ರಾಜಕೀಯ

ರಾಜ್ಯಸಭಾ ಚುನಾವಣೆ| ಬಿಜೆಪಿಯಿಂದ ದೇವೇಗೌಡ್ರಿಗೆ ಟಿಕೆಟ್ ಡೌಟ್

ಸಮಗ್ರ ನ್ಯೂಸ್: ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡರನ್ನು ಮತ್ತೊಂದು ಅವಧಿಗೆ ರಾಜ್ಯಸಭೆಗೆ ಕಳುಹಿಸಬೇಕೆಂಬ ಜೆಡಿಎಸ್ ಪ್ರಯತ್ನಕ್ಕೆ ಹಿನ್ನಡೆಯಾಗಿದ್ದು, ಈ ಪ್ರಸ್ತಾಪಕ್ಕೆ ಬಿಜೆಪಿ ಹೈಕಮಾಂಡ್‌ ಇನ್ನೂ ಸಮ್ಮತಿ ನೀಡಿಲ್ಲ. ಹೀಗಾಗಿ ದೇವೇಗೌಡರ ಬದಲು ಅಚ್ಚರಿಯ ಅಭ್ಯರ್ಥಿ ರಾಜ್ಯಸಭೆ ಪ್ರವೇಶಿಸುವುದು ದೃಢಪಟ್ಟಿದೆ. ರಾಜ್ಯಸಭೆ ಹಾಗೂ ವಿಧಾನ ಪರಿಷತ್ ಅಭ್ಯರ್ಥಿ ಆಯ್ಕೆಗೆ ಸಂಬಂಧಪಟ್ಟಂತೆ ಇನ್ನೆರಡು ದಿನದಲ್ಲಿ ದೆಹಲಿಯಲ್ಲಿ ಬಿಜೆಪಿ ಸಂಸದೀಯ ಮಂಡಳಿ ಸಭೆ ನಡೆಯಲಿದ್ದು, ಅಭ್ಯರ್ಥಿಗಳ ಪಟ್ಟಿಯ ಬಗ್ಗೆ ಚರ್ಚೆ ನಡೆಯಲಿದೆ. ಸಂಸದೀಯ ಮಂಡಳಿ ಸದಸ್ಯರಾದ ಬಿ.ಎಸ್‌.ಯಡಿಯೂರಪ್ಪ ಈ ಸಭೆಗೆ ಗೈರಾಗಲಿದ್ದಾರೆ. ಕೋರ್ […]

ರಾಜ್ಯಸಭಾ ಚುನಾವಣೆ| ಬಿಜೆಪಿಯಿಂದ ದೇವೇಗೌಡ್ರಿಗೆ ಟಿಕೆಟ್ ಡೌಟ್ Read More »

ಕೆಪಿಸಿಸಿ ಅಧ್ಯಕ್ಷರಾಗಿ ಬಿ.ಕೆ ಹರಿಪ್ರಸಾದ್ ಆಯ್ಕೆ

ಸಮಗ್ರ ನ್ಯೂಸ್: ಡಿಕೆ ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸುವ ಮುನ್ನವೇ ಕೆಪಿಸಿಸಿ ಅದ್ಯಕ್ಷರು ಯಾರಾಗುತ್ತಾರೆ ಎಂಬುದಕ್ಕೆ ತೆರೆ ಬಿದ್ದಿದೆ. ಇಂದು ಕಾಂಗ್ರೆಸ್ ಹೈಕಮಾಂಡ್‌ನಿಂದಲೇ ಕಾಂಗ್ರೆಸ್ ಹಿರಿಯ ನಾಯಕ, ವಿಧಾನ ಪರಿಷತ್ ಸದಸ್ಯರಾದ ಬಿಕೆ ಹರಿಪ್ರಸಾದ್ ಅವರ ಆಯ್ಕೆ ಆಗಿದೆ. ಕಾಂಗ್ರೆಸ್ ವರಿಷ್ಠರಿಂದಲೇ ಇಂದು ಬುಧವಾರ ಬೆಳಗ್ಗೆ ದೂರವಾಣಿ ಕರೆ ಬಂದಿದೆ. ನಾಯಕರೊಂದಿಗೆ ಮಾತನಾಡಿದ ಬಿಕೆ. ಹರಿಪ್ರಸಾದ್ ಅವರು ವರಿಷ್ಠ ನಿರ್ಧಾರವನ್ನು ಸ್ವಾಗತಿಸಿದ್ದಾರೆ. ಹೊಸ ಜವಾಬ್ದಾರಿ ನಿರ್ವಹಣೆಗೆ ಅವರು ಸಹಮತ ವ್ಯಕ್ತಪಡಿಸಿದ್ದಾರೆ. ಈ ಮೂಲಕ ಡಿಕೆ ಶಿವಕುಮಾರ್

ಕೆಪಿಸಿಸಿ ಅಧ್ಯಕ್ಷರಾಗಿ ಬಿ.ಕೆ ಹರಿಪ್ರಸಾದ್ ಆಯ್ಕೆ Read More »

ಸ್ಪೀಕರ್ ಸ್ಥಾನಕ್ಕೆ ಯು.ಟಿ ಖಾದರ್ ರಾಜೀನಾಮೆ

ಸಮಗ್ರ ನ್ಯೂಸ್: ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸುವ ಮತ್ತೊಂದು ಮಹತ್ವದ ವಿದ್ಯಮಾನ ಜರುಗಿದ್ದು,ಡಿ.ಕೆ.ಶಿವಕುಮಾರ ಸಂಪುಟದಲ್ಲಿ ಸಚಿವ ಸ್ಥಾನ ಫಿಕ್ಸ್ ಆದ ಹಿನ್ನೆಲೆಯಲ್ಲಿ ಇಂದು ವಿಧಾನಸಭಾ ಸ್ಪೀಕರ್ ಸ್ಥಾನಕ್ಕೆ ಯು.ಟಿ. ಖಾದರ್ ಅವರು ರಾಜೀನಾಮೆ ನೀಡಿದ್ದಾರೆ. ರಾಜ್ಯ ಸಚಿವ ಸಂಪುಟದಲ್ಲಿ ತಮಗೆ ಸಚಿವ ಸ್ಥಾನ ಸಿಗುವ ಬಗ್ಗೆ ಅಧಿಕೃತ ಮಾಹಿತಿ ಲಭ್ಯವಾದ ತಕ್ಷಣವೇ ಖಾದರ್ ಅವರು ತಮ್ಮ ಸ್ಪೀಕರ್ ಹುದ್ದೆಗೆ ರಾಜೀನಾಮೆ ಸಲ್ಲಿಸಿದ್ದಾರೆ. ವರದಿಗಳ ಪ್ರಕಾರ, ಯು.ಟಿ. ಖಾದರ್ ಅವರು ಇಂದು ವಿಧಾನಸಭೆಯ ಉಪಸಭಾಪತಿಗಳಿಗೆ (ಡೆಪ್ಯುಟಿ ಸ್ಪೀಕರ್)

ಸ್ಪೀಕರ್ ಸ್ಥಾನಕ್ಕೆ ಯು.ಟಿ ಖಾದರ್ ರಾಜೀನಾಮೆ Read More »

ಬಿಜೆಪಿ ತೊರೆದ ಅಣ್ಣಾಮಲೈ| ಹೊಸ ಪಕ್ಷ ಸ್ಥಾಪಿಸ್ತಾರಾ ತಮಿಳ್ ಸಿಂಗಂ!?

ಸಮಗ್ರ ನ್ಯೂಸ್: ಮಹತ್ವದ ಬೆಳವಣಿಗೆಯೊಂದರಲ್ಲಿ ತಮಿಳುನಾಡು ಬಿಜೆಪಿ ನಾಯಕ ಕೆ. ಅಣ್ಣಾಮಲೈ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ. ದೆಹಲಿಯಲ್ಲಿ ಬಿಜೆಪಿ ರಾಷ್ಟ್ರಾಧ್ಯಕ್ಷ ನಿತಿನ್‌ ನಬಿನ್‌ ಅವರನ್ನು ಭೇಟಿಯಾದ ಅಣ್ಣಾಮಲೈ ಮಂಗಳವಾರ (ಜೂನ್‌ 2) ರಾಜೀನಾಮೆ ಪತ್ರ ಸಲ್ಲಿಸಿದರು. ತಮಿಳುನಾಡು ಬಿಜೆಪಿ ಅಧ್ಯಕ್ಷ ಸ್ಥಾನಕ್ಕೆ ನೈನಾರ್ ನಾಗೇಂದ್ರನ್ ಅವರನ್ನು ನೇಮಿಸಿದಾಗಿನಿಂದ ಪಕ್ಷ ತೊರೆಯಲು ನಿರ್ಧರಿಸಿದ್ದಾರೆ ಎಂಬ ಊಹಾಪೋಹಗಳು ಕೇಳಿಬಂದಿದ್ದವು. ಅವರಿಗೆ ಬಿಜೆಪಿಯಲ್ಲಿ ಇನ್ನು ಭವಿಷ್ಯವಿಲ್ಲ ಎಂಬ ಸುದ್ದಿಗಳು ಹರಿದಾಡಿದ್ದವು. ಬಿಜೆಪಿ ರಾಷ್ಟ್ರಾಧ್ಯಕ್ಷ ಅಧ್ಯಕ್ಷ ನಿತಿನ್ ನಬಿನ್ ಮತ್ತು

ಬಿಜೆಪಿ ತೊರೆದ ಅಣ್ಣಾಮಲೈ| ಹೊಸ ಪಕ್ಷ ಸ್ಥಾಪಿಸ್ತಾರಾ ತಮಿಳ್ ಸಿಂಗಂ!? Read More »

ಧರ್ಮಸ್ಥಳ : ವೃದ್ಧೆಯ ಪ್ರಜ್ಞೆ ತಪ್ಪಿಸಿ  ಲಕ್ಷಾಂತರ ರೂಪಾಯಿಯ ಚಿನ್ನಾಭರಣ ದರೋಡೆ 

samagra news:  ಧರ್ಮಸ್ಥಳದ ದೇವಸ್ಥಾನದ ಮುಖ್ಯದ್ವಾರದ ಮುಂಭಾಗದ ಬಸ್ ನಿಲ್ದಾಣದಲ್ಲಿ ವೃದ್ಧೆಯೊಬ್ಬರಿಗೆ ಮತ್ತು ಬರಿಸುವ ಪಾನೀಯ ನೀಡಿ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ಹಾಗೂ ನಗದು ದೋಚಿರುವ ಘಟನೆ ಮೇ 25 ರಂದು ರಾತ್ರಿ ನಡೆದಿದೆ. ಬೆಂಗಳೂರಿನ ಬನ್ನೇರುಘಟ್ಟ ರಸ್ತೆ ನಿವಾಸಿ ಪ್ರೇಮಾ ಕೆ (70) ಎಂಬುವರೇ ದರೋಡೆಗೊಳಗಾದ ದುರ್ದೈವಿ. ಇವರಿಂದ 112 ಗ್ರಾಂ ತೂಕದ ಚಿನ್ನದ ಆಭರಣಗಳು ಮತ್ತು 7,000/- ರೂಪಾಯಿ ನಗದನ್ನು ಕಳವು ಮಾಡಲಾಗಿದ್ದು, ಕಳವಾದ ಸೊತ್ತುಗಳ ಒಟ್ಟು ಮೌಲ್ಯ ಸುಮಾರು 10,00,700/- ರೂಪಾಯಿ ಎಂದು

ಧರ್ಮಸ್ಥಳ : ವೃದ್ಧೆಯ ಪ್ರಜ್ಞೆ ತಪ್ಪಿಸಿ  ಲಕ್ಷಾಂತರ ರೂಪಾಯಿಯ ಚಿನ್ನಾಭರಣ ದರೋಡೆ  Read More »

ರಾಜೀನಾಮೆಗೆ ಸಮಯಾವಕಾಶ ಕೇಳಿದ ಸಿಎಂ ಸಿದ್ದು : ಮಧ್ಯರಾತ್ರಿ ದಿಢೀರ್ ಮುಂಬೈಗೆ ತೆರಳಿದ ರಾಜ್ಯಪಾಲರು 

ಸಮಗ್ರ ನ್ಯೂಸ್ : ರಾಜ್ಯದಲ್ಲಿ ತೀವ್ರ ರಾಜಕೀಯ ಬೆಳವಣಿಗೆಗಳು ನಡೆಯುತ್ತಿರುವ ಬೆನ್ನಲ್ಲೇ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್(Thawar Chand Gehlot) ಅವರು ಮಧ್ಯರಾತ್ರಿ ದಿಢೀರ್ ಮುಂಬೈಗೆ ಪ್ರಯಾಣ ಬೆಳೆಸಿದ್ದಾರೆ. ಹತ್ತಿರ ಸಂಬಂಧಿಕರೊಬ್ಬರ ತೀವ್ರ ಅನಾರೋಗ್ಯದ ಹಿನ್ನೆಲೆಯಲ್ಲಿ ರಾಜ್ಯಪಾಲರು ತುರ್ತಾಗಿ ಮುಂಬೈಗೆ ತೆರಳಿದ್ದಾರೆ ಎಂದು ಪ್ರಾಥಮಿಕ ಮೂಲಗಳಿಂದ ತಿಳಿದುಬಂದಿದೆ. ಬುಧವಾರ ತಡರಾತ್ರಿ 11:45 ರ ಸುಮಾರಿಗೆ ಬೆಂಗಳೂರಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಅವರು ಮುಂಬೈಗೆ ವಿಮಾನದ ಮೂಲಕ ಪ್ರಯಾಣ ಬೆಳೆಸಿದ್ದಾರೆ. ಮುಖ್ಯಮಂತ್ರಿ ಹುದ್ದೆಗೆ ರಾಜೀನಾಮೆ ನೀಡಲಿರುವ ಸಿದ್ದರಾಮಯ್ಯ (Siddaramaiah)

ರಾಜೀನಾಮೆಗೆ ಸಮಯಾವಕಾಶ ಕೇಳಿದ ಸಿಎಂ ಸಿದ್ದು : ಮಧ್ಯರಾತ್ರಿ ದಿಢೀರ್ ಮುಂಬೈಗೆ ತೆರಳಿದ ರಾಜ್ಯಪಾಲರು  Read More »

ನಾಳೆ ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

ಸಮಗ್ರ ನ್ಯೂಸ್: ರಾಜ್ಯ ಕಾಂಗ್ರೆಸ್ ನಲ್ಲಿ ಮುಖ್ಯಮಂತ್ರಿ ಬದಲಾವಣೆ ಖಚಿತವಾಗಿದ್ದು, ನಾಳೆ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ನೀಡಲು ಮುಂದಾಗಿದ್ದಾರೆ. ನಾಳೆ ಗುರುವಾರ ಬೆಳಿಗ್ಗೆ 10:30ಕ್ಕೆ ಸಿಎಂ ಸಿದ್ದರಾಮಯ್ಯ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆ. ಈಗಾಗಲೇ ಸಿದ್ದರಾಮಯ್ಯ ರಾಜ್ಯಪಾಲರ ಭೇಟಿಗೆ ಸಮಯಾವಕಾಶ ನೀಡುವಂತೆ ಕೋರಿದ್ದಾರೆ. ನಾಳೆ ಬೆಳಿಗ್ಗೆ 9 ಗಂಟೆಗೆ ಸಿಎಂ ಸಿದ್ದರಾಮಯ್ಯ ಉಪಹಾರ ಕೂಟ ಆಯೋಜಿಸಿದ್ದು, ಅದಾದ ಬಳಿಕ ರಾಜಭವನಕ್ಕೆ ತೆರಳಿ ರಾಜೀನಾಮೆ ನೀಡಲಿದ್ದಾರೆ ಎನ್ನಲಾಗಿದೆ. ನಾಳೆ ಬೆಳಿಗೆ 10:30ಕ್ಕೆ ರಾಜ್ಯಪಾಲರ ಭೇಟಿಗೆ ಸಮಯ ನೀಡುವಂತೆ

ನಾಳೆ ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ Read More »

ಕರ್ನಾಟಕ ರಾಜಕೀಯದಲ್ಲಿ ಭಾರೀ ಬದಲಾವಣೆ| ಡಿಕೆಶಿ ಸಿಎಂ ಜೊತೆಗೆ ನಾಲ್ವರಿಗೆ ಡಿಸಿಎಂ ಭಾಗ್ಯ

ಸಮಗ್ರ ನ್ಯೂಸ್: ಕರ್ನಾಟಕ ರಾಜಕಾರಣದಲ್ಲಿ ಇದೀಗ ಭಾರಿ ಮಹಾತಿರುವು ಸಂಭವಿಸಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲು ಅಂತಿಮ ನಿರ್ಧಾರ ಕೈಗೊಂಡಿದ್ದಾರೆ. ದೆಹಲಿಯಲ್ಲಿ ಕಾಂಗ್ರೆಸ್ ಹೈಕಮಾಂಡ್ ನಾಯಕರೊಂದಿಗೆ ನಡೆದ ಸುದೀರ್ಘ ಸಭೆಗಳ ಬೆನ್ನಲ್ಲೇ ಈ ಮಹತ್ವದ ಬೆಳವಣಿಗೆಯಾಗಿದೆ. ಇದರೊಂದಿಗೆ, ಹೊಸ ಸರ್ಕಾರದಲ್ಲಿ ನಾಲ್ವರು ಉಪಮುಖ್ಯಮಂತ್ರಿಗಳ (ಡಿಸಿಎಂ) ಸ್ಥಾನ ಸೃಷ್ಟಿಯಾಗುವ ಸೂಚನೆಗಳು ಬಲಗೊಂಡಿವೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೈಕಮಾಂಡ್ ಸೂಚನೆಯ ಮೇರೆಗೆ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವ ಕುರಿತು ಗಂಭೀರ ಚಿಂತನೆ ನಡೆಸಿದ್ದಾರೆ ಎನ್ನಲಾಗಿದೆ. ಕಳೆದ

ಕರ್ನಾಟಕ ರಾಜಕೀಯದಲ್ಲಿ ಭಾರೀ ಬದಲಾವಣೆ| ಡಿಕೆಶಿ ಸಿಎಂ ಜೊತೆಗೆ ನಾಲ್ವರಿಗೆ ಡಿಸಿಎಂ ಭಾಗ್ಯ Read More »

ಮೇಕೆದಾಟು ಯೋಜನೆಯ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್

ಸಮಗ್ರ ನ್ಯೂಸ್: ಕರ್ನಾಟಕ ಸರ್ಕಾರದ ಪ್ರಸ್ತಾವಿತ ಮೇಕೆದಾಟು ಯೋಜನೆ ವಿರೋಧಿಸಿ ತಮಿಳುನಾಡು ಸಲ್ಲಿಸಿದ್ದ ಪರಿಶೀಲನಾ ಅರ್ಜಿಯನ್ನು ಸುಪ್ರೀಂಕೋರ್ಟ್ ವಜಾಗೊಳಿಸಿದ್ದು, ಕರ್ನಾಟಕಕ್ಕೆ ಬಹು ದೊಡ್ಡ ಜಯ ಸಿಕ್ಕಿದೆ. ಮೇಕೆದಾಟು ಯೋಜನೆ ವಿರುದ್ಧ ತಮಿಳುನಾಡು ಸರ್ಕಾರ ಸಲ್ಲಿಸಿದ್ದ ಅರ್ಜಿಗಳನ್ನು ಸುಪ್ರೀಂಕೋರ್ಟ್ 2025ರ ನವೆಂಬರ್‌ನಲ್ಲಿ ವಜಾಗೊಳಿಸಿತ್ತು. ತಮಿಳುನಾಡಿನ ಆಕ್ಷೇಪಣೆ, ತಜ್ಞ ಸಂಸ್ಥೆಗಳು, ಕಾವೇರಿ ನೀರು ನಿಯಂತ್ರಣ ಸಮಿತಿ ಮತ್ತು ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಅಭಿಪ್ರಾಯ ಪರಿಗಣಿಸಿದ ನಂತರವೇ ಆಯೋಗ ಯೋಜನೆಗೆ ಅನುಮೋದನೆ ನೀಡಲಿದೆ ಎಂದು ತಿಳಿಸಿತ್ತು. ಈ ಮಧ್ಯೆ, 2025ರ

ಮೇಕೆದಾಟು ಯೋಜನೆಯ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್ Read More »

ಗೃಹಲಕ್ಷ್ಮಿ ಮತ್ತು ಗೃಹ ಜ್ಯೋತಿ ಗ್ಯಾರಂಟಿ ಯೋಜನೆ ಪಡೆಯಲು ಹೊಸ ಅರ್ಜಿ ಕಡ್ಡಾಯ!

ಸಮಗ್ರ ನ್ಯೂಸ್ : ಗೃಹಲಕ್ಷ್ಮಿ ಮತ್ತು ಗೃಹ ಜ್ಯೋತಿ ಗ್ಯಾರಂಟಿ ಯೋಜನೆಗಳ ಲಾಭ ಅರ್ಹ ಫಲಾನುಭವಿಗಳಿಗಷ್ಟೇ ದೊರೆಯುವಂತೆ ಮಾಡಲು ಫಲಾನುಭವಿಗಳ ಪಟ್ಟಿಯನ್ನು ಪರಿಷ್ಕರಿಸಲು ಸರ್ಕಾರ ಚಿಂತನೆ ನಡೆಸಿದೆ. ಐದು ಗ್ಯಾರಂಟಿಗಳ ಪೈಕಿ ಗೃಹಲಕ್ಷ್ಮಿ ಮತ್ತು ಗೃಹ ಜ್ಯೋತಿ ಯೋಜನೆಗಳನ್ನು ಅರ್ಹರಲ್ಲದವರೂ ಪಡೆಯುತ್ತಿದ್ದು, ಫಲಾನುಭವಿಗಳ ಪಟ್ಟಿ ಪರಿಷ್ಕರಿಸುವಂತೆ ಭಾನುವಾರದ ಶಾಸಕರ ಸಭೆಯಲ್ಲಿ ಸಲಹೆಗಳು ಬಂದಿವೆ. ಅದರಲ್ಲೂ, ಫಲಾನುಭವಿಗಳ ಹಾಲಿ ಪಟ್ಟಿಯಲ್ಲಿ ಕೆಲವರು ಮೃತಪಟ್ಟಿದ್ದಾರೆ, ಬೇರೆಯವರು ಅವರ ಹೆಸರಿನಲ್ಲಿ ಸಹಾಯಧನ ಪಡೆಯುತ್ತಿದ್ದಾರೆ. ಹಾಗೆಯೇ, ಅರ್ಹರ ಹೆಸರಿನಲ್ಲಿ ಬೇರೆಯವರು ನೋಂದಣಿ ಮಾಡಿ

ಗೃಹಲಕ್ಷ್ಮಿ ಮತ್ತು ಗೃಹ ಜ್ಯೋತಿ ಗ್ಯಾರಂಟಿ ಯೋಜನೆ ಪಡೆಯಲು ಹೊಸ ಅರ್ಜಿ ಕಡ್ಡಾಯ! Read More »