ಕ್ರೀಡೆ

ಸೆಮಿಫೈನಲ್‌ ಗೆದ್ದ ನ್ಯೂಜಿಲೆಂಡ್‌/ ಫೈನಲ್‌ನಲ್ಲಿ ಭಾರತ- ನ್ಯೂಜಿಲೆಂಡ್ ಮುಖಾಮುಖಿ

ಸಮಗ್ರ ನ್ಯೂಸ್‌: ಐಸಿಸಿ ಚಾಂಪಿಯನ್ಸ್ ಟ್ರೋಫಿಯ 2ನೇ ಸೆಮಿ ಫೈನಲ್ ನಲ್ಲಿ ಅಬ್ಬರ ಬ್ಯಾಟಿಂಗ್ ಪ್ರದರ್ಶನ ನೀಡಿದ್ದ ನ್ಯೂಜಿಲೆಂಡ್ ತಂಡ ಬೌಲಿಂಗ್ ನಲ್ಲೂ ಪರಾಕ್ರಮ ಮೆರೆದಿದ್ದು, ದಕ್ಷಿಣ ಆಫ್ರಿಕಾ ವಿರುದ್ಧ ಗೆದ್ದು ಫೈನಲ್ ಗೆ ಲಗ್ಗೆ ಇಟ್ಟಿದೆ. ಪಾಕ್ ಲಾಹೋರ್ ನ ಗಡಾಫಿ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ನ್ಯೂಜಿಲೆಂಡ್ ತಂಡ ಭರ್ಜರಿ ಬ್ಯಾಟಿಂಗ್ ನಡೆಸಿ ಆರು ವಿಕೆಟ್‌ಗಳಿಗೆ 362 ರನ್ ಗಳಿಸಿತು. ಇದನ್ನು ಬೆನ್ನತ್ತಿದ್ದ ಆಫ್ರಿಕಾ 9 ವಿಕೆಟ್ ಕಳೆದುಕೊಂಡು 312 ರನ್ ಗಳಿಸಿ ಸೋಲು ಅನುಭವಿಸಿದೆ. […]

ಸೆಮಿಫೈನಲ್‌ ಗೆದ್ದ ನ್ಯೂಜಿಲೆಂಡ್‌/ ಫೈನಲ್‌ನಲ್ಲಿ ಭಾರತ- ನ್ಯೂಜಿಲೆಂಡ್ ಮುಖಾಮುಖಿ Read More »

ಏಕದಿನ ಕ್ರಿಕೆಟ್ ಗೆ ಸ್ಟೀವ್ ಸ್ಮಿತ್ ವಿದಾಯ

ಸಮಗ್ರ ನ್ಯೂಸ್: ಆಸ್ಟ್ರೇಲಿಯಾದ ಅನುಭವಿ ಬ್ಯಾಟರ್‌ ಸ್ಟೀವ್ ಸ್ಮಿತ್ ಏಕದಿನ ಕ್ರಿಕೆಟ್‌ಗೆ ಅಚ್ಚರಿಯ ವಿದಾಯ ಹೇಳಿದ್ದಾರೆ. ಚಾಂಪಿಯನ್ಸ್ ಟ್ರೋಫಿ 2025ರ ಸೆಮಿಫೈನಲ್‌ ಪಂದ್ಯದಲ್ಲಿ ಭಾರತ ವಿರುದ್ಧ ಸೋತ ಬೆನ್ನಲ್ಲೇ ಕ್ರಿಕೆಟಿಗ ದಿಢೀರ್‌ ನಿವೃತ್ತಿ ಘೋಷಿಸಿದ್ದಾರೆ. ಭಾರತ ವಿರುದ್ಧದ ಸೆಮಿ ಕದನದಲ್ಲಿ 73 ರನ್ ಗಳಿಸಿದ ಅವರು ಆಸ್ಟ್ರೇಲಿಯಾ ಪರ ಗರಿಷ್ಠ ರನ್ ಗಳಿಸಿದ ಆಟಗಾರ ಎನಿಸಿಕೊಂಡರು. ಇದನ್ನೇ ತಮ್ಮ ಕೊನೆಯ ಏಕದಿನ ಪಂದ್ಯ ಎಂದು ತಂಡದ ಸಹ ಆಟಗಾರರಿಗೆ ತಿಳಿಸಿದರು. ಏಕದಿನ ಸ್ವರೂಪಕ್ಕೆ ವಿದಾಯ ಹೇಳಿದರೂ, 35

ಏಕದಿನ ಕ್ರಿಕೆಟ್ ಗೆ ಸ್ಟೀವ್ ಸ್ಮಿತ್ ವಿದಾಯ Read More »

ಐಸಿಸಿ‌ ಚಾಂಪಿಯನ್ಸ್ ಟ್ರೋಫಿ| ಆಸ್ಟ್ರೇಲಿಯಾ ಮಣಿಸಿ ಫೈನಲ್ ಗೆ ಲಗ್ಗೆ ಇಟ್ಟ ಟೀಂ‌ ಇಂಡಿಯಾ

ಸಮಗ್ರ ನ್ಯೂಸ್: ಐಸಿಸಿ ಚಾಂಪಿಯನ್ಸ್ ಟ್ರೋಫಿಯ ಸೆಮಿ ಫೈನಲ್ ಪಂದ್ಯದಲ್ಲಿ ಪ್ರಬಲ ಆಸ್ಟ್ರೇಲಿಯಾ ವಿರುದ್ಧ ಭಾರತ ತಂಡ ಭರ್ಜರಿ ಜಯ ದಾಖಲಿಸಿ ಫೈನಲ್ ಗೆ ಲಗ್ಗೆ ಇಟ್ಟಿದೆ. ದುಬೈ ಅಂತರರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದ ಚಾಂಪಿಯನ್ಸ್ ಟ್ರೋಫಿ ಮೊದಲ ಸೆಮಿಫೈನಲ್‌ ಪಂದ್ಯದಲ್ಲಿ ಇಂದು ಆಸ್ಟ್ರೇಲಿಯಾ ಹಾಗೂ ಭಾರತ ಮುಖಾಮುಖಿಯಾಗಿದ್ದವು. ಎರಡೂ ತಂಡಗಳು ಬಲಿಷ್ಠ ಆಟಗಾರರ ಪಡೆಯನ್ನೇ ಹೊಂದಿದ್ದ ಕಾರಣ ಈ ಪಂದ್ಯ ಸಾಕಷ್ಟು ಕುತೂಹಲ ಕೆರಳಿಸಿತ್ತು. ಅದರಂತೆ ಪಂದ್ಯದಲ್ಲಿ ಟಾಸ್ ಗೆದ್ದ ಆಸ್ಟ್ರೇಲಿಯಾ ಮೊದಲು ಬ್ಯಾಟಿಂಗ್ ಮಾಡಿ, ಪೂರ್ಣ

ಐಸಿಸಿ‌ ಚಾಂಪಿಯನ್ಸ್ ಟ್ರೋಫಿ| ಆಸ್ಟ್ರೇಲಿಯಾ ಮಣಿಸಿ ಫೈನಲ್ ಗೆ ಲಗ್ಗೆ ಇಟ್ಟ ಟೀಂ‌ ಇಂಡಿಯಾ Read More »

ಚಾಂಪಿಯನ್ಸ್ ಟ್ರೋಫಿ| ಕೊಹ್ಲಿ ವೀರಾವೇಶಕ್ಕೆ ಮಕಾಡೆ ಮಲಗಿದ ಪಾಕ್

ಸಮಗ್ರ ನ್ಯೂಸ್: ಚಾಂಪಿಯನ್ಸ್ ಟ್ರೋಫಿಯ ಪಾಕಿಸ್ತಾನ ಮತ್ತು ಭಾರತ ನಡುವಿನ ಪಂದ್ಯ ದುಬೈನಲ್ಲಿ ನಡೆದಿದ್ದು ಪಾಕ್ ವಿರುದ್ಧ ಭಾರತ 6 ವಿಕೆಟ್ ಗಳಿಂದ ಗೆದ್ದು ಬೀಗಿದೆ. 43ನೇ ಓವರ್​ನ ಮೂರನೇ ಎಸೆತದಲ್ಲಿ ಭರ್ಜರಿ ಬೌಂಡರಿ ಬಾರಿಸುವ ಮೂಲಕ ವಿರಾಟ್ ಕೊಹ್ಲಿ ತಮ್ಮ ಶತಕವನ್ನು ಪೂರೈಸಿದರು. ಜೊತೆಗೆ ತಂಡವನ್ನು ಗೆಲುವಿನ ದಡ ಮುಟ್ಟಿಸಿದರು. ಮೊದಲು ಬ್ಯಾಟಿಂಗ್ ಮಾಡಿದ ಪಾಕಿಸ್ತಾನ 49.4 ಓವರ್‌ಗಳಲ್ಲಿ 241 ರನ್‌ಗಳಿಗೆ ತನ್ನೆಲ್ಲಾ ವಿಕೆಟ್ ಕಳೆದುಕೊಂಡು ಆಲ್‌ಔಟ್ ಆಗಿ ಭಾರತಕ್ಕೆ 242 ರನ್‌ಗಳ ಗುರಿಯನ್ನು ನೀಡಿತ್ತು.

ಚಾಂಪಿಯನ್ಸ್ ಟ್ರೋಫಿ| ಕೊಹ್ಲಿ ವೀರಾವೇಶಕ್ಕೆ ಮಕಾಡೆ ಮಲಗಿದ ಪಾಕ್ Read More »

ಚಾಂಪಿಯನ್ಸ್ ಟ್ರೋಫಿ ಕ್ರಿಕೆಟ್| ಇಂದು‌ ಇಂಡೋ – ಪಾಕ್ ಮುಖಾಮುಖಿ

ಸಮಗ್ರ ನ್ಯೂಸ್: ಇಂದು ನಡೆಯುವ ಹೈವೋಲ್ಟೇಜ್ ಚಾಂಪಿಯನ್ಸ್ ಟ್ರೋಫಿ ಪಂದ್ಯದಲ್ಲಿ ಭಾರತ ಮತ್ತು ಪಾಕಿಸ್ತಾನ ತಂಡಗಳು ಮುಖಾಮುಖಿ ಆಗಲಿದೆ. ಈ ಪಂದ್ಯವು ದುಬೈನಲ್ಲಿ ನಡೆಯುತ್ತಿದೆ.ಈ ಪಂದ್ಯ ಪಾಕಿಸ್ತಾನದ ಪಾಲಿಗೆ ಅತ್ಯಂತ ಪ್ರಮುಖವಾಗಿದ್ದರೆ, ಬಾಂಗ್ಲಾದೇಶ ಮಣಿಸಿ ಪ್ರಾರಂಭಿಸಿದ ಭಾರತಕ್ಕೆ ಪ್ರತಿಷ್ಠೆಯ ವಿಷಯವಾಗಿದೆ. ಪಾಕಿಸ್ತಾನ ತಂಡ ಮೊದಲ ಪಂದ್ಯದಲ್ಲಿ ನ್ಯೂಜಿಲೆಂಡ್ ವಿರುದ್ಧ 60 ರನ್ ಗಳಿಂದ ಸೋತು ಟೂರ್ನಯಿಂದ ಬಹುತೇಕ ಹೊರಬಿದ್ದಿದೆ. ಪಾಕಿಸ್ತಾನ ನಾಕೌಟ್ ಹಂತ ಪ್ರವೇಶಿಸಬೇಕಾದರೆ ಈ ಪಂದ್ಯದಲ್ಲಿ ಗೆದ್ದು , ರನ್ ಸರಾಸರಿಯಲ್ಲಿ ಮೇಲುಗೈ ಸಾಧಿಸಬೇಕಾಗಿದೆ. ಭಾರತವು

ಚಾಂಪಿಯನ್ಸ್ ಟ್ರೋಫಿ ಕ್ರಿಕೆಟ್| ಇಂದು‌ ಇಂಡೋ – ಪಾಕ್ ಮುಖಾಮುಖಿ Read More »

ಮಾಜಿ ಕ್ರಿಕೆಟಿಗ ಸೌರವ್ ಗಂಗೂಲಿ ಕಾರು ಅಪಘಾತ

ಸಮಗ್ರ ನ್ಯೂಸ್: ಭಾರತದ ಮಾಜಿ ಕ್ರಿಕೆಟಿಗ ಸೌರವ್ ಗಂಗೂಲಿ ಪ್ರಯಾಣ ಮಾಡುತ್ತಿದ್ದ ಕಾರು ಪಶ್ಚಿಮ ಬಂಗಾಳದ ದುರ್ಗಾಪುರ ಹೆದ್ದಾರಿಯಲ್ಲಿ ಅಪಘಾತಕ್ಕೀಡಾಗಿದೆ. ಕಾರ್ಯಕ್ರಮವೊಂದಕ್ಕೆ ತೆರಳಲು ಪ್ರಯಾಣಿಸುತ್ತಿದ್ದಾಗ ಈ ಅಪಘಾತ ಸಂಭವಿಸಿದ್ದು, ಅದೃಷವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಈ ಘಟನೆಯಲ್ಲಿ ಗಂಗೂಲಿ ಬೆಂಗಾವಲು ಪಡೆಯ 2 ವಾಹನಗಳಿಗೆ ಹಾನಿಯಾಗಿದೆ. ಬರ್ಧಮಾನ್‌ನಲ್ಲಿ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಲು ಗಂಗೂಲಿ ತಮ್ಮ ರೇಂಜ್ ರೋವರ್ ಕಾರಿನಲ್ಲಿ ಪ್ರಯಾಣ ಮಾಡುತ್ತಿದ್ದರು. ದುರ್ಗಾಪುರ ಹೆದ್ದಾರಿಯ ದಂತನ್‌ಪುರ ಎಂಬಲ್ಲಿ ಗಂಗೂಲಿ ಅವರ ಕಾರಿಗೆ ಲಾರಿ ಡಿಕ್ಕಿ ಹೊಡೆದಿದೆ. ಬೆಂಗಾವಲು ಪಡೆಯ

ಮಾಜಿ ಕ್ರಿಕೆಟಿಗ ಸೌರವ್ ಗಂಗೂಲಿ ಕಾರು ಅಪಘಾತ Read More »

ಜಸ್ಪ್ರೀತ್ ಬುಮ್ರಾ ಐಸಿಸಿ ಚಾಂಪಿಯನ್ಸ್ ನಿಂದ ಹೊರಕ್ಕೆ

ಸಮಗ್ರ ನ್ಯೂಸ್: ಭಾರತದ ವೇಗದ ಬೌಲರ್ ಜಸ್ಪ್ರೀತ್ ಬುಮ್ರಾ ಬೆನ್ನು ನೋವಿನ ಕಾರಣದಿಂದ ಮುಂಬರುವ ಐಸಿಸಿ ಚಾಂಪಿಯನ್ಸ್ ಟ್ರೋಫಿಯಿಂದ ಹೊರಗುಳಿಯಲಿದ್ದಾರೆ ಎಂದು ಮಂಗಳವಾರ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ದೃಢಪಡಿಸಿದೆ. ಬುಮ್ರಾ ಅವರ ಅಲಭ್ಯತೆಯ ಕಾರಣ, ಹಿರಿಯ ಪುರುಷರ ತಂಡದ ಆಯ್ಕೆ ಸಮಿತಿಯು ಟೂರ್ನಮೆಂಟ್‌ಗಾಗಿ ಹರ್ಷಿತ್ ರಾಣಗೆ ಬುಲಾವ್ ಕೊಟ್ಟಿದೆ. ಟೂರ್ನಿ ಫೆಬ್ರವರಿ 19 ರಂದು ಪಾಕಿಸ್ತಾನದ ಆತಿಥ್ಯದಲ್ಲಿ ಆರಂಭವಾಗಲಿದೆ. ಬದಲಾದ ತಂಡದಲ್ಲಿ ಮಿಸ್ಟರಿ ಸ್ಪಿನ್ನರ್ ವರುಣ್ ಚಕ್ರವರ್ತಿಯೂ ಸ್ಥಾನ ಪಡೆದಿದ್ದಾರೆ. ಆರಂಭಿಕ ಬ್ಯಾಟರ್​ ಯಶಸ್ವಿ ಜೈಸ್ವಾಲ್

ಜಸ್ಪ್ರೀತ್ ಬುಮ್ರಾ ಐಸಿಸಿ ಚಾಂಪಿಯನ್ಸ್ ನಿಂದ ಹೊರಕ್ಕೆ Read More »

ಪುತ್ತೂರು: 38ನೇ ನ್ಯಾಷನಲ್ ಗೇಮ್ಸ್ ಗೆ ಸೌಮ್ಯ ಪೂಜಾರಿ ಆಯ್ಕೆ

ಸಮಗ್ರ ನ್ಯೂಸ್: ಉತ್ತರಾಖಂಡದ ಹರಿದ್ವಾರದಲ್ಲಿ ನಡೆಯಲಿರುವ 38ನೇ ನ್ಯಾಷನಲ್ ಗೇಮ್ಸ್ -2025 ರಲ್ಲಿ ರಾಷ್ಟ್ರೀಯ ಮಹಿಳೆಯರ ಕಬಡ್ಡಿ ಚಾಂಪಿಯನ್‌ಶಿಪ್ ನಲ್ಲಿ ಭಾಗವಹಿಸಲು ಕರ್ನಾಟಕ ತಂಡಕ್ಕೆ ಕಾಣಿಯೂರಿನ ಸೌಮ್ಯ ಪೂಜಾರಿ ರವರು ಆಯ್ಕೆ ಆಗಿರುತ್ತಾರೆ. ಇವರು ಕಾಣಿಯೂರು ಅಬೀರ ರಾಮಣ್ಣ ಪೂಜಾರಿ ಮತ್ತು ಲಲಿತಾ ದಂಪತಿಗಳ ಸುಪುತ್ರಿ ಹಾಗೂ ಸುರೇಶ್ ಅಬೀರ ಮತ್ತು ಪುತ್ತೂರು ಪೊಲೀಸ್ ಇಲಾಖೆಯ ಸಿಬ್ಬಂದಿಯಾಗಿರುವ ಸಂತೋಷ್ ಕುಮಾರ್ ರವರ ಸಹೋದರಿ. ಇವರು ಕಾಣಿಯೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ಪ್ರಗತಿ ಆಂಗ್ಲಮಾದ್ಯಮ ಶಾಲೆ ಹಾಗೂ

ಪುತ್ತೂರು: 38ನೇ ನ್ಯಾಷನಲ್ ಗೇಮ್ಸ್ ಗೆ ಸೌಮ್ಯ ಪೂಜಾರಿ ಆಯ್ಕೆ Read More »

ವ್ಯರ್ಥವಾದ ವರುಣ್ ಚಕ್ರವರ್ತಿ ಹೋರಾಟ| ಇಂಗ್ಲೆಂಡ್ ವಿರುದ್ಧ ಮಕಾಡೆ ಮಲಗಿದ ಭಾರತ

ಸಮಗ್ರ ನ್ಯೂಸ್: ಪ್ರವಾಸಿ ಇಂಗ್ಲೆಂಡ್ ವಿರುದ್ಧ ರಾಜ್‌ಕೋಟ್‌ನಲ್ಲಿ ನಡೆದ ಮೂರನೇ ಟ್ವೆಂಟಿ-20 ಅಂತರರಾಷ್ಟ್ರೀಯ ಪಂದ್ಯದಲ್ಲಿ ಟೀಮ್ ಇಂಡಿಯಾ 26 ರನ್ ಅಂತರದ ಸೋಲಿಗೆ ಶರಣಾಗಿದೆ. ಆದರೂ ಐದು ಪಂದ್ಯಗಳ ಟಿ20 ಸರಣಿಯಲ್ಲಿ 2-1ರ ಅಂತರದ ಮುನ್ನಡೆ ಕಾಯ್ದುಕೊಂಡಿದೆ. ಸರಣಿಯ ಮೊದಲೆರಡು ಪಂದ್ಯಗಳಲ್ಲಿ ಸೂರ್ಯಕುಮಾರ್ ಯಾದವ್ ಬಳಗ ಗೆಲುವು ಸಾಧಿಸಿತ್ತು. ಮತ್ತೊಂದೆಡೆ ಹ್ಯಾಟ್ರಿಕ್ ಸೋಲನ್ನು ತಪ್ಪಿಸಿರುವ ಆಂಗ್ಲರ ಪಡೆ ಸರಣಿಯನ್ನು ಜೀವಂತವಾಗಿರಿಸಿಕೊಂಡಿತು. ಇಂಗ್ಲೆಂಡ್ ಒಡ್ಡಿದ 172 ರನ್‌ಗಳ ಗುರಿ ಬೆನ್ನಟ್ಟಿದ ಭಾರತ ಒಂಬತ್ತು ವಿಕೆಟ್ ನಷ್ಟಕ್ಕೆ 145 ರನ್

ವ್ಯರ್ಥವಾದ ವರುಣ್ ಚಕ್ರವರ್ತಿ ಹೋರಾಟ| ಇಂಗ್ಲೆಂಡ್ ವಿರುದ್ಧ ಮಕಾಡೆ ಮಲಗಿದ ಭಾರತ Read More »

ಐಸಿಸಿ ಚಾಂಪಿಯನ್ಸ್‌ ಟ್ರೋಫಿ/ ಇನ್ನೂ ಸಿದ್ಧಗೊಂಡಿಲ್ಲ ಕ್ರೀಡಾಂಗಣ/ ಜನವರಿ ೩೦ರ ಗಡುವು

ಸಮಗ್ರ ನ್ಯೂಸ್‌: ಪಾಕಿಸ್ತಾನದ ಆತಿಥ್ಯದಲ್ಲಿ ನಡೆಯುವ ಐಸಿಸಿ ಚಾಂಪಿಯನ್ಸ್‌ ಟ್ರೋಫಿ ಆರಂಭಕ್ಕೆ ಕೆಲವೇ ದಿನಗಳು ಮಾತ್ರ ಬಾಕಿ ಉಳಿದಿದ್ದು, ಪಂದ್ಯಾವಳಿ ನಡೆಯುವ ಕರಾಚಿ, ಲಹೋರ್‌ ಮತ್ತು ರಾವಲ್ಪಿಂಡಿ ಕ್ರೀಡಾಂಗಣಗಳ ನವೀಕರಣ ಕಾರ್ಯ ಸಂಪೂರ್ಣಗೊಂಡಿಲ್ಲ. ಕ್ರೀಡಾಂಗಣಗಳ ನವೀಕರಣ ಕೆಲಸ ಪೂರ್ತಿಗೊಳಿಸಲು ಐಸಿಸಿ, ಪಾಕಿಸ್ತಾನ ಕ್ರಿಕೆಟ್‌ ಮಂಡಳಿಗೆ ಜ.30ರ ಗುಡುವು ನೀಡಿತ್ತು. ಆದರೆ ಇನ್ನೂ ಕೆಲಸ ಬಾಕಿ ಇರುವ ಕಾರಣ ಕೆಲವು ಪಂದ್ಯವನ್ನು ದುಬೈಗೆ ಸ್ಥಳಾಂತರಿಸುವ ಸಾಧ್ಯತೆ ಇದೆ ಎಂದು ವರದಿಯಾಗಿದೆ. ಆದರೆ ಪಾಕ್‌ ಕ್ರಿಕೆಟ್‌ ಮಂಡಳಿ ಮಾತ್ರ ಯಾವುದೇ

ಐಸಿಸಿ ಚಾಂಪಿಯನ್ಸ್‌ ಟ್ರೋಫಿ/ ಇನ್ನೂ ಸಿದ್ಧಗೊಂಡಿಲ್ಲ ಕ್ರೀಡಾಂಗಣ/ ಜನವರಿ ೩೦ರ ಗಡುವು Read More »