ಪ್ರವಾಸಿ ತಾಣ

ಹೊಸ ಐಟಿ ನೀತಿ ಗ್ರಾಹಕರ ಖಾಸಗಿತನಕ್ಕೆ ದಕ್ಕೆಯುಂಟುಮಾಡಲಿದೆ | ಹೈಕೋರ್ಟ್ ಮೆಟ್ಟಿಲೇರಿದ ವಾಟ್ಸಪ್

ಹೊಸದಿಲ್ಲಿ: ಕೇಂದ್ರ ಸರ್ಕಾರ ಇಂದಿನಿಂದಿ ಜಾರಿಗೆ ತರಲು ಉದ್ದೇಶಿಸಿರುವ ಹೊಸ ಐಟಿ ನೀತಿ ವಿರೋದಿಸಿ ವಾಟ್ಸಾಪ್ ದೆಹಲಿ ಹೈಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿದೆ. ಹೊಸ ನಿಯಮವು ವಾಟ್ಸಪ್ ಗ್ರಾಹಕರ ಖಾಸಗಿತನಕ್ಕೆ ದಕ್ಕೆ ತರಲಿದೆ ಎಂದು ಕಳವಳ ವ್ಯಕ್ತಪಡಿಸಿರುವ ಫೇಸ್‌ಬುಕ್ ಮಾಲೀಕತ್ವದ ವಾಟ್ಸಪ್ ಹೊಸ ನಿಯಮದ ಪ್ರಕಾರ ನಾವು ಸಂದೇಶ ಕಳುಹಿಸಿದ ಮೂಲಗಳನ್ನು ಕಂಡುಹಿಡಿಯಬೇಕಾಗುತ್ತದೆ. ಇದು ಬಳಕೆದಾರರ ಖಾಸಗಿತನಕ್ಕೆ ಹಾನಿ ಮಾಡಲಿದೆ. ಸಾಮಾಜಿಕ ಮಾಧ್ಯಮಗಳು ಅಧಿಕಾರಿಗಳು ಬಯಸಿದ ಸಂದರ್ಭದಲ್ಲಿ ಸಂದೇಶವೊಂದರ ಮೊದಲ ಮೂಲ ಸೃಷ್ಟಿಕರ್ತನನ್ನು ಪತ್ತೆಹಚ್ಚುವುದು ಅಗತ್ಯ ಎಂದು […]

ಹೊಸ ಐಟಿ ನೀತಿ ಗ್ರಾಹಕರ ಖಾಸಗಿತನಕ್ಕೆ ದಕ್ಕೆಯುಂಟುಮಾಡಲಿದೆ | ಹೈಕೋರ್ಟ್ ಮೆಟ್ಟಿಲೇರಿದ ವಾಟ್ಸಪ್ Read More »

ಸಿಬಿಐ ನೂತನ ನಿರ್ದೇಶಕರಾಗಿ ಸುಬೋಧ್ ಕುಮಾರ್ ಜೈಸ್ವಾಲ್

ನವದೆಹಲಿ: ಕೇಂದ್ರ ತನಿಖಾ ದಳ ಸಿಬಿಐ ನ ನೂತನ ನಿರ್ದೇಶಕರನ್ನಾಗಿ ಹಿರಿಯ ಐಪಿಎಸ್ ಅಧಿಕಾರಿ ಸುಬೋಧ್ ಕುಮಾರ್ ಜೈಸ್ವಾಲ್ ಅವರನ್ನು ಮುಂದಿನ ಎರಡು ವರ್ಷಗಳ ಅವಧಿಗೆ ನೇಮಿಸಿ, ಸಿಬ್ಬಂದಿ ಸಚಿವಾಲಯ ಮಂಗಳವಾರ ಆದೇಶ ಹೊರಡಿಸಿದೆ. ಪ್ರಧಾನಿ ನರೇಂದ್ರ ಮೋದಿ, ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ಎನ್‌ವಿ ರಮಣ ಮತ್ತು ಲೋಕಸಭಾ ವಿರೋಧಪಕ್ಷದ ನಾಯಕ ಅಧೀರ್ ರಂಜನ್ ಚೌಧುರಿ ಅವರನ್ನೊಳಗೊಂಡ ಸಮಿತಿ ನಡುವೆ ನಡೆದ ಸರಣಿ ಸಭೆಗಳ ಬಳಿಕ ಮಂಗಳವಾರ ಸಂಜೆ ಸರ್ಕಾರ ಈ ನೇಮಕಾತಿ ಅಧಿಸೂಚನೆ ಪ್ರಕಟಿಸಿದೆ. ಮಹಾರಾಷ್ಟ್ರ

ಸಿಬಿಐ ನೂತನ ನಿರ್ದೇಶಕರಾಗಿ ಸುಬೋಧ್ ಕುಮಾರ್ ಜೈಸ್ವಾಲ್ Read More »

ನಾಳೆ ವರ್ಷದ ಮೊದಲ ಚಂದ್ರಗ್ರಹಣ | ಭಾರತದಲ್ಲಿ ಗೋಚರವಾಗುತ್ತಾ? ಹೇಗಿದೆ ಇದರ ಪ್ರಭಾವ..!!

ಬೆಂಗಳೂರು.ಮೇ 25. ನಾಳೆ.(ಮೇ.26) ಈ ವರ್ಷದಲ್ಲಿ ಗೋಚರವಾಗುವ ಮೊದಲ ಸೂಪರ್ ಚಂದ್ರ ಹಾಗೂ ಕೆಂಪು ಚಂದ್ರನನ್ನು ನೋಡಲು ಇಡೀ ಜಗತ್ತೇ ಸಜ್ಜಾಗಿದೆ. ಇದು ಆಗ್ನೇಯ ಏಷ್ಯಾದ ಪ್ರದೇಶಗಳಲ್ಲಿ, ಆಸ್ಟ್ರೇಲಿಯ, ಓಷಿಯಾನಿಯಾದ ಪ್ರದೇಶಗಳಲ್ಲಿ, ಅಲಾಸ್ಕಾ ಮತ್ತು ಕೆನಡಾದ ಹೆಚ್ಚಿನ ಭಾಗಗಳಲ್ಲಿ, ಯುಎಸ್‍ಎಯ ಬಹುಪಾಲು ಸ್ಥಳಗಳು, ಹವಾಯಿ, ಮೆಕ್ಸಿಕೊ ಮತ್ತು ಮಧ್ಯ ಅಮೆರಿಕಾ ಮತ್ತು ದಕ್ಷಿಣ ಅಮೆರಿಕದ ಬಹುಪಾಲು ಪ್ರದೇಶಗಳಲ್ಲಿ ಗೋಚರಿಸಲಿದೆ. ಈ ಅರೆನೆರಳಿನ ಗ್ರಹಣವು ಜಾಗತಿಕ ಕಾಲಮಾನದ ಪ್ರಕಾರ, 08:47:39ರಲ್ಲಿ (ಯುಟಿಸಿ) ಪ್ರಾರಂಭವಾಗಿ, ಮೇ 26 ರಂದು 13:49:44

ನಾಳೆ ವರ್ಷದ ಮೊದಲ ಚಂದ್ರಗ್ರಹಣ | ಭಾರತದಲ್ಲಿ ಗೋಚರವಾಗುತ್ತಾ? ಹೇಗಿದೆ ಇದರ ಪ್ರಭಾವ..!! Read More »

ಮತ್ತೆ ನಡೆಯಲಿದೆ ಐಪಿಎಲ್ 14ರ ಉಳಿದ ಪಂದ್ಯಗಳು

ದೆಹಲಿ: ಆಟಗಾರರಲ್ಲಿ ಕೋವಿಡ್ ಸೋಂಕು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಅರ್ಧಕ್ಕೆ ನಿಂತಿದ್ದ ಜಗತ್ತಿನ ಶ್ರೀಮಂತ ಕ್ರಿಕೆಟ್ ಟೂರ್ನಿ ಐಪಿಎಲ್ ಮತ್ತೆ ಆರಂಭವಾಗಲಿದೆ. ಐಪಿಎಲ್ ನ 14ನೇ ಸೀಸನ್ ದ್ವಿತೀಯಾರ್ಧ ಬಾಕಿ ಇರುವಂತೆ ಕೋವಿಡ್ ಹಾವಳಿಗೆ ತುತ್ತಾಗಿ ಮೊಟಕುಗೊಂಡಿತ್ತು. ಇದೀಗ ಉಳಿದ ಪಂದ್ಯಗಳನ್ನು ದುಬೈನಲ್ಲಿ ಮುಂದುವರೆಸಲು ಬಿಸಿಸಿಐ ಚಿಂತನೆ ನಡೆಸಿದೆ. ಅದರಂತೆ 2021 ರ ಸೆಪ್ಟೆಂಬರ್ 18ರಂದು ಆರಂಭಿಸಿ ಅಕ್ಟೋಬರ್ 10ಕ್ಕೆ ಟೂರ್ನಿ ಕೊನೆಗೊಳಿಸಲು ನಿರ್ಧರಿಸಲಾಗಿದೆ ಎಂದು ಬಿಸಿಸಿಐ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.ಐಪಿಎಲ್ ಅರ್ಧಕ್ಕೆ ನಿಂತಿರುವುದು ಅಭಿಮಾನಿ ಬಳಗದಲ್ಲಿ ನಿರಾಸೆ ಮೂಡಿಸಿತ್ತು,

ಮತ್ತೆ ನಡೆಯಲಿದೆ ಐಪಿಎಲ್ 14ರ ಉಳಿದ ಪಂದ್ಯಗಳು Read More »

ಎಚ್‌ಪಿಸಿಎಲ್ ಸ್ಥಾವರದಲ್ಲಿ ಭಾರೀ ಸ್ಫೋಟ

ವಿಶಾಖಪಟ್ಟಣಂ: ಇಲ್ಲಿನ ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್ (ಎಚ್‌ಪಿಸಿಎಲ್) ಸ್ಥಾವರದಲ್ಲಿ ಭಾರೀ ಸ್ಫೋಟ ಸಂಭವಿಸಿದ್ದು, ದೊಡ್ಡ ಪ್ರಮಾಣದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಪ್ರಾಥಮಿಕ ಮಾಹಿತಿ ಪ್ರಕಾರ, ಎಚ್‌ಪಿಸಿಎಲ್‌ನ ಯುನಿಟ್ -3 ಸ್ಥಾವರದಲ್ಲಿ ಸ್ಫೋಟ ಸಂಭವಿಸಿದೆ. ಐದು ಅಗ್ನಿಶಾಮಕ ದಳಗಳು ಸ್ಥಳಕ್ಕೆ ದೌಡಾಯಿಸಿವೆ. ಹೆಚ್ಚಿನ ಅಗ್ನಿಶಾಮಕ ಟೆಂಡರ್‌ಗಳನ್ನು ರವಾನಿಸಲಾಗುತ್ತಿದೆ. ಘಟನೆಗೆ ಇನ್ನೂ ಸ್ಪಷ್ಟ ಕಾರಣ ತಿಳಿದುಬಂದಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

ಎಚ್‌ಪಿಸಿಎಲ್ ಸ್ಥಾವರದಲ್ಲಿ ಭಾರೀ ಸ್ಫೋಟ Read More »

ಕೇರಳಕ್ಕೆ ಹೋಗುವವರಿಗೆ ನಕಲಿ ಕೋವಿಡ್ ರಿಪೋರ್ಟ್ | ಸಿದ್ದಾಪುರದ ಪತ್ರಕರ್ತ ಅರೆಸ್ಟ್

ಸಿದ್ದಾಪುರು: ವಿಶ್ವದಾದ್ಯಂತ ಕೊರೋನಾ ರಣಕೇಕೆ ಹಾಕುತ್ತಿರುವಾಗ, ಸಮಾಜದಲ್ಲಿ ಜಾಗೃತಿ ಮೂಡಿಸುತ್ತಾ ಸಮಾಜಮುಖಿ ಕೆಲಸ ಮಾಡಬೇಕಾದ ಪತ್ರಕರ್ತರೋರ್ವರು, ಸಾರ್ವಜನಿಕರಿಗೆ ಅಕ್ರಮವಾಗಿ ನಕಲಿ ಕೋವಿಡ್ ಪ್ರಮಾಣಪತ್ರ ನೀಡಿ ಸಿಕ್ಕಿಬಿದ್ದ ಘಟನೆ ವರದಿಯಾಗಿದೆ. ಕರ್ನಾಟಕದಿಂದ ಕೇರಳಕ್ಕೆ ಹೋಗುವವರಿಗೆ ಕೊರೋನಾ ನೆಗೆಟೀವ್ ರಿಪೋರ್ಟ್ ಕಡ್ಡಾಯವಾಗಿದ್ದು,  ಸಿದ್ಧಾಪುರದ ವಿಜಯವಾಣಿ ಪತ್ರಿಕೆಯ ವರದಿಗಾರ ಅಬ್ದುಲ್ ಅಜೀಜ್ ಎಂಬಾತ ಕೇರಳಕ್ಕೆ  ಹೋಗುವವರಿಗೆ  ತನ್ನ ಸ್ಟುಡಿಯೋದಲ್ಲಿಯೇ ಕೂತು ಯಾವುದೇ ಟೆಸ್ಟ್ ಮಾಡಿಸದೇ, ನೆಗಟೀವ್ ರಿಪೋರ್ಟ್ ಕೊಟ್ಟು ಹಣಪಡೆದು ಸಿಕ್ಕಿಬಿದ್ದಿದ್ದಾನೆ. ಆತನ ಈ ಕೃತ್ಯಕ್ಕೆ ಇಡೀ ಪತ್ರಿಕಾ ವಲಯ ತಲೆ

ಕೇರಳಕ್ಕೆ ಹೋಗುವವರಿಗೆ ನಕಲಿ ಕೋವಿಡ್ ರಿಪೋರ್ಟ್ | ಸಿದ್ದಾಪುರದ ಪತ್ರಕರ್ತ ಅರೆಸ್ಟ್ Read More »

‘ಯಾಸ್’ ಚಂಡಮಾರುತದ ಎಫೆಕ್ಟ್ | ಒಡಿಶಾದ ಕರಾವಳಿಯಲ್ಲಿ ಭಾರೀ ಮಳೆ

ಭುವನೇಶ್ವರ: ಯಾಸ್ ಚಂಡಮಾರುತವು ಬಂಗಾಳ ಕೊಲ್ಲಿಯಲ್ಲಿ ಸೃಷ್ಟಿಯಾಗಿದ್ದು, ಇದರ ಪರಿಣಾಮ ಒಡಿಶಾದ ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆ ಸುರಿಯುತ್ತಿದೆ ಎಂದು ತಿಳಿದುಬಂದಿದೆ. ಈ ಮಧ್ಯೆ ಪರಿಸ್ಥಿತಿ ಎದುರಿಸಲು ರಾಷ್ಟ್ರೀಯ ವಿವತ್ತು ನಿರ್ವಹಣಾ ತಂಡವನ್ನು ಕೇಂದ್ರ ಸರ್ಕಾರ ಒ಼ಡಿಶಾಕ್ಕೆ ರವಾನಿಸಿದೆ. ಮೇ 26ರಂದು ಯಾಸ್ ಚಂಡಮಾರುತ ಒಡಿಶಾ ತಲುಪುವ ಸಾಧ್ಯತೆ ಇದೆ. ಯಾಸ್ ಚಂಡಮಾರುತ ತನ್ನ ಶಕ್ತಿ ಹೆಚ್ಚಿಸಿಕೊಳ್ಳುತ್ತಿದ್ದು, ಶಕ್ತಿಶಾಲಿ ಚಂಡಮಾರುತವಾಗಿ ಪರಿವರ್ತನೆಗೊಳ್ಳುತ್ತಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

‘ಯಾಸ್’ ಚಂಡಮಾರುತದ ಎಫೆಕ್ಟ್ | ಒಡಿಶಾದ ಕರಾವಳಿಯಲ್ಲಿ ಭಾರೀ ಮಳೆ Read More »

ಕುಡಿದ ಮತ್ತಿನಲ್ಲಿ ಬೈಕ್ ಚಲಾಯಿಸಿ ಹಿಂಬದಿ ಸವಾರನ ಜೀವ ತೆಗೆದ ಸವಾರ, ಚೆಕ್ ಪೋಸ್ಟ್ ಗೇಟ್ ಗೆ ಬೈಕ್ ಗುದ್ದಿದ ವೀಡಿಯೋ ವೈರಲ್

ತೆಲಂಗಾಣ: ಅಸಾದ್ಯ ರೀತಿಯಲ್ಲಿ ಅರಣ್ಯ ಇಲಾಖೆಯ ಚೆಕ್ ಪೋಸ್ಟ್ ತಪ್ಪಿಸುವ ಸಾಹಸ ಮಾಡಲು ಹೋಗಿ ಹಿಂಬದಿ ಸವಾರನ ಸಾವಿಗೆ ಬೈಕ್ ಸವಾರನೇ ಕಾರಣನಾದ ಘಟನೆ ತೆಲಂಗಾಣದಲ್ಲಿ ನಡೆದಿದೆ. ಮಂಚೇರಿಯಲ್ ಜಿಲ್ಲೆಯ ತಪುರ್ ಚೆಕ್ ಪೋಸ್ಟ್ ನಲ್ಲಿ ಘಟನೆಯು ಮೇ 22 ರ ಮಧ್ಯಾಹ್ನ 12.53 ರ ವೇಳೆಗೆ ನಡೆದಿದ್ದು , ಘಟನೆಗೆ ಸಂಬಂಧಿಸಿದ ಸಿಸಿಟಿವಿ ವೀಡಿಯೋ ವೈರಲ್ ಆಗುತ್ತಿದ್ದಂತೆ ಘಟನೆ ಬೆಳಕಿಗೆ ಬಂದಿದೆ. ಸೆರೆಯಾಗಿರುವ ವೀಡಿಯೋದಲ್ಲಿ ಯುವಕರಿಬ್ಬರು ಅತಿ ವೇಗವಾಗಿ ಬಂದಿದ್ದು, ಈ ಸಂದರ್ಭ ಚೆಕ್ ಪೋಸ್ಟ್

ಕುಡಿದ ಮತ್ತಿನಲ್ಲಿ ಬೈಕ್ ಚಲಾಯಿಸಿ ಹಿಂಬದಿ ಸವಾರನ ಜೀವ ತೆಗೆದ ಸವಾರ, ಚೆಕ್ ಪೋಸ್ಟ್ ಗೇಟ್ ಗೆ ಬೈಕ್ ಗುದ್ದಿದ ವೀಡಿಯೋ ವೈರಲ್ Read More »

ಕೊರೊನ ‌ಮೂರನೇ ಅಲೆ: ಆತಂಕದಲ್ಲಿದ್ದ ಪೋಷಕರಿಗೆ ಗುಡ್ ನ್ಯೂಸ್

ನವದೆಹಲಿ.ಮೇ.25: ಮಾರಣಾಂತಿಕ ಕೊರೋನಾ ವೈರಸ್ ಭವಿಷ್ಯದಲ್ಲಿ ರೂಪಾಂತರಗೊಳ್ಳಬಹುದು, ಮಕ್ಕಳಿಗೆ ಹೆಚ್ಚು ಅಪಾಯವನ್ನುಂಟು ಮಾಡಬಹುದು ಎಂಬ ಆತಂಕದ ನಡುವೆ ಮುಖ್ಯವಾದ ಮಾಹಿತಿ ಸಿಕ್ಕಿದೆ. ಕೋವಿಡ್ 19 ಮೂರನೇ ಅಲೆಯಲ್ಲಿ ಮಕ್ಕಳ ಮೇಲೆ ತೀವ್ರ ಪರಿಣಾಮ ಬೀರುವ ಬಗ್ಗೆ ಯಾವುದೇ ಸೂಚನೆ ಇಲ್ಲವೆಂದು ಕೇಂದ್ರ ಸರ್ಕಾರ ಸೋಮವಾರ ಹೇಳಿದೆ. ತಜ್ಞರ ಪ್ರಕಾರ, ಕೊರೋನಾ ಮೊದಲ ಅಲೆ ವೃದ್ಧರ ಮೇಲೆ ಆಕ್ರಮಣ ಮಾಡಿದ್ದು, ಎರಡನೇ ಅಲೆಯಲ್ಲಿ ಯುವಕರ ಮೇಲೆ ಪರಿಣಾಮ ಬೀರಿದೆ. ಮೂರನೇ ಅಲೆಯಲ್ಲಿ ಮಕ್ಕಳಿಗೆ ಅಪಾಯಕಾರಿಯಾಗಿದೆ. ಮೂರನೇ ಅಲೆಯಲ್ಲಿ ಮಕ್ಕಳು

ಕೊರೊನ ‌ಮೂರನೇ ಅಲೆ: ಆತಂಕದಲ್ಲಿದ್ದ ಪೋಷಕರಿಗೆ ಗುಡ್ ನ್ಯೂಸ್ Read More »

ಅಚ್ಚ ಕನ್ನಡದಲ್ಲಿ ಪ್ರಮಾಣವಚನ ಸ್ವೀಕರಿಸಿದ ಮಂಜೇಶ್ವರ ಶಾಸಕ ಕೆ.ಎಮ್. ಅಶ್ರಫ್

ತಿರುವನಂತಪುರಂ: ಕೇರಳ ವಿಧಾನಸಭೆಗೆ ಕಳೆದ ಏಪ್ರಿಲ್ ತಿಂಗಳಿನಲ್ಲಿ ಮತದಾನ ನಡೆದು ಈ ತಿಂಗಳಾರಂಭದಲ್ಲಿ ಫಲಿತಾಂಶ ಹೊರ ಬಿದ್ದಿತ್ತು. ಒಟ್ಟು 140 ಸ್ಥಾನಗಳಿರುವ ಕೇರಳ ವಿಧಾನಸಭೆ ಶಾಸಕರಾಗಿ ಆಯ್ಕೆಯಾದವರ ಪ್ರಮಾಣವಚನ ಸ್ವೀಕಾರ ಸಮಾರಂಭ ಇಂದು ತಿರುವನಂತಪುರಂ ನಲ್ಲಿ ನಡೆದಿದೆ. ಈ ವೇಳೆ ಮಂಜೇಶ್ವರ ಕ್ಷೇತ್ರದಿಂದ ಶಾಸಕರಾಗಿ ಆಯ್ಕೆಯಾಗಿರುವ ಕೆ ಎಂ ಅಶ್ರಫ್ ಅವರು ಕನ್ನಡ ಭಾಷೆಯಲ್ಲಿ ಪ್ರಮಾಣ ವಚನ ಸ್ವೀಕರಿಸಿ ಕನ್ನಡ ಅಭಿಮಾನ ಮೆರೆದಿದ್ದಾರೆ. ಅಶ್ರಫ್ ಅವರು ತನ್ನ ಸಂಪೂರ್ಣ ಶಿಕ್ಷಣವನ್ನು ಕನ್ನಡ ಭಾಷೆಯಲ್ಲಿ ಪಡೆದಿದ್ದು, ಕನ್ನಡದಲ್ಲಿ ಸ್ನಾತಕೋತ್ತರ

ಅಚ್ಚ ಕನ್ನಡದಲ್ಲಿ ಪ್ರಮಾಣವಚನ ಸ್ವೀಕರಿಸಿದ ಮಂಜೇಶ್ವರ ಶಾಸಕ ಕೆ.ಎಮ್. ಅಶ್ರಫ್ Read More »