ಬೆಳ್ತಂಗಡಿ ತಾಲೂಕಿನ ’ಕುತ್ಲೂರು’ ಗ್ರಾಮ ರಾಷ್ಟ್ರಪ್ರಶಸ್ತಿ ಗೆ ಆಯ್ಕೆ| ಅತ್ಯುತ್ತಮ ಪ್ರವಾಸಿ ಹಳ್ಳಿಯಾಗಿ ಆಯ್ಕೆಯಾದ ದ.ಕ ಜಿಲ್ಲೆಯ ಪುಟ್ಟ ಗ್ರಾಮ
ಸಮಗ್ರ ನ್ಯೂಸ್: “ಅತ್ಯುತ್ತಮ ಸಾಹಸಿಕ ಪ್ರವಾಸಿ ತಾಣ ಎಂಬ ಹೆಗ್ಗಳಿಕೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ‘ಕುತ್ಲೂರು ಗ್ರಾಮ’ ರಾಷ್ಟ್ರಪ್ರಶಸ್ತಿಗೆ ಆಯ್ಕೆಯಾಗಿದೆ. ವಿಶ್ವ ಪ್ರವಾಸೋದ್ಯಮ ದಿನದ ಅಂಗವಾಗಿ ವರ್ಷಂಪ್ರತಿ ನಡೆಯುವ “ಅತ್ಯುತ್ತಮ ಪ್ರವಾಸಿ ಹಳ್ಳಿಗಳು” ಇದರ “ಅತ್ಯುತ್ತಮ ಸಾಹಸಿಕ ಪ್ರವಾಸಿ ತಾಣ” ವಿಭಾಗದಲ್ಲಿ ರಾಷ್ಟ್ರಪ್ರಶಸ್ತಿಗೆ ಆಯ್ಕೆಯಾಗಿದ್ದು, ಸೆಪ್ಟೆಂಬರ್ 27 ರಂದು ದೆಹಲಿಯ ವಿಜ್ಞಾನ ಭವನದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಈ ಪ್ರಶಸ್ತಿ ವಿತರಣಾ ಸಮಾರಂಭ ನಡೆಯಲಿದೆ. ಉಪರಾಷ್ಟ್ರಪತಿಗಳಾದ ಜಗದೀಪ್ ಧನ್ಕರ್, ಪ್ರಧಾನಿ ನರೇಂದ್ರ ಮೋದಿ, ಪ್ರವಾಸೋದ್ಯಮ ಇಲಾಖೆಯ […]