ರಾಜಕೀಯ

ರಾಜಕೀಯ ನಿವೃತ್ತಿಯ ಮಾತನ್ನಾಡಿದ ಟಗರು| ಸಿದ್ದು ಮಾತಿನ ಮರ್ಮವೇನು?

ಸಮಗ್ರ ನ್ಯೂಸ್: ಮುಂದಿನ ಚುನಾವಣೆಯಲ್ಲಿ ಸ್ಪರ್ಧೆ ವಿಚಾರವಾಗಿ ಅವರು ಪ್ರತಿಕ್ರಿಯೆ ನೀಡಿದ್ದಾರೆ. ವರುಣ, ಚಾಮುಂಡೇಶ್ವರಿ, ಹುಣಸೂರು, ಹೆಬ್ಬಾಳ, ಚಾಮರಾಜಪೇಟೆ, ಬಾದಾಮಿ, ಕೋಲಾರ ಇಷ್ಟು ಕ್ಷೇತ್ರದ ಜನ ಕೇಳುತ್ತಿದ್ದಾರೆ. ನಾನು ಯಾವ ಕ್ಷೇತ್ರದಲ್ಲಿ ಸ್ಪರ್ಧಿಸಬೇಕು ತೀರ್ಮಾನ ಮಾಡಿಲ್ಲ. ಎಲ್ಲಿ ನನಗೆ ರಾಜಕೀಯ ಪುನರ್ ಜನ್ಮ ಸಿಕ್ಕಿತೋ ಅಲ್ಲಿಯೇ ಸೋಲಿಸಿದರು. ಹಾಗಂತ ಬೇಸರ ಮಾಡಿಕೊಳ್ಳುವುದಕ್ಕೆ ಆಗುವುದಿಲ್ಲ. ಬರೋಬ್ಬರಿ ಐದು ಬಾರಿ ಚಾಮುಂಡೇಶ್ವರಿ ಜನ ನನ್ನನ್ನು ಗೆಲ್ಲಿಸಿದ್ದಾರೆ. ಅದಕ್ಕಾಗಿ ಚಾಮುಂಡೇಶ್ವರಿಯನ್ನು ನಾನು ಯಾವಾಗಲೂ ಮರೆಯಲ್ಲ. ಮುಂದಿನ ಚುನಾವಣೆಯೇ ಕೊನೆ. ಮತ್ತೆ ಚುನಾವಣಾ […]

ರಾಜಕೀಯ ನಿವೃತ್ತಿಯ ಮಾತನ್ನಾಡಿದ ಟಗರು| ಸಿದ್ದು ಮಾತಿನ ಮರ್ಮವೇನು? Read More »

ಏಕರೂಪ ನಾಗರಿಕ ನೀತಿ ಜಾರಿಗೊಳಿಸಿದ ಉತ್ತರಾಖಂಡ| ಸಂಹಿತೆಗೆ ಸಚಿವ ಸಂಪುಟ ಅಸ್ತು

ಸಮಗ್ರ ನ್ಯೂಸ್: ರಾಜ್ಯದಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿಗೆ ತಂದಿರುವುದಾಗಿ‌ ಉತ್ತರಾಖಂಡದ ಸಿಎಂ ಮುಖ್ಯಮಂತ್ರಿ ಪುಷ್ಕರ್‌ ಸಿಂಗ್‌ ಧಾಮಿ ಘೋಷಣೆ ಮಾಡಿದ್ದಾರೆ. ರಾಜ್ಯದಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ ಬಗ್ಗೆ ಬಿಜೆಪಿ ಪ್ರಣಾಳಿಕೆಯಲ್ಲಿ ಉಲ್ಲೇಖಿಸಿತ್ತು ಎನ್ನಲಾಗಿದೆ.‌ ಇದೀಗ ಅಧಿಕಾರಕ್ಕೆ ಬಂದ ತಕ್ಷಣ ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸಿದ ಮರುದಿನವೇ ಪುಷ್ಕರ್‌ ಸಿಂಗ್‌ ಧಾಮಿ ಈ ಘೋಷಣೆ ಮಾಡಿದ್ದಾರೆ. ಸಂಪುಟ ಸಭೆ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಸಿಎಂ ಅವರು, ರಾಜ್ಯದಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿಗೆ ನಿರ್ಧರಿಸಿದ್ದೇವೆ.

ಏಕರೂಪ ನಾಗರಿಕ ನೀತಿ ಜಾರಿಗೊಳಿಸಿದ ಉತ್ತರಾಖಂಡ| ಸಂಹಿತೆಗೆ ಸಚಿವ ಸಂಪುಟ ಅಸ್ತು Read More »

ಇಂದಿನಿಂದ ಯುಪಿನಲ್ಲಿ ಯೋಗಿ ಆದಿತ್ಯನಾಥ್ ಸೆಕೆಂಡ್ ಇನ್ನಿಂಗ್ಸ್ ಶುರು| ಮೋದಿ, ಬೊಮ್ಮಾಯಿ ಸೇರಿ ಹಲವರು ಭಾಗಿ|

ಸಮಗ್ರ ನ್ಯೂಸ್: ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯನ್ನು ಗೆಲುವಿನತ್ತ ಮುನ್ನಡೆಸಿದ ಯೋಗಿ ಆದಿತ್ಯನಾಥ ಅವರು ಶಾಸಕಾಂಗ ಪಕ್ಷದ ಸಭೆಯ ನಾಯಕರಾಗಿ ಗುರುವಾರ ಅವಿರೋಧವಾಗಿ ಆಯ್ಕೆಯಾದರು. ಉತ್ತರ ಪ್ರದೇಶದಲ್ಲಿ ಎರಡನೇ ಅವಧಿಗೆ ಮುಖ್ಯಮಂತ್ರಿಯಾಗಿ ಅವರು ಮಾ.25ರಂದು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಕೇಂದ್ರದ ವೀಕ್ಷಕರಾಗಿ ನೇಮಕರಾಗಿದ್ದ ಗೃಹಸಚಿವ ಅಮಿತ್ ಶಾ ಅವರು ಯೋಗಿ ಅವರ ಆಯ್ಕೆಯನ್ನು ಪ್ರಕಟಿಸಿದರು. ಸಹವೀಕ್ಷಕರಾಗಿದ್ದ ಹಿರಿಯ ಮುಖಂಡ ರಘುಬರ ದಾಸ್ ಅವರು ಉಪಸ್ಥಿತರಿದ್ದರು. ಶುಕ್ರವಾರ ನಡೆಯಲಿರುವ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಯೋಗಿ ಅವರ

ಇಂದಿನಿಂದ ಯುಪಿನಲ್ಲಿ ಯೋಗಿ ಆದಿತ್ಯನಾಥ್ ಸೆಕೆಂಡ್ ಇನ್ನಿಂಗ್ಸ್ ಶುರು| ಮೋದಿ, ಬೊಮ್ಮಾಯಿ ಸೇರಿ ಹಲವರು ಭಾಗಿ| Read More »

ವಿಧಾನಸಭೆ ಅಧಿವೇಶನದಲ್ಲಿ ಸಚಿವರು ಗೈರು| ಯಡಿಯೂರಪ್ಪ ಬಿಟ್ರೆ ಇನ್ಯಾರಿಗೂ ಜವಾಬ್ದಾರಿ ಇಲ್ಲ – ಸಿದ್ದರಾಮಯ್ಯ

ಸಮಗ್ರ ನ್ಯೂಸ್: ವಿಧಾನಸಭೆಯ ಕಲಾಪದ ಸಂದರ್ಭದಲ್ಲಿ ಸಚಿವರು ಗೈರಾಗಿರುವುದನ್ನ ಪ್ರಶ್ನಿಸಿ ವಿಪಕ್ಷ ನಾಯಕ ಸಿದ್ದರಾಮಯ್ಯ, ಯಡಿಯೂರಪ್ಪ ಬಿಟ್ರೆ ಇನ್ಯಾರಿಗೂ ಜವಾಬ್ದಾರಿ ಇಲ್ಲ, ಅವರನ್ನೇ ಮುಂದೆ ಕೂಡಿಸಿ ಎಂದು ಹೇಳಿದ್ದಾರೆ. ಸಚಿವರ ಗೈರಿಗೆ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸದಸ್ಯರು ಚರ್ಚೆ ಮಾಡುವಾಗ ಸಚಿವರು ಬರಬೇಕು. ಸಚಿವರು ಇಲ್ಲದಿದ್ದರೆ ಬೇರೆ ಸಚಿವರು ಬರೆದುಕೊಳ್ಳಬೇಕು. ಇಲ್ಲದಿದ್ದರೆ ಸಚಿವರು ಹೇಗೆ ಉತ್ತರ ಕೊಡ್ತಾರೆ? ಎಂದು ಪ್ರಶ್ನಿಸಿದರು. ಸದಸ್ಯರು ಮಾತಾಡೋದನ್ನು ಸಚಿವರು ಬರೆದುಕೊಂಡು ಉತ್ತರ ಕೊಡಬೇಕು. ಈ ವೇಳೆ ಯಡಿಯೂರಪ್ಪ ಹೊಗಳಿದ ವಿಪಕ್ಷ ನಾಯಕ

ವಿಧಾನಸಭೆ ಅಧಿವೇಶನದಲ್ಲಿ ಸಚಿವರು ಗೈರು| ಯಡಿಯೂರಪ್ಪ ಬಿಟ್ರೆ ಇನ್ಯಾರಿಗೂ ಜವಾಬ್ದಾರಿ ಇಲ್ಲ – ಸಿದ್ದರಾಮಯ್ಯ Read More »

ಮುಂದೊಮ್ಮೆ ಕೇಸರಿ ಧ್ವಜವೇ ರಾಷ್ಟ್ರಧ್ವಜವಾದೀತು- ಕಲ್ಲಡ್ಕ ಪ್ರಭಾಕರ ಭಟ್

ಸಮಗ್ರ ನ್ಯೂಸ್: ಮುಂದೊಂದು ದಿನ ಕೇಸರಿ ಧ್ವಜವೇ ನಮ್ಮ ರಾಷ್ಟ್ರಧ್ವಜವಾದೀತು ಎಂದು RSS ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಮಂಗಳೂರಿನ ಕುತ್ತಾರಿನಲ್ಲಿ ನಡೆದ ‘ಕೊರಗಜ್ಜನ ಆದಿಕ್ಷೇತ್ರಕ್ಕೆ ನಮ್ಮ ನಡೆ’ ಸಮಾರೋಪ ಸಮಾರಂಭದಲ್ಲಿ ಅವರು ಈ ಹೇಳಿಕೆ ನೀಡಿದ್ದಾರೆ. ಕಾಂಗ್ರೆಸ್ ಪಕ್ಷದ ತುಷ್ಟೀಕರಣ ನೀತಿಯಿಂದ ಭಾರತದ ರಾಷ್ಟ್ರಧ್ವಜ ಇಬ್ಭಾಗವಾಯಿತು. ಮುಂದೊಂದು ದಿನ ಕೇಸರಿ ಧ್ವಜವೇ ನಮ್ಮ ರಾಷ್ಟ್ರಧ್ವಜವಾದೀತು. ಇದು ಯಾಕೆ ಅಂತ ನಾನು ಈ ಬಗ್ಗೆ ಸ್ಪಷ್ಟೀಕರಣ ಕೊಡ್ತೇನೆ. ಈ ಮೂರು ಬಣ್ಣಗಳ ರಾಷ್ಟ್ರಧ್ವಜವನ್ನು

ಮುಂದೊಮ್ಮೆ ಕೇಸರಿ ಧ್ವಜವೇ ರಾಷ್ಟ್ರಧ್ವಜವಾದೀತು- ಕಲ್ಲಡ್ಕ ಪ್ರಭಾಕರ ಭಟ್ Read More »

ಪಠ್ಯಪುಸ್ರಕದಲ್ಲಿ ಭಗವದ್ಗೀತೆ ತರಲ್ಲ – ಮಾಧುಸ್ವಾಮಿ

ಸಮಗ್ರ ನ್ಯೂಸ್: ಪಠ್ಯಕ್ರಮದಲ್ಲಿ ಭಗವದ್ಗೀತೆ ಸೇರಿಸುವ ವಿಚಾರದ ಯಾವ ಪ್ರಸ್ತಾಪವೂ ಸರಕಾರದ ಮುಂದೆ ಇಲ್ಲ. ಪ್ರಸ್ತಾಪವೇ ಇಲ್ಲವೆಂದ ಮೇಲೆ ಚರ್ಚೆ ಯಾಕೆ? ಈ ಬಗ್ಗೆ ಶಿಕ್ಷಣ ಸಚಿವರೇ ಸ್ಪಷ್ಟಪಡಿಸಿದ್ದಾರೆ. ಉಳಿದ ವಿಚಾರ ನನಗೆ ಗೊತ್ತಿಲ್ಲ ಎಂದು ಕಾನೂನು ಸಚಿವ ಜೆ ಸಿ ಮಾಧುಸ್ವಾಮಿ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸದನವನ್ನು ಈ ವಾರ ಮೊಟಕುಗೊಳಿಸುವುದಿಲ್ಲ. ಮಾರ್ಚ್ 30 ರವರೆಗೆ ಅಧಿವೇಶನ ನಡೆಯುತ್ತದೆ. ಯಾವುದೇ ಕಾರಣಕ್ಕೂ ಸದನ ಮೊಟಕು ಮಾಡುವುದಿಲ್ಲ ಎಂದು ಸ್ಪಷ್ಟಪಡಿಸಿದರು. ಭಗವದ್ಗೀತೆಯನ್ನು ಮುಂದಿನ ವರ್ಷದಿಂದ ಪಠ್ಯದಲ್ಲಿ

ಪಠ್ಯಪುಸ್ರಕದಲ್ಲಿ ಭಗವದ್ಗೀತೆ ತರಲ್ಲ – ಮಾಧುಸ್ವಾಮಿ Read More »

ಹಿಜಾಬ್ ತೀರ್ಪು- ಕೋರ್ಟ್ ನಿರ್ಧಾರ ವಿರೋಧಿಸಬಾರದು – ಸಿದ್ದರಾಮಯ್ಯ

ಸಮಗ್ರ ನ್ಯೂಸ್: ಹೈಕೋರ್ಟ್ ಹಿಜಾಬ್ ತೀರ್ಪು ವಿರೋಧಿಸಿ ಮುಸ್ಲಿಂ ಸಮುದಾಯದವರು ಅಂಗಡಿ ಮುಂಗಟ್ಟು ಬಂದ್ ಮಾಡಿ ಪ್ರತಿಭಟನೆ ಮಾಡಿದ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಸಿದ್ಧರಾಮಯ್ಯ, ಅಸಮಾಧಾನ ಇರುವವರು ಬಂದ್ ಮಾಡಿದ್ದಾರೆ. ಕೋರ್ಟ್ ನಿರ್ಧಾರ ವಿರೋಧಿಸಬಾರದು ಎಂದಿದ್ದಾರೆ. ಮಂಗಳೂರಿನಲ್ಲಿ ಮಾತನಾಡಿದ ಅವರು ಹೈಕೋರ್ಟ್, ಸುಪ್ರೀಂ ಕೋರ್ಟ್ ಯಾವುದರ ನಿರ್ಧಾರವನ್ನೂ ವಿರೋಧ ಮಾಡಬಾರದು. ಯಾವ ಧರ್ಮದವರೂ ಕೋಮುವಾದ ಮಾಡಬಾರದು. ಹಿಂದೂ, ಮುಸ್ಲಿಂ ಯಾರೇ ಆದರೂ ಕೋಮುವಾದ ಮಾಡಬಾರದು. ಎಲ್ಲಾ ಧರ್ಮಗಳನ್ನು ಸಮಾನವಾಗಿ ಕಾಣುವ ಕೆಲಸ ಆಗಲಿ ಅಂತಾ ಹೇಳಿದ್ದಾರೆ.

ಹಿಜಾಬ್ ತೀರ್ಪು- ಕೋರ್ಟ್ ನಿರ್ಧಾರ ವಿರೋಧಿಸಬಾರದು – ಸಿದ್ದರಾಮಯ್ಯ Read More »

ಗೋಧ್ರಾ ಹತ್ಯಾಕಾಂಡದ ಬಗ್ಗೆಯೂ ಸಿನಿಮಾವಾಗಲಿ – ಸಿದ್ದರಾಮಯ್ಯ

ಸಮಗ್ರ ನ್ಯೂಸ್: ದೇಶದಲ್ಲಿ ಸಂಚಲನ ಮೂಡಿಸಿರುವ ‘ದಿ ಕಾಶ್ಮೀರ್ ಫೈಲ್ಸ್’ ಸಿನಿಮಾವನ್ನು ಕನ್ನಡಕ್ಕೆ ಡಬ್ ಮಾಡುವ ವಿಚಾರವಾಗಿ ಮಾಜಿ ಸಿಎಂ ಸಿದ್ದರಾಮಯ್ಯ ಮಂಗಳೂರಿನಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ. ದಕ್ಷಿಣ ಕನ್ನಡ ಮತ್ತು ಉಡುಪಿಯಲ್ಲಿ ವಿವಿಧ ಕಾರ್ಯಕ್ರಮಗಳಿಗೆ ಪಾಲ್ಗೊಳ್ಳುವ ಸಲುವಾಗಿ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಸಿದ್ದರಾಮಯ್ಯ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದಾರೆ. ‘ದಿ ಕಾಶ್ಮೀರ್ ಫೈಲ್ಸ್’ ಸಿನಿಮಾವನ್ನು ಕನ್ನಡಕ್ಕೆ ಡಬ್ಬಿಂಗ್ ಮಾಡಿ ತೋರಿಸುತ್ತೇವೆ ಅಂದರೆ ಬೇಡ ಅಂದೋರು ಯಾರು? ಆದರೆ ಜನರಿಗೆ ಸತ್ಯ ಏನು ನಡೆದಿದೆ ಅನ್ನೋದನ್ನು ತೋರಿಸಬೇಕು.

ಗೋಧ್ರಾ ಹತ್ಯಾಕಾಂಡದ ಬಗ್ಗೆಯೂ ಸಿನಿಮಾವಾಗಲಿ – ಸಿದ್ದರಾಮಯ್ಯ Read More »

ಹಿಜಾಬ್ ಧರಿಸಿ ಪರೀಕ್ಷೆ, ತರಗತಿಗೆ ಹಾಜರಾಗಲು ನಿಯಮ ಸಡಿಲಿಕೆ ಇಲ್ಲವೇ ಇಲ್ಲ- ಸಚಿವ ಬಿ.ಸಿ‌ ನಾಗೇಶ್

ಸಮಗ್ರ ನ್ಯೂಸ್: ಹೈಕೋರ್ಟ್ ನೀಡಿದ ತೀರ್ಪಿನ ಅನ್ವಯ ಹಿಜಾಬ್ ಧರಿಸಿ ಶಾಲೆಗೆ ಹಾಜರಾಗಲು ಅಥವಾ ಪರೀಕ್ಷೆಗೆ ಹಾಜರಾಗಲು ಅವಕಾಶ ಇಲ್ಲ ಎಂದು ಶಿಕ್ಷಣ ಸಚಿವ ಬಿ.ಸಿ ನಾಗೇಶ್ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಿಜಾಬ್ ವಿಚಾರವಾಗಿ ಹೈಕೋರ್ಟ್ ತೀರ್ಪು ನೀಡಿದೆ ಹೀಗಾಗಿ ಸುಪ್ರೀಂ ಕೋರ್ಟ್ ಮೊರೆ ಹೋಗುವ ವಿದ್ಯಾರ್ಥಿಗಳಿಗೆ ಯಾವುದೇ ಕಾರಣಕ್ಕೂ ಮತ್ತೆ ಅವಕಾಶ ಸಡಿಲಿಕೆ ಇರುವುದಿಲ್ಲ. ಇನ್ನು ಮುಂದೆ ಪರೀಕ್ಷೆಯ ವಿಚಾರದಲ್ಲಿ ವಿಶೇಷ ಅವಕಾಶವನ್ನು ನೀಡಲ್ಲ. ಇಷ್ಟು ದಿನ ಕೋರ್ಟ್ ತೀರ್ಪು ಬಂದಿರಲಿಲ್ಲ. ಹೀಗಾಗಿ ಶಿಕ್ಷಣ

ಹಿಜಾಬ್ ಧರಿಸಿ ಪರೀಕ್ಷೆ, ತರಗತಿಗೆ ಹಾಜರಾಗಲು ನಿಯಮ ಸಡಿಲಿಕೆ ಇಲ್ಲವೇ ಇಲ್ಲ- ಸಚಿವ ಬಿ.ಸಿ‌ ನಾಗೇಶ್ Read More »

“ನಾಯಕತ್ವ ಬದಲಿಸಿಕೊಳ್ಳಿ, ಇಲ್ಲದಿದ್ದರೆ ಕರ್ನಾಟಕದಲ್ಲೂ ಆಪ್ ನಿಮ್ಮನ್ನ ಗುಡಿಸುತ್ತೆ”| ಮೂರೂ ಪಕ್ಷಗಳಿಗೆ ಎಚ್ಚರಿಕೆ ಇತ್ತ ಲೆಹರ್ ಸಿಂಗ್

ಸಮಗ್ರ ನ್ಯೂಸ್: ‘ರಾಜ್ಯದಲ್ಲಿ ಪ್ರಮುಖವಾಗಿರುವ ಮೂರೂ ಪಕ್ಷಗಳ ನಾಯಕತ್ವ ಬದಲಾವಣೆಯಾಗದಿದ್ದರೆ ಅವುಗಳು ಧೂಳಿಪಟವಾಗುತ್ತವೆ. ದೆಹಲಿ ರೀತಿಯಲ್ಲಿ ಆಮ್ ಆದ್ಮಿ ಪಕ್ಷವು ಎಲ್ಲರನ್ನೂ ಗುಡಿಸುತ್ತದೆ’ ಎಂದು ಬಿಜೆಪಿ, ಕಾಂಗ್ರೆಸ್ ಮತ್ತು ಜೆಡಿಎಸ್‌ಗೆ ವಿಧಾನ ಪರಿಷತ್‌ನ ಬಿಜೆಪಿ ಸದಸ್ಯ ಲೆಹರ್ ಸಿಂಗ್ ಸಿರೋಯಾ ಎಚ್ಚರಿಕೆ ನೀಡಿದರು. ವಿಧಾನ ಪರಿಷತ್‌ನಲ್ಲಿ ಗುರುವಾರ ಬಜೆಟ್‌ ಮೇಲಿನ ಚರ್ಚೆಯಲ್ಲಿ ಪಾಲ್ಗೊಂಡು ಮಾತನಾಡಿದ ಲೆಹರ್‌ ಸಿಂಗ್‌, ‘ನಾನು 12 ವರ್ಷಗಳಿಂದ ಸದನದಲ್ಲಿದ್ದೇನೆ. ಪಕ್ಷ ನನಗೆ ಎರಡು ಅವಧಿಗೆ ಅವಕಾಶ‌ ನೀಡಿದೆ. ‌ಮತ್ತೆ ನಾನು ಅವಕಾಶ ಕೇಳುವುದಿಲ್ಲ.

“ನಾಯಕತ್ವ ಬದಲಿಸಿಕೊಳ್ಳಿ, ಇಲ್ಲದಿದ್ದರೆ ಕರ್ನಾಟಕದಲ್ಲೂ ಆಪ್ ನಿಮ್ಮನ್ನ ಗುಡಿಸುತ್ತೆ”| ಮೂರೂ ಪಕ್ಷಗಳಿಗೆ ಎಚ್ಚರಿಕೆ ಇತ್ತ ಲೆಹರ್ ಸಿಂಗ್ Read More »