ಕ್ರೀಡೆ

ಇಂದು RCB V/s PK ನಡುವೆ ಐಪಿಎಲ್ ಫೈನಲ್| ಯಾರ ಮುಡಿಗೆ ಕಪ್!?

ಸಮಗ್ರ ನ್ಯೂಸ್: ಇಂಡಿಯನ್‌ ಪ್ರೀಮಿಯರ್‌ ಲೀಗ್‌ 2025 ಫೈನಲ್‌ ಪಂದ್ಯ ಇಂದು ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆಯಲಿದೆ. ಬೆಂಗಳೂರು ಹಾಗೂ ಪಂಜಾಬ್‌ ತಂಡಗಳು ಮುಖಾಮುಖಿಯಾಗಲಿವೆ. ಚೊಚ್ಚಲ ಕಿರೀಟಕ್ಕಾಗಿ ಎರಡೂ ತಂಡಗಳ ನಡುವಿನ ಹೋರಾಟ ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾಗಲಿದೆ. ಐಪಿಎಲ್‌ ಇತಿಹಾಸದ 18 ವರ್ಷಗಳಲ್ಲಿಯೇ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ಹಾಗೂ ಪಂಜಾಬ್‌ ಕಿಂಗ್ಸ್‌ ತಂಡಗಳು ಇದೇ ಮೊದಲ ಬಾರಿಗೆ ಐಪಿಎಲ್‌ ಟ್ರೋಫಿ ಗೆಲ್ಲುವ ಸನಿಹದಲ್ಲಿವೆ. ವಿರಾಟ್‌ ಕೊಯ್ಲಿ, ಜೋಶ್‌ ಹ್ಯಾಜಲ್‌ವುಡ್‌ ಅವರಂತಹ ಬಲಾಢ್ಯ ಆಟಗಾರರನ್ನು ಹೊಂದಿದ್ದು ಗೆಲ್ಲುವ […]

ಇಂದು RCB V/s PK ನಡುವೆ ಐಪಿಎಲ್ ಫೈನಲ್| ಯಾರ ಮುಡಿಗೆ ಕಪ್!? Read More »

ಐಪಿಎಲ್ ಕ್ರಿಕೆಟ್| ಫೈನಲ್ ಗೆ ಲಗ್ಗೆ‌ ಇಟ್ಟ ಆರ್ ಸಿಬಿ

ಸಮಗ್ರ ನ್ಯೂಸ್: ಐಪಿಎಲ್‌ ಪಂದ್ಯಾವಳಿಯ ಗುರುವಾರ ನಡೆದ ಮೊದಲ ಕ್ವಾಲಿಫೈಯರ್‌ ಪಂದ್ಯದಲ್ಲಿ ರಾಯಲ್‌ ಚಾಲೆಂಜರ್ ಬೆಂಗಳೂರು ತಂಡ ಪಂಜಾಬ್‌ ಕಿಂಗ್ಸ್‌ ತಂಡಕ್ಕೆ ಅವರದ್ದೇ ನೆಲದಲ್ಲಿ ಸೋಲುಣಿಸಿ ಅತ್ಯಮೋಘ ಜಯ ಸಾಧಿಸಿ ಫೈನಲ್ ಗೆ ಲಗ್ಗೆ ಇಟ್ಟಿದೆ. ಟಾಸ್ ಗೆದ್ದ ಆರ್ ಸಿಬಿ ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿತು. ಬಿಗಿ ದಾಳಿಗೆ ನಲುಗಿದ ಪಂಜಾಬ್‌ ಕಿಂಗ್ಸ್‌ 101 ರನ್ ಗಳ ಸಣ್ಣ ಮೊತ್ತಕ್ಕೆ ಆಲೌಟಾಯಿತು. ಗುರಿ ಬೆನ್ನಟ್ಟಿದ ಆರ್ ಸಿಬಿ 10 ಓವರ್ ಗಳಲ್ಲಿ 2 ವಿಕೆಟ್ ನಷ್ಟಕ್ಕೆ 106

ಐಪಿಎಲ್ ಕ್ರಿಕೆಟ್| ಫೈನಲ್ ಗೆ ಲಗ್ಗೆ‌ ಇಟ್ಟ ಆರ್ ಸಿಬಿ Read More »

ಇಂಡೋ – ಪಾಕ್ ಉದ್ವಿಗ್ನ| ಐಪಿಎಲ್ ಟೂರ್ನಿ ರದ್ದುಗೊಳಿಸಿದ ಬಿಸಿಸಿಐ

ಸಮಗ್ರ ನ್ಯೂಸ್: ಭಾರತ-ಪಾಕ್ ನಡುವೆ ಉದ್ವಿಗ್ನ ಸ್ಥಿತಿ ನಿರ್ಮಾಣವಾದ ಹಿನ್ನೆಲೆ ಐಪಿಎಲ್ ಕ್ರಿಕೆಟ್ ಟೂರ್ನಿ ರದ್ದುಗೊಳಿಸಿ ಬಿಸಿಸಿಐ ಆದೇಶ ಹೊರಡಿಸಿದೆ. ನಿನ್ನೆ ಧರ್ಮಶಾಲಾದಲ್ಲಿ ನಡೆಯುತ್ತಿದ್ದ ಪಂಜಾಬ್​ ಕಿಂಗ್ಸ್​ ಮತ್ತು ಡೆಲ್ಲಿ ಕ್ಯಾಪಿಟಲ್ಸ್​ ನಡುವಿನ ಪಂದ್ಯ 10 ಓವರ್​ಗೆ ಸ್ಥಗಿತಗೊಂಡಿತು. ಇದಕ್ಕೆ ಕಾರಣ ಪಾಕಿಸ್ತಾನ ನಡೆಸಿದ ದಾಳಿ. ಭದ್ರತಾ ಕಾರಣಗಳಿಂದ ನಡೆಯುತ್ತಿದ್ದ ಪಂದ್ಯವನ್ನು ಕೂಡಲೇ ಲೈಟ್​ ಆಫ್​ ಮಾಡುವ ಮೂಲಕ ರದ್ದುಗೊಳಿಸಲಾಯಿತು. ಕೆಲವು ಸಮಯ ಸ್ಟೇಡಿಯಂನಲ್ಲಿಯೇ ಕಾದ ಕ್ರಿಕೆಟ್ ಪ್ರಿಯರು, ಪಂದ್ಯ ಮತ್ತೆ ಶುರುವಾಗಬಹುದು ಎಂದು ನಿರೀಕ್ಷಿಸಿದರು. ಆದ್ರೆ,

ಇಂಡೋ – ಪಾಕ್ ಉದ್ವಿಗ್ನ| ಐಪಿಎಲ್ ಟೂರ್ನಿ ರದ್ದುಗೊಳಿಸಿದ ಬಿಸಿಸಿಐ Read More »

ಐಪಿಎಲ್ ಕ್ರಿಕೆಟ್| ಮುಂಬೈನಲ್ಲಿ ಆರ್ ಸಿಬಿಗೆ ರೋಚಕ ಜಯ

ಸಮಗ್ರ ನ್ಯೂಸ್: ಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್​ನ 20ನೇ (IPL 2025) ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ರೋಚಕ ಜಯ ಸಾಧಿಸಿದೆ. ತನ್ನ ನಾಲ್ಕನೇ ಪಂದ್ಯದಲ್ಲಿ ಐದು ಬಾರಿಯ ಚಾಂಪಿಯನ್ ಮುಂಬೈ ತಂಡವನ್ನು ಎದುರಿಸಿದ್ದ ಆರ್​ಸಿಬಿ ಕೊನೆಯವರೆಗೂ ರೋಚಕತೆಯಿಂದ ಕೂಡಿದ್ದ ಈ ಪಂದ್ಯವನ್ನು ಕೊನೆಯ ಓವರ್​ನಲ್ಲಿ ಗೆದ್ದುಕೊಂಡಿತು. ಮುಂಬೈ ಗೆಲ್ಲಲು ಕೊನೆಯ ಓವರ್​ನಲ್ಲಿ 19 ರನ್ ಬೇಕಿತ್ತು. ಈ ವೇಳೆ 20ನೇ ಓವರ್ ಬೌಲಿಂಗ್ ಮಾಡುವ ಜವಬ್ದಾರಿ ಹೊತ್ತ ಕೃನಾಲ್ ಪಾಂಡ್ಯ ಈ ಓವರ್​ನಲ್ಲಿ 3

ಐಪಿಎಲ್ ಕ್ರಿಕೆಟ್| ಮುಂಬೈನಲ್ಲಿ ಆರ್ ಸಿಬಿಗೆ ರೋಚಕ ಜಯ Read More »

ತವರಲ್ಲಿ ಅಬ್ಬರಿಸಿದ ಕೆಕೆಆರ್| ಸನ್ ರೈಸರ್ಸ್ ಗೆ ಹೀನಾಯ ಸೋಲು

ಸಮಗ್ರ ನ್ಯೂಸ್: ಕೋಲ್ಕತಾದ ಈಡನ್ ಗಾರ್ಡನ್ಸ್ ಮೈದಾನದಲ್ಲಿ ನಡೆದ ಐಪಿಎಲ್ ಪಂದ್ಯದಲ್ಲಿ ಹಾಲಿ ಚಾಂಪಿಯನ್‌ ಕೋಲ್ಕತಾ ನೈಟ್ ರೈಡರ್ಸ್ (ಕೆಕೆಆರ್) ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ 80 ರನ್‌ಗಳ ಭಾರಿ ಗೆಲುವು ಸಾಧಿಸಿದೆ. ಗುರುವಾರ ನಡೆದ ಪಂದ್ಯದಲ್ಲಿ ಕೆಕೆಆರ್ ಬ್ಯಾಟಿಂಗ್ ಮತ್ತು ಬೌಲಿಂಗ್ ಅಬ್ಬರಕ್ಕೆ ಸನ್‌ರೈಸರ್ಸ್ ಹೈದರಾಬಾದ್ ಅಕ್ಷರಶಃ ತತ್ತರಿಸಿತು. ಟಾಸ್ ಗೆದ್ದ ಸನ್‌ರೈಸರ್ಸ್ ಹೈದರಾಬಾದ್ ಟಾಸ್ ಗೆದ್ದು ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡಿತು. ಮೊದಲು ಬ್ಯಾಟಿಂಗ್ ಮಾಡಿದ ಕೋಲ್ಕತಾ ನೈಟ್ ರೈಡರ್ಸ್ ಆರಂಭದಲ್ಲೇ ಪ್ರಮುಖ ವಿಕೆಟ್ ಕಳೆದುಕೊಂಡು

ತವರಲ್ಲಿ ಅಬ್ಬರಿಸಿದ ಕೆಕೆಆರ್| ಸನ್ ರೈಸರ್ಸ್ ಗೆ ಹೀನಾಯ ಸೋಲು Read More »

ಐಪಿಎಲ್ ಕ್ರಿಕೆಟ್| RCB ಗೆ ತವರಲ್ಲಿ ಸೋಲುಣಿಸಿದ ಗುಜರಾತ್

ಸಮಗ್ರ ನ್ಯೂಸ್: ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಇಂಡಿಯನ್ ಪ್ರೀಮಿಯರ್ ಲೀಗ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ ಗುಜರಾತ್ ಟೈಟಾನ್ಸ್ 8 ವಿಕೆಟ್ ಗಳ ಜಯ ಸಾಧಿಸಿದೆ. ಹೊಸ ನಾಯಕ ರಜತ್ ಪಟಿದಾರ್ ನಾಯಕತ್ವದಲ್ಲಿ, ಬೆಂಗಳೂರು ತಂಡವು ಸತತ ಎರಡು ಗೆಲುವುಗಳೊಂದಿಗೆ ಋತುವನ್ನು ಅದ್ಭುತವಾಗಿ ಆರಂಭಿಸಿದೆ. ಆದರೆ, ಶುಭ್​ಮನ್ ಗಿಲ್ ನೇತೃತ್ವದ ಗುಜರಾತ್ ತಂಡ ಮೊದಲ ಪಂದ್ಯದಲ್ಲಿ ಸೋತ ನಂತರ ಎರಡನೇ ಪಂದ್ಯದಲ್ಲಿ ಅಮೋಘ ಗೆಲುವು ಸಾಧಿಸಿತು. ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಈ ಸೀಸನ್​ನ

ಐಪಿಎಲ್ ಕ್ರಿಕೆಟ್| RCB ಗೆ ತವರಲ್ಲಿ ಸೋಲುಣಿಸಿದ ಗುಜರಾತ್ Read More »

ಐಪಿಎಲ್ ಕ್ರಿಕೆಟ್| ಸಿಎಸ್ ಕೆ ವಿರುದ್ದ ಆರ್ ಸಿಬಿಗೆ 50 ರನ್ ಗಳು ಭರ್ಜರಿ ಜಯ

ಸಮಗ್ರ ನ್ಯೂಸ್: ಚೆನ್ನೈನ ಎಂ.ಎ. ಚಿದಂಬರಂ ಕ್ರೀಡಾಂಗಣದಲ್ಲಿ ನಡೆದ ಇಂಡಿಯನ್ ಪ್ರೀಮಿಯರ್ ಲೀಗ್ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು 50 ರನ್‌ಗಳಿಂದ ಗೆಲುವು ಸಾಧಿಸಿದೆ. ಟಾಸ್ ಗೆದ್ದ ಚೆನ್ನೈ ಸೂಪರ್ ಕಿಂಗ್ಸ್ ಬೌಲಿಂಗ್ ಆಯ್ಕೆ ಮಾಡಿಕೊಂಡಿತ್ತು. ಮೊದಲು ಬ್ಯಾಟಿಂಗ್ ಮಾಡಿದ ಆರ್‌ಸಿಬಿ 7 ವಿಕೆಟ್ ನಷ್ಟಕ್ಕೆ ಚೆನ್ನೈ ಸೂಪರ್ ಕಿಂಗ್ಸ್‌ಗೆ 196 ರನ್‌ಗಳ ಗುರಿಯನ್ನು ನೀಡಿತ್ತು. ಆದರೆ ಸಿಎಸ್‌ಕೆ 8 ವಿಕೆಟ್‌ ನಷ್ಟಕ್ಕೆ 146 ರನ್‌ ಗಳಿಸಿ ಸೋಲನುಭವಿಸಿತು. ಟಾಸ್‌ ಸೋತರೂ

ಐಪಿಎಲ್ ಕ್ರಿಕೆಟ್| ಸಿಎಸ್ ಕೆ ವಿರುದ್ದ ಆರ್ ಸಿಬಿಗೆ 50 ರನ್ ಗಳು ಭರ್ಜರಿ ಜಯ Read More »

ಕಿವೀಸ್ ಮಣಿಸಿ ಚಾಂಪಿಯನ್ಸ್ ಟ್ರೋಫಿ ಎತ್ತಿ ಹಿಡಿದ ಇಂಡಿಯಾ

ಸಮಗ್ರ ನ್ಯೂಸ್: ದುಬೈನ ಅಂತರರಾಷ್ಟ್ರೀಯ ಕ್ರಿಕೆಟ್ ಮೈದಾನದಲ್ಲಿ ನಡೆದ ಭಾರತ ಹಾಗೂ ನ್ಯೂಜಿಲೆಂಡ್ ನಡುವಿನ 2025 ರ ಚಾಂಪಿಯನ್ಸ್ ಟ್ರೋಫಿ ಫೈನಲ್ ಪಂದ್ಯದಲ್ಲಿ ರೋಹಿತ್ ಶರ್ಮಾ ನಾಯಕತ್ವದ ಟೀಂ ಇಂಡಿಯಾ ಅಮೋಘ ಗೆಲುವು ಸಾಧಿಸಿದೆ. ತೀರ ರೋಚಕತೆಯಿಂದ ಕೂಡಿದ್ದ ಈ ಪಂದ್ಯದಲ್ಲಿ ಬಲಿಷ್ಠ ಕಿವೀಸ್ ತಂಡವನ್ನು 5 ವಿಕೆಟ್​ಗಳಿಂದ ಮಣಿಸಿದ ರೋಹಿತ್ ಪಡೆ ಚಾಂಪಿಯನ್ಸ್ ಟ್ರೋಫಿಯನ್ನು ಎತ್ತಿಹಿಡಿದಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ನ್ಯೂಜಿಲೆಂಡ್ ತಂಡ 7 ವಿಕೆಟ್‌ಗಳನ್ನು ಕಳೆದುಕೊಂಡು 251 ರನ್

ಕಿವೀಸ್ ಮಣಿಸಿ ಚಾಂಪಿಯನ್ಸ್ ಟ್ರೋಫಿ ಎತ್ತಿ ಹಿಡಿದ ಇಂಡಿಯಾ Read More »

ಇಂದು ಚಾಂಪಿಯನ್ಸ್ ಟ್ರೋಪಿ ಫೈನಲ್| 12 ವರ್ಷಗಳ ಬಳಿಕ ಟ್ರೋಫಿಗೆ ಮುತ್ತಿಡಲಿದೆಯಾ ಟೀಂ ಇಂಡಿಯಾ

ಸಮಗ್ರ ನ್ಯೂಸ್: ಭಾರತ ಕ್ರಿಕೆಟ್ ತಂಡವು 12 ವರ್ಷಗಳ ನಂತರ ಮತ್ತೊಮ್ಮೆ ಚಾಂಪಿಯನ್ಸ್‌ ಟ್ರೋಫಿಗೆ ಮುತ್ತಿಡುವ ಕ್ಷಣವನ್ನು ಕಣ್ತುಂಬಿಕೊಳ್ಳಲು ಭಾರತದ ಕೋಟ್ಯಂತರ ಕ್ರಿಕೆಟ್ ಅಭಿಮಾನಿಗಳು ಕಾತುರದಿಂದ ಕಾಯುತ್ತಿದ್ದಾರೆ. ಭಾನುವಾರ ದುಬೈ ಅಂತರರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆಯಲಿರುವ ಫೈನಲ್ ಪಂದ್ಯದಲ್ಲಿ ರೋಹಿತ್ ಶರ್ಮಾ ಬಳಗವು ನ್ಯೂಜಿಲೆಂಡ್ ವಿರುದ್ಧ ಜಯಿಸಿದರೆ ‘ಚಾಂಪಿಯನ್’ ಕನಸು ಈಡೇರಲಿದೆ. ಕಿವೀಸ್ ಬಳಗವೂ 25 ವರ್ಷಗಳ ನಂತರ ಪ್ರಶಸ್ತಿ ಮುಡಿಗೇರಿಸಿಕೊಳ್ಳುವತ್ತ ಚಿತ್ತ ನೆಟ್ಟಿದೆ. ಐಸಿಸಿಯ ಎಲ್ಲ ಟೂರ್ನಿಗಳಲ್ಲಿ ಕಿವೀಸ್ ಬಳಗವು 10-6ರಿಂದ ಭಾರತದ ಎದುರು ಮುನ್ನಡೆಯಲ್ಲಿದೆ. ಆದರೆ

ಇಂದು ಚಾಂಪಿಯನ್ಸ್ ಟ್ರೋಪಿ ಫೈನಲ್| 12 ವರ್ಷಗಳ ಬಳಿಕ ಟ್ರೋಫಿಗೆ ಮುತ್ತಿಡಲಿದೆಯಾ ಟೀಂ ಇಂಡಿಯಾ Read More »

ಶುರುವಾಗಲಿದೆ ಐಪಿಎಲ್‌ ಅಬ್ಬರ/ ಆರ್‌ಸಿಬಿ ಆನ್‌ಬಾಕ್ಸ್‌ ಟಿಕೆಟ್‌ ಒಂದೇ ಗಂಟೆಯಲ್ಲಿ ಸೋಲ್ಡ್‌ ಔಟ್‌

ಸಮಗ್ರ ನ್ಯೂಸ್‌: ಸದ್ಯದಲ್ಲೇ ಐಪಿಎಲ್ ಅಬ್ಬರ ಶುರುವಾಗಲಿದ್ದು, ಹೀಗಾಗಿ ಮಾರ್ಚ್ 17ರಂದು ಬೆಂಗಳೂರಿನ ಎಂ.ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿರುವ ಆರ್‌ಸಿಬಿ ಅನ್‌ಬಾಕ್ಸ್ ಟಿಕೆಟ್‌ಗಳು ಒಂದೇ ಗಂಟೆಯಲ್ಲಿ ಸೋಲ್ಡ್ ಔಟ್ ಆಗಿವೆ. ಪ್ರತಿ ವರ್ಷದಂತೆ ಇಂಡಿಯನ್ ಪ್ರೀಮಿಯರ್ ಲೀಗ್‌ಗೂ ಮುಂಚಿತವಾಗಿ ಐಕಾನಿಕ್ ಆರ್‌ಸಿಬಿ ಆನ್‌ಬಾಕ್ಸ್ ಈವೆಂಟ್‌ನ ಟಿಕೆಟ್‌ಗಳ ಆನ್‌ಲೈನ್ ಸೇಲ್ ಇಂದು ಆರಂಭವಾಗಿತ್ತು. ಆರಂಭವಾದ ಒಂದೇ ಗಂಟೆಯೊಳಗೆ ಟಿಕೆಟ್‌ಗಳು ಮಾರಾಟವಾಗಿವೆ. ಮಾರ್ಚ್ 22ರಂದು ಈಡನ್ ಗಾರ್ಡನ್ಸ್‌ನಲ್ಲಿ ನಡೆಯಲಿರುವ ಮೊದಲ ಪಂದ್ಯದಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ ತಂಡವನ್ನು ಎದುರಿಸುವ ಮೂಲಕ ಆರ್‌ಸಿಬಿ

ಶುರುವಾಗಲಿದೆ ಐಪಿಎಲ್‌ ಅಬ್ಬರ/ ಆರ್‌ಸಿಬಿ ಆನ್‌ಬಾಕ್ಸ್‌ ಟಿಕೆಟ್‌ ಒಂದೇ ಗಂಟೆಯಲ್ಲಿ ಸೋಲ್ಡ್‌ ಔಟ್‌ Read More »