ರಾಜಕೀಯ

ಬರ ಪರಿಹಾರ ಕುರಿತು ಕೇಂದ್ರಕ್ಕೆ ಸುಪ್ರೀಂ ನಿರ್ದೇಶನ ನೀಡಿಲ್ಲ – ಆರ್.ಅಶೋಕ್

ಸಮಗ್ರ ನ್ಯೂಸ್: ಬರ ಪರಿಹಾರ ಬಿಡುಗಡೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ಕೇಂದ್ರಕ್ಕೆ ಯಾವುದೇ ನಿರ್ದೇಶನ ನೀಡಿಲ್ಲ. ಕೇಂದ್ರ ಸರ್ಕಾರವೇ ಚುನಾವಣಾ ಆಯೋಗದ ಅನುಮತಿ ಕೇಳಿದ್ದು, ಅದಕ್ಕೆ ಚುನಾವಣಾ ಆಯೋಗ ಅನುಮತಿ ನೀಡಿದೆ. ಈ ವಿಷಯವನ್ನು ನ್ಯಾಯಾಲಯದ ಗಮನಕ್ಕೆ ತಂದಿದೆ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌.ಅಶೋಕ ಹೇಳಿದರು. ಬಿಜೆಪಿ ಮಾಧ್ಯಮ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಇದನ್ನೇ ಕಾಂಗ್ರೆಸ್‌ ಪಕ್ಷ ತಮಗೆ ಸಿಕ್ಕ ವಿಜಯ ಎಂಬಂತೆ ಬಿಂಬಿಸಿಕೊಳ್ಳುತ್ತಿದೆ ಎಂದು ಕುಟುಕಿದರು. ರಾಜ್ಯದಲ್ಲಿ ಹಿಂದೂಗಳ ಮೇಲೆ ಹಲ್ಲೆ, ದೌರ್ಜನ್ಯ […]

ಬರ ಪರಿಹಾರ ಕುರಿತು ಕೇಂದ್ರಕ್ಕೆ ಸುಪ್ರೀಂ ನಿರ್ದೇಶನ ನೀಡಿಲ್ಲ – ಆರ್.ಅಶೋಕ್ Read More »

ಕಾಂಗ್ರೆಸ್‌ ರಾಜ್ಯಗಳಲ್ಲಿ ಹನುಮಾನ್‌ ಚಾಲೀಸಾ ಹೇಳುವುದೂ ಮಹಾ ಅಪರಾಧ| ಸಿದ್ದರಾಮಯ್ಯ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಮೋದಿ

ಸಮಗ್ರ ನ್ಯೂಸ್: ಲೋಕ ಚುನಾವಣೆಗೆ ದಿನಗಣನೆ ಬಾಕಿ ಇದೆ ಅಷ್ಟೇ, ಇದೇ ಹೊತ್ತಲ್ಲಿ ಕಾಂಗ್ರೆಸ್ ಬಿಜೆಪಿ ನಡುವೆ ಮಾತಿನ ವಾಗ್ಯುದ್ದ ನಡೆಯುತ್ತಿದೆ. ಪ್ರಧಾನಿ ನರೇಂದ್ರ ಮೋದಿ ಅವರು ರಾಜಸ್ಥಾನದಲ್ಲಿ ತಮ್ಮ ಚುನಾವಣಾ ಪ್ರಚಾರದ ವೇಳೆ ಕರ್ನಾಟಕದ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರ್ಕಾರವನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದ್ದಾರೆ. ಕಾಂಗ್ರೆಸ್‌ ಆಡಳಿತ ಇರುವ ರಾಜ್ಯಗಳಲ್ಲಿ ಹನುಮಾನ್‌ ಚಾಲೀಸಾ ಹೇಳುವುದೂ ಮಹಾ ಅಪರಾಧ. ಶೋಭಾ ಯಾತ್ರೆ ನಡೆಸಲೂ ಅಲ್ಲಿ ಅವಕಾಶ ಇಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ವಾಗ್ದಾಳಿ ನಡೆಸಿದ್ದಾರೆ. ಕಾಂಗ್ರೆಸ್‌

ಕಾಂಗ್ರೆಸ್‌ ರಾಜ್ಯಗಳಲ್ಲಿ ಹನುಮಾನ್‌ ಚಾಲೀಸಾ ಹೇಳುವುದೂ ಮಹಾ ಅಪರಾಧ| ಸಿದ್ದರಾಮಯ್ಯ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಮೋದಿ Read More »

ಕಾಂಗ್ರೆಸ್ ವಿರುದ್ಧ ಚುನಾವಣಾ ಆಯೋಗಕ್ಕೆ ಟಿ.ಎ.ಶರವಣ ದೂರು

ಸಮಗ್ರ ನ್ಯೂಸ್: ಮತದಾರರನ್ನು ಸೆಳೆಯುವ ಉದ್ದೇಶದಿಂದ ಚುನಾವಣಾ ಲಂಚ ಹಾಗೂ ಗ್ಯಾರಂಟಿ ಕಾರ್ಡ್‌ಗಳನ್ನು ವಿತರಿಸುತ್ತಿರುವ ಕಾಂಗ್ರೆಸ್‌ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಎಂಎಲ್‌ಸಿ ಟಿ.ಎ.ಶರವಣ ಅವರ ನೇತೃತ್ವದಲ್ಲಿ ಜೆಡಿಎಸ್‌ ಮುಖಂಡರು ಚುನಾವಣಾ ಆಯೋಗಕ್ಕೆ ದೂರು ನೀಡಿದ್ದಾರೆ. ಕಾಂಗ್ರೆಸ್ ಹಲವಾರು ಭರವಸೆಗಳು ಮತ್ತು ಆಶ್ವಾಸನೆಗಳನ್ನು ಘೋಷಿಸುವ ಮೂಲಕ ಸಮಾಜದ ವಿವಿಧ ಗುಂಪುಗಳನ್ನು ದಾರಿ ತಪ್ಪಿಸಲು ಪ್ರಯತ್ನಿಸುತ್ತಿದೆ. ಇದು ಗ್ಯಾರಂಟಿ ಕಾರ್ಡ್‌ಗಳು ಚುನಾವಣಾ ಆಮಿಷವಾಗಿದ್ದು, ಇಂತಹವುಗಳ ಮೇಲೆ ನಿರ್ಬಂಧ ವಿಧಿಸಬೇಕು ಎಂದು ಎಂಎಲ್‌ಸಿ ಟಿ.ಎ.ಶರವಣ ಒತ್ತಾಯಿಸಿದ್ದಾರೆ.

ಕಾಂಗ್ರೆಸ್ ವಿರುದ್ಧ ಚುನಾವಣಾ ಆಯೋಗಕ್ಕೆ ಟಿ.ಎ.ಶರವಣ ದೂರು Read More »

ಚುನಾವಣೆಗೆ ಮೊದಲೇ ಖಾತೆ ತೆರೆದ ಬಿಜೆಪಿ| ಸೂರತ್ ನಲ್ಲಿ‌‌ ಅವಿರೋಧವಾಗಿ ಆಯ್ಕೆಯಾದ ಬಿಜೆಪಿ ಅಭ್ಯರ್ಥಿ

ಸಮಗ್ರ ನ್ಯೂಸ್: ಗುಜರಾತ್‌ನ ಸೂರತ್‌ ಕ್ಷೇತ್ರದಿಂದ ಬಿಜೆಪಿಯ ಮುಕೇಶ್‌ ದಲಾಲ್‌ ಅವಿರೋಧವಾಗಿ ಆಯ್ಕೆಯಾಗಿರುವುದಾಗಿ ಅಧಿಕೃತವಾಗಿ ಘೋಷಿಸಲಾಗಿದೆ. ಅವರಿಗೆ ಚುನಾವಣಾಧಿಕಾರಿಗಳು ವಿಜೇತರ ಪ್ರಮಾಣಪತ್ರ ನೀಡಿದ್ದಾರೆ. ಕಾಂಗ್ರೆಸ್‌ ಅಭ್ಯರ್ಥಿ ನಿಲೇಶ್‌ ಕುಂಭಾನಿ ಅವರ ನಾಮಪತ್ರವನ್ನು ಚುನಾವಣಾಧಿಕಾರಿಗಳು ತಿರಸ್ಕರಿಸಿದ್ದರೆ ಉಳಿದ ಎಲ್ಲಾ ಅಭ್ಯರ್ಥಿಗಳು ಕಣದಿಂದ ಹಿಂದೆ ಸರಿದಿದ್ದಾರೆ. ಈ ಕ್ಷೇತ್ರದಲ್ಲಿ ಕಾಂಗ್ರೆಸ್‌ ಮತ್ತು ಬಿಜೆಪಿ ಅಭ್ಯರ್ಥಿಗಳ ಹೊರತಾಗಿ ಬಹುಜನ ಸಮಾಜದ ಪ್ಯಾರೆಲಾಲ್‌ ಭಾರತಿ ಸಹಿತ ಎಂಟು ಮಂದಿ ಇತರ ಅಭ್ಯರ್ಥಿಗಳಿದ್ದರು. ಕಣದಿಂದ ಹಿಂದೆ ಸರಿದವರಲ್ಲಿ ಪ್ಯಾರೆಲಾಲ್‌ ಕೊನೆಯವರಾಗಿದ್ದರು. ಸಾಕ್ಷಿಗಳಾಗಿ ಸಹಿ ಹಾಕಿದವರ

ಚುನಾವಣೆಗೆ ಮೊದಲೇ ಖಾತೆ ತೆರೆದ ಬಿಜೆಪಿ| ಸೂರತ್ ನಲ್ಲಿ‌‌ ಅವಿರೋಧವಾಗಿ ಆಯ್ಕೆಯಾದ ಬಿಜೆಪಿ ಅಭ್ಯರ್ಥಿ Read More »

ಬಿಜೆಪಿಗೆ ಸೇರಿದ 2 ಕೋಟಿ ಹಣ ಜಫ್ತಿ|ಬಿಜೆಪಿ ನಾಯಕರಿಗೆ ಹಿಂದಿರುಗಿಸಲಾಗಿದೆ ಎಂಬ ಊಹಾ ಪೋಹಗಳಿಗೆ ಮುನೀಶ್ ಮೌದ್ಗಿಲ್ ಸ್ಪಷ್ಟನೆ

ಸಮಗ್ರ ನ್ಯೂಸ್: ನಿನ್ನೆ ಬಿಜೆಪಿಗೆ ಸೇರಿದ ಸುಮಾರು ಎರಡು ಕೋಟಿಯಷ್ಟು ನಗದನ್ನು ಕಾರೊಂದರಲ್ಲಿ ಸಾಗಿಸುತ್ತಿದ್ದ ವೇಳೆ ಬೆಂಗಳೂರಿನ ಬಿನ್ನಿಮಿಲ್ ಹತ್ತಿರದ ಎಪಿಎಂಸಿ ಬಳಿ ಇರುವ ಚೆಕ್ ಪೋಸ್ಟ್‌ನಲ್ಲಿ ಚುನಾವಣಾಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಬಳಿಕ ಈ ಹಣವನ್ನು ಪುನಃ ಬಿಜೆಪಿ ನಾಯಕರಿಗೆ ಹಿಂದಿರುಗಿಸಲಾಗಿದೆ ಎಂಬ ಊಹಾಪೋಹಗಳು ಹರಿಡಿತ್ತು. ಈ ಕುರಿತು ಇದೀಗ ಬೆಂಗಳೂರು ನಗರ ಜಿಲ್ಲೆ ಎಮ್​ಸಿಸಿ ನೋಡಲ್ ಅಧಿಕಾರಿ ಮುನೀಶ್ ಮೌದ್ಗಿಲ್ ಸ್ಪಷ್ಟನೆ ನೀಡಿದ್ದಾರೆ. ಪ್ರಾಥಮಿಕ ತನಿಖೆಯಲ್ಲಿ ಈ ಹಣವು ರಾಜ್ಯ ಬಿಜೆಪಿ ಪಕ್ಷದ ಕಚೇರಿಗೆ ಸಂಬಂಧಿಸಿದ್ದು

ಬಿಜೆಪಿಗೆ ಸೇರಿದ 2 ಕೋಟಿ ಹಣ ಜಫ್ತಿ|ಬಿಜೆಪಿ ನಾಯಕರಿಗೆ ಹಿಂದಿರುಗಿಸಲಾಗಿದೆ ಎಂಬ ಊಹಾ ಪೋಹಗಳಿಗೆ ಮುನೀಶ್ ಮೌದ್ಗಿಲ್ ಸ್ಪಷ್ಟನೆ Read More »

ಉಡುಪಿ: ಮಹಿಳೆಯರಿಗೆ ಚೊಂಬು ಕೊಟ್ಟಿದ್ದೆ ಕಾಂಗ್ರೆಸ್ ಸಾಧನೆ-ಸುನಿಲ್ ಕುಮಾರ್ ಲೇವಡಿ

ಸಮಗ್ರ ನ್ಯೂಸ್ : ಶೌಚಾಲಯ ನಿರ್ಮಾಣ ಮಾಡದೆ ಹಳ್ಳಿಯ ಮಹಿಳೆಯರಿಗೆ ಚೊಂಬು ಕೊಟ್ಟದ್ದು ಕಾಂಗ್ರೆಸ್ ನ ಸಾಧನೆ. ಸ್ವಾತಂತ್ರ್ಯ ನಂತರ ದೊಡ್ಡ ಪ್ರಮಾಣದಲ್ಲಿ ಶೌಚಾಲಯ ನಿರ್ಮಾಣ ಮಾಡುವ ಕೆಲಸವನ್ನು ಬಿಜೆಪಿ ಮಾಡಿದೆ. ಮೋದಿ ಸರಕಾರವು ದೇಶದಲ್ಲಿ ಚೊಂಬು ರಹಿತ ಆಡಳಿತ ಕೊಟ್ಟಿದೆ ಎಂದು ಮಾಜಿ ಸಚಿವ ಸುನಿಲ್ ಕುಮಾರ್ ಹೇಳಿದರು. ಕಾಂಗ್ರೆಸ್ ಪತ್ರಿಕೆಗಳಲ್ಲಿ ನೀಡಿರುವ ಜಾಹೀರಾತು ಕುರಿತು ಉಡುಪಿಯಲ್ಲಿ ಪ್ರತಿಕ್ರಿಯೆ ನೀಡಿದ ಅವರು, ಮೋದಿ ಸರಕಾರದ ಸಾಧನೆಗಳನ್ನು ಜಾಹೀರಾತು ಕೊಡುವ ಮೂಲಕ ಕಾಂಗ್ರೆಸ್ ಪರೋಕ್ಷವಾಗಿ ಒಪ್ಪಿಕೊಂಡಿದೆ. ಕೇಸರಿ

ಉಡುಪಿ: ಮಹಿಳೆಯರಿಗೆ ಚೊಂಬು ಕೊಟ್ಟಿದ್ದೆ ಕಾಂಗ್ರೆಸ್ ಸಾಧನೆ-ಸುನಿಲ್ ಕುಮಾರ್ ಲೇವಡಿ Read More »

ಬಿಜೆಪಿಯಿಂದ ಮನೆಮನೆಯಲ್ಲಿ ಆಣೆ – ಪ್ರಮಾಣ| ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರೋಪ

ಸಮಗ್ರ ನ್ಯೂಸ್: ದ.ಕ ಜಿಲ್ಲೆಯಲ್ಲಿ ಕಾಂಗ್ರೆಸ್ ಗೆಲುವು ನಿಶ್ಚಿತ ಎಂದು ತಿಳಿದಿರುವುದರಿಂದ ವಿರೋಧಿಗಳು ಅಪಪ್ರಚಾರದಲ್ಲಿ ತೊಡಗಿದ್ದು ಮನೆಮನೆಗಳಿಗೆ ತೆರಳಿ ಆಣೆ-ಪ್ರಮಾಣ ಮಾಡಿಸುತ್ತಿದ್ದಾರೆ. ಕಾರ್ಯಕರ್ತರು ಇದಕ್ಕೆ ತಲೆಕೆಡಿಸಿಕೊಳ್ಳದೆ ಪ್ರೀತಿಯಿಂದ ಚುನಾವಣೆಯನ್ನು ಎದುರಿಸಲು ಸಿದ್ಧರಾಗಬೇಕು ಎಂದು ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್ ಸಲಹೆ ನೀಡಿದರು. ಸುಳ್ಯ ತಾಲೂಕಿನ ಸಂಪಾಜೆಯಿಂದ ಕಲ್ಲುಗುಂಡಿವರೆಗೆ ನಡೆದ ರೋಡ್ ಶೋ ಬಳಿಕ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು ಬಿಜೆಪಿಯವರು ಸಂಸದರಾಗಿದ್ದ 33 ವರ್ಷಗಳಲ್ಲಿ ಜಿಲ್ಲೆಯಲ್ಲಿ ಅಭಿವೃದ್ಧಿ ಕೆಲಸಗಳು ನಡೆಯಲಿಲ್ಲ. ಕಾಂಗ್ರೆಸ್ ಸಂಸದರಿದ್ದಾಗ ಆಗಿದ್ದ ಅಭಿವೃದ್ಧಿ ಕೆಲಸಗಳು

ಬಿಜೆಪಿಯಿಂದ ಮನೆಮನೆಯಲ್ಲಿ ಆಣೆ – ಪ್ರಮಾಣ| ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರೋಪ Read More »

ತುಮಕೂರಿನಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಸಮಾವೇಶ| ಎಣ್ಣೆ ಏಟಿಗೆ ಕಾರ್ಯಕರ್ತರ ಡ್ಯಾನ್ಸೋ ಡ್ಯಾನ್ಸ್

ಸಮಗ್ರ ನ್ಯೂಸ್: ತುಮಕೂರು ಜಿಲ್ಲೆಯ ಮಧುಗಿರಿ ಪಟ್ಟಣದ ಸಂತೆಮೈದಾನದಲ್ಲಿ ನಿನ್ನೆ ಬಿಜೆಪಿ ಮತ್ತು ಜೆಡಿಎಸ್​ ಮೈತ್ರಿ ಸಮಾವೇಶ ಮಾಡಲಾಗಿತ್ತು. ಸಮಾವೇಶ ಮುಗಿಯುತ್ತಿದ್ದಂತೆ ಎಣ್ಣೆ ಏಟಿನಲ್ಲಿದ್ದ ಕಾರ್ಯಕರ್ತರು ವೇದಿಕೆ ಮೇಲೆ ಭರ್ಜರಿ ಡ್ಯಾನ್ಸ್ ಮಾಡಿದ್ದಾರೆ. ಬಿಜೆಪಿ-ಜೆಡಿಎಸ್ ಬಾವುಟ ಹಿಡಿದು ಡಿಜೆ ಸಾಂಗ್​​ಗೆ ಕಾರ್ಯಕರ್ತರು ಲುಂಗಿ ಡಾನ್ಸ್​ ಮಾಡಿದ್ದಾರೆ. ಎಣ್ಣೆ ಏಟಿಗೆ ಡ್ಯಾನ್ಸ್ ಮಾಡುವಾಗ ಲುಂಗಿ ಬಿಚ್ಚಿಬಿದ್ದರೂ ಪರಿವೇ ಇಲ್ಲದೇ ಕಾರ್ಯಕರ್ತರು ಕುಣಿದಿದ್ದಾರೆ. ಮೈತ್ರಿ ಅಭ್ಯರ್ಥಿ ಪರ ಮಾಜಿ ಸಿಎಂ ಎಚ್​.ಡಿ ಕುಮಾರಸ್ವಾಮಿ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ

ತುಮಕೂರಿನಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಸಮಾವೇಶ| ಎಣ್ಣೆ ಏಟಿಗೆ ಕಾರ್ಯಕರ್ತರ ಡ್ಯಾನ್ಸೋ ಡ್ಯಾನ್ಸ್ Read More »

ಚಿಕ್ಕೋಡಿ:ಚುಣಾವಣಾ ಪ್ರಚಾರದಿಂದ ಹಿಂದುಳಿದ ರಮೇಶ್ ಕತ್ತಿ, ಜೋಲ್ಲೆಗೆ ಎದುರಾದ ಸೋಲಿನ ಭೀತಿ|ಜಂಟಿ ಪಕ್ಷವಿದ್ದರೂ ಕ್ಷೇತ್ರದಲ್ಲಿ ಒಂಟಿಯಾದ್ರಾ ಜೊಲ್ಲೆ.!?

ಸಮಗ್ರ ನ್ಯೂಸ್: ಚುನಾವಣಾ ಕಾವು ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದೆ, ಕಾಂಗ್ರೆಸ್ ಪಕ್ಷದಿಂದ ಸಚಿವ ಸತೀಶ್ ಜಾರಕಿಹೊಳಿ ಪುತ್ರಿ ಪ್ರಿಯಾಂಕಾ ಜಾರಕಿಹೊಳಿ ಅವರು ಬಲ ಪ್ರದರ್ಶನ ಮಾಡುತ್ತಾ ಭರ್ಜರಿ ಚುನಾವಣೆ ಪ್ರಚಾರ ಮಾಡಿ ಮತಯಾಚನೆ ನಡೆಸುತ್ತಿದ್ದಾರೆ. ಆದರೆ ಹಾಲಿ ಸಂಸದ ಹಾಗೂ ಬಿಜೆಪಿ ಅಭ್ಯರ್ಥಿ ಅಣ್ಣಾಸಾಹೇಬ ಜೊಲ್ಲೇಗೆ ಸೋಲಿನ ಭೀತಿಯಲ್ಲಿದ್ದಾರೆ ಎಂದು ಹೇಳಲಾಗುತ್ತಿದೆ. ಚಿಕ್ಕೋಡಿ ಬಿಜೆಪಿ ಲೋಕಸಭೆ ಟಿಕೆಟ್ ಪ್ರಭಲ ಆಕಾಂಕ್ಷಿಯಾಗಿ ಗುರುತಿಸಿಕೊಂಡಿದ ರಮೇಶ್ ಕತ್ತಿ ಅವರು ಯಾವುದೇ ರೀತಿ ಲೋಕಸಭಾ ಚುನಾವಣೆಯಲ್ಲಿ ಪ್ರಚಾರಕ್ಕೆ ಬರುತ್ತಿಲ್ಲ, ಟಿಕೆಟ್

ಚಿಕ್ಕೋಡಿ:ಚುಣಾವಣಾ ಪ್ರಚಾರದಿಂದ ಹಿಂದುಳಿದ ರಮೇಶ್ ಕತ್ತಿ, ಜೋಲ್ಲೆಗೆ ಎದುರಾದ ಸೋಲಿನ ಭೀತಿ|ಜಂಟಿ ಪಕ್ಷವಿದ್ದರೂ ಕ್ಷೇತ್ರದಲ್ಲಿ ಒಂಟಿಯಾದ್ರಾ ಜೊಲ್ಲೆ.!? Read More »

ಬಿಜೆಪಿ ವಿರುದ್ಧವೇ ಗುಡುಗಿದ ಎಚ್.ಡಿ ದೇವೇಗೌಡ| ಕಾವೇರಿ ಹೋರಾಟ ಕುರಿತು ಅಸಮಾಧಾನ

ಸಮಗ್ರ ನ್ಯೂಸ್: ಮೈತ್ರಿ ಸಭೆಯಲ್ಲಿ ಮಾಜಿ ಪ್ರಧಾನಿ ದೇವೇಗೌಡ ಅವರು ಬಿಜೆಪಿ ವಿರುದ್ಧವೇ ಗುಡುಗಿದ್ದು, ಭಾರೀ ಚರ್ಚೆಗೆ ಕಾರಣವಾಗಿದೆ. ಕಾವೇರಿ ಹೋರಾಟದ ದಿನಗಳನ್ನು ನೆನೆದ ದೇವೇಗೌಡರು, ಬಿಜೆಪಿ ವಿರುದ್ಧವೇ ಅಸಮಾಧಾನ ಹೊರಹಾಕಿದ ಘಟನೆ ಕೊರಟಗೆರೆಯಲ್ಲಿ ನಡೆದ ಮೈತ್ರಿ ಸಭೆಯಲ್ಲಿ ನಡೆದಿದೆ. ಕಾವೇರಿ ಹೋರಾಟಕ್ಕೆ ಬಿಜೆಪಿಯ 17 ಜನ ಸಂಸದರು ನನಗೆ ಬೆಂಬಲ ನೀಡಲಿಲ್ಲ. ಲೋಕಸಭೆಯಲ್ಲಿ ಒಬ್ಬ ದೇವೇಗೌಡ, 17 ಜನ ಬಿಜೆಪಿ ಸಂಸದರು ಇದ್ದರು. ಆದರೆ, ನನಗೆ ಬೆಂಬಲ ನೀಡಲಿಲ್ಲ ಎಂದು ಬೇಸರ ಹೊರಹಾಕಿದ್ದಾರೆ. ಅಂದು ರಾಜ್ಯದ

ಬಿಜೆಪಿ ವಿರುದ್ಧವೇ ಗುಡುಗಿದ ಎಚ್.ಡಿ ದೇವೇಗೌಡ| ಕಾವೇರಿ ಹೋರಾಟ ಕುರಿತು ಅಸಮಾಧಾನ Read More »