ಕ್ರೀಡೆ

Sports News: ನೊವಾಕ್ ಜೊಕೊವಿಕ್ ಮಣಿಸಿ ವಿಂಬಲ್ಡನ್ ಪ್ರಶಸ್ತಿ ಗೆದ್ದ ಕಾರ್ಲೋಸ್ ಅಲ್ಕರಾಝ್

ಸಮಗ್ರ ನ್ಯೂಸ್: ಏಳು ಬಾರಿಯ ಚಾಂಪಿಯನ್ ನೊವಾಕ್ ಜೊಕೊವಿಕ್‌ರನ್ನು ಐದು ಸೆಟ್‌ಗಳ ಪೈಪೋಟಿಯಲ್ಲಿ ರೋಚಕವಾಗಿ ಮಣಿಸಿದ ಸ್ಪೇನ್‌ನ ಯುವ ಆಟಗಾರ ಕಾರ್ಲೊಸ್ ಅಲ್ಕರಾಝ್ ಮೊದಲ ಬಾರಿ ವಿಂಬಲ್ಡನ್ ಟೆನಿಸ್ ಚಾಂಪಿಯನ್‌ಶಿಪ್‌ನಲ್ಲಿ ಪ್ರಶಸ್ತಿ ಎತ್ತಿಹಿಡಿದಿದ್ದಾರೆ. ರವಿವಾರ ನಡೆದ ವಿಂಬಲ್ಡನ್ ಟೆನಿಸ್ ಚಾಂಪಿಯನ್‌ಶಿಪ್‌ನ ಪುರುಷರ ಸಿಂಗಲ್ಸ್ ಫೈನಲ್‌ನಲ್ಲಿ ಅಲ್ಕರಾಝ್ ಅವರು ಜೊಕೊವಿಕ್‌ರನ್ನು 1-6, 7-6(6), 6-1, 4-6, 6-4 ಸೆಟ್‌ಗಳ ಅಂತರದಿಂದ ಮಣಿಸಿದರು. ಇದೇ ಮೊದಲ ಬಾರಿ ವಿಂಬಲ್ಡನ್ ಫೈನಲ್‌ನಲ್ಲಿ ಆಡಿದ 21ರ ಹರೆಯದ ಅಲ್ಕರಾಝ್ ಅವರು ಬೋರಿಸ್ ಬೆಕೆರ್ […]

Sports News: ನೊವಾಕ್ ಜೊಕೊವಿಕ್ ಮಣಿಸಿ ವಿಂಬಲ್ಡನ್ ಪ್ರಶಸ್ತಿ ಗೆದ್ದ ಕಾರ್ಲೋಸ್ ಅಲ್ಕರಾಝ್ Read More »

ವಿಶ್ವ ಪ್ಯಾರಾ ಅಥ್ಲೆಟಿಕ್ಸ್: ರಕ್ಷಿತಾರಾಜುಗೆ 5ನೇ ಸ್ಥಾನ

ಸಮಗ್ರ ನ್ಯೂಸ್: ಕರ್ನಾಟಕದ ಅಂಧ ಓಟಗಾರ್ತಿ ರಕ್ಷಿತಾರಾಜು ಪ್ರಾನ್ಸ್ ನ ಪ್ಯಾರಿಸ್ ನಲ್ಲಿ ಜುಲೈ6 ರಿಂದ ನಡೆದ ವಿಶ್ವ ಪ್ಯಾರಾ ಅಥ್ಲೆಟಿಕ್ ನಲ್ಲಿ ಕೀನ್ಯಾ,‌ ರಷ್ಯಾ, ಪೋಲೆಂಡ್, ಚೀನಾ, ಭಾರತ ಕ್ರೀಡಾಪಟುಗಳು ಭಾಗವಹಿಸಿದ್ದು ಜು8 ರಂದು ಶನಿವಾರ ನಡೆದ ಮಹಿಳೆಯರ 1500ಮೀ ಕ್ರೀಡಾಕೂಟದಲ್ಲಿ ರಕ್ಷಿತಾರಾಜು ಟಿ11ವಿಭಾಗದಲ್ಲಿ ( 5:26.47ಸೆಕೆಂಡುಗಳಲ್ಲಿ )ಮೂರನೇ ಸ್ಥಾನ ಪಡೆದು ಪೈನಲ್ ಗೆ ಪ್ರವೇಶಿಸಿದ್ದರು. ಜು10 ಸೋಮವಾರದಂದು ನಡೆದ 1500ಮೀ ಓಟದಲ್ಲಿ (5:24.95 ಸೆಕೆಂಡುಗಳಲ್ಲಿ )ರಕ್ಷಿತಾ 5 ನೇ ಸ್ಥಾನ ಪಡೆದುಕೊಂಡಿದ್ದಾರೆ ಎಂದು ಅವರ

ವಿಶ್ವ ಪ್ಯಾರಾ ಅಥ್ಲೆಟಿಕ್ಸ್: ರಕ್ಷಿತಾರಾಜುಗೆ 5ನೇ ಸ್ಥಾನ Read More »

9ನೇ ಬಾರಿಗೆ ಪ್ರಶಸ್ತಿ ಗೆದ್ದು ದಾಖಲೆ ನಿರ್ಮಿಸಿದ ಭಾರತ| ಸ್ಯಾಪ್ ಪುಟ್ಬಾಲ್ ಚಾಂಪಿಯನ್ ಆದ ಟೀಂ ಇಂಡಿಯಾ

ಸಮಗ್ರ ನ್ಯೂಸ್: ಜಿದ್ದಾಜಿದ್ದಿಯ ಕಾದಾಟದಲ್ಲಿ ಬ್ಲ್ಯೂ ಟೈಗರ್ಸ್‌ ಖ್ಯಾತಿಯ ಭಾರತ ಫುಟ್‌ಬಾಲ್‌ ತಂಡ 2023ರ ಸಾಲಿನ ಸ್ಯಾಫ್‌ ಫುಟ್‌ಬಾಲ್‌ ಚಾಂಪಿಯನ್‌ ಷಿಪ್‌ನಲ್ಲಿ ಪ್ರಶಸ್ತಿ ಜಯಿಸಿದೆ. ಮಂಗಳವಾರ ಶ್ರೀಕಂಠೀರವ ಮೈದಾನದಲ್ಲಿ ನಡೆದ ಫೈನಲ್‌ ಪಂದ್ಯದಲ್ಲಿ ಭಾರತ ತಂಡ ಪೆನಾಲ್ಟಿ ಶೂಟೌಟ್‌ನಲ್ಲಿ ಕುವೈತ್‌ ತಂಡವನ್ನು ಸೋಲಿಸಿ 9ನೇ ಬಾರಿಗೆ ಚಾಂಪಿಯನ್‌ ಆಯಿತು. ನಿಗದಿತ ಅವಧಿಯಲ್ಲಿ ಪಂದ್ಯ 1-1 ಗೋಲುಗಳಿಂದ ಡ್ರಾ ಕಂಡಿದ್ದರೆ, ಫಲಿತಾಂಶ ನಿರ್ಣಯಕ್ಕಾಗಿ ನಡೆದ ಪೆನಾಲ್ಟಿ ಶೂಟೌಟ್‌ನಲ್ಲಿ ಭಾರತ 5-4 ಗೋಲುಗಳಿಂದ ಕುವೈತ್‌ ತಂಡವನ್ನು ಮಣಿಸಿತು. ಪೆನಾಲ್ಟಿ ಶೂಟೌಟ್‌ನ

9ನೇ ಬಾರಿಗೆ ಪ್ರಶಸ್ತಿ ಗೆದ್ದು ದಾಖಲೆ ನಿರ್ಮಿಸಿದ ಭಾರತ| ಸ್ಯಾಪ್ ಪುಟ್ಬಾಲ್ ಚಾಂಪಿಯನ್ ಆದ ಟೀಂ ಇಂಡಿಯಾ Read More »

ಏಷ್ಯನ್ ಕಬಡ್ಡಿ ಚಾಂಪಿಯನ್‌ ಶಿಪ್| ಇರಾನ್ ಮಣಿಸಿ ಎಂಟನೇ ಬಾರಿಗೆ ಪ್ರಶಸ್ತಿಗೆ ಮುತ್ತಿಕ್ಕಿದ ಭಾರತ

ಸಮಗ್ರ ನ್ಯೂಸ್: ದ.ಕೊರಿಯಾದ ಬುಸಾನ್ ನಲ್ಲಿ ನಡೆದ 11ನೇ ಆವೃತ್ತಿಯ ಪುರುಷರ ಏಷ್ಯನ್‌ ಕಬಡ್ಡಿ ಚಾಂಪಿಯನ್‌ಷಿಪ್‌ ಟೂರ್ನಿಯಲ್ಲಿ ಪೂರ್ಣ ಪ್ರಾಬಲ್ಯ ಮೆರೆದು ಭಾರತ ತಂಡ ಚಾಂಪಿಯನ್ಸ್ ಪಟ್ಟ ಅಲಂಕರಿಸಿದೆ. ಇಂದು ನಡೆದ ಫೈನಲ್‌ನಲ್ಲಿ ನಿರೀಕ್ಷಿತ ಪ್ರದರ್ಶನ ನೀಡಿದ ಸ್ಟಾರ್‌ ರೇಡರ್‌ ಪವನ್‌ ಕುಮಾರ್‌ ಸೆಹ್ರಾವತ್‌ ಸಾರಥ್ಯದ ಟೀಮ್ ಇಂಡಿಯಾ 42-32 ಅಂಕಗಳಿಂದ ಅಪಾಯಕಾರಿ ಹಾಗೂ ಬದ್ಧ ಎದುರಾಳಿ ಇರಾನ್‌ ತಂಡವನ್ನು ಬಗ್ಗು ಬಡಿದು ಟ್ರೋಫಿ ಮುಡಿಗೇರಿಸಿಕೊಂಡಿದೆ. ಟೂರ್ನಿಯ ಇತಿಹಾಸದಲ್ಲಿ ಅತಿ ಹೆಚ್ಚು ಬಾರಿ ಟ್ರೋಫಿ ಗೆದ್ದ ತಂಡವಾಗಿರುವ

ಏಷ್ಯನ್ ಕಬಡ್ಡಿ ಚಾಂಪಿಯನ್‌ ಶಿಪ್| ಇರಾನ್ ಮಣಿಸಿ ಎಂಟನೇ ಬಾರಿಗೆ ಪ್ರಶಸ್ತಿಗೆ ಮುತ್ತಿಕ್ಕಿದ ಭಾರತ Read More »

ಕ್ರಿಕೆಟಿಗ ಕೆ.ಎಲ್.ರಾಹುಲ್ ಧರ್ಮಸ್ಥಳ ಹಾಗೂ ಕುಕ್ಕೆಗೆ ಭೇಟಿ

ಸಮಗ್ರ ನ್ಯೂಸ್: ದಕ್ಷಿಣ ಭಾರತದ ಹೆಸರಾಂತ ಕ್ಷೇತ್ರಗಳಾದ ಧರ್ಮಸ್ಥಳ ಹಾಗೂ ಕುಕ್ಕೆ ಶ್ರೀ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಕ್ರಿಕೇಟಿಗ ಮಂಗಳೂರಿನ ಕೆ.ಎಲ್.ರಾಹುಲ್ ಇಂದು ಭೇಟಿ ನೀಡಿದರು. ಕೆ.ಎಲ್. ರಾಹುಲ್‌ ಅವರು ಧರ್ಮಸ್ಥಳ ಕ್ಷೇತ್ರಕ್ಕೆ ಭೇಟಿ ನೀಡಿ ಶ್ರೀ ಮಂಜುನಾಥ ಸ್ವಾಮಿ ದರ್ಶನ ಪಡೆದುಕೊಂಡರು. ಆ ಬಳಿಕ ಧರ್ಮಾಧಿಕಾರಿ ಡಾ.ಡಿ.ವಿರೇಂದ್ರ ಹೆಗ್ಗಡೆ ವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದರು. ಈ ವೇಳೆ ಹೆಗ್ಗಡೆ ಕುಟುಂಬದವರು ಜತೆಯಲ್ಲಿದ್ದರು.ಬಳಿಕ ಕುಕ್ಕೆ ಶ್ರೀ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಭೇಟಿ ನೀಡಿ ಶ್ರೀ ದೇವರ ದರುಶನ ಪಡೆದು

ಕ್ರಿಕೆಟಿಗ ಕೆ.ಎಲ್.ರಾಹುಲ್ ಧರ್ಮಸ್ಥಳ ಹಾಗೂ ಕುಕ್ಕೆಗೆ ಭೇಟಿ Read More »

ಐಪಿಎಲ್ -2023| ಐದನೇ ಬಾರಿ ಚಾಂಪಿಯನ್ ಪಟ್ಟ‌ ಮುಡಿಗೇರಿಸಿಕೊಂಡ ಚೆನ್ನೈ ಸೂಪರ್ ಕಿಂಗ್ಸ್

ಸಮಗ್ರ ನ್ಯೂಸ್: ಐಪಿಎಲ್-2023ರ ರೋಚಕ ಫೈನಲ್ ಹಣಾಹಣಿಯಲ್ಲಿ ಗುಜರಾತ್ ಟೈಟಾನ್ಸ್ ವಿರುದ್ಧ ಅಮೋಘ ಗೆಲುವು ಪಡೆಯುವ ಮೂಲಕ ಚೆನ್ನೈ ಸೂಪರ್ ಕಿಂಗ್ಸ್ ತಂಡ ಐದನೇ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದೆ. ಕ್ರಿಕೆಟ್ ಪ್ರೇಮಿಗಳನ್ನು ತುದಿಗಾಲಿನಲ್ಲಿ ನಿಲ್ಲಿಸಿದ ಫೈನಲ್ ಪಂದ್ಯದಲ್ಲಿ ಕೊನೆಯ ಎರಡು ಎಸೆತಗಳಲ್ಲಿ 10 ರನ್’ಗಳ ಅವಶ್ಯಕತೆ ಇದ್ದಾಗ ಸಿಕ್ಸರ್ ಮತ್ತು ಬೌಂಡರಿ ಸಿಡಿಸುವ ಮೂಲಕ ರವೀಂದ್ರ ಜಡೇಜಾ ಸಿಎಸ್’ಕೆ ತಂಡವನ್ನು ಗೆಲುವಿನ ಗುರಿ ಮುಟ್ಟಿಸಿದರು. ಮೊದಲು ಬ್ಯಾಟಿಂಗ್ ಮಾಡಿದ ಗುಜರಾತ್ ತಂಡ ನಿಗದಿತ 20 ಓವರ್’ಗಳಲ್ಲಿ

ಐಪಿಎಲ್ -2023| ಐದನೇ ಬಾರಿ ಚಾಂಪಿಯನ್ ಪಟ್ಟ‌ ಮುಡಿಗೇರಿಸಿಕೊಂಡ ಚೆನ್ನೈ ಸೂಪರ್ ಕಿಂಗ್ಸ್ Read More »

ಮಳೆ‌ ನಿಂತರೆ ಇಂದು (ಮೇ.30) ಐಪಿಎಲ್ ಫೈನಲ್|

ಸಮಗ್ರ ನ್ಯೂಸ್: 2023ರ ಐಪಿಎಲ್‌ ಟಿ20 ಕ್ರಿಕೆಟ್ ಟೂರ್ನಿಯ ಫೈನಲ್‌ ಪಂದ್ಯ ಭಾನುವಾರ ನಡೆಯಬೇಕಿದ್ದು ಪಂದ್ಯಕ್ಕೆ ಮಳೆ ಅಡ್ಡಿಪಡಿಸಿದ ಕಾರಣ ಪಂದ್ಯವನ್ನು ಇಂದು (ಮೇ.30) ನಡೆಯಲಿದೆ. ಸೋಮವಾರ ಅಹಮದಾಬಾದ್ ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಗುಜರಾತ್ ಟೈಟಾನ್ಸ್ ಮತ್ತು ಚೆನ್ನೈ ಸೂಪರ್ ಕಿಂಗ್ಸ್ ನಡುವೆ ಹಣಾಹಣಿ ನಡೆಯಲಿದ್ದು, ಈ ಬಾರಿಯ ಟ್ರೋಫಿ ಯಾರ ಮುಡಿಗೇರಲಿದೆ ಎನ್ನುವುದು ಗೊತ್ತಾಗಲಿದೆ. ಆದರೆ ಸೋಮವಾರವೂ ಮಳೆ‌ ಸುರಿಯುವ ಮುನ್ಸೂಚನೆ ಸಿಕ್ಕಿದ್ದು, ಪಂದ್ಯ ನಡೆಯುವ ಅನುಮಾನವೂ ಒಂದೆಡೆ ಕಾಡುತ್ತಿದೆ.

ಮಳೆ‌ ನಿಂತರೆ ಇಂದು (ಮೇ.30) ಐಪಿಎಲ್ ಫೈನಲ್| Read More »

ಪ್ಲೇಆಪ್ ನಲ್ಲೇ ಹೊರಗುಳಿದ ಆರ್ ಸಿಬಿ| ಈ ಸಲವೂ ಕಫ್ ನಮ್ದಲ್ಲ!!

ಸಮಗ್ರ ನ್ಯೂಸ್: 16ನೇ ಆವೃತ್ತಿಯ ಐಪಿಎಲ್ ನಲ್ಲಿ ಕಪ್ ಗೆಲ್ಲುವ ಆರ್‌ಸಿಬಿ ಕನಸು ಈಡೇರಿಲ್ಲ. ಗುಜರಾತ್ ಟೈಟಾನ್ಸ್ ವಿರುದ್ಧ ನಡೆದ ಮಾಡು ಇಲ್ಲವೇ ಮಡಿ ಪಂದ್ಯದಲ್ಲಿ ಆರ್‌ಸಿಬಿ ಆರು ವಿಕೆಟ್ ಗಳಿಂದ ಸೋತು ಪ್ಲೇ ಆಫ್ ಎಂಟ್ರಿಯಿಂದ ಹೊರಗುಳಿದಿದೆ. ಈ ಮೂಲಕ ಐಪಿಎಲ್ ನ ಈ ಆವೃತ್ತಿಯಲ್ಲೂ ಕಪ್ ವಂಚಿತವಾಗಿದೆ. ಆದರೆ ಆರ್.ಸಿ.ಬಿ. ಆಟಗಾರ ವಿರಾಟ್ ಕೊಹ್ಲಿ ಭರ್ಜರಿ ಶತಕ ಸಿಡಿಸಿದ್ದಾರೆ. 61 ಎಸೆತಗಳಲ್ಲಿ ಅಜೇಯ 101 ರನ್ ಗಳಿಸಿದ ವಿರಾಟ್ ಕೊಹ್ಲಿ ಐಪಿಎಲ್ ಇತಿಹಾಸದಲ್ಲಿ ಅತಿ

ಪ್ಲೇಆಪ್ ನಲ್ಲೇ ಹೊರಗುಳಿದ ಆರ್ ಸಿಬಿ| ಈ ಸಲವೂ ಕಫ್ ನಮ್ದಲ್ಲ!! Read More »

ಐಪಿಎಲ್ 2023 ನೆ ಪ್ಲೇ ಆಫ್ ಪ್ರವೇಶ ರಾಜಸ್ಥಾನ ರಾಯಲ್ಸ್ ತಂಡಕ್ಕೂ ಸಿಕ್ಕಿದೆ ಅವಕಾಶ

ಸಮಗ್ರ ನ್ಯೂಸ್: ಇಂಡಿಯನ್‌ ಪ್ರೀಮಿಯರ್‌ ಲೀಗ್‌ನಲ್ಲಿ ಈಗಾಗಲೇ ಎರಡು ತಂಡಗಳು ಎಂಟ್ರಿ ಕೊಟ್ಟಿದ್ದು. ಗುಜರಾತ್ ಟೈಟಾನ್ಸ್ ಮತ್ತು ಚೆನೈ ಉಳಿದಂತೆ ಎರಡು ಸ್ಥಾನಕ್ಕೆ ಮೂರು ತಂಡಗಳ ನಡುವೆ ಪೈಪೋಟಿ ಆರಂಭವಾಗಿದೆ . ಇನ್ನು ಪಂಜಾಬ್ ಕಿಂಗ್ಸ್ ವಿರುದ್ಧ 2023 ರ 66 ನೇ ಪಂದ್ಯದಲ್ಲಿ ನಾಲ್ಕು ವಿಕೆಟ್‌ಗಳ ಜಯದೊಂದಿಗೆ ರಾಜಸ್ಥಾನ್ ರಾಯಲ್ಸ್ ತಂಡ ಐಪಿಎಲ್‌ ಪ್ಲೇ ಆಫ್‌ ನಲ್ಲಿ ಉಳಿದುಕೊಂಡಿದೆ. ಇಂಡಿಯನ್‌ ಪ್ರೀಮಿಯರ್‌ ಲೀಗ್‌ನ ಲೀಗ್‌ ಹಂತದ ಪಂದ್ಯಗಳು ಕೊನೆ ಹಂತವನ್ನು ತಲುಪಿದ್ದು. ರಾಜಸ್ಥಾನ ರಾಯಲ್ಸ್‌ ತಂಡ

ಐಪಿಎಲ್ 2023 ನೆ ಪ್ಲೇ ಆಫ್ ಪ್ರವೇಶ ರಾಜಸ್ಥಾನ ರಾಯಲ್ಸ್ ತಂಡಕ್ಕೂ ಸಿಕ್ಕಿದೆ ಅವಕಾಶ Read More »

ಕೊನೆ ಓವರ್ ಗಳಲ್ಲಿ ಗೆಲುವಿನ ನಗೆಬೀರಿದ ಕೆಕೆಆರ್| ಮತ್ತೆ ಮಿಂಚಿದ ರಿಂಕುಸಿಂಗ್

ಸಮಗ್ರ ನ್ಯೂಸ್: ಈಡನ್‌ ಗಾರ್ಡನ್ಸ್‌ ಮೈದಾನದಲ್ಲಿ ಸೋಮವಾರ ನಡೆದ ಪಂದ್ಯದಲ್ಲಿ ಟಾಸ್‌ ಗೆದ್ದು ಮೊದಲು ಬ್ಯಾಟಿಂಗ್‌ ಮಾಡಿದ ಪಂಜಾಬ್‌ ಕಿಂಗ್ಸ್‌ ತಂಡ ನಾಯಕ ಶಿಖರ್‌ ಧವನ್‌ (57ರನ್‌, 47 ಎಸೆತ, 9 ಬೌಂಡರಿ, 1 ಸಿಕ್ಸರ್‌) ಹಾಗೂ ಇನ್ನಿಂಗ್ಸ್‌ನ ಕೊನೆಯಲ್ಲಿ ಶಾರುಖ್‌ ಖಾನ್‌ (21 ರನ್‌, 8 ಎಸೆತ, 3 ಬೌಂಡರಿ, 1 ಸಿಕ್ಸರ್‌) ನೆರವಿನಿಂದ 7 ವಿಕೆಟ್‌ಗೆ 179 ರನ್‌ ಪೇರಿಸಿತು. ವರುಣ್‌ ಚಕ್ರವರ್ತಿ ತಮ್ಮ 4 ಓವರ್‌ಗಳ ಕೋಟಾದಲ್ಲಿ 26 ರನ್‌ಗೆ 3 ವಿಕೆಟ್‌

ಕೊನೆ ಓವರ್ ಗಳಲ್ಲಿ ಗೆಲುವಿನ ನಗೆಬೀರಿದ ಕೆಕೆಆರ್| ಮತ್ತೆ ಮಿಂಚಿದ ರಿಂಕುಸಿಂಗ್ Read More »