಶಸ್ವಿಯಾಗಿದೆ. ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಆರ್ಸಿಬಿ ವಿರಾಟ್ ಕೊಹ್ಲಿ, ರಜತ್ ಪಾಟೀದಾರ್, ಕ್ಯಾಮರೂನ್ ಗ್ರೀನ್ ಬಿರುಸಿನ ಬ್ಯಾಟಿಂಗ್ ಫಲವಾಗಿ 20 ಓವರ್ಗಳಲ್ಲಿ 7 ವಿಕೆಟ್ ನಷ್ಟಕ್ಕೆ 241 ರನ್ ಗಳಿಸಿತ್ತು. ಬೃಹತ್

ಅದೃಷ್ಟ ನಮ್ಮ ಕೈ ಹಿಡಿಯಬೇಕಿದೆ| ಆರ್ಸಿಬಿ ನಾಯಕ ಫಾಫ್ ಡು ಪ್ಲೆಸಿಸ್ Read More »

ಟಿ 20 ವಿಶ್ವಕಪ್/ ವೈರಲ್ ಆದ ಭಾರತ ತಂಡದ ಹೊಸ ಜೆರ್ಸಿ

ಸಮಗ್ರ ನ್ಯೂಸ್: ಟಿ 20 ವಿಶ್ವಕಪ್ ಗೆ ವೇದಿಕೆ ಸಿದ್ದಗೊಂಡಿದ್ದು, ಭಾರತ ತಂಡವನ್ನು ಪ್ರಕಟ ಮಾಡಲಾಗಿದೆ. ಇದರ ಬೆನ್ನಲ್ಲೇ ಭಾರತ ನೂತನ ಜೆರ್ಸಿ ಬಿಡುಗಡೆಯಾಗಿದ್ದು, ಇದೀಗ ವೈರಲ್ ಆಗುತ್ತಿದೆ. ಹೊಸ ಜೆರ್ಸಿಯ ಫೋಟೊವನ್ನು ಟಾಟಾ ಐಪಿಎಲ್ ಕಾಮೆಂಟ್ರಿ ತನ್ನ ಅಧಿಕೃತ ಟ್ವಿಟರ್ ಎಕ್ಸ್ ನಲ್ಲಿ ಹಂಚಿಕೊಂಡಿದೆ. ಜತೆಗೆ ಇದೇ ಜೆರ್ಸಿಯಲ್ಲಿ ಭಾರತ ಟಿ20 ವಿಶ್ವಕಪ್‌ ಆಡಲಿದೆ ಎಂದು ಬರೆದುಕೊಂಡಿದೆ. ವೈರಲ್ ಆಗಿರುವ ಟೀಮ್ ಇಂಡಿಯಾದ ಜೆರ್ಸಿ ನೀಲಿ ಮತ್ತು ಕೇಸರಿ ಬಣ್ಣದ ಮಿಶ್ರಿತ ಕಂಡುಬಂದಿದೆ. ಜತೆಗೆ ಬಿಳಿ

ಟಿ 20 ವಿಶ್ವಕಪ್/ ವೈರಲ್ ಆದ ಭಾರತ ತಂಡದ ಹೊಸ ಜೆರ್ಸಿ Read More »

ಇಂದು ರಾಯಲ್ ಚಾಲೆಂಜರ್ಸ್‍ಗೆ ಮಾಡು ಇಲ್ಲವೇ ಮಡಿ ಪಂದ್ಯ/ ಬೆಂಗಳೂರಿನಲ್ಲಿ ಗುಜರಾತ್ ಎದುರಾಳಿ

ಸಮಗ್ರ ನ್ಯೂಸ್: ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಗುಜರಾತ್ ಟೈಟಾನ್ಸ್ ನಡುವೆ ಇಂದು ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯಲಿರುವ ಪಂದ್ಯ ಆರ್‍ಸಿಬಿ ಪಾಲಿಗೆ ನಿರ್ಣಾಯಕವಾಗಿದೆ. ರಾಯಲ್ ಚಾಲೆಂಜರ್ಸ್ ಆಡಿರುವ 10 ಪಂದ್ಯಗಳಲ್ಲಿ 7 ಮ್ಯಾಚ್‍ಗಳಲ್ಲಿ ಸೋಲನುಭವಿಸಿದೆ. ಇದೀಗ ಅಂಕ ಪಟ್ಟಿಯಲ್ಲಿ ಕೊನೆಯ ಸ್ಥಾನದಲ್ಲಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಪ್ಲೇಆಫ್ ರೇಸ್‍ನಲ್ಲಿ ಉಳಿಯಬೇಕಿದ್ದರೆ ಇಂದಿನ ಪಂದ್ಯದಲ್ಲಿ ಜಯ ಸಾಧಿಸಲೇಬೇಕು. ಅಲ್ಲದೆ ಗುಜರಾತ್ ಟೈಟಾನ್ಸ್ ವಿರುದ್ಧ ಗೆಲುವು ಸಾಧಿಸಿದರೆ ಅಂಕ ಪಟ್ಟಿಯಲ್ಲೂ ಮೇಲೇರಬಹುದು. ಒಂದು ವೇಳೆ ಇಂದು ಭರ್ಜರಿ

ಇಂದು ರಾಯಲ್ ಚಾಲೆಂಜರ್ಸ್‍ಗೆ ಮಾಡು ಇಲ್ಲವೇ ಮಡಿ ಪಂದ್ಯ/ ಬೆಂಗಳೂರಿನಲ್ಲಿ ಗುಜರಾತ್ ಎದುರಾಳಿ Read More »

ರಾಜಸ್ಥಾನ್‌ ರಾಯಲ್ಸ್‌ ತಂಡ ನಟ ಕಿಚ್ಚ ಸುದೀಪ್‌ಗೆ ಜೆರ್ಸಿ ಉಡುಗೊರೆ

ಸಮಗ್ರ ನ್ಯೂಸ್‌ : ರಾಜಸ್ಥಾನ್‌ ರಾಯಲ್ಸ್‌ ತಂಡವು ನಟ ಕಿಚ್ಚ ಸುದೀಪ್‌ ಅವರಿಗೆ ರಾಜಸ್ಥಾನ್‌ ತಂಡದ ಜೆರ್ಸಿಯನ್ನು ಉಡುಗೊರೆಯಾಗಿ ಕಳುಹಿಸಿಕೊಟ್ಟಿದೆ. ಕಡುನೀಲಿ ಮತ್ತು ತಿಳಿಗೆಂಪು ಮಿಶ್ರಿತ ಬಣ್ಣದ ಜೆರ್ಸಿಯಾಗಿದ್ದು, ಜೆರ್ಸಿ ಹಿಂಭಾಗದಲ್ಲಿ ಸುದೀಪ್‌ ಎಂದು ಇಂಗ್ಲಿಷ್‌ನಲ್ಲಿ ಮುದ್ರಿಸಲಾಗಿದೆ. ಈ ಜೆರ್ಸಿ ಫೋಟೋವನ್ನು ತಮ್ಮ ಸೋಷಿಯಲ್‌ ಮೀಡಿಯಾ ಎಕ್ಸ್‌ ಖಾತೆಯಲ್ಲಿ ಹಂಚಿಕೊಂಡಿರುವ ಕಿಚ್ಚ ಸುದೀಪ್‌ ರಾಜಸ್ಥಾನ್‌ ರಾಯಲ್ಸ್‌ ತಂಡಕ್ಕೆ ತುಂಬು ಹೃದಯದ ಧನ್ಯವಾದ ಹೇಳಿದ್ದಾರೆ. Tಕ್ರಿಕೆಟ್‌ ಎಂದರೆ ಸುದೀಪ್‌ಗೆ ತುಂಬಾ ಅಚ್ಚುಮೆಚ್ಚು. ಬಾಲ್ಯದಿಂದಲೂ ಕ್ರಿಕೆಟ್‌ನ ಜೊತೆ ಉತ್ತಮ ನಂಟು

ರಾಜಸ್ಥಾನ್‌ ರಾಯಲ್ಸ್‌ ತಂಡ ನಟ ಕಿಚ್ಚ ಸುದೀಪ್‌ಗೆ ಜೆರ್ಸಿ ಉಡುಗೊರೆ Read More »