ಕ್ರೀಡೆ

ಟಿ20 ವಿಶ್ವಕಪ್| ಪಾಕಿಸ್ತಾನವನ್ನು 1 ರನ್ ನಿಂದ ಮಣಿಸಿದ ಜಿಂಬಾಬ್ವೆ

ಸಮಗ್ರ ನ್ಯೂಸ್: ಆಸ್ಟ್ರೇಲಿಯಾದ ಪರ್ತ್ ಕ್ರೀಡಾಂಗಣದಲ್ಲಿ ಪಾಕಿಸ್ತಾನ ಮತ್ತು ಝಿಂಬಾಬ್ವೆ ತಂಡಗಳ ನಡುವಿನ ವಿಶ್ವಕಪ್‌ ಟಿ-ಟ್ವೆಂಟಿ ಸರಣಿಯ 24ನೇ ಪಂದ್ಯಾಟದಲ್ಲಿ ಝಿಂಬಾಬ್ವೆ ಒಂದು ರನ್‌ ಗಳ ರೋಚಕ ಜಯ ಸಾಧಿಸಿದೆ. ಝಿಂಬಾಬ್ವೆ ನೀಡಿದ್ದ 130 ರನ್‌ ಗಳ ಗುರಿಯನ್ನು ತಲುಪಲು ಸಾಧ್ಯವಾಗದೇ ಪಾಕಿಸ್ತಾನ ತಂಡವು 20 ಓವರ್‌ ಗಳಲ್ಲಿ 8 ವಿಕೆಟ್‌ ನಷ್ಟಕ್ಕೆ 129 ರನ್‌ ಗಳಿಸಿ ಪಂದ್ಯವನ್ನು ಕೈಚೆಲ್ಲಿತು. ಮೊದಲು ಬ್ಯಾಟಿಂಗ್‌ ಮಾಡಿದ್ದ ಝಿಂಬಾಬ್ವೆ ತಂಡದ ಪರ ಸೀನ್‌ ವಿಲಿಯಮ್ಸ್‌ 31 ರನ್‌ ಗಳಿಸಿದರು. ಬೌಲಿಂಗ್‌ […]

ಟಿ20 ವಿಶ್ವಕಪ್| ಪಾಕಿಸ್ತಾನವನ್ನು 1 ರನ್ ನಿಂದ ಮಣಿಸಿದ ಜಿಂಬಾಬ್ವೆ Read More »

ಬಿಸಿಸಿಐ ನಿಂದ ಸಮಾನ ವೇತನ| ಪುರುಷ, ಮಹಿಳಾ ಕ್ರಿಕೆಟರ್ ಗಳಿಗೆ ಏಕರೂಪ ವೇತನ ಘೋಷಣೆ

ಸಮಗ್ರ ನ್ಯೂಸ್: ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಪುರುಷ ಮತ್ತು ಮಹಿಳಾ ಕ್ರಿಕೆಟಿಗರಿಗೆ ಸಮಾನ ವೇತನವನ್ನು ಘೋಷಿಸಿದ್ದಾರೆ. ವೇತನ ತಾರತಮ್ಯವನ್ನು ಎದುರಿಸಲು BCCI ಯ ಮೊದಲ ಹೆಜ್ಜೆಯನ್ನು ಘೋಷಿಸಲು ನನಗೆ ಸಂತೋಷವಾಗಿದೆ. ನಾವು ನಮ್ಮ ಒಪ್ಪಂದದ ಮಹಿಳಾ ಕ್ರಿಕೆಟಿಗರಿಗೆ ವೇತನ ಇಕ್ವಿಟಿ ನೀತಿಯನ್ನು ಜಾರಿಗೆ ತರುತ್ತಿದ್ದೇವೆ. ನಾವು ಕ್ರಿಕೆಟ್‌ನಲ್ಲಿ ಲಿಂಗ ಸಮಾನತೆಯ ಹೊಸ ಯುಗಕ್ಕೆ ಸಾಗುತ್ತಿರುವಾಗ ಪುರುಷ ಮತ್ತು ಮಹಿಳಾ ಕ್ರಿಕೆಟಿಗರಿಗೆ ಪಂದ್ಯ ಶುಲ್ಕ ಒಂದೇ ಆಗಿರುತ್ತದೆ. ಎಂದು ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಟ್ವೀಟ್ ಮಾಡಿದ್ದಾರೆ.

ಬಿಸಿಸಿಐ ನಿಂದ ಸಮಾನ ವೇತನ| ಪುರುಷ, ಮಹಿಳಾ ಕ್ರಿಕೆಟರ್ ಗಳಿಗೆ ಏಕರೂಪ ವೇತನ ಘೋಷಣೆ Read More »

ಟಿ20 ವಿಶ್ವಕಪ್| ಭಾರತಕ್ಕೆ ರೋಚಕ ಜಯ

ಸಮಗ್ರ ನ್ಯೂಸ್: ಟಿ20 ಕ್ರಿಕೆಟ್ ವಿಶ್ವಕಪ್ ಟೂರ್ನಿಯ ಸೂಪರ್‌ 12ರ ಹಂತದ ಪಂದ್ಯದಲ್ಲಿ ಪಾಕಿಸ್ತಾನ ವಿರುದ್ಧ ಅಮೋಘ ಬ್ಯಾಟಿಂಗ್ ಪ್ರದರ್ಶನ ತೋರಿದ ವಿರಾಟ್ ಕೊಹ್ಲಿ ಭಾರತಕ್ಕೆ 4 ವಿಕೆಟ್ ಅಂತರದ ಗೆಲುವು ತಂದುಕೊಟ್ಟರು. ಪಾಕಿಸ್ತಾನ ನೀಡಿದ 160ರನ್​ಗಳ ಗುರಿ ಬೆನ್ನು ಹತ್ತಿದ ಭಾರತ ತಂಡ ಆರಂಭಿಕ ಆಘಾತ ಅನುಭವಿಸಿತು. ಉಪ ನಾಯಕ ಕೆ.ಎಲ್ ರಾಹುಲ್ ಹಾಗೂ ನಾಯಕ ರೋಹಿತ್​ ಶರ್ಮ 4 ರನ್ ಸಿಡಿಸಿ ವಿಕೆಟ್ ಒಪ್ಪಿಸಿದರು. ಈ ವೇಳೆ ವಿರಾಟ್ ಕೊಹ್ಲಿ ಜೊತೆಯಾದ ಸೂರ್ಯ ಕುಮಾರ್

ಟಿ20 ವಿಶ್ವಕಪ್| ಭಾರತಕ್ಕೆ ರೋಚಕ ಜಯ Read More »

ಪ್ರೋ ಕಬಡ್ಡಿ‌ ಕೋರ್ಟ್ ನಲ್ಲಿ ‘ಕಾಂತಾರ’ ಟೀಂ| ರಾಷ್ಟ್ರಗೀತೆಗೆ ಧ್ವನಿಯಾದ ರಿಷಬ್ ಶೆಟ್ಟಿ

ಸಮಗ್ರ ನ್ಯೂಸ್: ಕನ್ನಡದಲ್ಲಿ ಬಿಡುಗಡೆಗೊಂಡ ಬಳಿಕ, ದೇಶದ ಇತರ ಭಾಷೆಗಳಿಗೆ ಡಬ್‌ ಆಗಿ ಅಬ್ಬರಿಸುತ್ತಿರುವ “ಕಾಂತಾರ” ಚಿತ್ರ ಬಹುದೊಡ್ಡ ಯಶಸ್ಸು ಸಂಪಾದಿಸಿದೆ. ಅದರ ನಡುವೆ ಭಾನುವಾರ ಚಿತ್ರದ ನಾಯಕ ಹಾಗೂ ನಿರ್ದೇಶಕ ರಿಷಬ್‌ ಶೆಟ್ಟಿ ಕಂಠೀರವ ಸ್ಟೇಡಿಯಂಗೆ ಆಗಮಿಸಿದ್ದರು. ದೇಶೀಯ ಮಣ್ಣಿನ ಸೊಗಡಿನ ಇನ್ನೊಂದು ಕ್ರೀಡೆ ಕಬಡ್ಡಿಯ ಭಾನುವಾರದ ಪಂದ್ಯಗಳಿಗೆ ಚಾಲನೆ ನೀಡಲು ಬಂದಿದ್ದರು. ಕಂಬಳ ಕ್ರೀಡೆ ಹಾಗೂ ಕರಾವಳಿ ಸಂಸ್ಕೃತಿಯನ್ನು ದೇಶ ಮಟ್ಟದಲ್ಲಿ ಪಸರಿಸಲು ಕಾಂತಾರ ಒಂದು ರೀತಿಯಲ್ಲಿ ಕಾರಣವಾಗಿದ್ದರೆ, ಸ್ಥಳೀಯವಾಗಿಯೇ ಉಳಿದುಕೊಂಡಿದ್ದ ಕಬಡ್ಡಿಗೆ ಬೂಸ್ಟ್‌ನೀಡಿದ್ದು

ಪ್ರೋ ಕಬಡ್ಡಿ‌ ಕೋರ್ಟ್ ನಲ್ಲಿ ‘ಕಾಂತಾರ’ ಟೀಂ| ರಾಷ್ಟ್ರಗೀತೆಗೆ ಧ್ವನಿಯಾದ ರಿಷಬ್ ಶೆಟ್ಟಿ Read More »

ಮಹಿಳಾ ಏಷ್ಯಾಕಪ್ ಕ್ರಿಕೆಟ್| 7ನೇ ಬಾರಿ ಪ್ರಶಸ್ತಿ ಮುಡಿಗೇರಿಸಿಕೊಂಡ ಭಾರತ

ಸಮಗ್ರ ನ್ಯೂಸ್: ಭಾರೀ ಕುತೂಹಲಕ್ಕೆ ಕಾರಣವಾಗಿದ್ದ ವನಿತಾ ಏಷ್ಯಾ ಕಪ್ ಕೂಟದ ಫೈನಲ್ ಪಂದ್ಯದಲ್ಲಿ ಭಾರತದ ಆರ್ಭಟದ ಎದುರು ಮಂಕಾದ ಶ್ರೀಲಂಕಾ ಸೋಲನುಭವಿಸಿದೆ. ಬಾಂಗ್ಲಾದೇಶದ ಸಿಲ್ಹೆಟ್ ನಲ್ಲಿ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಲಂಕಾ 20 ಓವರ್ ಗಳಲ್ಲಿ 9 ವಿಕೆಟ್ ನಷ್ಟಕ್ಕೆ 65 ರನ್ ಮಾಡಿದರೆ, ಭಾರತ ತಂಡವು 8.3 ಓವರ್ ಗಳಲ್ಲಿ ಎರಡು ವಿಕೆಟ್ ಕಳೆದುಕೊಂಡು ಗುರಿ ತಲುಪಿತು. ಟಾಸ್ ಗೆದ್ದ ಶ್ರೀಲಂಕಾ ನಾಯಕಿ ಚಾಮರಿ ಅತ್ತಪಟ್ಟು ಮೊದಲು ಬ್ಯಾಟಿಂಗ್ ಮಾಡಲು ನಿರ್ಧರಿಸಿದರು.

ಮಹಿಳಾ ಏಷ್ಯಾಕಪ್ ಕ್ರಿಕೆಟ್| 7ನೇ ಬಾರಿ ಪ್ರಶಸ್ತಿ ಮುಡಿಗೇರಿಸಿಕೊಂಡ ಭಾರತ Read More »

ಕಬಡ್ಡಿ ಟೂರ್ನಿಯಲ್ಲಿ ಹೊಸ ಇತಿಹಾಸ ನಿರ್ಮಿಸಿದ ವನ್ಷಿಕಾ

ಸಮಗ್ರ ನ್ಯೂಸ್: ಪ್ರೊ ಕಬಡ್ಡಿ ಲೀಗ್ ಪಂದ್ಯಗಳ ಆರಂಭಕ್ಕೆ ಮುನ್ನ ರಾಷ್ಟ್ರಗೀತೆ ಹಾಡುವ ಸಂಪ್ರದಾಯ ಮುಂದುವರಿಸಲಾಯಿತು. ಕನ್ನಡ ರಿಯಾಲಿಟಿ ಶೋಗಳ ಮೂಲಕ ಜನಪ್ರಿಯತೆ ಗಳಿಸಿರುವ ಪುಟಾಣಿ ವಂಶಿಕಾ ಅಂಜನಿ ಕಶ್ಯಪ ಟೂರ್ನಿಯ ಮೊದಲ ದಿನ ರಾಷ್ಟ್ರಗೀತೆ ಹಾಡಿದರು. ನಟ ಮಾಸ್ಟರ್ ಆನಂದ್ ಪುತ್ರಿಯಾಗಿರುವ 5 ವರ್ಷದ ವಂಶಿಕಾ, ಟೂರ್ನಿ ಇತಿಹಾಸದಲ್ಲಿ ಈ ಗೌರವ ಪಡೆದ ಅತ್ಯಂತ ಕಿರಿಯರೆನಿಸಿದರು. ಹೊಸತನದಿಂದ ಕೂಡಿದ ಬೆಂಗಳೂರು ಬುಲ್ಸ್ ತಂಡ 9ನೇ ಆವೃತ್ತಿಯ ಪ್ರೊ ಕಬಡ್ಡಿ ಲೀಗ್​ನಲ್ಲಿ ಶುಭಾರಂಭ ಕಾಣುವಲ್ಲಿ ಯಶಸ್ವಿಯಾಗಿದೆ. ಉದ್ಯಾನನಗರಿಯ

ಕಬಡ್ಡಿ ಟೂರ್ನಿಯಲ್ಲಿ ಹೊಸ ಇತಿಹಾಸ ನಿರ್ಮಿಸಿದ ವನ್ಷಿಕಾ Read More »

ಇಂಡೋನೇಷ್ಯಾದಲ್ಲಿ ಪುಟ್ಬಾಲ್ ಪಂದ್ಯಾಟದ ವೇಳೆ ಹಿಂಸಾಚಾರ| ಇಬ್ಬರು ಪೊಲೀಸರು ಸೇರಿ ಕನಿಷ್ಠ 127 ಮಂದಿ ಸಾವು

ಸಮಗ್ರ ನ್ಯೂಸ್: ಇಂಡೋನೇಷ್ಯಾದ ಜಕಾರ್ತದಲ್ಲಿ ಶನಿವಾರ ತಡರಾತ್ರಿ ಫುಟ್‌ಬಾಲ್ ಪಂದ್ಯದ ವೇಳೆ ನಡೆದ ಹಿಂಸಾಚಾರದಿಂದ ಕನಿಷ್ಠ 127 ಮಂದಿ ಸಾವಿಗೀಡಾಗಿದ್ದಾರೆ. ಪೂರ್ವ ಜಾವದ ಮಲಂಗ್‌ನಲ್ಲಿ ನಡೆದ ಪಂದ್ಯದಲ್ಲಿ ಎದುರಾಳಿ ತಂಡ ಗೆಲುವು ಸಾಧಿಸಿದ್ದರಿಂದ ರೊಚ್ಚಿಗೆದ್ದ ಅಭಿಮಾನಿಗಳು ಮೈದಾನಕ್ಕೆ ಇಳಿದು ದಾಂಧಲೆ ನಡೆಸಿದ್ದಾರೆ. ಈ ಸಂದರ್ಭದಲ್ಲಿ ಹಿಂಸಾಚಾರ ಸಂಭವಿಸಿ, ಇಬ್ಬರು ಪೊಲೀಸರ ಸಹಿತ ಕನಿಷ್ಠ 127 ಮಂದಿ ಮೃತಪಟ್ಟಿರುವುದು ದೃಢಪಟ್ಟಿದೆ. ಇಂಡೋನೇಷ್ಯಾದ ಪ್ರಮುಖ ಲೀಗ್ ಬಿಆರ್‌ಐ ಲಿಗಾ 1ರ ಅರೆಮಾ ಎಫ್‌ಸಿ ಮತ್ತು ಪರ್ಸಬೆಯ ಸುರಬಯ ತಂಡದ ನಡುವೆ

ಇಂಡೋನೇಷ್ಯಾದಲ್ಲಿ ಪುಟ್ಬಾಲ್ ಪಂದ್ಯಾಟದ ವೇಳೆ ಹಿಂಸಾಚಾರ| ಇಬ್ಬರು ಪೊಲೀಸರು ಸೇರಿ ಕನಿಷ್ಠ 127 ಮಂದಿ ಸಾವು Read More »

ಇಂಡೋ – ಆಸಿಸ್ ಏಕದಿನ ಸರಣಿ ಭಾರತದ ಕೈವಶ

ಸಮಗ್ರ ನ್ಯೂಸ್: ಹೈದರಾಬಾದ್ ನಲ್ಲಿ ನಡೆದ ಮೂರನೇ ಹಾಗೂ ಅಂತಿಮ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ಆಸ್ಟ್ರೇಲಿಯಾ 20 ಓವರ್ ಗಳಲ್ಲಿ 7 ವಿಕೆಟ್ ಗೆ 186 ರನ್ ಗಳಿಸಿತು. ಕಠಿಣ ಗುರಿ ಬೆಂಬತ್ತಿದ ಭಾರತ ತಂಡ 1 ಎಸೆತ ಬಾಕಿ ಇರುವಂತೆಯೇ 4 ವಿಕೆಟ್ ಕಳೆದುಕೊಂಡು ಜಯಭೇರಿ ಬಾರಿಸಿತು. ಕಠಿಣ ಗುರಿ ಬೆಂಬತ್ತಿದ ಭಾರತ ಬೇಗನೇ ನಾಯಕ ರೋಹಿತ್ ಶರ್ಮ (17) ಮತ್ತು ಉಪನಾಯಕ ಕೆಎಲ್ ರಾಹುಲ್ (1) ಬೇಗನೇ ನಿರ್ಗಮಿಸಿದರು. ಕೊನೆಯಲ್ಲಿ

ಇಂಡೋ – ಆಸಿಸ್ ಏಕದಿನ ಸರಣಿ ಭಾರತದ ಕೈವಶ Read More »

ಇದಪ್ಪಾ ಆಟ ಅಂದ್ರೆ| ಬ್ಯಾಟಿಂಗ್ ನಲ್ಲಿ ಪಂಟರ್, ಬೌಲಿಂಗ್ ನಲ್ಲಿ ಉಡೀಸ್| ಸಿಪಿಎಲ್ ಲೀಗ್ ನಲ್ಲಿ ಒಡಿಯನ್ ಸ್ಮಿತ್ ಅಬ್ಬರಕ್ಕೆ ಮೈದಾನದಲ್ಲಿ ಬಿರುಗಾಳಿ

ಸಮಗ್ರ ನ್ಯೂಸ್: ವೆಸ್ಟ್ ಇಂಡೀಸ್​ನಲ್ಲಿ ನಡೆಯುತ್ತಿರುವ ಕೆರಿಬಿಯರ್ ಪ್ರೀಮಿಯರ್ ಲೀಗ್​ನಲ್ಲಿ ಒಡಿಯನ್ ಸ್ಮಿತ್ ಅಕ್ಷರಶಃ ಅಬ್ಬರಿಸಿದ್ದಾರೆ. ಸಿಪಿಎಲ್​ನ 25ನೇ ಪಂದ್ಯದಲ್ಲಿ ಗಯಾನಾ ಅಮೆಜಾನ್ ವಾರಿಯರ್ಸ್ ಹಾಗೂ ಜಮೈಕಾ ತಲ್ಲವಾಸ್ ತಂಡಗಳು ಮುಖಾಮುಖಿಯಾಗಿತ್ತು. ಈ ಪಂದ್ಯದಲ್ಲಿ ಟಾಸ್ ಗೆದ್ದ ಜಮೈಕಾ ನಾಯಕ ರೋವ್ಮನ್ ಪೊವೆಲ್ ಬೌಲಿಂಗ್ ಆಯ್ದುಕೊಂಡರು. ನಾಯಕನ ನಿರ್ಧಾರವನ್ನು ಸಮರ್ಥಿಸುವಂತೆ ದಾಳಿ ಸಂಘಟಿಸಿದ ಜಮೈಕಾ ಬೌಲರ್​ಗಳು 15 ಓವರ್​ನಲ್ಲಿ ನೀಡಿದ್ದು ಕೇವಲ 97 ರನ್​ಗಳು ಮಾತ್ರ. ಅಷ್ಟೇ ಅಲ್ಲದೆ ಗಯಾನಾ ಅಮೆಜಾನ್ ವಾರಿಯರ್ಸ್ ತಂಡದ 6 ಪ್ರಮುಖ

ಇದಪ್ಪಾ ಆಟ ಅಂದ್ರೆ| ಬ್ಯಾಟಿಂಗ್ ನಲ್ಲಿ ಪಂಟರ್, ಬೌಲಿಂಗ್ ನಲ್ಲಿ ಉಡೀಸ್| ಸಿಪಿಎಲ್ ಲೀಗ್ ನಲ್ಲಿ ಒಡಿಯನ್ ಸ್ಮಿತ್ ಅಬ್ಬರಕ್ಕೆ ಮೈದಾನದಲ್ಲಿ ಬಿರುಗಾಳಿ Read More »

ಗೋವಾದಲ್ಲಿ ಮಾಜಿ ಕ್ರಿಕೆಟಿಗ ಯುವರಾಜ್ ಸಿಂಗ್ ಮನೆ ಬಾಡಿಗೆಗಿದೆ/ಸೌಲಭ್ಯಗಳು ಏನಿದೆ?

ಬೆಂಗಳೂರು : ಭಾರತದ ಮಾಜಿ ಕ್ರಿಕೆಟಿಗ ಯುವರಾಜ್ ಸಿಂಗ್ ತಮ್ಮ ಅಭಿಮಾನಿಗಳಿಗೆ ಸಿಹಿ ಸುದ್ದಿಯೊಂದನ್ನು ಘೋಷಿಸಿದ್ದಾರೆ. ಗೋವಾದಲ್ಲಿರುವ ತಮ್ಮ ಐಷಾರಾಮಿ ಮನೆಯನ್ನು ಯುವಿ ಬಾಡಿಗೆ ನೀಡುವುದಾಗಿ ತಿಳಿದ್ದಾರೆ. ಅದ್ಭುತ ಈಜುಕೊಳ ಮತ್ತು ಸುಂದರವಾದ ನೋಟದೊಂದಿಗೆ ದೊಡ್ಡ ಟೆರೇಸ್‌ನಂತಹ ಅನೇಕ ಸೌಲಭ್ಯಗಳನ್ನು ಈ ಮನೆ ಹೊಂದಿದೆ. ಈ ಕುರಿತು ಯುವರಾಜ್‌ ಸಿಂಗ್‌ ತಮ್ಮ ಟ್ಟಿಟರ್‌ ಖಾತೆಯಲ್ಲಿ ಮಾಹಿತಿಯನ್ನು ಹಂಚಿಕೊಂಡಿದ್ದಾರೆ. ಮನೆಯ ಫೋಟೋಸ್‌ ಹಾಗೂ ಮಾಹಿತಿಯನ್ನು ಪೋಸ್ಟ್ ಮಾಡಿ ಮನೆ ಬಾಡಿಗೆಗೆ ಇದೆ ಎಂದು ಹೇಳಿದ್ದಾರೆ. Airbnb ನಲ್ಲಿ ನನ್ನ

ಗೋವಾದಲ್ಲಿ ಮಾಜಿ ಕ್ರಿಕೆಟಿಗ ಯುವರಾಜ್ ಸಿಂಗ್ ಮನೆ ಬಾಡಿಗೆಗಿದೆ/ಸೌಲಭ್ಯಗಳು ಏನಿದೆ? Read More »