ಸರ್ಕಾರ ಬಿದ್ರೆ ಬೀಳಲಿ ಜಾತಿಗಣತಿ ವರದಿ ಜಾರಿ ಮಾಡಲೇಬೇಕು: ಕಾಂಗ್ರೆಸ್ MLC ಬಿ.ಕೆ ಹರಿಪ್ರಸಾದ್ ಸ್ಫೋಟಕ ಹೇಳಿಕೆ
ಸಮಗ್ರ ನ್ಯೂಸ್: ರಾಜ್ಯದಲ್ಲಿ ಜಾತಿ ಜನಗಣತಿ ವರದಿ ಜಾರಿ ಜಟಾಪಟಿ ಇದೀಗ ಪ್ರಾರಂಭವಾದಂತೆ ಕಾಣುತ್ತಿದೆ. ಹೌದು ಸರ್ಕಾರ ಬಿದ್ದರೆ ಬೀಳಲಿ. ಕರ್ನಾಟಕದಲ್ಲಿ ಜಾತಿಗಣತಿ ಜಾರಿ ಮಾಡಲೇಬೇಕು ಎಂದು ಕಾಂಗ್ರೆಸ್ ಎಂಎಲ್ಸಿ ಬಿ.ಕೆ ಹರಿಪ್ರಸಾದ್ ಸ್ಫೋಟಕ ಹೇಳಿಕೆ ನೀಡಿದ್ದಾರೆ. ಜಾತಿಗಣತಿ ಜಾರಿ ವಿಚಾರ ಕಾಂಗ್ರೆಸ್ ಪ್ರಣಾಳಿಕೆಯಲ್ಲೇ ಇದೆ. ಆದರೆ ಜಾತಿಗಣತಿ ಜಾರಿಗೆ ಸರ್ಕಾರ ಯಾಕೆ ಯೋಚನೆ ಮಾಡುತ್ತಿದೆ? ಮೀನಾಮೇಷ ಎಣಿಸದೆ ಮೊದಲು ಜಾತಿಗಣತಿ ಜಾರಿ ಮಾಡಲಿ ಎಂದು ಆಗ್ರಹಿಸಿದರು. ಇಷ್ಟೇ ಅಲ್ಲದೆ ಜಾತಿಗಣತಿ ಜಾರಿಯಿಂದ ಎಲ್ಲ ಸಮುದಾಯಗಳಿಗೆ ಅನುಕೂಲ […]










