Uncategorized

ಹೇಳಿಕೊಟ್ಟಿದ್ದು ಒಂದು, ಕೇಳಿದ್ದು ಮತ್ತೊಂದು : ಎಕ್ಸಾಂ ಎಡವಟ್ಟಿನಲ್ಲಿ ಮಕ್ಳೆಲ್ಲಾ ಫೇಲ್

ಸಮಾಚಾರ ವರದಿ: ಸಾಮಾನ್ಯವಾಗಿ ಪರೀಕ್ಷೆಗಳು ಅಂದಾಗ ಮಕ್ಕಳಿಗೆ ಕಲಿಸಿದ್ದನ್ನೇ ಪ್ರಶ್ನೆಗಳನ್ನಾಗಿ ಕೇಳಿ ಉತ್ತರ ಪಡೆದುಕೊಳ್ತಾರೆ. ಸರಿ ಉತ್ತರ ಬರೆದವ್ನು ಪಾಸ್ ಆದ್ರೆ ಉತ್ತರ ಸರಿ ನೀಡದವ್ನಿಗೆ ಕಡಿಮೆ ಅಂಕವೋ ಅಥವಾ ಫೇಲೋ ಆಗ್ತಾನೆ. ಆದ್ರೆ ಎಕ್ಸಾಮಿನರ್ ತಪ್ಪು ಪ್ರಶ್ನೆ ಕೇಳಿ ಸರಿ ಉತ್ತರ ನಿರೀಕ್ಷಿಸಿದರೆ ಆಗೋದೇನು? ಇಲ್ಲಿ ಆಗಿದ್ದು ಅದೇ.ಪಾಠದಲ್ಲಿ ಇಲ್ಲದ ಪ್ರಶ್ನೆ ಕೇಳಿದ್ದು, ಮಕ್ಕಳಿಗೆ ಉತ್ತರಿಸಲಾಗದೇ ಹೆಚ್ಚೂ ಕಮ್ಮಿ ಎಲ್ಲಾ ಮಕ್ಕಳು ಫೇಲಾದ ಪ್ರಸಂಗ ನಡೆದಿದೆ. ಅಂದ ಹಾಗೆ ಈ ಪರೀಕ್ಷೆ ನಡೆದದ್ದು ಅಂತಿಮ ಸೆಮಿಸ್ಟರ್ […]

ಹೇಳಿಕೊಟ್ಟಿದ್ದು ಒಂದು, ಕೇಳಿದ್ದು ಮತ್ತೊಂದು : ಎಕ್ಸಾಂ ಎಡವಟ್ಟಿನಲ್ಲಿ ಮಕ್ಳೆಲ್ಲಾ ಫೇಲ್ Read More »

ನಾಳೆಯಿಂದ ರಾಜ್ಯಕ್ಕೆ ಮುಂಗಾರಿನ ಸಿಂಚನ | ಈ ಜಿಲ್ಲೆಗಳಲ್ಲಿ ಭಾರಿ ಮಳೆ ಸಾಧ್ಯತೆ

ಬೆಂಗಳೂರು : ಕೇರಳಕ್ಕೆ ಈಗಾಗಲೇ ಮುಂಗಾರು ಪ್ರವೇಶ ಮಾಡಿದ್ದು, ನಾಳೆ ರಾಜ್ಯಕ್ಕೆ ಮುಂಗಾರು ಪ್ರವೇಶವಾಗಲಿದೆ. ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮಾಹಿತಿ ಪ್ರಕಾರ ನಾಳೆಯಿಂದ ರಾಜ್ಯದಲ್ಲಿ ಗುಡುಗು -ಮಿಂಚು ಸಹಿತ ಮಳೆಯಾಗಲಿದ್ದು, ಗಂಟೆಗೆ 30-40 ಕಿಲೋಮೀಟರ್ ವೇಗದಲ್ಲಿ ಗಾಳಿ ಬೀಸಲಿದೆ. ಸದ್ಯ ಅರಬ್ಬಿ ಸಮುದ್ರದ ಮಧ್ಯ ಭಾಗದಲ್ಲಿ ಮೇಲ್ಮೆ ಸುಳಿಗಾಳಿ ತೀವ್ರವಾಗಿರುವುದರಿಂದ ಕರ್ನಾಟಕದ ಕೆಲವೆಡೆ ಜೂನ್ 1ರಿಂದ ಮಳೆಯಾಗುತ್ತಿದೆ.

ನಾಳೆಯಿಂದ ರಾಜ್ಯಕ್ಕೆ ಮುಂಗಾರಿನ ಸಿಂಚನ | ಈ ಜಿಲ್ಲೆಗಳಲ್ಲಿ ಭಾರಿ ಮಳೆ ಸಾಧ್ಯತೆ Read More »

ಹೊಸ ಸ್ವರೂಪದಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆ: ಸಚಿವ ಸುರೇಶ್ ಕುಮಾರ್

ಬೆಂಗಳೂರು, ಜೂ.04. ರಾಜ್ಯದಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆಯು ನಡೆಯಲಿದ್ದು, ವಿಜ್ಞಾನ, ಗಣಿತ ಹಾಗೂ ಸಮಾಜಶಾಸ್ತ್ರ ವಿಷಯಗಳನ್ನು ಒಂದೇ ಪೇಪರ್ ಮೂಲಕ ಪರೀಕ್ಷೆ ನಡೆಸಲಾಗುವುದು ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ.ಈ ಬಗ್ಗೆ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಸಚಿವರು, ಜುಲೈ ಮೂರನೇ ವಾರದಲ್ಲಿ ಪರೀಕ್ಷೆ ನಡೆಯಲಿದ್ದು, ಕೆಲವೇ ದಿನಗಳಲ್ಲಿ ಮಾದರಿ ಪ್ರಶ್ನೆ ಪತ್ರಿಕೆಯನ್ನು ಬಿಡುಗಡೆಗೊಳಿಸಲಾಗುವುದು ಎಂದರು. ಒಟ್ಟು ಎರಡು ಪರೀಕ್ಷೆಗಳು ನಡೆಯಲಿದ್ದು, ಕೊರೋನಾ ಬಾಧಿತರಿಗೆ ಮತ್ತೊಂದು ಸಲ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಲಾಗುತ್ತದೆ ಎಂದಿದ್ದಾರೆ.

ಹೊಸ ಸ್ವರೂಪದಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆ: ಸಚಿವ ಸುರೇಶ್ ಕುಮಾರ್ Read More »

ರಾಜ್ಯದಲ್ಲಿ ‌ದ್ವಿತೀಯ‌ ಪಿಯುಸಿ ಪರೀಕ್ಷೆ ರದ್ದು: ಸಚಿವ ಸುರೇಶ್ ಕುಮಾರ್

ಬೆಂಗಳೂರು: ಈ ವರ್ಷದ ದ್ವಿತೀಯ ಪಿಯುಸಿ ಪರೀಕ್ಷೆಗಳನ್ನು ರದ್ದುಗೊಳಿಸಲಾಗಿದೆ ಎಂದು ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಪತ್ರಿಕಾಗೋಷ್ಟಿ ನಡೆಸಿದ ಅವರು ಈ ನಿರ್ಧಾರ ಪ್ರಕಟಿಸಿದ್ದಾರೆ. ಪರೀಕ್ಷೆ ಇಲ್ಲದೇ ಗ್ರೇಡ್ ಮೂಲಕ ಬಡ್ತಿ ನೀಡಲು ನಿರ್ಧರಿಸಲಾಗಿದೆ ಎಂದು ಸುರೇಶ್ ಕುಮಾರ್ ಹೇಳಿದ್ದಾರೆ.

ರಾಜ್ಯದಲ್ಲಿ ‌ದ್ವಿತೀಯ‌ ಪಿಯುಸಿ ಪರೀಕ್ಷೆ ರದ್ದು: ಸಚಿವ ಸುರೇಶ್ ಕುಮಾರ್ Read More »

ಹೀಗೂ ಉಂಟು: ನಾಯಿಯನ್ನು‌ ವರಿಸಿದ ಯುವತಿ: ನಂತರ ಏನಾಯ್ತು ಗೊತ್ತಾ?

ಎಂಥ ಅಚ್ಚರಿಯಲ್ಲವೇ! ಎಲ್ಲಾದರೂ ಉಂಟೇ? ನಮಗೆ ತಿಳಿದಿರುವ ಹಾಗೆ ಮದುವೆ ಎಂದರೆ ಮನುಷ್ಯರ ನಡುವೆ ಆಗುತ್ತದೆ. ಆದರೆ ಇಲ್ಲೊಂದು ವಿಶೇಷ ಸುದ್ದಿ ಇದೆ. ಪ್ರಪಂಚದಲ್ಲಿ ಈ ರೀತಿಯ ವಿಚಿತ್ರಗಳು ನಡೆಯುತ್ತಿರುತ್ತವೆ .ಇಂತಹ ಅನಿರೀಕ್ಷಿತ ಸನ್ನಿವೇಶಗಳು ಸಾಮಾನ್ಯ ಜನರಿಗೆ ಪ್ರೇರೇಪಿಸುತ್ತಿರುತ್ತವೆ. ಇಂತಹ ಸುದ್ದಿ ಗಳನ್ನು ಓದಿದಾಗ ಇಂತಹದ್ದೂ ಸಾಧ್ಯವೇ ಎಂಬ ಪ್ರಶ್ನೆ ಎದುರಾಗುತ್ತದೆ. ಈ ಸಂಗತಿ ಓದಿದರೇ ನಿಜಕ್ಕೂ ಆಶ್ಚರ್ಯವೆನಿಸಬಹುದು. ಈ ಘಟನೆ ಜಾರ್ಖಂಡ್ ನಲ್ಲಿ ಮಂಗಳಿ ಮುಂಡ ಎಂಬ 18 ವರ್ಷದ ಯುವತಿ ನಾಯಿಯೊಂದನ್ನು ಮದುವೆಯಾದ ವಿಚಿತ್ರ

ಹೀಗೂ ಉಂಟು: ನಾಯಿಯನ್ನು‌ ವರಿಸಿದ ಯುವತಿ: ನಂತರ ಏನಾಯ್ತು ಗೊತ್ತಾ? Read More »

ರಾಜ್ಯದಲ್ಲಿ ಜೂ.14ರವರೆಗೆ ಲಾಕ್ ಡೌನ್ ವಿಸ್ತರಣೆ: ಎರಡನೇ ಕೋವಿಡ್ ಪ್ಯಾಕೇಜ್ ಘೋಷಿಸಿದ ಸಿ.ಎಂ

ಬೆಂಗಳೂರು. ಜೂ.3: ಸಾಂಕ್ರಾಮಿಕ ಸೋಂಕನ್ನು ಸಂಪೂರ್ಣ ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳಲು ಸೂಕ್ತವೆಂದು ಪರಿಗಣಿಸಿ ಈ ಹಿಂದೆ ಜೂನ್ 7ರವರೆಗೆ ಜಾರಿಗೊಳಿಸಲಾಗಿದ್ದ ಲಾಕ್ ಡೌನ್ ಅನ್ನು ಜೂ.14ರವರೆಗೆ ವಿಸ್ತರಿಸಿ ಸಿಎಂ ಯಡಿಯೂರಪ್ಪ ಆದೇಶಸಿದ್ದಾರೆ. ಪ್ರಸ್ತುತ ಕೋವಿಡ್ ಸೋಂಕಿನ ಪ್ರಮಾಣ ಇಳಿಮುಖವಾಗಿದ್ದರೂ ಕೂಡ, ವೈರಾಣು ಹರಡುವಿಕೆ ಮುಂದುವರೆದಿದೆ. ಆರೋಗ್ಯ ಪರಿಣಿತರ ಸಲಹೆಯ ಮೇರೆಗೆ ಮುಂದುವರೆಸೋದು ಸೂಕ್ತ ಎಂದು ಪರಿಗಣಿಸಿ ಜೂ.14ರವರೆಗೆ ಒಂದು ವಾರ ಕಾಲ ವಿಸ್ತರಿಸಲು ನಿರ್ಧರಿಸಲಾಗಿದೆ ಎಂಬುದಾಗಿ ಸಿಎಂ ಯಡಿಯೂರಪ್ಪ ಘೋಷಿಸಿದ್ದಾರೆ. ಈ ಕುರಿತಂತೆ ಸುದ್ದಿಗೋಷ್ಠಿ ನಡೆಸಿ

ರಾಜ್ಯದಲ್ಲಿ ಜೂ.14ರವರೆಗೆ ಲಾಕ್ ಡೌನ್ ವಿಸ್ತರಣೆ: ಎರಡನೇ ಕೋವಿಡ್ ಪ್ಯಾಕೇಜ್ ಘೋಷಿಸಿದ ಸಿ.ಎಂ Read More »

ನವವಿವಾಹಿತೆ ಮತ್ತು ಮಾಜಿ ಪ್ರಿಯಕರ ಆತ್ಮಹತ್ಯೆ,

ಬೆಳಗಾವಿ: ಇವರಿಬ್ಬರು ಒಂದಲ್ಲ, ಎರಡಲ್ಲ ಬರೋಬ್ಬರಿ ಐದು ವರ್ಷದಿಂದ ಪರಸ್ಪರ ಇವರಿಬ್ಬರೂ ಪ್ರೀತಿ ಮಾಡುತ್ತಿದ್ದರು. ಒಬ್ಬರನ್ನೊಬ್ಬರು ಬಿಟ್ಟಿ ಬದುಕಲಾರದಷ್ಟು ಹತ್ತಿರವಾಗಿದ್ದರು. ಆದರೂ ಒಂದು ತಿಂಗಳ ಹಿಂದಷ್ಟೇ ಯುವತಿಯನ್ನ ಕುಟುಂಬಸ್ಥರು ಬೇರೊಬ್ಬನೊಂದಿಗೆ ಮದುವೆ ಮಾಡಿಬಿಟ್ಟರು. ಇದೀಗ ಗಂಡನ ಮನೆಯಲ್ಲಿರಬೇಕಿದ್ದ ನವವಿವಾಹಿತೆ, ಪ್ರಿಯಕರನೊಟ್ಟಿಗೆ ದುರಂತ ಅಂತ್ಯ ಕಂಡಿದ್ದಾಳೆ. ಇಂತಹ ದುರಂತ ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಸಿಂಧೋಗಿಯಲ್ಲಿ ನಡೆದಿದೆ. ಪಂಚಪ್ಪ ಕಣವಿ(25) ಮತ್ತು ಸಕ್ಕುಬಾಯಿ ಕರಿಗಾರ(23) ಮೃತ ಪ್ರೇಮಿಗಳು.ಆದರೂ ಮತ್ತೊಬ್ಬನೊಂದಿಗೆ ಕುಟುಂಬಸ್ಥರು ಸಕ್ಕುಬಾಯಿಗೆ ಒಂದು ತಿಂಗಳ ಹಿಂದೆ ಮದುವೆ ಮಾಡಿದ್ದರು.

ನವವಿವಾಹಿತೆ ಮತ್ತು ಮಾಜಿ ಪ್ರಿಯಕರ ಆತ್ಮಹತ್ಯೆ, Read More »

ಜೂ. 14ರವರೆಗೆ ರಾಜ್ಯದಲ್ಲಿ ಲಾಕ್ ಡೌನ್? ಏನಿರುತ್ತೆ? ಏನಿರಲ್ಲ…

ಬೆಂಗಳೂರು, ಜೂನ್ 3: ಕೋವಿಡ್19 ಎರಡನೇ ಅಲೆ ನಿಯಂತ್ರಣಕ್ಕಾಗಿ ಕರ್ನಾಟಕದಲ್ಲಿ ಜಾರಿಯಲ್ಲಿರುವ ಲಾಕ್‌ಡೌನ್ ವಿಸ್ತರಣೆ ಮಾಡಲು ಕರ್ನಾಟಕ ಸರ್ಕಾರ ನಿರ್ಧರಿಸಿದ್ದು, ಈ ಕುರಿತಂತೆ ಅಧಿಕೃತ ಪ್ರಕಟಣೆ, ಮಾರ್ಗಸೂಚಿ ಶೀಘ್ರವೇ ಹೊರ ಬರಲಿದೆ. ಇಂದು ಸಂಜೆ 5 ಗಂಟೆಗೆ ಸುದ್ದಿಗೋಷ್ಠಿಯಲ್ಲಿ ಈ ಬಗ್ಗೆ ಮುಖ್ಯಮಂತ್ರಿ ಯಡಿಯೂರಪ್ಪ ಅವರು ವಿವರವಾಗಿ ತಿಳಿಸಲಿದ್ದಾರೆ. ಕರ್ನಾಟಕದಲ್ಲಿ ಕೊರೊನಾ ಸಾಂಕ್ರಾಮಿಕ ನಿಯಂತ್ರಣಕ್ಕಾಗಿ ಮೇ 10 ರಿಂದ 14ರ ತನಕ ಲಾಕ್‌ಡೌನ್ ಮಾಡಲಾಗಿತ್ತು. ಪುನಃ ಮೇ 24ರಿಂದ ಜೂನ್ 7ರ ತನಕ ಲಾಕ್‌ಡೌನ್ ಮುಂದುವರೆದಿದೆ. ಈಗ

ಜೂ. 14ರವರೆಗೆ ರಾಜ್ಯದಲ್ಲಿ ಲಾಕ್ ಡೌನ್? ಏನಿರುತ್ತೆ? ಏನಿರಲ್ಲ… Read More »

ಆರೋಗ್ಯ ರಕ್ಷಣೆಗೆ ಸೈಕಲ್ ತುಳಿಯೋಣ : ವಿಶ್ವ ಸೈಕಲ್ ದಿನ ವಿಶೇಷ

ಕಳೆದೆರಡು ವರ್ಷದಿಂದ ಕೊರೋನಾ ಮಹಾಮಾರಿ ಹಾವಳಿಯಲ್ಲಿ ಬೈಸಿಕಲ್‌ನ ಟ್ರಿಣ್‌ ಟ್ರಿಣ್‌ ಬೆಲ್‌ ಸದ್ದು ಜಗತ್ತಿನಾದ್ಯಂತ ಬಲು ಜೋರಾಗಿ ಕೇಳಿಸುತ್ತಿದೆ! ಸದೃಢ ಶ್ವಾಸಕೋಶ ಕೊರೋನಾ ವೈರಸ್‌ ಅನ್ನು ಹಿಮ್ಮೆಟ್ಟಿಸುತ್ತದೆ ಎನ್ನುವ ಸತ್ಯ ಗೊತ್ತಾಗುತ್ತಿದ್ದಂತೆ ಬಡವರು, ಶ್ರೀಮಂತರು ಎನ್ನುವ ಭೇದ ಬದಿಗಿಟ್ಟು ಜನತೆ ಬೈಸಿಕಲ್‌ ತುಳಿಯುತ್ತಿದ್ದಾರೆ. ಸೈಕಲ್‌ ರೈಡ್ ವೈರಸ್‌ ಸೋಂಕಿಗೆ ಒಳಗಾಗುವ ಅಪಾಯವನ್ನು ಕಡಿಮೆ ಮಾಡುತ್ತದೆ. ರಕ್ತದಲ್ಲಿನ ಕೊಲೆಸ್ಟ್ರಾಲ್‌ ಮಟ್ಟವನ್ನು ಕಡಿಮೆ ಮಾಡುತ್ತದೆ ಎನ್ನುತ್ತಾರೆ ತಜ್ಞರು. ಹಿಂದೆ ಮನೆಗಳಲ್ಲಿ ಎಲ್ಲಾ ವಯೋಮಾನದರು ಬಳಸುವ ಏಕೈಕ ಸಾಧನವಾಗಿದ್ದ ಸೈಕಲ್‌ ಸ್ಥಾನವನ್ನು

ಆರೋಗ್ಯ ರಕ್ಷಣೆಗೆ ಸೈಕಲ್ ತುಳಿಯೋಣ : ವಿಶ್ವ ಸೈಕಲ್ ದಿನ ವಿಶೇಷ Read More »

ಮಂಗಳೂರು ನಗರ ಪೊಲೀಸ್ ವತಿಯಿಂದ ಇಂದು “ಗಾನಸುಧೆ” ಕಾರ್ಯಕ್ರಮ

ಮಂಗಳೂರು: ಮಂಗಳೂರು ನಗರ ಪೊಲೀಸ್ ವತಿಯಿಂದ ಇಂದು ಕೋವಿಡ್ ವಾರಿಯರ್ಸ್ ಗಳನ್ನು ಪ್ರೋತ್ಸಾಹಿಸುವ ಉದ್ದೇಶದಿಂದ ‘ಗಾನಸುಧೆ’ ಸಂಗೀತ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಇಂದು ಮಧ್ಯಾಹ್ನ ಫೇಸ್ ಬುಕ್ ಲೈವ್ ನಲ್ಲಿ ಮಂಗಳೂರು ನಗರ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗಳು ನಡೆಸಿಕೊಡುವ ಸಂಗೀತ ಕಾರ್ಯಕ್ರಮ ಪ್ರಸಾರವಾಗಲಿದೆ. ಕೇಳಲಿಚ್ಚಿಸುವವರು Arvind Vivek’s ಫೇಸ್ಬುಕ್ ಪೇಜ್ ಅನ್ನು ಅನುಸರಿಸುವಂತೆ ಸೂಚಿಸಲಾಗಿದೆ. ಕೋವಿಡ್ ಮಾರ್ಗಸೂಚಿಗಳನ್ನು ಅನುಸರಿಸಿಕೊಂಡು ಈ ಕಾರ್ಯಕ್ರಮ ನಡೆಸಲಾಗುತ್ತಿದೆ. “ಗಾನಸುಧೆ”ಯನ್ನು ರಾಜ್ಯದ ಎಲ್ಲಾ ಕೋವಿಡ್ ವಾರಿಯರ್ಸ್ ಗಳಿಗೆ ಸಮರ್ಪಿಸಲಾಗುತ್ತಿದೆ ಎಂದು ಮಂಗಳೂರು ನಗರ

ಮಂಗಳೂರು ನಗರ ಪೊಲೀಸ್ ವತಿಯಿಂದ ಇಂದು “ಗಾನಸುಧೆ” ಕಾರ್ಯಕ್ರಮ Read More »