ಕ್ರೀಡೆ

ಸಿಂಗಾಪುರ್ ಓಪನ್ ಚಾಂಪಿಯನ್ ಶಿಪ್ ಮುಡಿಗೇರಿಸಿಕೊಂಡ ಪಿ.ವಿ ಸಿಂಧು

ಸಮಗ್ರ ನ್ಯೂಸ್: ಸಿಂಗಾಪುರ ಓಪನ್‌ ಬ್ಯಾಡ್ಮಿಂಟನ್ ಚಾಂಪಿಯನ್​ಶಿಪ್​ನ ಮಹಿಳೆಯರ ಸಿಂಗಲ್ಸ್ ಫೈನಲ್‌ನಲ್ಲಿ ಭಾರತದ ಸ್ಟಾರ್ ಶಟ್ಲರ್ ಪಿವಿ ಸಿಂಧು ಅಮೋಘ ಜಯ ಸಾಧಿಸಿ ಚಾಂಪಿಯನ್ ಪಟ್ಟ ಅಲಂಕರಿಸಿದ್ದಾರೆ. ಚೀನಾದ ವಾಂಗ್ ಝಿ ಯಿ ವಿರುದ್ದ ನಡೆದ ಫೈನಲ್​ ಪಂದ್ಯದಲ್ಲಿ ಭಾರತೀಯ ತಾರೆ ಭರ್ಜರಿ ಪ್ರದರ್ಶನ ನೀಡಿದ್ದರು. ಆರಂಭದಿಂದಲೇ ವಾಂಗ್ ವಿರುದ್ದ ಮೇಲುಗೈ ಸಾಧಿಸಿದ್ದ ಸಿಂಧು, ಮೊದಲ ಸೆಟ್​ ಅನ್ನು 21-9 ಅಂತರದಿಂದ ಗೆದ್ದುಕೊಂಡರು. ಇದಾಗ್ಯೂ 2ನೇ ಸೆಟ್​ನಲ್ಲಿ ವಾಂಗ್ ಝಿ ಯಿ ಕಂಬ್ಯಾಕ್ ಮಾಡಿದ್ದರು. ದ್ವಿತೀಯ ಸೆಟ್​ನ […]

ಸಿಂಗಾಪುರ್ ಓಪನ್ ಚಾಂಪಿಯನ್ ಶಿಪ್ ಮುಡಿಗೇರಿಸಿಕೊಂಡ ಪಿ.ವಿ ಸಿಂಧು Read More »

ಚೊಚ್ಚಲ ಮಹಿಳಾ ಗ್ರ್ಯಾನ್ ಸ್ಲ್ಯಾಮ್ ಗೆ ಮುತ್ತಿಕ್ಕಿದ ರೈಬಾಕಿನಾ

ಸಮಗ್ರ ನ್ಯೂಸ್: ವಿಂಬಲ್ಡನ್ ಮಹಿಳೆಯರ ಫೈನಲ್‌ನಲ್ಲಿ ಕಜಕಿಸ್ತಾನದ ಎಲೆನಾ ರೈಬಾಕಿನಾ ಅವರು ಟ್ಯುನೀಶಿಯಾದ ಆನ್ಸ್ ಜಬ್ಯೋರ್ ಅವರನ್ನು ಸೋಲಿಸುವ ಮೂಲಕ ತಮ್ಮ ಚೊಚ್ಚಲ ಗ್ರ್ಯಾನ್‌ಸ್ಲಾಮ್ ಪ್ರಶಸ್ತಿಯನ್ನು ಗೆದ್ದುಕೊಂಡಿದ್ದಾರೆ. ಸೆಂಟರ್ ಕೋರ್ಟ್‌ನಲ್ಲಿ ನಡೆದ ಅಂತಿಮ ಪಂದ್ಯದಲ್ಲಿ ಕಜಕಿಸ್ತಾನದ 17ನೇ ಶ್ರೇಯಾಂಕದ ರಿಬಾಕಿನಾ 3-6, 6-2, 6-2 ಸೆಟ್‌ಗಳಿಂದ ಮೂರನೇ ಶ್ರೇಯಾಂಕದ ಜಬ್ಯೋರ್ ಅವರನ್ನು ಸೋಲಿಸಿದರು. ಇದು ರಿಬಾಕಿನಾ ಅವರ ಮೊದಲ ಗ್ರ್ಯಾಂಡ್ ಸ್ಲಾಮ್ ಫೈನಲ್ ಆಗಿದ್ದು, ಅವರ ಮೂರನೇ ಪ್ರಶಸ್ತಿಯನ್ನು ಗೆದ್ದರು. ರಷ್ಯಾದಲ್ಲಿ ಬೆಳೆದು ಕಜಕಿಸ್ತಾನದಲ್ಲಿ ನೆಲೆಸಿ ಆ

ಚೊಚ್ಚಲ ಮಹಿಳಾ ಗ್ರ್ಯಾನ್ ಸ್ಲ್ಯಾಮ್ ಗೆ ಮುತ್ತಿಕ್ಕಿದ ರೈಬಾಕಿನಾ Read More »

ಕ್ರಿಕೆಟ್ ಗೆ ಗುಡ್ ಬೈ‌ ಹೇಳಿದ ಮಿಥಾಲಿ ರಾಜ್

ಸಮಗ್ರ ನ್ಯೂಸ್: ಭಾರತ ಏಕದಿನ ಮತ್ತು ಟೆಸ್ಟ್ ತಂಡದ ನಾಯಕಿ ಮಿಥಾಲಿ ರಾಜ್ ಬುಧವಾರ ಎಲ್ಲಾ ಮಾದರಿಯ ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ನಿವೃತ್ತಿ ಘೋಷಿಸಿದ್ದಾರೆ. ‘ವರ್ಷಗಳಿಂದ ನಿಮ್ಮ ಎಲ್ಲಾ ಪ್ರೀತಿ ಮತ್ತು ಬೆಂಬಲಕ್ಕಾಗಿ ಧನ್ಯವಾದಗಳು! ನಿಮ್ಮ ಆಶೀರ್ವಾದ ಮತ್ತು ಬೆಂಬಲದೊಂದಿಗೆ ನಾನು ನನ್ನ 2 ನೇ ಇನ್ನಿಂಗ್ಸ್ ಅನ್ನು ಎದುರು ನೋಡುತ್ತಿದ್ದೇನೆ’ ಎಂದು ಮಿಥಾಲಿ ಟ್ವೀಟ್ ಮಾಡಿದ್ದಾರೆ. 1999ರಲ್ಲಿ ಮಹಿಳಾ ಏಕದಿನ ಕ್ರಿಕೆಟ್‌ಗೆ ಪದಾರ್ಪಣೆ ಮಾಡಿದ್ದ ಮಿಥಾಲಿ, ಇಂದು ತಮ್ಮ 23 ವರ್ಷಗಳ ಅಂತಾರಾಷ್ಟ್ರೀಯ ಕ್ರಿಕೆಟ್ ವೃತ್ತಿಜೀವನಕ್ಕೆ

ಕ್ರಿಕೆಟ್ ಗೆ ಗುಡ್ ಬೈ‌ ಹೇಳಿದ ಮಿಥಾಲಿ ರಾಜ್ Read More »

8 ರನ್‌ಗೆ ಆಲೌಟ್; ಈ ರನ್ ಗಳಿಸಲು ಬರೋಬ್ಬರಿ 8.1 ಓವರ್ ಖರ್ಚು| ಹೀಗೊಂದು ಹೀನಾಯ ಕ್ರಿಕೆಟ್ ಪಂದ್ಯ!

ಸಮಗ್ರ ನ್ಯೂಸ್::ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್​ನಲ್ಲಿ ಅತೀ ಕಡಿಮೆ ರನ್​ಗಳಿಸಿದ ಕೆಟ್ಟ ದಾಖಲೆ ಟರ್ಕಿ ದೇಶದ ಹೆಸರಿನಲ್ಲಿದೆ. 2019 ರಲ್ಲಿ ಚೆಕ್ ರಿಪಬ್ಲಿಕ್ ವಿರುದ್ದದ ಪಂದ್ಯದಲ್ಲಿ ಟರ್ಕಿ ತಂಡವು ಕಡಿಮೆ ಮೊತ್ತಕ್ಕೆ ಆಲೌಟ್ ಆಗಿತ್ತು. ಕ್ರಿಕೆಟ್​ ತಂಡದಲ್ಲಿ ಒಟ್ಟು 11 ಆಟಗಾರರಿರುತ್ತಾರೆ. ಹನ್ನೊಂದು ಆಟಗಾರರು ಒಂದೊಂದು ರನ್​ ಕಲೆಹಾಕಿದರೂ ಎರಡಂಕಿ ಮೊತ್ತವಾಗುತ್ತೆ. ಆದರೆ ಇಲ್ಲೊಂದು ತಂಡ ಕೇವಲ 8 ರನ್​ಗೆ ಆಲೌಟ್ ಆಗಿ ಅಚ್ಚರಿ ಮೂಡಿಸಿದೆ. ಅದು ಕೂಡ ಅಂತಾರಾಷ್ಟ್ರೀಯ ಪಂದ್ಯದಲ್ಲಿ ಎಂಬುದು ವಿಶೇಷ. ಹೌದು, ಅಂಡರ್-19 ಮಹಿಳಾ

8 ರನ್‌ಗೆ ಆಲೌಟ್; ಈ ರನ್ ಗಳಿಸಲು ಬರೋಬ್ಬರಿ 8.1 ಓವರ್ ಖರ್ಚು| ಹೀಗೊಂದು ಹೀನಾಯ ಕ್ರಿಕೆಟ್ ಪಂದ್ಯ! Read More »

ಗುಜರಾತ್ ಟೈಟಾನ್ಸ್ ಐಪಿಎಲ್ 15ನೇ ಚಾಂಪಿಯನ್

ಸಮಗ್ರ ನ್ಯೂಸ್: IPL 15ನೇ ಆವೃತ್ತಿಯಲ್ಲಿ ಗುಜರಾತ್ ಟೈಟಾನ್ಸ್ ಚಾಂಪಿಯನ್ ಪಟ್ಟಕ್ಕೇರಿದೆ. ರಾಜಾಸ್ಥಾನ್ ರಾಯಲ್ಸ್ ವಿರುದ್ಧ ನಡೆದ ಫೈನಲ್ ಪಂದ್ಯದಲ್ಲಿ ಗುಜರಾತ್ 7 ವಿಕೆಟ್ ಗೆಲುವು ಸಾಧಿಸಿ, ನೂತನ ಚಾಂಪಿಯನ್ ಆಗಿ ಹೊರಹೊಮ್ಮಿದೆ. ಪಾಂಡ್ಯ ಬಳಗ ಫೈನಲ್ ಪಂದ್ಯದಲ್ಲಿ ಎಲ್ಲಾ ವಿಭಾಗದಲ್ಲಿಯೂ ಅಮೋಘ ಪ್ರದರ್ಶನ ನೀಡುವಲ್ಲಿ ಯಶಸ್ವಿಯಾಯಿತು. ಮೊದಲಿಗೆ ಬೌಲಿಂಗ್‌ನಲ್ಲಿ ಪಾರಮ್ಯ ಮೆರೆದ ಗುಜರಾತ್, ನಂತರ ಬ್ಯಾಟಿಂಗ್‌ನಲ್ಲೂ ಅದ್ಭುತ ಪ್ರದರ್ಶನ ನೀಡುವ ಮೂಲಕ ಗೆದ್ದು ಬೀಗಿದೆ. ರಾಜಸ್ಥಾನ್ ರಾಯಲ್ಸ್ ತಂಡದ ಚಾಂಪಿಯನ್ ಆಗುವ ಕನಸು ನುಚ್ಚುನೂರಾಗಿದೆ. ಟಾಸ್

ಗುಜರಾತ್ ಟೈಟಾನ್ಸ್ ಐಪಿಎಲ್ 15ನೇ ಚಾಂಪಿಯನ್ Read More »

ಆರ್ ಸಿಬಿ‌ ಮನೆಗೆ ರಾಜಾಸ್ಥಾನ್ ಫೈನಲ್ ಗೆ| ಈ ಸಲವೂ ಕಪ್ ನಮ್ದಲ್ಲ!

ಸಮಗ್ರ ನ್ಯೂಸ್: ಅಹಮದಾಬಾದ್ ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್ 2022 ಎರಡನೇ ಕ್ವಾಲಿಫೈಯರ್ ಪಂದ್ಯದಲ್ಲಿ ಜೋಸ್ ಬಟ್ಲರ್ ಅವರ ಅಬ್ಬರದ ಶತಕದ ನೆರವಿನಿಂದ ರಾಜಸ್ಥಾನ ರಾಯಲ್ಸ್ ತಂಡ ಫೈನಲ್ ಗೆ ಲಗ್ಗೆ ಇಟ್ಟಿದೆ. ರಾಯಲ್ ಚಾಲೆಂಜರ್ಸ್ ಬೆಂಗಳೂರಿಗೆ ಈ ಸಲವೂ ಕಪ್ ಮಿಸ್ ಆಗಿದ್ದು, ಟೂರ್ನಿಯಿಂದ ಹೊರ ಬಿದ್ದಿದೆ. ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ನಿಗದಿತ 20 ಓವರ್ ಗಳಲ್ಲಿ 8 ವಿಕೆಟ್ ನಷ್ಟಕ್ಕೆ 157 ರನ್

ಆರ್ ಸಿಬಿ‌ ಮನೆಗೆ ರಾಜಾಸ್ಥಾನ್ ಫೈನಲ್ ಗೆ| ಈ ಸಲವೂ ಕಪ್ ನಮ್ದಲ್ಲ! Read More »

ಆರ್ ಸಿಬಿ ಸೇರ್ತಾರಾ ಎಬಿ ಡೆವಿಲಿಯರ್ಸ್? ಬೆಂಗಳೂರು ಬಗ್ಗೆ ಹೇಳಿದ್ದೇನು ಗೊತ್ತಾ?

ಸಮಗ್ರ ನ್ಯೂಸ್: ದಕ್ಷಿಣ ಆಫ್ರಿಕಾದ ಮಾಜಿ ಆಟಗಾರ ಎಬಿಡಿ ವಿಲಿಯರ್ಸ್ ಅವರು ಬೆಂಗಳೂರು ನನ್ನ ಎರಡನೇ ತವರು ಎಂದು ಹೇಳುವ ಮೂಲಕ ಆರ್ ಸಿಬಿ ತಂಡವನ್ನು ಸೇರಿಕೊಳ್ಳುವ ಮುನ್ಸೂಚನೆ ನೀಡಿದ್ದಾರೆ. ಇತ್ತೀಚೆಗೆ ಆರ್ ಸಿ ಬಿ ಮಾಜಿ ನಾಯಕ ವಿರಾಟ್ ಕೊಹ್ಲಿ ಅವರು ಸುದ್ದಿಗಾರರೊಂದಿಗೆ ಮಾತನಾಡುತ್ತಾ, 360 ಡಿಗ್ರಿ ಸ್ಪೆಷಾಲಿಸ್ಟ್ ಎಬಿ ಡಿವಿಲಿಯರ್ಸ್ ಅವರು ಮುಂದಿನ ವರ್ಷದಿಂದ ಆರ್ ಸಿ ಬಿ ತಂಡವನ್ನು ಕೂಡಿಕೊಳ್ಳಲಿದ್ದಾರೆ ಎಂಬ ಮಾತುಗಳನ್ನಾಡಿದ್ದರು. ಎಬಿಡಿ ವಿಲಿಯರ್ಸ್ ಅವರು ವಿರಾಟ್ ಕೊಹ್ಲಿ ಅವರ ಮಾತಿಗೆ

ಆರ್ ಸಿಬಿ ಸೇರ್ತಾರಾ ಎಬಿ ಡೆವಿಲಿಯರ್ಸ್? ಬೆಂಗಳೂರು ಬಗ್ಗೆ ಹೇಳಿದ್ದೇನು ಗೊತ್ತಾ? Read More »

“ಏಕಲವ್ಯ” ಪ್ರಶಸ್ತಿ ಪುರಸ್ಕೃತ ಮಾಜಿ ಕಬಡ್ಡಿ ಆಟಗಾರ ಉದಯ ಚೌಟ ಇನ್ನಿಲ್ಲ

ಸಮಗ್ರ ನ್ಯೂಸ್: ಅಂತಾರಾಷ್ಟ್ರೀಯ ಮಟ್ಟದ ಕಬಡ್ಡಿ ಆಟಗಾರ, ಬ್ಯಾಂಕ್ ಉದ್ಯೋಗಿ ಮಾಣಿ ಬದಿಗುಡ್ಡೆ ನಿವಾಸಿ ಉದಯ ಚೌಟ ಅವರು ಮೇ 21ರಂದು ಅಲ್ಪಕಾಲದ ಅಸೌಖ್ಯದಿಂದ ನಿಧನ ಹೊಂದಿದರು. ಮೃತರು ಪತ್ನಿ, ಪುತ್ರ ಹಾಗೂ ಪುತ್ರಿಯನ್ನು ಅಗಲಿದ್ದಾರೆ. ಮೃತರು ಕಬಡ್ಡಿ ಆಟಗಾರರಾಗಿ ವಿಶೇಷ ಸಾಧನೆ ಮಾಡಿದ್ದು, 2007ರ ಕಬಡ್ಡಿ ವಿಶ್ವಕಪ್ ನಲ್ಲಿ ಭಾರತ ತಂಡದ ಉತ್ತಮ ಆಟಗಾರನಾಗಿ ಮೂಡಿಬಂದಿದ್ದರು. ಏಕಲವ್ಯ ಪ್ರಶಸ್ತಿ, ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಸೇರಿದಂತೆ ಹಲವು ಪ್ರಶಸ್ತಿ ಸಮ್ಮಾನಗಳನ್ನು ಪಡೆದಿದ್ದಾರೆ.

“ಏಕಲವ್ಯ” ಪ್ರಶಸ್ತಿ ಪುರಸ್ಕೃತ ಮಾಜಿ ಕಬಡ್ಡಿ ಆಟಗಾರ ಉದಯ ಚೌಟ ಇನ್ನಿಲ್ಲ Read More »

ಐಸಿಸಿ ರ‍್ಯಾಂಕಿಂಗ್ ಪ್ರಕಟ| ಟಿ-20ಯಲ್ಲಿ ಭಾರತಕ್ಕೆ ಮೊದಲ ಸ್ಥಾನ

ಸಮಗ್ರ ನ್ಯೂಸ್: ರೋಹಿತ್ ಶರ್ಮಾ ನಾಯಕತ್ವದ ಭಾರತ ತಂಡ 2021-22 ರ ಋತುವಿನಲ್ಲಿ ತವರಿನಲ್ಲಿ ಪ್ರಭಾವಶಾಲಿ ಪ್ರದರ್ಶನಗಳ ನಂತರ ಬುಧವಾರ ಐಸಿಸಿ ಬಿಡುಗಡೆ ಮಾಡಿದ ವಾರ್ಷಿಕ ಶ್ರೇಯಾಂಕದಲ್ಲಿ ವಿಶ್ವದ ನಂಬರ್ ಒನ್ ಟಿ-20 ತಂಡವಾಗಿ ಹೊರ ಹೊಮ್ಮಿದೆ. ಆದರೆ ಟೆಸ್ಟ್ ನಲ್ಲಿ ಆಸ್ಟ್ರೇಲಿಯಾ ಭಾರತವನ್ನು ಹಿಂದಿಕ್ಕಿ ಮೊದಲ ಸ್ಥಾನಕ್ಕೆ ಬಂದಿದ್ದು, ಭಾರತ ಆಸೀಸ್ ಗಿಂತ 9 ಅಂಕಗಳನ್ನು ಕಡಿಮೆ ಹೊಂದಿದೆ. ನ್ಯೂಜಿಲೆಂಡ್‌ನ ವಿಶ್ವದ ನಂ.1 ಏಕದಿನ ತಂಡವಾಗಿ ಹೊರ ಹೊಮ್ಮಿದೆ. ಇಂದು ಘೋಷಣೆಯಾದ ರ‍್ಯಾಂಕಿಂಗ್ ನಲ್ಲಿ ಐಸಿಸಿ

ಐಸಿಸಿ ರ‍್ಯಾಂಕಿಂಗ್ ಪ್ರಕಟ| ಟಿ-20ಯಲ್ಲಿ ಭಾರತಕ್ಕೆ ಮೊದಲ ಸ್ಥಾನ Read More »

ಕೊರೊನಾ ಭಯಕ್ಕೆ ಕ್ವಾರಂಟೈನ್ ಆದ ಡೆಲ್ಲಿ ಕ್ಯಾಪಿಟಲ್ಸ್| ಮತ್ತೆ ಐಪಿಎಲ್ ಕ್ಯಾನ್ಸಲ್ ಆಗುತ್ತಾ?

ಕೊರೊನಾ ಭಯ ಐಪಿಎಲ್ 2021ನೇ ಆವೃತ್ತಿಯಲ್ಲಿ ಆಕ್ರಮಿಸಿ ಐಪಿಎಲ್‌ ಸ್ಥಗಿತಕ್ಕೆ ಕಾರಣವಾಗಿದ್ದ ಕೊರೊನಾ ಕಾಟ ಇದೀಗ ಮತ್ತೊಮ್ಮೆ ವಕ್ಕರಿಸುವ ಲಕ್ಷಣಗಳು ಕಂಡುಬರುತ್ತಿದೆ. ಡೆಲ್ಲಿ ಕ್ಯಾಪಿಟಲ್ಸ್ ತಂಡವು ಇದೀಗ ಕೊರೊನಾ ಭೀತಿಗೆ ಒಳಗಾಗಿದ್ದು, ಅಭ್ಯಾಸ ಪಂದ್ಯವನ್ನ ತ್ಯಜಿಸಿ ಸಂಪೂರ್ಣ ತಂಡದ ಆಟಗಾರರು ಕ್ವಾರಂಟೈನ್ ಆಗಿದ್ದಾರೆ. ಪುಣೆಗೆ ತೆರಳಬೇಕಿದ್ದ ಡೆಲ್ಲಿ ಕ್ಯಾಪಿಟಲ್ಸ್ ತಂಡ ಪ್ರಯಾಣವನ್ನ ರದ್ದುಗೊಳಿಸಿದ್ದು, ಹೋಟೆಲ್ ರೂಂಗಳಲ್ಲಿ ಕ್ವಾರಂಟೈನ್ ಆಗಿದ್ದಾರೆ. ಪ್ರತಿ ರೂಂಗಳಲ್ಲಿ ಆಟಗಾರರ ಕೋವಿಡ್-19 ಟೆಸ್ಟ್ ಮಾಡಲಾಗುವುದು. ತಂಡದ ಫಿಸಿಯೋ ಪ್ಯಾಟ್ರಿಕ್ ಪರ್ಹಾರ್ಟ್‌ ಕೋವಿಡ್-19 ಪಾಸಿಟಿವ್ ಆಗಿದ್ದರ

ಕೊರೊನಾ ಭಯಕ್ಕೆ ಕ್ವಾರಂಟೈನ್ ಆದ ಡೆಲ್ಲಿ ಕ್ಯಾಪಿಟಲ್ಸ್| ಮತ್ತೆ ಐಪಿಎಲ್ ಕ್ಯಾನ್ಸಲ್ ಆಗುತ್ತಾ? Read More »