ಕ್ರೀಡೆ

ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ಗುಡ್ ಬೈ ಹೇಳಿದ ಶಿಖರ್ ಧವನ್

ಸಮಗ್ರ ನ್ಯೂಸ್‌: ಭಾರತೀಯ ಕ್ರಿಕೆಟ್‌ ತಂಡದ ಆರಂಭಿಕ ಆಟಗಾರ 38 ವರ್ಷ ವಯಸ್ಸಿನ ಶಿಖರ್ ಧವನ್ ಅಂತಾರಾಷ್ಟ್ರೀಯ ಕ್ರಿಕೆಟ್‌ ವಿದಾಯ ಹೇಳಿದ್ದಾರೆ. ಧವನ್ ಸಾಮಾಜಿಕ ಮಾಧ್ಯಮದ ಮೂಲಕ ತಮ್ಮ ನಿವೃತ್ತಿ ನಿರ್ಧಾರವನ್ನು ಪ್ರಕಟಿಸಿದ್ದು, ಈ ಮೂಲಕ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ಗುಡ್ ಬೈ ಹೇಳುತ್ತಿರುವುದಾಗಿ ತಿಳಿಸಿದ್ದಾರೆ. 2022ರ ಬಾಂಗ್ಲಾದೇಶ ಪ್ರವಾಸದ ನಂತರ ಧವನ್ ಭಾರತ ತಂಡದಲ್ಲಿ ಕಾಣಿಸಿಕೊಂಡಿಲ್ಲ. ಆದರೆ ಇತ್ತೀಚಿನ ದಿನಗಳಲ್ಲಿ ಅವರನ್ನು ಆಯ್ಕೆಗೆ ಪರಿಗಣಿಸಲಾಗಿಲ್ಲ. ಅದರಲ್ಲೂ ದುಲೀಪ್ ಟ್ರೋಫಿಗೆ ಆಯ್ಕೆ ಮಾಡಲಾದ ನಾಲ್ಕು ತಂಡಗಳಲ್ಲೂ ಅವರ ಹೆಸರು […]

ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ಗುಡ್ ಬೈ ಹೇಳಿದ ಶಿಖರ್ ಧವನ್ Read More »

ತವರಿಗೆ ಮರಳಿದ ವಿನೇಶ್‌ ಪೋಗಟ್‌| ಏರ್ಪೋರ್ಟ್ ನಲ್ಲಿ ಭರ್ಜರಿ ಸ್ವಾಗತ

ಸಮಗ್ರ ನ್ಯೂಸ್: ಪ್ಯಾರಿಸ್ ಒಲಿಂಪಿಕ್ಸ್ ಚಿನ್ನದ ಪದಕದ ಸ್ಪರ್ಧೆಯಿಂದ ಅನರ್ಹಗೊಂಡ ಕುಸ್ತಿಪಟು ವಿನೇಶ್‌ ಪೋಗಟ್‌ ಶನಿವಾರ ಭಾರತಕ್ಕೆ ಆಗಮಿಸಿದ್ದಾರೆ. ದೆಹಲಿಯ ವಿಮಾನ ನಿಲ್ದಾಣದಲ್ಲಿ ಅವರನ್ನು ಆತ್ಮೀಯವಾಗಿ ಬರಮಾಡಿಕೊಳ್ಳಲಾಯಿತು. ಪದಕ ಗೆಲ್ಲಲಾಗದ ನೋವಿನಲ್ಲಿದ್ದ ವಿನೇಶ್ ಅಭಿಮಾನಿಗಳನ್ನು ಕಂಡ ತಕ್ಷಣ ಜೋರಾಗಿ ಅಳುತ್ತಾ ಕೈ ಮುಗಿದು ಧನ್ಯವಾದ ತಿಳಿಸಿದರು. ಕುಟುಂಬದ ಸದಸ್ಯರು, ಮಾಜಿ ಒಲಿಂಪಿನ್, ಕಂಚಿನ ಪದಕ ವಿಜೇತೆ ಸಾಕ್ಷಿ ಮಲಿಕ್, ಬಜರಂಗ್ ಪೂನಿಯಾ ಸೇರಿ ಹಲವು ಕುಸ್ತಿಪಟುಗಳು ಈ ವೇಳೆ ಜತೆಗಿದ್ದರು. ವಿಮಾನ ನಿಲ್ದಾಣದಿಂದ ಹೊರ ಬಂದ ತಕ್ಷಣ

ತವರಿಗೆ ಮರಳಿದ ವಿನೇಶ್‌ ಪೋಗಟ್‌| ಏರ್ಪೋರ್ಟ್ ನಲ್ಲಿ ಭರ್ಜರಿ ಸ್ವಾಗತ Read More »

ಹತ್ತು ಎಸೆತಗಳಲ್ಲಿ 60 ರನ್ ಚಚ್ಚಿದ ಇಶಾನ್ ಕಿಶನ್| ಟೀಂ‌ ಇಂಡಿಯಾದಿಂದ ಹೊರಬಿದ್ದಿದ್ದಕ್ಕೆ ಸೇಡು‌ ತೀರಿಸಿಕೊಂಡರಾ ಕ್ರಿಕೆಟ್ ಸ್ಟಾರ್?

ಸಮಗ್ರ ನ್ಯೂಸ್: ಟೀಂ ಇಂಡಿಯಾದಿಂದ ಹೊರಬಿದ್ದ ಇಶಾನ್ ಕಿಶನ್ ಇದೀಗ ಟೀಕಾಕಾರರಿಗೆ ತಮ್ಮ ಬ್ಯಾಟ್ ಮೂಲಕವೇ ಉತ್ತರ ನೀಡಿದ್ದಾರೆ. ತಮಿಳುನಾಡಿನಲ್ಲಿ ನಡೆಯುತ್ತಿರುವ ಬುಚ್ಚಿ ಬಾಬು ಟೂರ್ನಿಯ ಮೊದಲ ಪಂದ್ಯದಲ್ಲಿಯೇ ಈ ಎಡಗೈ ಬ್ಯಾಟ್ಸ್‌ಮನ್ ಸ್ಫೋಟಕ ಶತಕ ಸಿಡಿಸಿದ್ದಾರೆ. ಈ ಟೂರ್ನಿಯಲ್ಲಿ ಜಾರ್ಖಂಡ್ ತಂಡದ ನಾಯಕ ಇಶಾನ್ ಕಿಶನ್ ಬುಚ್ಚಿ ಬಾಬು. ಇಶಾನ್ ಆರನೇ ಕ್ರಮಾಂಕದಲ್ಲಿ ಬ್ಯಾಟ್ ಮಾಡಲು ಬಂದರು. ರಾಮ್‌ವೀರ್ ಗುರ್ಜರ್, ಅಧೀರ್ ಪ್ರತಾಪ್ ಸಿಂಗ್ ಮತ್ತು ಆಕಾಶ್ ರಾಜಾವತ್ ವಿರುದ್ಧ ಹೆಚ್ಚು ರನ್ ಗಳಿಸಿದ ಇಶಾನ್‌,

ಹತ್ತು ಎಸೆತಗಳಲ್ಲಿ 60 ರನ್ ಚಚ್ಚಿದ ಇಶಾನ್ ಕಿಶನ್| ಟೀಂ‌ ಇಂಡಿಯಾದಿಂದ ಹೊರಬಿದ್ದಿದ್ದಕ್ಕೆ ಸೇಡು‌ ತೀರಿಸಿಕೊಂಡರಾ ಕ್ರಿಕೆಟ್ ಸ್ಟಾರ್? Read More »

ಒಲಿಂಪಿಕ್ಸ್ ನಲ್ಲಿ ಬೆಳ್ಳಿ ಪದಕದ‌ ಕನಸು ಭಗ್ನ| ವಿನೇಶ್ ಪೋಗಟ್ ಸಲ್ಲಿಸಿದ್ದ ಅರ್ಜಿ ವಜಾ

ಸಮಗ್ರ ನ್ಯೂಸ್: 2024 ರ ಒಲಿಂಪಿಕ್ಸ್’ನಲ್ಲಿ ಜಂಟಿ ಬೆಳ್ಳಿ ಪದಕಕ್ಕಾಗಿ ಕುಸ್ತಿಪಟು ವಿನೇಶ್ ಫೋಗಟ್ ಸಲ್ಲಿಸಿದ್ದ ಅರ್ಜಿಯನ್ನ ಕ್ರೀಡಾ ಮಧ್ಯಸ್ಥಿಕೆ ನ್ಯಾಯಾಲಯ ವಜಾಗೊಳಿಸಿದೆ ಎಂದು ವರದಿಯಾಗಿದೆ. ಸ್ಟಾರ್ ಕುಸ್ತಿಪಟು ವಿನೇಶ್ ಫೋಗಟ್ ಬೆಳ್ಳಿ ಪದಕಕ್ಕಾಗಿ ಕೋರ್ಟ್ ಆಫ್ ಆರ್ಬಿಟ್ರೇಶನ್ ಫಾರ್ ಸ್ಪೋರ್ಟ್ಸ್ (CAS)ನಲ್ಲಿ ಪ್ರಕರಣ ದಾಖಲಿಸಿದ್ದಾರೆ. ಅದರ ವಿಚಾರಣೆ ಈಗಾಗಲೇ ಮುಗಿದಿದೆ, ಆದರೆ ತೀರ್ಪಿನ ದಿನಾಂಕವನ್ನು ನಿರಂತರವಾಗಿ ಮುಂದೂಡಲಾಗುತ್ತಿತ್ತು. ಸಧ್ಯ ಈ ಪ್ರಕರಣದಲ್ಲಿ ಇಂದು (ಆಗಸ್ಟ್ 14) ನಿರ್ಧಾರ ಬಂದಿದೆ. ವಿನೇಶ್ ಅವರ ಮನವಿಯನ್ನ ಸಿಎಎಸ್ ವಜಾಗೊಳಿಸಿದೆ.

ಒಲಿಂಪಿಕ್ಸ್ ನಲ್ಲಿ ಬೆಳ್ಳಿ ಪದಕದ‌ ಕನಸು ಭಗ್ನ| ವಿನೇಶ್ ಪೋಗಟ್ ಸಲ್ಲಿಸಿದ್ದ ಅರ್ಜಿ ವಜಾ Read More »

ಕೀನ್ಯಾ ಕ್ರಿಕೆಟ್ ತಂಡದ ಕೋಚ್ ಆಗಿ ದೊಡ್ಡ ಗಣೇಶ್ ಆಯ್ಕೆ

ಸಮಗ್ರ ನ್ಯೂಸ್: ಕೀನ್ಯಾ ಪುರುಷರ ತಂಡದ ಹೆಡ್ ಕೋಚ್ ಆಗಿ ಟೀಮ್ ಇಂಡಿಯಾ ಮಾಜಿ ಕ್ರಿಕೆಟಿಗ ದೊಡ್ಡ ಗಣೇಶ್ ನೇಮಕಗೊಂಡಿದ್ದಾರೆ. ಭಾರತದ ದಿಗ್ಗಜ ದೊಡ್ಡ ಗಣೇಶ್ ಆಟಗಾರನನ್ನು ತಂಡದ ಮುಖ್ಯ ಕೋಚ್ ಆಗಿ ನೇಮಿಸಿರುವ ನಿರ್ಧಾರವನ್ನು ಕ್ರಿಕೆಟ್ ಕೀನ್ಯಾ ಸಿಇಒ ರೊನಾಲ್ಡ್ ಬುಕುಸಿ ಪ್ರಕಟಿಸಿದ್ದಾರೆ. ದೊಡ್ಡ ಗಣೇಶ್ ಅವರ ಮುಂದಾಳತ್ವದಲ್ಲಿ ತಂಡವನ್ನು ಹೊಸ ಎತ್ತರಕ್ಕೆ ಕೊಂಡೊಯ್ಯುವ ವಿಶ್ವಾಸವಿದೆ ಎಂದಿದ್ದಾರೆ. ಕೀನ್ಯಾ ತಂಡ 2011ರಲ್ಲಿ ಕೊನೆ ಬಾರಿ ಐಸಿಸಿ ವಿಶ್ವಕಪ್ ಆಡಿದೆ. 24ನೇ ವಯಸ್ಸಿಗೆ ಟೀಮ್ ಇಂಡಿಯಾ ಪರ

ಕೀನ್ಯಾ ಕ್ರಿಕೆಟ್ ತಂಡದ ಕೋಚ್ ಆಗಿ ದೊಡ್ಡ ಗಣೇಶ್ ಆಯ್ಕೆ Read More »

ಭಾರತ ಕ್ರಿಕೆಟ್ ತಂಡದ ಬೌಲಿಂಗ್ ಕೋಚ್ ಆಗಿ ಮಾರ್ನೆ ಮಾರ್ಕೆಲ್ ನೇಮಕ

ಸಮಗ್ರ ನ್ಯೂಸ್: ಭಾರತ ಕ್ರಿಕೆಟ್ ತಂಡದ ಬೌಲಿಂಗ್ ಕೋಚ್ ಆಗಿ ದಕ್ಷಿಣ ಆಫ್ರಿಕಾದ ಮಾಜಿ ಆಟಗಾರ ಮಾರ್ನೆ ಮಾರ್ಕೆ‌ಲ್ ಆಯ್ಕೆಯಾಗಿದ್ದಾರೆ. ಮಾರ್ನೆ ಮಾರ್ಕೆಲ್ ನೇಮಕಾತಿಯನ್ನು ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಖಚಿತಪಡಿಸಿದ್ದಾರೆ. ಸೆಪ್ಟೆಂಬರ್ 1 ರಿಂದ ಬೌಲಿಂಗ್ ಕೋಚ್ ಆಗಿ ಮೊರ್ಕೆಲ್ ಜವಾಬ್ದಾರಿ ವಹಿಸಿಕೊಳ್ಳಲಿದ್ದಾರೆ . ಬಾಂಗ್ಲಾದೇಶದ ವಿರುದ್ಧ ಸೆಪ್ಟೆಂಬರ್ 19 ರಿಂದ ಪ್ರಾರಂಭವಾಗುವ ಎರಡು ಪಂದ್ಯಗಳ ಟೆಸ್ಟ್ ಸರಣಿಯಿಂದ ಮೊರ್ಕೆಲ್ ಅವರು ಕೋಚ್ ಜವಾಬ್ದಾರಿ ಆರಂಭವಾಗಲಿದೆ. ಬೌಲಿಂಗ್ ಕೋಚ್ ನೇಮಕದಿಂದಾಗಿ ಭಾರತದ ಮುಖ್ಯ ಕೋಚ್ ಗೌತಮ್

ಭಾರತ ಕ್ರಿಕೆಟ್ ತಂಡದ ಬೌಲಿಂಗ್ ಕೋಚ್ ಆಗಿ ಮಾರ್ನೆ ಮಾರ್ಕೆಲ್ ನೇಮಕ Read More »

ಒಲಿಂಪಿಕ್ಸ್‌ ಸಮಾರೋಪ ಸಮಾರಂಭ/ ಭಾರತದ ಧ್ವಜಧಾರಿಗಳಾಗಿ ಪಿ.ಆರ್ ಶ್ರೀಜೇಶ್ ಮತ್ತು ಮನು ಭಾಕರ್

ಸಮಗ್ರ ನ್ಯೂಸ್‌: ಪ್ಯಾರಿಸ್‌ ಒಲಿಂಪಿಕ್ಸ್‌ನ ಸಮಾರೋಪ ಸಮಾರಂಭ ಭಾನುವಾರ ರಾತ್ರಿ ನಡೆಯಲಿದ್ದು, ಭಾರತದ ಧ್ವಜಧಾರಿಗಳಾಗಿ ಪದಕ ಗೆದ್ದ ಹಾಕಿ ಆಟಗಾರ ಪಿ.ಆರ್ ಶ್ರೀಜೇಶ್ ಮತ್ತು ಅವಳಿ ಕಂಚಿನ ಪದಕ ವಿಜೇತೆ ಶೂಟರ್ ಮನು ಭಾಕರ್ ಆಯ್ಕೆಯಾಗಿದ್ದಾರೆ. ಮಹಿಳಾ ಧ್ವಜಧಾರಿಯಾಗಿ ಮನು ಭಾಕರ್ ಅವರನ್ನು ಕಳೆದ ವಾರವೇ ಆಯ್ಕೆ ಮಾಡಲಾಗಿತ್ತು. ಆದರೆ, ಭಾರತದ ಪುರುಷ ಧ್ವಜಧಾರಿ ಕ್ರೀಡಾಳು ಆಯ್ಕೆಯಾಗಿರಲಿಲ್ಲ. ಇದೀಗ ಹಾಕಿಗೆ ವಿದಾಯ ಹೇಳಿರುವ ದಿಗ್ಗಜ ಗೋಲ್ ಕೀಪರ್ ಶ್ರೀಜೇಶ್ ಅವರನ್ನು ಆಯ್ಕೆ ಮಾಡಲಾಗಿದೆ. ಉಭಯ ಕ್ರೀಡಾಪಟುಗಳು ಧ್ವಜಧಾರಿಯಾಗಿ

ಒಲಿಂಪಿಕ್ಸ್‌ ಸಮಾರೋಪ ಸಮಾರಂಭ/ ಭಾರತದ ಧ್ವಜಧಾರಿಗಳಾಗಿ ಪಿ.ಆರ್ ಶ್ರೀಜೇಶ್ ಮತ್ತು ಮನು ಭಾಕರ್ Read More »

ಪುರುಷತ್ವ ಪ್ರದರ್ಶಿಸಿದರೆ 2.5 ಕೋಟಿ ನೀಡಲಾಗುವುದು| ಅನರ್ಹಗೊಂಡ ಪ್ರಾನ್ಸ್ ಅಥ್ಲೀಟ್ ಗೆ ಪೋರ್ನ್ ಕಂಪನಿ ಬಿಗ್ ಆಫರ್| ಅಷ್ಟಕ್ಕೂ ಅಂಥಾ‌ ಆಫರ್ ನೀಡಿದ್ಯಾಕೆ ಗೊತ್ತಾ?

ಸಮಗ್ರ ನ್ಯೂಸ್: 2024ರ ಪ್ಯಾರಿಸ್ ಒಲಿಂಪಿಕ್ಸ್ ನಲ್ಲಿ ಅನರ್ಹಗೊಂಡಿರುವ ಫ್ರಾನ್ಸ್ ಅಥ್ಲೀಟ್ ಅಂಥೋನಿ ಅಮ್ಮಿರತಿ ಪೋರ್ನ್ ವೆಬ್‌ಸೈಟ್ 2.09 ಕೋಟಿ ರೂಪಾಯಿ ಬಿಗ್ ಆಫರ್ ನೀಡಲಾಗಿದೆ ಎಂದು ವರದಿಯಾಗಿದೆ. ಅಂಥೋನಿ ಅಮ್ಮಿರತಿ ಪೋಲ್‌ವಾಲ್ಟ್ ಅಥ್ಲೀಟ್‌ ಆಗಿದ್ದು, ಕ್ವಾಲಿಫೈರ್‌ ಆಟದಲ್ಲಿ ಅನರ್ಹಗೊಂಡಿದ್ದಾರೆ. ಅಮ್ಮಿರತಿ ಆಟ ಆಡುವಾಗ ಪೋಲ್‌ ಬಾರ್‌ಗೆ ಅವರ ಗುಪ್ತಾಂಗ ತಾಗಿದ್ದರಿಂದ ಆಟದಿಂದ ಅನರ್ಹಗೊಂಡಿದ್ದರು. ಅಂಥೋನಿ ಅಮ್ಮಿರತಿ ಅನರ್ಹಗೊಂಡ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗ್ತಿದೆ. ಈ ವಿಡಿಯೋ ವೈರಲ್ ಬೆನ್ನಲ್ಲೇ ಪೋರ್ನ್ ವೆಬ್‌ಸೈಟ್‌ನಿಂದ ಕೋಟಿ ಕೋಟಿಯ

ಪುರುಷತ್ವ ಪ್ರದರ್ಶಿಸಿದರೆ 2.5 ಕೋಟಿ ನೀಡಲಾಗುವುದು| ಅನರ್ಹಗೊಂಡ ಪ್ರಾನ್ಸ್ ಅಥ್ಲೀಟ್ ಗೆ ಪೋರ್ನ್ ಕಂಪನಿ ಬಿಗ್ ಆಫರ್| ಅಷ್ಟಕ್ಕೂ ಅಂಥಾ‌ ಆಫರ್ ನೀಡಿದ್ಯಾಕೆ ಗೊತ್ತಾ? Read More »

ಪ್ಯಾರಿಸ್ ಒಲಿಂಪಿಕ್ಸ್ 2024| ಜಾವೆಲಿನ್ ನಲ್ಲಿ ನೀರಜ್‌ಗೆ ಬೆಳ್ಳಿ; ಪಾಕಿಸ್ತಾನದ ನದೀಂಗೆ ಚಿನ್ನ

ಸಮಗ್ರ ನ್ಯೂಸ್: ಭಾರತದ ನೀರಜ್ ಚೋಪ್ರಾ ಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಪುರುಷರ ಜಾವೆಲಿನ್ ಥ್ರೋನಲ್ಲಿ ಬೆಳ್ಳಿ ಪದಕ ಜಯಿಸಿದರು. ಪಾಕಿಸ್ತಾನ ಅರ್ಷದ್ ನದೀಂ ಅವರು ಚಿನ್ನದ ಪದಕ ಗೆದ್ದರು. ಒಲಿಂಪಿಕ್ ಕೂಟದಲ್ಲಿ ಎರಡು ಪದಕಗಳನ್ನು ಗೆದ್ದ ಭಾರತದ ಮೊದಲ ಅಥ್ಲೀಟ್ ಎಂಬ ಹೆಗ್ಗಳಿಕೆಗೆ ನೀರಜ್ ಪಾತ್ರರಾದರು. ಈ ಒಲಿಂಪಿಕ್ಸ್‌ನಲ್ಲಿ ಭಾರತಕ್ಕೆ ಒಲಿದ ಒಟ್ಟಾರೆ ಐದನೇ ಪದಕವಾಗಿದೆ. ಅಲ್ಲದೇ ಇದು ಮೊದಲ ಬೆಳ್ಳಿಯಾಗಿದ್ದು, ಉಳಿದ ನಾಲ್ಕು ಕಂಚಿನ ಪದಕಗಳಾಗಿವೆ. 2020ರ ಟೋಕಿಯೊ ಒಲಿಂಪಿಕ್ಸ್‌ನಲ್ಲಿ ಚಿನ್ನದ ಪದಕ ಜಯಿಸಿದ್ದ ನೀರಜ್ ಇಲ್ಲಿಯೂ

ಪ್ಯಾರಿಸ್ ಒಲಿಂಪಿಕ್ಸ್ 2024| ಜಾವೆಲಿನ್ ನಲ್ಲಿ ನೀರಜ್‌ಗೆ ಬೆಳ್ಳಿ; ಪಾಕಿಸ್ತಾನದ ನದೀಂಗೆ ಚಿನ್ನ Read More »

ಒಲಿಂಪಿಕ್ಸ್ ನಲ್ಲಿ ಕಂಚಿನ ಪದಕಕ್ಕೆ ಕೊರಳೊಡ್ಡಿದ ಭಾರತ| ಸ್ಪೇನ್ ವಿರುದ್ಧ ಭರ್ಜರಿ ಗೆಲುವು

ಸಮಗ್ರ ನ್ಯೂಸ್: ಒಲಿಂಪಿಕ್ಸ್ ನಲ್ಲಿ ಗುರುವಾರ ನಡೆದ ಪ್ಲೇ ಆಫ್ ಪಂದ್ಯದಲ್ಲಿ ಸ್ಪೇನ್ ತಂಡವನ್ನು 2-1 ಅಂಕಗಳಿಂದ ಸೋಲಿಸಿ ಭಾರತ ಹಾಕಿ ತಂಡವು ಕಂಚಿನ ಪದಕಕ್ಕೆ ಕೊರಳೊಡ್ಡಿತು. ಸ್ಪೇನ್ ನಾಯಕ ಮಾರ್ಕ್ ಮಿರಾಲ್ಲೆಸ್ ಅವರು ಮೊದಲು ಗೋಲ್ ಬಾರಿಸುವ ಮೂಲಕ ಸ್ಪೇನ್ ಗೆ ಮುನ್ನಡೆ ತಂದು ಕೊಟ್ಟರು. ಆ ಬಳಿಕ ಭಾರತದ ನಾಯಕ ಹರ್ಮನ್‌ಪ್ರೀತ್ ಸಿಂಗ್ ಎರಡು ಗೋಲುಗಳನ್ನು ಬಾರಿಸಿ ಭಾರತಕ್ಕೆ ಮತ್ತೊಂದು ಕಂಚಿನ ಪದಕವನ್ನು ತಂದುಕೊಟ್ಟರು. ಟೋಕಿಯೊ ಒಲಿಂಪಿಕ್ಸ್‌ನಲ್ಲಿ ಭಾರತ ತಂಡವು ಕಂಚಿನ ಪದಕ ಜಯಿಸಿತ್ತು.

ಒಲಿಂಪಿಕ್ಸ್ ನಲ್ಲಿ ಕಂಚಿನ ಪದಕಕ್ಕೆ ಕೊರಳೊಡ್ಡಿದ ಭಾರತ| ಸ್ಪೇನ್ ವಿರುದ್ಧ ಭರ್ಜರಿ ಗೆಲುವು Read More »