ಕ್ರೀಡೆ

ಅದೃಷ್ಟ ನಮ್ಮ ಕೈ ಹಿಡಿಯಬೇಕಿದೆ| ಆರ್ಸಿಬಿ ನಾಯಕ ಫಾಫ್ ಡು ಪ್ಲೆಸಿಸ್

ಸಮಗ್ರ ನ್ಯೂಸ್ : ಕ್ರಿಕೆಟ್ ಅಸೋಸಿಯೇಷನ್ ಮೈದಾನದಲ್ಲಿ ನಡೆದ 17ನೇ ಆವೃತ್ತಿಯ 58ನೇ ಐಪಿಎಲ್ ಪಂದ್ಯದಲ್ಲಿ ಅಲ್ರೌಂಡ್ ಪ್ರದರ್ಶನದ ಫಲವಾಗಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಪಂಜಾಬ್ ಕಿಂಗ್ಸ್ ಎದುರು 60 ರನ್ಗಳ ಭರ್ಜರಿ ಜಯ ಗಳಿಸಿದ್ದು, ಪ್ಲೇಆಫ್ ಹಾದಿಯನ್ನು ಸುಗಮವಾಗಿಸಿಕೊಳ್ಳುವಲ್ಲಿ ಯಶಸ್ವಿಯಾಗಿದೆ. ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಆರ್ಸಿಬಿ ವಿರಾಟ್ ಕೊಹ್ಲಿ, ರಜತ್ ಪಾಟೀದಾರ್, ಕ್ಯಾಮರೂನ್ ಗ್ರೀನ್ ಬಿರುಸಿನ ಬ್ಯಾಟಿಂಗ್ ಫಲವಾಗಿ 20 ಓವರ್ಗಳಲ್ಲಿ 7 ವಿಕೆಟ್ ನಷ್ಟಕ್ಕೆ 241 ರನ್ ಗಳಿಸಿತ್ತು. ಬೃಹತ್ […]

ಅದೃಷ್ಟ ನಮ್ಮ ಕೈ ಹಿಡಿಯಬೇಕಿದೆ| ಆರ್ಸಿಬಿ ನಾಯಕ ಫಾಫ್ ಡು ಪ್ಲೆಸಿಸ್ Read More »

ಟಿ 20 ವಿಶ್ವಕಪ್/ ವೈರಲ್ ಆದ ಭಾರತ ತಂಡದ ಹೊಸ ಜೆರ್ಸಿ

ಸಮಗ್ರ ನ್ಯೂಸ್: ಟಿ 20 ವಿಶ್ವಕಪ್ ಗೆ ವೇದಿಕೆ ಸಿದ್ದಗೊಂಡಿದ್ದು, ಭಾರತ ತಂಡವನ್ನು ಪ್ರಕಟ ಮಾಡಲಾಗಿದೆ. ಇದರ ಬೆನ್ನಲ್ಲೇ ಭಾರತ ನೂತನ ಜೆರ್ಸಿ ಬಿಡುಗಡೆಯಾಗಿದ್ದು, ಇದೀಗ ವೈರಲ್ ಆಗುತ್ತಿದೆ. ಹೊಸ ಜೆರ್ಸಿಯ ಫೋಟೊವನ್ನು ಟಾಟಾ ಐಪಿಎಲ್ ಕಾಮೆಂಟ್ರಿ ತನ್ನ ಅಧಿಕೃತ ಟ್ವಿಟರ್ ಎಕ್ಸ್ ನಲ್ಲಿ ಹಂಚಿಕೊಂಡಿದೆ. ಜತೆಗೆ ಇದೇ ಜೆರ್ಸಿಯಲ್ಲಿ ಭಾರತ ಟಿ20 ವಿಶ್ವಕಪ್‌ ಆಡಲಿದೆ ಎಂದು ಬರೆದುಕೊಂಡಿದೆ. ವೈರಲ್ ಆಗಿರುವ ಟೀಮ್ ಇಂಡಿಯಾದ ಜೆರ್ಸಿ ನೀಲಿ ಮತ್ತು ಕೇಸರಿ ಬಣ್ಣದ ಮಿಶ್ರಿತ ಕಂಡುಬಂದಿದೆ. ಜತೆಗೆ ಬಿಳಿ

ಟಿ 20 ವಿಶ್ವಕಪ್/ ವೈರಲ್ ಆದ ಭಾರತ ತಂಡದ ಹೊಸ ಜೆರ್ಸಿ Read More »

ಇಂದು ರಾಯಲ್ ಚಾಲೆಂಜರ್ಸ್‍ಗೆ ಮಾಡು ಇಲ್ಲವೇ ಮಡಿ ಪಂದ್ಯ/ ಬೆಂಗಳೂರಿನಲ್ಲಿ ಗುಜರಾತ್ ಎದುರಾಳಿ

ಸಮಗ್ರ ನ್ಯೂಸ್: ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಗುಜರಾತ್ ಟೈಟಾನ್ಸ್ ನಡುವೆ ಇಂದು ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯಲಿರುವ ಪಂದ್ಯ ಆರ್‍ಸಿಬಿ ಪಾಲಿಗೆ ನಿರ್ಣಾಯಕವಾಗಿದೆ. ರಾಯಲ್ ಚಾಲೆಂಜರ್ಸ್ ಆಡಿರುವ 10 ಪಂದ್ಯಗಳಲ್ಲಿ 7 ಮ್ಯಾಚ್‍ಗಳಲ್ಲಿ ಸೋಲನುಭವಿಸಿದೆ. ಇದೀಗ ಅಂಕ ಪಟ್ಟಿಯಲ್ಲಿ ಕೊನೆಯ ಸ್ಥಾನದಲ್ಲಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಪ್ಲೇಆಫ್ ರೇಸ್‍ನಲ್ಲಿ ಉಳಿಯಬೇಕಿದ್ದರೆ ಇಂದಿನ ಪಂದ್ಯದಲ್ಲಿ ಜಯ ಸಾಧಿಸಲೇಬೇಕು. ಅಲ್ಲದೆ ಗುಜರಾತ್ ಟೈಟಾನ್ಸ್ ವಿರುದ್ಧ ಗೆಲುವು ಸಾಧಿಸಿದರೆ ಅಂಕ ಪಟ್ಟಿಯಲ್ಲೂ ಮೇಲೇರಬಹುದು. ಒಂದು ವೇಳೆ ಇಂದು ಭರ್ಜರಿ

ಇಂದು ರಾಯಲ್ ಚಾಲೆಂಜರ್ಸ್‍ಗೆ ಮಾಡು ಇಲ್ಲವೇ ಮಡಿ ಪಂದ್ಯ/ ಬೆಂಗಳೂರಿನಲ್ಲಿ ಗುಜರಾತ್ ಎದುರಾಳಿ Read More »

ರಾಜಸ್ಥಾನ್‌ ರಾಯಲ್ಸ್‌ ತಂಡ ನಟ ಕಿಚ್ಚ ಸುದೀಪ್‌ಗೆ ಜೆರ್ಸಿ ಉಡುಗೊರೆ

ಸಮಗ್ರ ನ್ಯೂಸ್‌ : ರಾಜಸ್ಥಾನ್‌ ರಾಯಲ್ಸ್‌ ತಂಡವು ನಟ ಕಿಚ್ಚ ಸುದೀಪ್‌ ಅವರಿಗೆ ರಾಜಸ್ಥಾನ್‌ ತಂಡದ ಜೆರ್ಸಿಯನ್ನು ಉಡುಗೊರೆಯಾಗಿ ಕಳುಹಿಸಿಕೊಟ್ಟಿದೆ. ಕಡುನೀಲಿ ಮತ್ತು ತಿಳಿಗೆಂಪು ಮಿಶ್ರಿತ ಬಣ್ಣದ ಜೆರ್ಸಿಯಾಗಿದ್ದು, ಜೆರ್ಸಿ ಹಿಂಭಾಗದಲ್ಲಿ ಸುದೀಪ್‌ ಎಂದು ಇಂಗ್ಲಿಷ್‌ನಲ್ಲಿ ಮುದ್ರಿಸಲಾಗಿದೆ. ಈ ಜೆರ್ಸಿ ಫೋಟೋವನ್ನು ತಮ್ಮ ಸೋಷಿಯಲ್‌ ಮೀಡಿಯಾ ಎಕ್ಸ್‌ ಖಾತೆಯಲ್ಲಿ ಹಂಚಿಕೊಂಡಿರುವ ಕಿಚ್ಚ ಸುದೀಪ್‌ ರಾಜಸ್ಥಾನ್‌ ರಾಯಲ್ಸ್‌ ತಂಡಕ್ಕೆ ತುಂಬು ಹೃದಯದ ಧನ್ಯವಾದ ಹೇಳಿದ್ದಾರೆ. Tಕ್ರಿಕೆಟ್‌ ಎಂದರೆ ಸುದೀಪ್‌ಗೆ ತುಂಬಾ ಅಚ್ಚುಮೆಚ್ಚು. ಬಾಲ್ಯದಿಂದಲೂ ಕ್ರಿಕೆಟ್‌ನ ಜೊತೆ ಉತ್ತಮ ನಂಟು

ರಾಜಸ್ಥಾನ್‌ ರಾಯಲ್ಸ್‌ ತಂಡ ನಟ ಕಿಚ್ಚ ಸುದೀಪ್‌ಗೆ ಜೆರ್ಸಿ ಉಡುಗೊರೆ Read More »

ಟಿ20 ವಿಶ್ವಕಪ್ ಗೆ ಭಾರತ ತಂಡ ಪ್ರಕಟ: ಕನ್ನಡಿಗರಿಗೆ ಚಾನ್ಸ್ ಮಿಸ್

ಸಮಗ್ರ ನ್ಯೂಸ್: ಹಲವು ದಿನಗಳಿಂದ ಕ್ರಿಕೆಟ್​ ವಲಯದಲ್ಲಿ ಭಾರೀ ಚರ್ಚೆಯಾಗುತ್ತಿದೆ. ಟಿ20 ವಿಶ್ವಕಪ್​ಗೆ(T20 World Cup 2024) ಟೀಮ್​ ಇಂಡಿಯಾ ಪ್ರಕಟ ಯಾವಾಗ? ಎನ್ನುವ ಪ್ರಶ್ನೆಗೆ ಇಂದು ಉತ್ತರ ಸಿಕ್ಕಿದೆ. ಇಂದು ಆಯ್ಕೆ ಸಮಿತಿಯ ಅಧ್ಯಕ್ಷ ಅಜಿತ್​ ಅಗರ್ಕರ್ ಅವರು ಭಾರತ ತಂಡವನ್ನು ಪ್ರಕಟಿಸಿದ್ದಾರೆ. ತಂಡವನ್ನು ರೋಹಿತ್​ ಶರ್ಮ ಮುನ್ನಡೆಸಲಿದ್ದಾರೆ. ಹಾರ್ದಿಕ್​ ಪಾಂಡ್ಯ ಉಪನಾಯನಾಗಿದ್ದಾರೆ. ಆದರೆ ಇದರಲ್ಲಿ ಮುಖ್ಯವಾಗಿ ಕನ್ನಡಿಗ ಕೆ.ಎಲ್​ ರಾಹುಲ್​ ಅವರಿಗೆ ಅವಕಾಶ ಸಿಕ್ಕಿಲ್ಲ. ಪಂತ್​ ಮತ್ತು ಸಂಜು ಸ್ಯಾಮ್ಸನ್​ ವಿಕೆಟ್​ ಕೀಪರ್​ ಆಗಿ

ಟಿ20 ವಿಶ್ವಕಪ್ ಗೆ ಭಾರತ ತಂಡ ಪ್ರಕಟ: ಕನ್ನಡಿಗರಿಗೆ ಚಾನ್ಸ್ ಮಿಸ್ Read More »

ಟಿ20 ವಿಶ್ವಕಪ್/ ಇಬ್ಬರು ಮಕ್ಕಳಿಂದ ನ್ಯೂಜಿಲೆಂಡ್ ತಂಡ ಪ್ರಕಟ

ಸಮಗ್ರ ನ್ಯೂಸ್: ಜೂ.1ರಿಂದ ಆರಂಭಗೊಳ್ಳಲಿರುವ ಟಿ20 ವಿಶ್ವಕಪ್ ಟೂರ್ನಿಗೆ ನ್ಯೂಜಿಲೆಂಡ್ 15 ಆಟಗಾರರ ತಂಡವನ್ನು ಪ್ರಕಟಿಸಿದ್ದು, ನ್ಯೂಜಿಲೆಂಡ್ ಕ್ರಿಕೆಟ್ ಮಂಡಳಿಯು ಇಬ್ಬರು ಮಕ್ಕಳಿಂದ ತಂಡವನ್ನು ಪ್ರಕಟಿಸಿದೆ. ಇಬ್ಬರೂ ಸುದ್ದಿಗೋಷ್ಠಿಗೆ ಆಗಮಿಸಿ ಆಟಗಾರರ ಹೆಸರನ್ನು ಘೋಷಿಸುವ ವಿಡಿಯೋವನ್ನು ಬಿಡುಗಡೆ ಮಾಡಲಾಗಿದೆ. 6ನೇ ಬಾರಿ ಟಿ20 ವಿಶ್ವಕಪ್‍ಗೆ ಆಯ್ಕೆಯಾಗಿರುವ ಕೇನ್ ವಿಲಿಯಮ್ಸನ್ ತಂಡದ ನಾಯಕತ್ವ ವಹಿಸಲಿದ್ದು, ಟಿಮ್ ಸೌಥಿ 7ನೇ ಬಾರಿ ಟಿ20 ವಿಶ್ವಕಪ್ ಆಡಲು ಸಜ್ಜಾಗಿದ್ದಾರೆ. ಫಿನ್ ಆಲೆನ್, ಬೌಲ್ಟ್, ಮೈಕಲ್ ಬ್ರೇಸ್‍ವೆಲ್, ಮಾರ್ಕ್ ಚಾಪ್ಮನ್, ಡೆವೋನ್ ಕಾನ್‍ವೇ,

ಟಿ20 ವಿಶ್ವಕಪ್/ ಇಬ್ಬರು ಮಕ್ಕಳಿಂದ ನ್ಯೂಜಿಲೆಂಡ್ ತಂಡ ಪ್ರಕಟ Read More »

ಟಿ20 ವಿಶ್ವಕಪ್/ಬ್ರಾಂಡ್ ಅಂಬಾಸಿಡರ್ ಆಗಿ ಯುವರಾಜ್ ಸಿಂಗ್

ಸಮಗ್ರ ನ್ಯೂಸ್: ಇಂಡೀಸ್ ಮತ್ತು ಅಮೆರಿಕದ ಜಂಟಿ ಆತಿಥ್ಯದಲ್ಲಿ ಜೂನ್ 6 ರಿಂದ 2024 ರ ಆರಂಭವಾಗಲಿರುವ ಟಿ20 ವಿಶ್ವಕಪ್‍ನ ಬ್ರಾಂಡ್ ಅಂಬಾಸಿಡರ್ ಆಗಿ ಟೀಂ ಇಂಡಿಯಾದ ಮಾಜಿ ಆಟಗಾರ ಹಾಗೂ ಎರಡು ವಿಶ್ವಕಪ್‍ಗಳ ಹೀರೋ ಯುವರಾಜ್ ಸಿಂಗ್ ಅವರನ್ನು ಐಸಿಸಿ ನೇಮಿಸಿದೆ. ಯುವರಾಜ್ ಸಿಂಗ್ ಹೊರತಾಗಿ, ಪ್ರಸ್ತುತ ಕ್ರಿಸ್ ಗೇಲ್ ಮತ್ತು ಉಸೇನ್ ಬೋಲ್ಟ್ ಕೂಡ ಈ ಪಂದ್ಯಾವಳಿಯ ಬ್ರಾಂಡ್ ಅಂಬಾಸಿಡರ್‍ಗಳಾಗಿದ್ದಾರೆ. 2007ರ ಟಿ20 ವಿಶ್ವಕಪ್‍ನಲ್ಲಿ ಅವರು ಬಾರಿಸಿದ ಆರು ಸಿಕ್ಸರ್‍ಗಳು, ಅಲ್ಲದೆ ಟಿ20 ವಿಶ್ವಕಪ್‍ನಲ್ಲಿ

ಟಿ20 ವಿಶ್ವಕಪ್/ಬ್ರಾಂಡ್ ಅಂಬಾಸಿಡರ್ ಆಗಿ ಯುವರಾಜ್ ಸಿಂಗ್ Read More »

ಪ್ರತಿ ಪಂದ್ಯವನ್ನೂ ಗೆಲ್ಲಲು ಸಾಧ್ಯವಿಲ್ಲ ಎಂದ ಹೈದರಾಬಾದ್ ತಂಡದ ನಾಯಕ ಪ್ಯಾಟ್ ಕಮ್ಮಿನ್ಸ್

ಸಮಗ್ರ ನ್ಯೂಸ್‌ : ನಿನ್ನೆ ನಡೆದ ಐಪಿಎಲ್ ಪಂದ್ಯದಲ್ಲಿ ಸನ್ ರೈಸರ್ಸ್ ಹೈದರಾಬಾದ್ ತಂಡವನ್ನು ಆರ್ಸಿಬಿ 35 ರನ್ಗಳ ಅಂತರದಿಂದ ಸೋಲಿಸಿದೆ. ಪಂದ್ಯ ಮುಗಿದ ಬಳಿಕ ಹೈದರಾಬಾದ್ ತಂಡದ ನಾಯಕ ಪ್ಯಾಟ್ ಕಮ್ಮಿನ್ಸ್ ಪ್ರತಿ ಪಂದ್ಯವನ್ನೂ ಗೆಲ್ಲಲು ಸಾಧ್ಯವಿಲ್ಲ ಎಂದಿದ್ದಾರೆ. ಕಮ್ಮಿನ್ಸ್ ಮಾತನಾಡಿ, ಸಹ ಆಟಗಾರರಿಗೆ ಹಿತ ನುಡಿಯನ್ನು ನುಡಿದರು. ಇಂದು ನಮಗೆ ಒಳ್ಳೆಯ ರಾತ್ರಿ ಅಲ್ಲ. ದುರಾದೃಷ್ಟವಶಾತ್ ನಮ್ಮ ಇನ್ನಿಂಗ್ಸ್‌ನಲ್ಲಿ ಕೆಲವು ವಿಕೆಟ್‌ಗಳನ್ನು ಕಳೆದುಕೊಂಡಿದ್ದೇವೆ. ನಾವು ಮೊದಲು ಬ್ಯಾಟ್ ಮಾಡಬೇಕಾಗಿತ್ತು. ಗೆಲ್ಲುವ ಮೊದಲು ನಾವು ನಮ್ಮ

ಪ್ರತಿ ಪಂದ್ಯವನ್ನೂ ಗೆಲ್ಲಲು ಸಾಧ್ಯವಿಲ್ಲ ಎಂದ ಹೈದರಾಬಾದ್ ತಂಡದ ನಾಯಕ ಪ್ಯಾಟ್ ಕಮ್ಮಿನ್ಸ್ Read More »

ಇಂದು ಸನ್ ರೈಸರ್ಸ್ ವಿರುದ್ಧ ಆರ್‍ಸಿಬಿ ಪಂದ್ಯ/ ಅಳಿವು ಉಳಿವಿನ ಸ್ಥಿತಿಯಲ್ಲಿ ರಾಯಲ್ ಚಾಲೆಂಜರ್ಸ್

ಸಮಗ್ರ ನ್ಯೂಸ್: ಐಪಿಎಲ್‍ನ ಈ ಸೀಸನ್‍ನಲ್ಲಿ ಈಗಾಗಲೇ ಐದು ಪಂದ್ಯಗಳನ್ನು ಸೋತಿರುವ ಆರ್‍ಸಿಬಿಗೆ ಇಂದು ಮಾಡು ಇಲ್ಲವೇ ಮಡಿ ಎಂಬ ಪರಿಸ್ಥಿತಿ ಬಂದಿದೆ. ಆರ್‍ಸಿಬಿ ಇಂದು ಸನ್ ರೈಸರ್ಸ್ ವಿರುದ್ಧ ನಡೆಯುವ ಪಂದ್ಯದಲ್ಲಿ ಗೆಲ್ಲಲೇ ಬೇಕಾದ ಅನಿವಾರ್ಯತೆಯಲ್ಲಿ ಇದೆ. ಗೆದ್ದರೆ ಪ್ಲೇ ಆಫ್ ಸೋತರೆ ಮನೆಗೆ ಎಂಬ ಪರಿಸ್ಥಿತಿಯಲ್ಲಿರುವ ಆರ್‍ಸಿಬಿ ಇಂದು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಹೈದರಬಾದ್ ಸನ್ ರೈಸರ್ಸ್ ವಿರುದ್ಧ ಸೆಣೆಸಾಡಲಿದೆ. 5 ಪಂದ್ಯಗಳಲ್ಲಿ 3 ಪಂದ್ಯವನ್ನ ಗೆದ್ದ ಸನ್‍ರೈಸರ್ಸ್ ತನ್ನ ಬ್ಯಾಟರ್ ಗಳ ಮೇಲೆ

ಇಂದು ಸನ್ ರೈಸರ್ಸ್ ವಿರುದ್ಧ ಆರ್‍ಸಿಬಿ ಪಂದ್ಯ/ ಅಳಿವು ಉಳಿವಿನ ಸ್ಥಿತಿಯಲ್ಲಿ ರಾಯಲ್ ಚಾಲೆಂಜರ್ಸ್ Read More »

ಪ್ಯಾರೀಸ್ ಒಲಿಂಪಿಕ್ಸ್/ ಭಾರತದ ಮುಖ್ಯಸ್ಥರ ಸ್ಥಾನದಿಂದ ಹಿಂದೆ ಸರಿದ ಮೇರಿ ಕೋಮ್

ಸಮಗ್ರ ನ್ಯೂಸ್: ಪ್ಯಾರೀಸ್ ನಲ್ಲಿ ನಡೆಯಲಿರುವ ಒಲಂಪಿಕ್ಸ್ ನ ಭಾರತದ ಮುಖ್ಯಸ್ಥರ ಸ್ಥಾನದಿಂದ ಬಾಕ್ಸರ್ ಎಂಸಿ ಮೇರಿ ಕೋಮ್ ಹಿಂದೆ ಸರಿದಿದ್ದಾರೆ. ಭಾರತೀಯ ಒಲಿಂಪಿಕ್ ಅಸೋಸಿಯೇಷನ್ (ಐಒಎ) ಅಧ್ಯಕ್ಷೆ ಪಿಟಿ ಉಷಾ ಅವರು ಮೇರಿ ಕೋಮ್ ತಮಗೆ ಬರೆದ ಪತ್ರದಲ್ಲಿ ತಮ್ಮ ಸ್ಥಾನದಿಂದ ಬಿಡುಗಡೆ ಮಾಡುವಂತೆ ಕೋರಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ. ಮಾರ್ಚ್ 21 ರಂದು ನೇಮಕಾತಿಯನ್ನು ಪ್ರಕಟಿಸಿತ್ತು. ‘ನನ್ನ ದೇಶಕ್ಕೆ ಸಾಧ್ಯವಿರುವ ಎಲ್ಲ ರೀತಿಯಲ್ಲಿ ಸೇವೆ ಸಲ್ಲಿಸುವುದನ್ನು ನಾನು ಗೌರವವೆಂದು ಪರಿಗಣಿಸುತ್ತೇನೆ ಮತ್ತು ಅದಕ್ಕಾಗಿ ನಾನು

ಪ್ಯಾರೀಸ್ ಒಲಿಂಪಿಕ್ಸ್/ ಭಾರತದ ಮುಖ್ಯಸ್ಥರ ಸ್ಥಾನದಿಂದ ಹಿಂದೆ ಸರಿದ ಮೇರಿ ಕೋಮ್ Read More »