ಕ್ರೀಡೆ

ಸುಳ್ಯ: ಶಾಂತಿನಗರ ಕ್ರೀಡಾಂಗಣದಲ್ಲಿ ಭಾರಿ ಗಾತ್ರದ ಬಿರುಕು|ಸ್ಥಳೀಯರಲ್ಲಿ ಆತಂಕ

ಸಮಗ್ರ ನ್ಯೂಸ್: ಸುಳ್ಯ ಶಾಂತಿನಗರ ಕ್ರೀಡಾಂಗಣದಲ್ಲಿ ಒಂದು ಭಾಗದಲ್ಲಿ ಭಾರಿ ಗಾತ್ರದ ಬಿರುಕುಗಳು ಉಂಟಾಗಿದ್ದು ಸ್ಥಳೀಯರಲ್ಲಿ ಆತಂಕ ಹೆಚ್ಚಾಗಿದೆ. ಕಳೆದ ನಾಲ್ಕು, ಐದು ತಿಂಗಳ ಮೊದಲು ಶಾಂತಿನಗರ ಕ್ರೀಡಾಂಗಣದ ಅಭಿವೃದ್ಧಿ ಕಾರ್ಯ ಆರಂಭಗೊಳಿಸಲಾಗಿದ್ದು,ಆ ಸಂದರ್ಭದಲ್ಲಿ ಕ್ರೀಡಾಂಗಣದ ಒಂದು ಭಾಗದಲ್ಲಿ ಭಾರಿ ಎತ್ತರಕ್ಕೆ ಮಣ್ಣುಗಳನ್ನು ಹಾಕಿ ಕ್ರೀಡಾಂಗಣವನ್ನು ವಿಶಾಲ ಗೊಳಿಸಲಾಗಿತ್ತು. ಆ ಸಂದರ್ಭದಲ್ಲಿ ಈ ಭಾಗದಲ್ಲಿ ಹಾಕಿರುವ ಮಣ್ಣುಗಳು ಕುಸಿದು ಕೆಳಭಾಗದಲ್ಲಿ ಇರುವ ಮನೆಗಳಿಗೆ ಹಾನಿಯಾಗುವ ಆತಂಕವನ್ನು ಸೂಚಿಸಿದ ಸ್ಥಳೀಯರು, ಕೆಳಬಾಗದಲ್ಲಿ ತಡೆಗೋಡೆಯನ್ನು ನಿರ್ಮಿಸುವಂತೆ ಆಗ್ರಹವನ್ನು ವ್ಯಕ್ತಪಡಿಸಿದ್ದರು. ಇದರ […]

ಸುಳ್ಯ: ಶಾಂತಿನಗರ ಕ್ರೀಡಾಂಗಣದಲ್ಲಿ ಭಾರಿ ಗಾತ್ರದ ಬಿರುಕು|ಸ್ಥಳೀಯರಲ್ಲಿ ಆತಂಕ Read More »

ಪಾಕಿಸ್ತಾನಕ್ಕಿಂದು ಮಾಡು ಇಲ್ಲವೇ ಮಡಿ ಪಂದ್ಯ| ಬಾಂಗ್ಲಾವನ್ನು ಅಡಿಲೇಡ್ ನಲ್ಲಿ ಪುಡಿಗಟ್ಟಿದ ಭಾರತ| ಟ 20 ಹೈಲೈಟ್ಸ್ ಇಲ್ಲಿದೆ…

ಸಮಗ್ರ ನ್ಯೂಸ್: ಟಿ20 ವಿಶ್ವಕಪ್ ರೋಚಕ ಘಟ್ಟವನ್ನು ತಲುಪಿದ್ದು ಗುರುವಾರ ನಡೆಯಲಿರುವ ಪಾಕಿಸ್ತಾನ ಹಾಗೂ ದಕ್ಷಿಣ ಆಫ್ರಿಕಾ ವಿರುದ್ಧದ ಕದನ ಸಾಕಷ್ಟು ಕುತೂಹಲ ಮೂಡಿಸಿದೆ. ಸೆಮಿಫೈನಲ್‌ಗೇರುವ ಸ್ಪರ್ಧೆಯಲ್ಲಿ ಪಾಕಿಸ್ತಾನ ತಂಡ ಉಳಿದುಕೊಳ್ಳಬೇಕಾದರೆ ದಕ್ಷಿಣ ಆಫ್ರಿಕಾ ವಿರುದ್ಧದ ಪಂದ್ಯದಲ್ಲಿ ಗೆಲುವು ಸಾಧಿಸಲೇಬೇಕಾಗಿದೆ. ಸಾಕಷ್ಟು ಉತ್ತಮ ಅಂತರದೊಂದಿಗೆ ಗೆಲುವು ಸಾಧಿಸುವುದು ಪಾಕ್ ಪಾಲಿಗೆ ಅನಿವಾರ್ಯವಾಗಿದೆ. ದಕ್ಷಿಣ ಆಫ್ರಿಕಾ ತಂಡ ಈ ಬಾರಿಯ ವಿಶ್ವಕಪ್‌ನಲ್ಲಿ ಸೋಲು ಅನುಭವಿಸದೆ ಅಜೇಯವಾಗಿರುವ ಏಕೈಕ ತಂಡವಾಗಿದೆ. ಸೂಪರ್ 12 ಹಂತದಲ್ಲಿ ಈಗಾಗಲೇ ದಕ್ಷಿಣ ಆಫ್ರಿಕಾ ತಂಡದ

ಪಾಕಿಸ್ತಾನಕ್ಕಿಂದು ಮಾಡು ಇಲ್ಲವೇ ಮಡಿ ಪಂದ್ಯ| ಬಾಂಗ್ಲಾವನ್ನು ಅಡಿಲೇಡ್ ನಲ್ಲಿ ಪುಡಿಗಟ್ಟಿದ ಭಾರತ| ಟ 20 ಹೈಲೈಟ್ಸ್ ಇಲ್ಲಿದೆ… Read More »

ಪ್ರೆಂಚ್ ಓಪನ್ ಡಬಲ್ಸ್ | ಪ್ರಶಸ್ತಿ ಮುಡಿಗೇರಿಸಿಕೊಂಡ ಭಾರತೀಯ ಜೋಡಿ

ಸಮಗ್ರ ನ್ಯೂಸ್: ಫ್ರೆಂಚ್ ಓಪನ್ ಸೂಪರ್ ಪುರುಷರ ಡಬಲ್ಸ್ ವಿಭಾಗದ ಫೈನಲ್‌ನಲ್ಲಿ ಭಾರತದ ಸ್ಟಾರ್ ಜೋಡಿ ಸಾತ್ವಿಕ್‌ಸಾಯಿರಾಜ್ ರಾಂಕಿರೆಡ್ಡಿ ಮತ್ತು ಚಿರಾಗ್ ಶೆಟ್ಟಿ ಅವರು ಚೈನೀಸ್ ತೈಪೆಯ ಲು ಚಿಂಗ್ ಯಾವೊ ಮತ್ತು ಯಾಂಗ್ ಪೊ ಹಾನ್ ವಿರುದ್ಧ ನೇರ ಗೇಮ್‌ಗಳ ಜಯದೊಂದಿಗೆ ಫ್ರೆಂಚ್ ಓಪನ್ ಸೂಪರ್ 750 ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡರು. 48 ನಿಮಿಷಗಳ ಕಾಲ ನಡೆದ ಫೈನಲ್‌ನಲ್ಲಿ ವಿಶ್ವದ ಎಂಟನೇ ಶ್ರೇಯಾಂಕದ ಜೋಡಿ 25ನೇ ಶ್ರೇಯಾಂಕದ ಲು ಮತ್ತು ಯಾಂಗ್‌ರನ್ನು 21-13, 21-19 ಅಂತರದಿಂದ ಮಣಿಸಿದರು.

ಪ್ರೆಂಚ್ ಓಪನ್ ಡಬಲ್ಸ್ | ಪ್ರಶಸ್ತಿ ಮುಡಿಗೇರಿಸಿಕೊಂಡ ಭಾರತೀಯ ಜೋಡಿ Read More »

ಟಿ20 ವಿಶ್ವಕಪ್| ಪಾಕಿಸ್ತಾನವನ್ನು 1 ರನ್ ನಿಂದ ಮಣಿಸಿದ ಜಿಂಬಾಬ್ವೆ

ಸಮಗ್ರ ನ್ಯೂಸ್: ಆಸ್ಟ್ರೇಲಿಯಾದ ಪರ್ತ್ ಕ್ರೀಡಾಂಗಣದಲ್ಲಿ ಪಾಕಿಸ್ತಾನ ಮತ್ತು ಝಿಂಬಾಬ್ವೆ ತಂಡಗಳ ನಡುವಿನ ವಿಶ್ವಕಪ್‌ ಟಿ-ಟ್ವೆಂಟಿ ಸರಣಿಯ 24ನೇ ಪಂದ್ಯಾಟದಲ್ಲಿ ಝಿಂಬಾಬ್ವೆ ಒಂದು ರನ್‌ ಗಳ ರೋಚಕ ಜಯ ಸಾಧಿಸಿದೆ. ಝಿಂಬಾಬ್ವೆ ನೀಡಿದ್ದ 130 ರನ್‌ ಗಳ ಗುರಿಯನ್ನು ತಲುಪಲು ಸಾಧ್ಯವಾಗದೇ ಪಾಕಿಸ್ತಾನ ತಂಡವು 20 ಓವರ್‌ ಗಳಲ್ಲಿ 8 ವಿಕೆಟ್‌ ನಷ್ಟಕ್ಕೆ 129 ರನ್‌ ಗಳಿಸಿ ಪಂದ್ಯವನ್ನು ಕೈಚೆಲ್ಲಿತು. ಮೊದಲು ಬ್ಯಾಟಿಂಗ್‌ ಮಾಡಿದ್ದ ಝಿಂಬಾಬ್ವೆ ತಂಡದ ಪರ ಸೀನ್‌ ವಿಲಿಯಮ್ಸ್‌ 31 ರನ್‌ ಗಳಿಸಿದರು. ಬೌಲಿಂಗ್‌

ಟಿ20 ವಿಶ್ವಕಪ್| ಪಾಕಿಸ್ತಾನವನ್ನು 1 ರನ್ ನಿಂದ ಮಣಿಸಿದ ಜಿಂಬಾಬ್ವೆ Read More »

ಬಿಸಿಸಿಐ ನಿಂದ ಸಮಾನ ವೇತನ| ಪುರುಷ, ಮಹಿಳಾ ಕ್ರಿಕೆಟರ್ ಗಳಿಗೆ ಏಕರೂಪ ವೇತನ ಘೋಷಣೆ

ಸಮಗ್ರ ನ್ಯೂಸ್: ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಪುರುಷ ಮತ್ತು ಮಹಿಳಾ ಕ್ರಿಕೆಟಿಗರಿಗೆ ಸಮಾನ ವೇತನವನ್ನು ಘೋಷಿಸಿದ್ದಾರೆ. ವೇತನ ತಾರತಮ್ಯವನ್ನು ಎದುರಿಸಲು BCCI ಯ ಮೊದಲ ಹೆಜ್ಜೆಯನ್ನು ಘೋಷಿಸಲು ನನಗೆ ಸಂತೋಷವಾಗಿದೆ. ನಾವು ನಮ್ಮ ಒಪ್ಪಂದದ ಮಹಿಳಾ ಕ್ರಿಕೆಟಿಗರಿಗೆ ವೇತನ ಇಕ್ವಿಟಿ ನೀತಿಯನ್ನು ಜಾರಿಗೆ ತರುತ್ತಿದ್ದೇವೆ. ನಾವು ಕ್ರಿಕೆಟ್‌ನಲ್ಲಿ ಲಿಂಗ ಸಮಾನತೆಯ ಹೊಸ ಯುಗಕ್ಕೆ ಸಾಗುತ್ತಿರುವಾಗ ಪುರುಷ ಮತ್ತು ಮಹಿಳಾ ಕ್ರಿಕೆಟಿಗರಿಗೆ ಪಂದ್ಯ ಶುಲ್ಕ ಒಂದೇ ಆಗಿರುತ್ತದೆ. ಎಂದು ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಟ್ವೀಟ್ ಮಾಡಿದ್ದಾರೆ.

ಬಿಸಿಸಿಐ ನಿಂದ ಸಮಾನ ವೇತನ| ಪುರುಷ, ಮಹಿಳಾ ಕ್ರಿಕೆಟರ್ ಗಳಿಗೆ ಏಕರೂಪ ವೇತನ ಘೋಷಣೆ Read More »

ಟಿ20 ವಿಶ್ವಕಪ್| ಭಾರತಕ್ಕೆ ರೋಚಕ ಜಯ

ಸಮಗ್ರ ನ್ಯೂಸ್: ಟಿ20 ಕ್ರಿಕೆಟ್ ವಿಶ್ವಕಪ್ ಟೂರ್ನಿಯ ಸೂಪರ್‌ 12ರ ಹಂತದ ಪಂದ್ಯದಲ್ಲಿ ಪಾಕಿಸ್ತಾನ ವಿರುದ್ಧ ಅಮೋಘ ಬ್ಯಾಟಿಂಗ್ ಪ್ರದರ್ಶನ ತೋರಿದ ವಿರಾಟ್ ಕೊಹ್ಲಿ ಭಾರತಕ್ಕೆ 4 ವಿಕೆಟ್ ಅಂತರದ ಗೆಲುವು ತಂದುಕೊಟ್ಟರು. ಪಾಕಿಸ್ತಾನ ನೀಡಿದ 160ರನ್​ಗಳ ಗುರಿ ಬೆನ್ನು ಹತ್ತಿದ ಭಾರತ ತಂಡ ಆರಂಭಿಕ ಆಘಾತ ಅನುಭವಿಸಿತು. ಉಪ ನಾಯಕ ಕೆ.ಎಲ್ ರಾಹುಲ್ ಹಾಗೂ ನಾಯಕ ರೋಹಿತ್​ ಶರ್ಮ 4 ರನ್ ಸಿಡಿಸಿ ವಿಕೆಟ್ ಒಪ್ಪಿಸಿದರು. ಈ ವೇಳೆ ವಿರಾಟ್ ಕೊಹ್ಲಿ ಜೊತೆಯಾದ ಸೂರ್ಯ ಕುಮಾರ್

ಟಿ20 ವಿಶ್ವಕಪ್| ಭಾರತಕ್ಕೆ ರೋಚಕ ಜಯ Read More »

ಪ್ರೋ ಕಬಡ್ಡಿ‌ ಕೋರ್ಟ್ ನಲ್ಲಿ ‘ಕಾಂತಾರ’ ಟೀಂ| ರಾಷ್ಟ್ರಗೀತೆಗೆ ಧ್ವನಿಯಾದ ರಿಷಬ್ ಶೆಟ್ಟಿ

ಸಮಗ್ರ ನ್ಯೂಸ್: ಕನ್ನಡದಲ್ಲಿ ಬಿಡುಗಡೆಗೊಂಡ ಬಳಿಕ, ದೇಶದ ಇತರ ಭಾಷೆಗಳಿಗೆ ಡಬ್‌ ಆಗಿ ಅಬ್ಬರಿಸುತ್ತಿರುವ “ಕಾಂತಾರ” ಚಿತ್ರ ಬಹುದೊಡ್ಡ ಯಶಸ್ಸು ಸಂಪಾದಿಸಿದೆ. ಅದರ ನಡುವೆ ಭಾನುವಾರ ಚಿತ್ರದ ನಾಯಕ ಹಾಗೂ ನಿರ್ದೇಶಕ ರಿಷಬ್‌ ಶೆಟ್ಟಿ ಕಂಠೀರವ ಸ್ಟೇಡಿಯಂಗೆ ಆಗಮಿಸಿದ್ದರು. ದೇಶೀಯ ಮಣ್ಣಿನ ಸೊಗಡಿನ ಇನ್ನೊಂದು ಕ್ರೀಡೆ ಕಬಡ್ಡಿಯ ಭಾನುವಾರದ ಪಂದ್ಯಗಳಿಗೆ ಚಾಲನೆ ನೀಡಲು ಬಂದಿದ್ದರು. ಕಂಬಳ ಕ್ರೀಡೆ ಹಾಗೂ ಕರಾವಳಿ ಸಂಸ್ಕೃತಿಯನ್ನು ದೇಶ ಮಟ್ಟದಲ್ಲಿ ಪಸರಿಸಲು ಕಾಂತಾರ ಒಂದು ರೀತಿಯಲ್ಲಿ ಕಾರಣವಾಗಿದ್ದರೆ, ಸ್ಥಳೀಯವಾಗಿಯೇ ಉಳಿದುಕೊಂಡಿದ್ದ ಕಬಡ್ಡಿಗೆ ಬೂಸ್ಟ್‌ನೀಡಿದ್ದು

ಪ್ರೋ ಕಬಡ್ಡಿ‌ ಕೋರ್ಟ್ ನಲ್ಲಿ ‘ಕಾಂತಾರ’ ಟೀಂ| ರಾಷ್ಟ್ರಗೀತೆಗೆ ಧ್ವನಿಯಾದ ರಿಷಬ್ ಶೆಟ್ಟಿ Read More »

ಮಹಿಳಾ ಏಷ್ಯಾಕಪ್ ಕ್ರಿಕೆಟ್| 7ನೇ ಬಾರಿ ಪ್ರಶಸ್ತಿ ಮುಡಿಗೇರಿಸಿಕೊಂಡ ಭಾರತ

ಸಮಗ್ರ ನ್ಯೂಸ್: ಭಾರೀ ಕುತೂಹಲಕ್ಕೆ ಕಾರಣವಾಗಿದ್ದ ವನಿತಾ ಏಷ್ಯಾ ಕಪ್ ಕೂಟದ ಫೈನಲ್ ಪಂದ್ಯದಲ್ಲಿ ಭಾರತದ ಆರ್ಭಟದ ಎದುರು ಮಂಕಾದ ಶ್ರೀಲಂಕಾ ಸೋಲನುಭವಿಸಿದೆ. ಬಾಂಗ್ಲಾದೇಶದ ಸಿಲ್ಹೆಟ್ ನಲ್ಲಿ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಲಂಕಾ 20 ಓವರ್ ಗಳಲ್ಲಿ 9 ವಿಕೆಟ್ ನಷ್ಟಕ್ಕೆ 65 ರನ್ ಮಾಡಿದರೆ, ಭಾರತ ತಂಡವು 8.3 ಓವರ್ ಗಳಲ್ಲಿ ಎರಡು ವಿಕೆಟ್ ಕಳೆದುಕೊಂಡು ಗುರಿ ತಲುಪಿತು. ಟಾಸ್ ಗೆದ್ದ ಶ್ರೀಲಂಕಾ ನಾಯಕಿ ಚಾಮರಿ ಅತ್ತಪಟ್ಟು ಮೊದಲು ಬ್ಯಾಟಿಂಗ್ ಮಾಡಲು ನಿರ್ಧರಿಸಿದರು.

ಮಹಿಳಾ ಏಷ್ಯಾಕಪ್ ಕ್ರಿಕೆಟ್| 7ನೇ ಬಾರಿ ಪ್ರಶಸ್ತಿ ಮುಡಿಗೇರಿಸಿಕೊಂಡ ಭಾರತ Read More »

ಕಬಡ್ಡಿ ಟೂರ್ನಿಯಲ್ಲಿ ಹೊಸ ಇತಿಹಾಸ ನಿರ್ಮಿಸಿದ ವನ್ಷಿಕಾ

ಸಮಗ್ರ ನ್ಯೂಸ್: ಪ್ರೊ ಕಬಡ್ಡಿ ಲೀಗ್ ಪಂದ್ಯಗಳ ಆರಂಭಕ್ಕೆ ಮುನ್ನ ರಾಷ್ಟ್ರಗೀತೆ ಹಾಡುವ ಸಂಪ್ರದಾಯ ಮುಂದುವರಿಸಲಾಯಿತು. ಕನ್ನಡ ರಿಯಾಲಿಟಿ ಶೋಗಳ ಮೂಲಕ ಜನಪ್ರಿಯತೆ ಗಳಿಸಿರುವ ಪುಟಾಣಿ ವಂಶಿಕಾ ಅಂಜನಿ ಕಶ್ಯಪ ಟೂರ್ನಿಯ ಮೊದಲ ದಿನ ರಾಷ್ಟ್ರಗೀತೆ ಹಾಡಿದರು. ನಟ ಮಾಸ್ಟರ್ ಆನಂದ್ ಪುತ್ರಿಯಾಗಿರುವ 5 ವರ್ಷದ ವಂಶಿಕಾ, ಟೂರ್ನಿ ಇತಿಹಾಸದಲ್ಲಿ ಈ ಗೌರವ ಪಡೆದ ಅತ್ಯಂತ ಕಿರಿಯರೆನಿಸಿದರು. ಹೊಸತನದಿಂದ ಕೂಡಿದ ಬೆಂಗಳೂರು ಬುಲ್ಸ್ ತಂಡ 9ನೇ ಆವೃತ್ತಿಯ ಪ್ರೊ ಕಬಡ್ಡಿ ಲೀಗ್​ನಲ್ಲಿ ಶುಭಾರಂಭ ಕಾಣುವಲ್ಲಿ ಯಶಸ್ವಿಯಾಗಿದೆ. ಉದ್ಯಾನನಗರಿಯ

ಕಬಡ್ಡಿ ಟೂರ್ನಿಯಲ್ಲಿ ಹೊಸ ಇತಿಹಾಸ ನಿರ್ಮಿಸಿದ ವನ್ಷಿಕಾ Read More »

ಇಂಡೋನೇಷ್ಯಾದಲ್ಲಿ ಪುಟ್ಬಾಲ್ ಪಂದ್ಯಾಟದ ವೇಳೆ ಹಿಂಸಾಚಾರ| ಇಬ್ಬರು ಪೊಲೀಸರು ಸೇರಿ ಕನಿಷ್ಠ 127 ಮಂದಿ ಸಾವು

ಸಮಗ್ರ ನ್ಯೂಸ್: ಇಂಡೋನೇಷ್ಯಾದ ಜಕಾರ್ತದಲ್ಲಿ ಶನಿವಾರ ತಡರಾತ್ರಿ ಫುಟ್‌ಬಾಲ್ ಪಂದ್ಯದ ವೇಳೆ ನಡೆದ ಹಿಂಸಾಚಾರದಿಂದ ಕನಿಷ್ಠ 127 ಮಂದಿ ಸಾವಿಗೀಡಾಗಿದ್ದಾರೆ. ಪೂರ್ವ ಜಾವದ ಮಲಂಗ್‌ನಲ್ಲಿ ನಡೆದ ಪಂದ್ಯದಲ್ಲಿ ಎದುರಾಳಿ ತಂಡ ಗೆಲುವು ಸಾಧಿಸಿದ್ದರಿಂದ ರೊಚ್ಚಿಗೆದ್ದ ಅಭಿಮಾನಿಗಳು ಮೈದಾನಕ್ಕೆ ಇಳಿದು ದಾಂಧಲೆ ನಡೆಸಿದ್ದಾರೆ. ಈ ಸಂದರ್ಭದಲ್ಲಿ ಹಿಂಸಾಚಾರ ಸಂಭವಿಸಿ, ಇಬ್ಬರು ಪೊಲೀಸರ ಸಹಿತ ಕನಿಷ್ಠ 127 ಮಂದಿ ಮೃತಪಟ್ಟಿರುವುದು ದೃಢಪಟ್ಟಿದೆ. ಇಂಡೋನೇಷ್ಯಾದ ಪ್ರಮುಖ ಲೀಗ್ ಬಿಆರ್‌ಐ ಲಿಗಾ 1ರ ಅರೆಮಾ ಎಫ್‌ಸಿ ಮತ್ತು ಪರ್ಸಬೆಯ ಸುರಬಯ ತಂಡದ ನಡುವೆ

ಇಂಡೋನೇಷ್ಯಾದಲ್ಲಿ ಪುಟ್ಬಾಲ್ ಪಂದ್ಯಾಟದ ವೇಳೆ ಹಿಂಸಾಚಾರ| ಇಬ್ಬರು ಪೊಲೀಸರು ಸೇರಿ ಕನಿಷ್ಠ 127 ಮಂದಿ ಸಾವು Read More »