‘ಗಾಂಧೀಜಿಯನ್ನೇ ಬಿಟ್ಟಿಲ್ಲ ನಿಮ್ಮನ್ನು ಬಿಡ್ತೇವಾ’ ಎಂದವರನ್ನು ಪೊಲೀಸರು ಬಿಟ್ಟಿಲ್ಲ!| ಹಿಂದೂ ಮಹಾಸಭಾ ಪ್ರಧಾನ ಕಾರ್ಯದರ್ಶಿ ಧರ್ಮೇಂದ್ರ ಅರೆಸ್ಟ್|
ಮಂಗಳೂರು: ಮಹಾತ್ಮಾ ಗಾಂಧೀಜಿಯವರ ಕುರಿತು ವಿವಾದಾತ್ಮಕ ಹೇಳಿಕೆ ನೀಡಿದ್ದ ಹಿಂದೂ ಮಹಾಸಭಾದ ರಾಜ್ಯ ಪ್ರಧಾನ ಕಾರ್ಯದರ್ಶಿ ಧರ್ಮೇಂದ್ರ ಅವರನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ. ದೇವಾಲಯ ಕೆಡವಿದ ವಿಚಾರದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಹಿಂದೂ ಮಹಾಸಭಾ ಮುಖಂಡ ಧರ್ಮೇಂದ್ರ ಬೆದರಿಕೆ ಹಾಕಿದ್ದರು. ತಮ್ಮ ಮಾತು ವಿವಾದದ ಸ್ವರೂಪ ಪಡೆದುಕೊಂಡಂತೆಯೇ ಹೇಳಿಕೆ ಕುರಿತು ಕ್ಷಮೆಯಾಚಿಸಿದ್ದರು. ಹಿಂದೂಗಳ ಮೇಲೆ ನಡೆದ ದಾಳಿ ಖಂಡಿಸಿ ಗಾಂಧೀಜಿಯನ್ನೇ ಹತ್ಯೆ ಮಾಡಿದ್ದೇವೆ. ಇನ್ನು ನೀವು ಯಾವ ಲೆಕ್ಕ? ಎಂದು ಮಂಗಳೂರಿನಲ್ಲಿ ಹಿಂದೂ ಮಹಾಸಭಾ ಮುಖಂಡ […]










