ಕ್ರೀಡೆ

2020-21ನೇ ಸಾಲಿನ ಏಕಲವ್ಯ, ಜೀವಮಾನ ಸಾಧನೆ, ಕ್ರೀಡಾರತ್ನ ಪ್ರಶಸ್ತಿ ಘೋಷಣೆ|

ಸಮಗ್ರ ನ್ಯೂಸ್: ಕರ್ನಾಟಕ ಸರ್ಕಾರದ ಕ್ರೀಡಾ ಇಲಾಖೆ ವತಿಯಿಂದ ನೀಡುವ 2020-21ನೇ ಸಾಲಿನ ಏಕಲವ್ಯ ಪ್ರಶಸ್ತಿ, ಜೀವಮಾನ ಸಾಧನೆ, ಕ್ರೀಡಾರತ್ನ ಹಾಗೂ ಕ್ರೀಡಾ ಪೋಷಕ ಪ್ರಶಸ್ತಿ ಪುರಸ್ಕೃತರ ಪಟ್ಟಿಯನ್ನು ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಚಿವ ಡಾ.ನಾರಾಯಣ ಗೌಡ ಘೋಷಿಸಿದ್ದಾರೆ. ಇಂದು ವಿಕಾಸಸೌಧದಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಅವರು, ಕ್ರೀಡಾ ಕ್ಷೇತ್ರದಲ್ಲಿ ವಿವಿಧ ಸಾಧನೆಗೈದ ಕ್ರೀಡಾಪಟುಗಳು ಹಾಗೂ ತರಬೇತುದಾರರಿಗೆ ಕೊಡಲ್ಪಡುವ ಕ್ರೀಡಾಪಶಸ್ತಿ ಪುರಸ್ಕೃತರ ಪಟ್ಟಿಯನ್ನು ಬಿಡುಗಡೆಗೊಳಿಸಿದರು. ಏಕಲವ್ಯ ಪ್ರಶಸ್ತಿಗೆ 15, ಕರ್ನಾಟಕ ಕ್ರೀಡಾರತ್ನ ಪ್ರಶಸ್ತಿಗೆ […]

2020-21ನೇ ಸಾಲಿನ ಏಕಲವ್ಯ, ಜೀವಮಾನ ಸಾಧನೆ, ಕ್ರೀಡಾರತ್ನ ಪ್ರಶಸ್ತಿ ಘೋಷಣೆ| Read More »

ಇಂದಿನಿಂದ ಐಪಿಎಲ್ ಕಲರವ| ಚುಟುಕು ಮಹಾಸಮರಕ್ಕೆ ಕ್ರಿಕೆಟ್ ಕಲಿಗಳು ರೆಡಿ|

ಸಮಗ್ರ ನ್ಯೂಸ್: ಬಹುನಿರೀಕ್ಷಿತ 15 ನೇ ಆವೃತ್ತಿಯ ಐಪಿಎಲ್ ಇಂದು ಆರಂಭವಾಗಲಿದ್ದು, ಈ ಬಾರಿ ಎರಡು ಹೊಸ ತಂಡಗಳ ಸೇರ್ಪಡೆಯೊಂದಿಗೆ, ಒಟ್ಟು 10 ತಂಡಗಳು ಟ್ರೋಫಿಗಾಗಿ ಕಾದಾಡಲಿವೆ. ಮುಂಬೈನ ವಾಂಖಡೆ ಕ್ರೀಡಾಂಗಣದಲ್ಲಕ ಇಂದು ಐಪಿಎಲ್ ನ ಮೊದಲ ಪಂದ್ಯ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಕೋಲ್ಕತ್ತಾ ನೈಟ್ ರೈಡರ್ಸ್ ನಡುವೆ ನಡೆಯಲಿದೆ. ಎರಡನೇ ದಿನದ ಆಟದಲ್ಲಿ ಕಳೆದ ಋತುವಿನ ರನ್ನರ್ಸ್ ಅಪ್ ದೆಹಲಿ ಕ್ಯಾಪಿಟಲ್ಸ್ ಮುಂಬೈನ ಬ್ರಬೋರ್ನ್ ಕ್ರೀಡಾಂಗಣದಲ್ಲಿ ಐದು ಬಾರಿ ಚಾಂಪಿಯನ್ ಮುಂಬಾ ಇಂಡಿಯನ್ಸ್ ವಿರುದ್ಧ

ಇಂದಿನಿಂದ ಐಪಿಎಲ್ ಕಲರವ| ಚುಟುಕು ಮಹಾಸಮರಕ್ಕೆ ಕ್ರಿಕೆಟ್ ಕಲಿಗಳು ರೆಡಿ| Read More »

ಏಷ್ಯಾ ಕಪ್ ಕ್ರಿಕೆಟ್ ದಿನಾಂಕ ಪ್ರಕಟ| ಭಾರತಕ್ಕೆ ಪಾಕಿಸ್ತಾನವೇ ಎದುರಾಳಿ

ಸಮಗ್ರ ನ್ಯೂಸ್: ಕೊಲೊಂಬೋದಲ್ಲಿ ನಡೆದ ಏಷ್ಯನ್ ಕ್ರಿಕೆಟ್ ಕೌನ್ಸಿಲ್ ಸಭೆಯಲ್ಲಿ ಏಷ್ಯಾಕಪ್ ಕ್ರಿಕೆಟ್ ಗೆ ದಿನಾಂಕ ನಿಗದಿಗೊಳಿಸಲಾಗಿದೆ. ಆಗಸ್ಟ್ 27 ರಿಂದ ಟೂರ್ನಿ ಆರಂಭವಾಗಲಿದ್ದು, ಸೆಪ್ಟೆಂಬರ್ 11 ರಂದು ಫೈನಲ್ ಪಂದ್ಯ ನಡೆಯಲಿದೆ. ಶ್ರೀಲಂಕಾದಲ್ಲಿ ನಡೆಯಲಿರುವ ಟೂರ್ನಿಯಲ್ಲಿ ಭಾರತ, ಪಾಕಿಸ್ತಾನ, ಶ್ರೀಲಂಕಾ, ಬಾಂಗ್ಲಾದೇಶ ಮತ್ತು ಅಫ್ಘಾನಿಸ್ತಾನ ತಂಡಗಳು ಭಾಗವಹಿಸುವುದು ಖಚಿತವಾಗಿದೆ. ಅರ್ಹತಾ ಸುತ್ತಿನ ಪಂದ್ಯದಲ್ಲಿ ಹಾಂಗ್ ಕಾಂಗ್, ಕುವೈತ್, ಸಿಂಗಾಪುರ್, ಯುಎಇ ತಂಡಗಳು ಸೆಣಸಲಿದ್ದು, ಗೆದ್ದ ಒಂದು ತಂಡ ಏಷ್ಯಾ ಕಪ್ ಗೆ ಅರ್ಹತೆ ಪಡೆಯಲಿದೆ. ಟಿ20

ಏಷ್ಯಾ ಕಪ್ ಕ್ರಿಕೆಟ್ ದಿನಾಂಕ ಪ್ರಕಟ| ಭಾರತಕ್ಕೆ ಪಾಕಿಸ್ತಾನವೇ ಎದುರಾಳಿ Read More »

2022 ರ ಐಪಿಎಲ್ ವೇಳಾಪಟ್ಟಿ ಪ್ರಕಟ| ಮಾ.26 ರಿಂದ ಪಂದ್ಯಾರಂಭ|

ಸಮಗ್ರ ನ್ಯೂಸ್: ಮುಂಬೈ ಮತ್ತು ಪುಣೆಯಲ್ಲಿ ನಡೆಯಲಿರುವ ಬಹುನಿರೀಕ್ಷಿತ ಟಾಟಾ ಐಪಿಎಲ್ 2022 ರ ಪಂದ್ಯದ ವೇಳಾಪಟ್ಟಿಯನ್ನು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಪ್ರಕಟಿಸಿದೆ. ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಕೋಲ್ಕತ್ತಾ ನೈಟ್ ರೈಡರ್ಸ್ ನಡುವಿನ ಹಣಾಹಣಿಯೊಂದಿಗೆ 2022 ರ ಐಪಿಎಲ್ ನ 15 ನೇ ಸೀಸನ್ ಮಾರ್ಚ್ 26 ರಂದು ವಾಂಖೆಡೆ ಕ್ರೀಡಾಂಗಣದಲ್ಲಿ ಪ್ರಾರಂಭವಾಗಲಿದೆ. ಮಾರ್ಚ್ 27 ರಂದು, ಲೀಗ್ ತನ್ನ ಮೊದಲ ಡಬಲ್ ಹೆಡರ್ ಅನ್ನು ಪ್ರದರ್ಶಿಸಲಿದೆ, ಬ್ರಬೋರ್ನ್ ನಲ್ಲಿ ಡೇ ಆಟದೊಂದಿಗೆ ಪ್ರಾರಂಭವಾಗಲಿದೆ,

2022 ರ ಐಪಿಎಲ್ ವೇಳಾಪಟ್ಟಿ ಪ್ರಕಟ| ಮಾ.26 ರಿಂದ ಪಂದ್ಯಾರಂಭ| Read More »

ಮಂಗಳೂರು: ಅಥ್ಲೆಟಿಕ್ಸ್ ಚಾಂಪಿಯನ್ ಶಿಪ್ ನಲ್ಲಿ ದೇಶಕ್ಕೆ ಕೀರ್ತಿ ತಂದ ಭವಾನಿ

ಸಮಗ್ರ ನ್ಯೂಸ್: ಮಂಗಳೂರಿನ 64 ವರ್ಷದ ಮಹಿಳಾ ಕ್ರೀಡಾಪಟು ಭವಾನಿ ಜೋಗಿ ಇತ್ತೀಚಿಗೆ ಶ್ರೀಲಂಕಾದಲ್ಲಿ ನಡೆದ 35ನೇ ವಾರ್ಷಿಕ ಮಾಸ್ಟರ್ಸ್ (ಒಪನ್) ಅಥ್ಲೆಟಿಕ್ ಚಾಂಪಿಯನ್ ಶಿಪ್ ನಲ್ಲಿ ಮೂರು ಚಿನ್ನ, ಒಂದು ಬೆಳ್ಳಿ ಮತ್ತು ಒಂದು ಕಂಚಿನ ಪದಕ ಗೆಲ್ಲುವುದರೊಂದಿಗೆ ದೇಶಕ್ಕೆ ಕೀರ್ತಿ ತಂದಿದ್ದಾರೆ. ಇವರು ಇದುವರೆಗೆ ಫೀಲ್ಡ್ ಮತ್ತು ಟ್ರ್ಯಾಕ್ ಸ್ಪರ್ಧೆಗಳಲ್ಲಿ 200ಕ್ಕೂ ಅಧಿಕ ಪದಕಗಳನ್ನು ಗೆದಿದ್ದಾರೆ. ವೃತ್ತಿಯಲ್ಲಿ ನರ್ಸ್ ಆಗಿರುವ ಭವಾನಿ ಮೂಲತ: ಹಾಸನ ಜಿಲ್ಲೆ ಸಕಲೇಶಪುರದವರಾಗಿದ್ದು, ಪ್ರಸ್ತುತ ಮಂಗಳೂರಿನಲ್ಲಿ ವಾಸಿಸುತ್ತಿದ್ದಾರೆ. ಬಾಲ್ಯದಿಂದಲೂ ಕ್ರೀಡೆಯಲ್ಲಿ

ಮಂಗಳೂರು: ಅಥ್ಲೆಟಿಕ್ಸ್ ಚಾಂಪಿಯನ್ ಶಿಪ್ ನಲ್ಲಿ ದೇಶಕ್ಕೆ ಕೀರ್ತಿ ತಂದ ಭವಾನಿ Read More »

ಪ್ರೋ ಕಬಡ್ಡಿ ಸೀಸನ್8| ದಬಂಗ್ ಮಡಿಲಿಗೆ ಚಾಂಪಿಯನ್ ಕಿರೀಟ| ಪಾಟ್ನಾಗೆ 1 ಅಂಕದ ವೀರೋಚಿತ ಸೋಲು|

ಸಮಗ್ರ‌ ನ್ಯೂಸ್: ಎಂಟನೇ ಆವೃತ್ತಿ ಪ್ರೋ ಕಬಡ್ಡಿ ಫೈನಲ್ ರೋಚಕತೆ ಹುಟ್ಟಿಸಿತ್ತು. ಎರಡೂ ತಂಡಗಳು ಅಂಕಗಳನ್ನು ಸುಲಭವಾಗಿ ನೀಡಲಿಲ್ಲ. ಪರಿಣಾಮ ಕೊನೆಯ ಹಂತದವರೆಗೂ ನಡೆದ ಪಂದ್ಯದಲ್ಲಿ ದಬಾಂಗ್ ದೆಹಲಿ ಚಾಂಪಿಯನ್ ಪಟ್ಟವನ್ನು ಅಲಂಕರಿಸಿತು. ಈ ಮೂಲಕ ದಬಾಂಗ್ ಚೊಚ್ಚಲ ಬಾರಿಗೆ ಪ್ರಶಸ್ತಿ ಎತ್ತಿ ಸಂಭ್ರಮಿಸಿದೆ. ಶುಕ್ರವಾರ ನಡೆದ ಫೈನಲ್ ಪಂದ್ಯದಲ್ಲಿ ದಬಾಂಗ್ 37-36 ರಿಂದ ಪಾಟ್ನಾ ಪೈರೇಟ್ಸ್ ತಂಡವನ್ನು ಮಣಿಸಿ ಅಬ್ಬರಿಸಿತು. ಪಾಟ್ನಾ ರಕ್ಷಣಾ ವಿಭಾಗವನ್ನು ವಂಚಿಸಿ ಅಂಕಗಳಿಸಿದ ನವೀನ್ ಕುಮಾರ್ಮೊದಲಾವಧಿಯ ಪಂದ್ಯದಲ್ಲಿ ಪಾಟ್ನಾ ಪೈರೇಟ್ಸ್ ತಂಡ

ಪ್ರೋ ಕಬಡ್ಡಿ ಸೀಸನ್8| ದಬಂಗ್ ಮಡಿಲಿಗೆ ಚಾಂಪಿಯನ್ ಕಿರೀಟ| ಪಾಟ್ನಾಗೆ 1 ಅಂಕದ ವೀರೋಚಿತ ಸೋಲು| Read More »

ಪ್ರೊ ಕಬಡ್ಡಿ; ಪಾಟ್ನಾ ಪೈರೈಟ್ಸ್-ದಬಂಗ್ ದಿಲ್ಲಿ ನಡುವೆ ಇಂದು ಫೈನಲ್

ಸಮಗ್ರ ನ್ಯೂಸ್: ಕೊರೊನಾದಿಂದಾಗಿ ಎರಡು ವರ್ಷ ಸ್ಥಗಿತಗೊಂಡು, ಈ ಬಾರಿ ಬಯೋಬಬಲ್‌ನಲ್ಲಿ ಯಶಸ್ವಿಯಾಗಿ ನಡೆದ 8ನೇ ಆವೃತ್ತಿ ಪ್ರೊ ಕಬಡ್ಡಿಗೆ ಶುಕ್ರವಾರ ರಾತ್ರಿ ತೆರೆ ಬೀಳಲಿದೆ. ಮೂರು ಬಾರಿಯ ಚಾಂಪಿಯನ್‌ ಪಾಟ್ನಾ ಪೈರೆಟ್ಸ್‌ ಮತ್ತು ಕಳೆದ ಬಾರಿಯ ರನ್ನರ್ ಅಪ್‌ ದಬಾಂಗ್‌ ದಿಲ್ಲಿ ಪ್ರಶಸ್ತಿ ಸಮರದಲ್ಲಿ ಮುಖಾಮುಖಿಯಾಗಲಿವೆ. ಪಾಟ್ನಾ-ದಿಲ್ಲಿ ಲೀಗ್‌ ಹಂತದ ನಂ.1 ಮತ್ತು ನಂ.2 ತಂಡಗಳೆಂಬುದು ವಿಶೇಷ. ಈ ಕಾರಣದಿಂದ ಫೈನಲ್‌ ಹಣಾಹಣಿ ತೀವ್ರ ಪೈಪೋಟಿಯಿಂದ ಕೂಡಿರಲಿದೆ.

ಪ್ರೊ ಕಬಡ್ಡಿ; ಪಾಟ್ನಾ ಪೈರೈಟ್ಸ್-ದಬಂಗ್ ದಿಲ್ಲಿ ನಡುವೆ ಇಂದು ಫೈನಲ್ Read More »

ಬೆಂಗಳೂರಿನಲ್ಲಿ ಐಪಿಎಲ್ ಹರಾಜು – 590 ಆಟಗಾರರಿಗೆ ಫೈನಲ್‌ ಪಟ್ಟಿಯಲ್ಲಿ ಸ್ಥಾನ

ಸಮಗ್ರ ಸ್ಪೋರ್ಟ್ಸ್ ಡೆಸ್ಕ್: ಐಪಿಎಲ್ 15ನೇ ಆವೃತ್ತಿ ಹರಾಜಿಗೆ ಆಟಗಾರರ ಅಂತಿಮ ಪಟ್ಟಿ ಬಿಡುಗಡೆಯಾಗಿದ್ದು ಒಟ್ಟು 590 ಆಟಗಾರರು ಅಂತಿಮಪಟ್ಟಿಯಲ್ಲಿ ಸ್ಥಾನ ಪಡೆದುಕೊಂಡಿದ್ದಾರೆ. ಫೆಬ್ರವರಿ 12 ಮತ್ತು 13ರಂದು ಬೆಂಗಳೂರಿನಲ್ಲಿ ನಡೆಯಲಿರುವ ಆಟಗಾರರ ಮೆಗಾ ಹರಾಜು ಪ್ರಕ್ರಿಯೆಯಲ್ಲಿ 228 ಕ್ಯಾಪ್ಡ್ ಪ್ಲೇಯರ್ಸ್ ಮತ್ತು 355 ಅನ್‍ಕ್ಯಾಪ್ಡ್ ಆಟಗಾರರು ಹರಾಜಿನಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎಂದು ಐಪಿಎಲ್ ಆಡಳಿತ ಮಂಡಳಿ ತಿಳಿಸಿದೆ. ತಾರಾ ಆಟಗಾರರಾದ ಶ್ರೇಯಸ್ ಅಯ್ಯರ್, ಶಿಖರ್ ಧವನ್, ಸುರೇಶ್ ರೈನಾ, ಡ್ವೇನ್ ಬ್ರಾವೋ, ಡುಪ್ಲೆಸಿಸ್, ಡೇವಿಡ್ ವಾರ್ನರ್, ಡಿಕಾಕ್,

ಬೆಂಗಳೂರಿನಲ್ಲಿ ಐಪಿಎಲ್ ಹರಾಜು – 590 ಆಟಗಾರರಿಗೆ ಫೈನಲ್‌ ಪಟ್ಟಿಯಲ್ಲಿ ಸ್ಥಾನ Read More »

ದಾಖಲೆಗಳನ್ನೆಲ್ಲಾ ಪುಡಿಗೈದ ರಾಫೆಲ್ ನಡಾಲ್| 21ನೇ ಗ್ರಾಂಡ್ ಸ್ಲಾಮ್ ಪ್ರಶಸ್ತಿಗೆ ಮುತ್ತಿಕ್ಕಿದ ಟೆನಿಸ್ ತಾರೆ

ಸಮಗ್ರ ಸ್ಪೋರ್ಟ್ಸ್ ಡೆಸ್ಕ್: ಡಾಲ್ ಆಸ್ಟ್ರೇಲಿಯನ್ ಓಪನ್ 2022 ಪ್ರಶಸ್ತಿಯನ್ನು ಗೆಲ್ಲುವ ಮೂಲಕ 21 ನೇ ಗ್ರ್ಯಾಂಡ್ ಸ್ಲಾಮ್ ಗೆದ್ದು ಟೆನಿಸ್ ತಾರೆ ರಾಫೆಲ್ ನಡಾಲ್ ವಿಶ್ವದಾಖಲೆ ಮಾಡಿದ್ದಾರೆ. ಈ ಮೂಲಕ ನಡಾಲ್ ಪುರುಷರ ಸಿಂಗಲ್ಸ್‌ನಲ್ಲಿ ಅತಿ ಹೆಚ್ಚು ಗ್ರ್ಯಾಂಡ್ ಸ್ಲ್ಯಾಮ್ ಪ್ರಶಸ್ತಿಗಳನ್ನು ಗೆದ್ದ ಆಟಗಾರ ಎನಿಸಿಕೊಂಡಿದ್ದಾರೆ. ಸ್ಪೇನ್‌ನ ದಿಗ್ಗಜ ಟೆನಿಸ್ ತಾರೆ ರಾಫೆಲ್ ನಡಾಲ್ ಇತಿಹಾಸ ಸೃಷ್ಟಿಸಿದ್ದಾರೆ. ನಡಾಲ್ ಆಸ್ಟ್ರೇಲಿಯನ್ ಓಪನ್ 2022 ಪ್ರಶಸ್ತಿಯನ್ನು ಗೆಲ್ಲುವ ಮೂಲಕ 21 ನೇ ಗ್ರ್ಯಾಂಡ್ ಸ್ಲಾಮ್ ಗೆದ್ದು ವಿಶ್ವದಾಖಲೆ

ದಾಖಲೆಗಳನ್ನೆಲ್ಲಾ ಪುಡಿಗೈದ ರಾಫೆಲ್ ನಡಾಲ್| 21ನೇ ಗ್ರಾಂಡ್ ಸ್ಲಾಮ್ ಪ್ರಶಸ್ತಿಗೆ ಮುತ್ತಿಕ್ಕಿದ ಟೆನಿಸ್ ತಾರೆ Read More »

ಅಪ್ಪನಾದ ಸಂಭ್ರಮದಲ್ಲಿ ಯುವರಾಜ್ ಸಿಂಗ್

ನವದೆಹಲಿ: ಭಾರತ ಕ್ರಿಕೆಟ್​ ತಂಡದ ಮಾಜಿ ಆಲ್​ರೌಂಡರ್​ ಯುವರಾಜ್ ಸಿಂಗ್ ತಂದೆಯಾದ ಸಂಭ್ರಮದಲ್ಲಿದ್ದಾರೆ. ಯುವಿ​ ಮಡದಿ, ನಟಿ ಹಜೇಲ್​ ಕೀಚ್​​ ಮಂಗಳವಾರ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ಈ ಬಗ್ಗೆ ಯುವರಾಜ್ ಸಿಂಗ್ ಸಾಮಾಜಿಕ ಜಾಲತಾಣ ಟ್ವಿಟರ್​ ಹಾಗೂ ಇನ್​ಸ್ಟಾಗ್ರಾಂ ಖಾತೆಗಳಲ್ಲಿ ಸಂತಸ ಹಂಚಿಕೊಂಡಿದ್ದಾರೆ. ‘ದೇವರು ನಮಗೆ ಗಂಡು ಮಗುವನ್ನು ಆಶೀರ್ವದಿಸಿದ್ದಾನೆ ಎಂದು ನಮ್ಮ ಎಲ್ಲ ಅಭಿಮಾನಿಗಳು, ಕುಟುಂಬದವರು ಮತ್ತು ಸ್ನೇಹಿತರಿಗೆ ಹಂಚಿಕೊಳ್ಳಲು ನಾವು ಉತ್ಸುಕರಾಗಿದ್ದೇವೆ’ ಎಂದು ಯುವಿ ಪೋಸ್ಟ್​ ಮಾಡಿದ್ದಾರೆ.

ಅಪ್ಪನಾದ ಸಂಭ್ರಮದಲ್ಲಿ ಯುವರಾಜ್ ಸಿಂಗ್ Read More »