ರಾಜಕೀಯ

ಟೈಮ್ಸ್ ನೌ ಮತ್ತು ಇಟಿಜಿಯ ಚುನಾವಣಾ ಪೂರ್ವ ಸಮೀಕ್ಷೆ/ 400 ರ ಸಮೀಪ ತಲುಪಲಿದೆ ಎನ್‍ಡಿಎ

ಸಮಗ್ರ ನ್ಯೂಸ್: ಟೈಮ್ಸ್ ನೌ ಸುದ್ದಿವಾಹಿನಿ ಇಟಿಜಿ ಜೊತೆಗೂಡಿ ಚುನಾವಣಾ ಪೂರ್ವ ಸಮೀಕ್ಷೆ ನಡೆಸಿದ್ದು, ಇದರ ಅನ್ವಯ ಬಿಜೆಪಿ 358-398 ಸ್ಥಾನ ಮತ್ತು ಕಾಂಗ್ರೆಸ್ 28-48 ಸ್ಥಾನ ಗೆಲ್ಲಲಿದೆ ಎಂಬ ವರದಿ ಪ್ರಕಟಗೊಂಡಿದೆ. ಲೋಕಸಭಾ ಚುನಾವಣೆಗೆ ಯಾವುದೇ ಸಮಯದಲ್ಲಿ ದಿನಾಂಕ ಘೋಷಣೆಯಾಗಬಹುದು ಎಂಬ ಹೊತ್ತಿನಲ್ಲೇ ಈ ವರದಿ ಪ್ರಕಟವಾಗಿದ್ದು, ಇದು ಬಿಜೆಪಿಯ ಈ ಬಾರಿಯ ಕನಸಾದ 400 ಸ್ಥಾನಕ್ಕೆ ಬಹುತೇಕ ಸಮೀಪವಿದೆ. ವರದಿ ಅನ್ವಯ ಪಶ್ಚಿಮ ಬಂಗಾಳದಲ್ಲಿ ಎನ್‍ಡಿಎ 20-24, ಟಿಎಂಸಿ 17-21, ಇಂಡಿಯಾ 0-2;ತಮಿಳುನಾಡು: ಇಂಡಿಯಾ […]

ಟೈಮ್ಸ್ ನೌ ಮತ್ತು ಇಟಿಜಿಯ ಚುನಾವಣಾ ಪೂರ್ವ ಸಮೀಕ್ಷೆ/ 400 ರ ಸಮೀಪ ತಲುಪಲಿದೆ ಎನ್‍ಡಿಎ Read More »

ಕಾಂಗ್ರೆಸ್ ಮೊದಲ ಪಟ್ಟಿ ಬಿಡುಗಡೆ/ ಪಕ್ಷ ತೊರೆದ ಮನೀಶ್ ಖಂಡೂರಿ

ಸಮಗ್ರ ನ್ಯೂಸ್: 39 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಲೋಕಸಭೆ ಚುನಾವಣೆಗೆ ಕಾಂಗ್ರೆಸ್ ರಿಲೀಸ್ ಮಾಡಿದ ಬೆನ್ನಲ್ಲೇ ಅಸಮಾಧಾನ ಸ್ಪೋಟಗೊಂಡಿದ್ದು, ಉತ್ತರಾಖಂಡದ ಮಾಜಿ ಮುಖ್ಯಮಂತ್ರಿ ಭುವನ್ ಚಂದ್ರ ಖಂಡೂರಿ ಅವರ ಪುತ್ರ ಮನೀಶ್ ಖಂಡೂರಿ ಪಕ್ಷ ತೊರೆದಿದ್ದಾರೆ. ಈ ನಾನು ಭಾರತೀಯ ರಾಷ್ಟ್ರೀಯ ಕಾಂಗ್ರೆಸ್‍ನ ಪ್ರಾಥಮಿಕ ಸದಸ್ಯತ್ವ ಮತ್ತು ಎಲ್ಲಾ ಸಂಬಂಧಿತ ಸ್ಥಾನಗಳಿಗೆ ರಾಜೀನಾಮೆ ನೀಡುತ್ತಿದ್ದೇನೆ. ಯಾವುದೇ ವೈಯಕ್ತಿಕ ಲಾಭದ ನಿರೀಕ್ಷೆ ಇಲ್ಲದೇ ಈ ನಿರ್ಧಾರ ಕೈಗೊಂಡಿದ್ದೇನೆ ಎಂದು ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿರುವ ಮನೀಷ್ ಬರೆದುಕೊಂಡಿದ್ದಾರೆ. 2019ರಲ್ಲಿ ಕಾಂಗ್ರೆಸ್

ಕಾಂಗ್ರೆಸ್ ಮೊದಲ ಪಟ್ಟಿ ಬಿಡುಗಡೆ/ ಪಕ್ಷ ತೊರೆದ ಮನೀಶ್ ಖಂಡೂರಿ Read More »

ಲೋಕಸಭಾ ಚುನಾವಣೆ: ಕರ್ನಾಟಕ ಸೇರಿ 39 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದ ಕಾಂಗ್ರೆಸ್

ಸಮಗ್ರ ನ್ಯೂಸ್: ಲೋಕಸಭಾ ಚುನಾವಣೆಗೆ ಇದೀಗ ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಇಂದು ನವದೆಹಲಿಯ ಎಐಸಿಸಿ ಕಚೇರಿಯಲ್ಲಿ ಕೆ.ಸಿ.ವೇಣು ಗೋಪಾಲ್‌, ಅಜಯ್ ಮಕೇನ್‌, ಪವನ್ ಖೇರಾ ಅವರು ಸುದ್ದಿಗೋಷ್ಠಿ ನಡೆಸಿ 39 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದರು. ಇದರಲ್ಲಿ ಕರ್ನಾಟಕದ 7 ಕ್ಷೇತ್ರದ ಅಭ್ಯರ್ಥಿಗಳ ಹೆಸರನ್ನು ಖಚಿತಪಡಿಸಿದ್ದಾರೆ. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಈ ಬಾರಿಯೂ ಕೇರಳದ ವಯನಾಡಿನಿಂದ ಸ್ಪರ್ಧೆ ಮಾಡುತ್ತಿದ್ದಾರೆ. ಇನ್ನು ಶಶಿ ತರೂರ್​ ಅವರಿಗೆ ತಿರುವನಂತಪುರಂ ಕ್ಷೇತ್ರದ ಟಿಕೆಟ್ ನೀಡಲಾಗಿದೆ.

ಲೋಕಸಭಾ ಚುನಾವಣೆ: ಕರ್ನಾಟಕ ಸೇರಿ 39 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದ ಕಾಂಗ್ರೆಸ್ Read More »

ಲೋಕಸಭಾ ಚುನಾವಣೆ/ ಮತ್ತೆ ಗ್ಯಾರಂಟಿ ಅಸ್ತ್ರ ಪ್ರಯೋಗಿಸಿದ ರಾಹುಲ್

ಸಮಗ್ರ ನ್ಯೂಸ್: ಕಾಂಗ್ರೆಸ್ ಸರ್ಕಾರ ಕೇಂದ್ರದಲ್ಲಿ ಅಧಿಕಾರಕ್ಕೆ ಬಂದರೆ ಯುವಕರಿಗೆ 30 ಲಕ್ಷ ಸರ್ಕಾರಿ ಉದ್ಯೋಗ ನೀಡುವುದಾಗಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಘೋಷಿಸಿದ್ದಾರೆ. ರೈತರು, ಯುವಕರು, ಅಸಂಘಟಿತ ವಲಯದವರು, ಯುವೋದ್ಯಮಿಗಳು ಹೀಗೆ ವಿವಿಧ ವಲಯದ ಜನರನ್ನು ಆಕರ್ಷಿಸುವಂತಹ ಗ್ಯಾರಂಟಿ ಭರವಸೆಗಳನ್ನು ಕಾಂಗ್ರೆಸ್ ನೀಡಿದ್ದು, ನರೇಂದ್ರ ಮೋದಿ ನೀಡುತ್ತಿರುವ ಗ್ಯಾರಂಟಿಗಳಿಗೆ ಪ್ರತಿಯಾಗಿ ಕಾಂಗ್ರೆಸ್ ಪಕ್ಷ ಐದು ಗ್ಯಾರಂಟಿಗಳ ಅಸ್ತ್ರ ಬಿಟ್ಟಿದೆ ಭಾರತದಲ್ಲಿ 30 ಲಕ್ಷ ಸರ್ಕಾರಿ ಹುದ್ದೆಗಳು ಖಾಲಿ ಇವೆ. ಇವುಗಳನ್ನು ಪ್ರಧಾನಿ ನರೇಂದ್ರ ಮೋದಿಯವರು ತುಂಬಿಲ್ಲ.

ಲೋಕಸಭಾ ಚುನಾವಣೆ/ ಮತ್ತೆ ಗ್ಯಾರಂಟಿ ಅಸ್ತ್ರ ಪ್ರಯೋಗಿಸಿದ ರಾಹುಲ್ Read More »

ಲೋಕಸಭಾ ಚುನಾವಣೆ/ ಪುಲ್ ಆ್ಯಕ್ಟಿವ್ ಆದ ಸುಮಲತಾ

ಸಮಗ್ರ ನ್ಯೂಸ್: ಲೋಕಸಭೆಯ ಚುನಾವಣೆ ಟಿಕೆಟ್ ಘೋಷಣೆಗೂ ಮುನ್ನವೇ ರೆಬೆಲ್ ಸ್ಟಾರ್ ಪತ್ನಿ ಸುಮಲತಾ ಅಂಬರೀಷ್ ಫುಲ್ ಆ್ಯಕ್ಟಿವ್ ಆಗಿದ್ದಾರೆ. ಟಿಕೆಟ್ ಗೊಂದಲದ ನಡುವೆಯೂ ಸಂಸದೆ ಸುಮಲತಾ ಅಂಬರೀಷ್ ಕಣಕ್ಕಿಳಿದಿದ್ದಾರೆ. ಸುಮಲತಾ ಅಂಬರೀಶ್ ಕಳೆದ 20 ದಿನಗಳಲ್ಲಿ ಮಂಡ್ಯಕ್ಕೆ ಆರು ಬಾರಿ ಪ್ರವಾಸ ಕೈಗೊಂಡಿದ್ದು, ಇಂದು ಮತ್ತೆ ಮಂಡ್ಯ ಪ್ರವಾಸ ಮಾಡಲಿದ್ದಾರೆ ಎಂಬ ಮಾಹಿತಿ ಇದೆ. ಮೊನ್ನೆಯಷ್ಟೇ ಆದಿಚುಂಚನಗಿರಿ ಶ್ರೀಗಳ ಆಶೀರ್ವಾದ ಪಡೆದಿದ್ದ ಅವರು ಇಂದು ಮಂಡ್ಯ, ಪಾಂಡವಪುರ, ಮದ್ದೂರು ವಿಧಾನಸಭಾ ಕ್ಷೇತ್ರಗಳಲ್ಲೂ ಪ್ರವಾಸ ಮಾಡಲಿದ್ದಾರೆ ಎನ್ನಲಾಗಿದೆ.

ಲೋಕಸಭಾ ಚುನಾವಣೆ/ ಪುಲ್ ಆ್ಯಕ್ಟಿವ್ ಆದ ಸುಮಲತಾ Read More »

ಲೋಕಸಭೆ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ರಿಲೀಸ್

ಸಮಗ್ರ ನ್ಯೂಸ್: 2024ರ ಲೋಕಸಭೆ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಇಂದು ಬಿಡುಗಡೆ ಮಾಡಲಾಗಿದೆ. ಬಿಜೆಪಿ ಕೇಂದ್ರ ಕಚೇರಿಯಲ್ಲಿ ವಿನೋದ್ ತಾವ್ಡೆ ಸುದ್ದಿಗೋಷ್ಠಿ ನಡೆಸಿದ್ದು, ಈ ಬಾರಿ 400ಕ್ಕೂ ಹೆಚ್ಚು ಸ್ಥಾನ ಗೆಲ್ಲುವ ನಿರೀಕ್ಷೆ ಇದೆ ಎಂದು ಹೇಳಿದ್ದಾರೆ. ಮೊದಲ ಪಟ್ಟಿಯಲ್ಲಿ ಹಲವು ಪ್ರಮುಖರಿಗೆ ಟಿಕೆಟ್ ನೀಡಲಾಗಿದೆ. ಕಳೆದ 1 ದಶಕದಿಂದ ಪ್ರಧಾನಿ ಮೋದಿ ನೇತೃತ್ವದಲ್ಲಿ ಯಶಸ್ವಿ ಆಡಳಿತ ನಡೆಸಿದ್ದೇವೆ. ಕೇಂದ್ರದಲ್ಲಿ 3ನೇ ಬಾರಿ ಮೋದಿ ನೇತೃತ್ವದಲ್ಲಿ ಬಿಜೆಪಿ ಆಡಳಿತಕ್ಕೆ ಬರಲಿದೆ ಎಂದು ವಿನೋದ್ ತಾವ್ಡೆ

ಲೋಕಸಭೆ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ರಿಲೀಸ್ Read More »

ಸದ್ದಿಲ್ಲದೆ ಗೋವಾದಲ್ಲಿ ಮದುವೆಯಾದ ನಟಿ ದೀಪಿಕಾ ದಾಸ್

ಸಮಗ್ರ ನ್ಯೂಸ್: ನಾಗಿಣಿ’ ಖ್ಯಾತಿಯ ನಟಿ ದೀಪಿಕಾ ದಾಸ್ ಸದ್ದಿಲ್ಲದೆ ಗೋವಾದಲ್ಲಿ ಮದುವೆಯಾಗಿದ್ದಾರೆ. ತಮ್ಮ ಸಾಮಾಜಿಕ ಜಾಲತಾಣದಲ್ಲಿ ಚಿತ್ರಗಳನ್ನು ಹಂಚಿಕೊಂಡಿದ್ದಾರೆ. ಇದೂ ಅಭಿಮಾನಿಗಳಿಗೆ ಸ್ವಲ್ಪ ಮಟ್ಟಿಗೆ ಶಾಕ್ ಆಗಿದೆ. ಅದರಲ್ಲೂ ಇದು ನಿಜವಾದ ಮದುವೆಯಾ.. ಅಥವಾ ಶೂಟಿಂಗ್ ಆಗಿರಬಹುದಾ ಎಂಬ ಕಮೆಂಟ್ ಗಳನ್ನು ಜನರು ಹಾಕುತ್ತಿದ್ದಾರೆ. ದುಬೈನಲ್ಲಿ ನೆಲೆಸಿರುವ ಕರ್ನಾಟಕ ಮೂಲದ ಉದ್ಯಮಿ ಜೊತೆ ದೀಪಿಕಾ ದಾಸ್ ಮದುವೆ ಆಗಿದ್ದಾರೆ. ಗೋವಾದ ಕಡಲ ತಡಿಯಲ್ಲಿ ಖಾಸಗಿಯಾಗಿ ವಿವಾಹ ಕಾರ್ಯಕ್ರಮ ನಡೆದಿದ್ದು, ವಧು-ವರರ ಕುಟುಂಬ ಸದಸ್ಯರು ಮಾತ್ರ ಮದುವೆಯಲ್ಲಿ

ಸದ್ದಿಲ್ಲದೆ ಗೋವಾದಲ್ಲಿ ಮದುವೆಯಾದ ನಟಿ ದೀಪಿಕಾ ದಾಸ್ Read More »

ರಾಜ್ಯಸಭಾ ಚುನಾವಣೆ/ ಬಿಜೆಪಿಯದ್ದೇ ಸಿಂಹಪಾಲು

ಸಮಗ್ರ ನ್ಯೂಸ್: ರಾಜ್ಯಸಭೆ ಚುನಾವಣೆ ಮುಕ್ತಾಯಗೊಂಡಿದ್ದು ಒಟ್ಟು 56 ಸ್ಥಾನಗಳಿಗೆ ಚುನಾವಣೆ ನಡೆದಿದೆ. ಒಟ್ಟು ಫಲಿತಾಂಶದಲ್ಲಿ ಬಿಜೆಪಿಗೆ ಸಿಂಹಪಾಲು ಪ್ರಾಪ್ತಿಯಾಗಿದ್ದು 30 ಸೀಟಲ್ಲಿ ಗೆದ್ದಿದೆ. 56ರಲ್ಲಿ 41 ಮಂದಿ ಅವಿರೋಧ ಆಯ್ಕೆ ಆಗಿದ್ದರೆ, ಮಿಕ್ಕ 15ಕ್ಕೆ ಮತದಾನ ನಡೆದಿತ್ತು. ಇದರಲ್ಲಿ ಕರ್ನಾಟಕದ 4, ಉತ್ತರ ಪ್ರದೇಶದ 10 ಹಾಗೂ ಹಿಮಾಚಲ ಪ್ರದೇಶದ 1 ಸ್ಥಾನ ಇದ್ದವು. ಮತದಾನ ನಡೆದ 15 ಸ್ಥಾನದ ಪೈಕಿ ಬಿಜೆಪಿಗೆ 10, ಕಾಂಗ್ರೆಸ್‍ಗೆ 3 ಹಾಗೂ ಎಸ್ಪಿಗೆ 2 ಸ್ಥಾನ ಬಂದಿವೆ. ಇನ್ನು

ರಾಜ್ಯಸಭಾ ಚುನಾವಣೆ/ ಬಿಜೆಪಿಯದ್ದೇ ಸಿಂಹಪಾಲು Read More »

ಲೋಕಸಭಾ ಚುನಾವಣೆಗೆ ಸಿದ್ಧಗೊಂಡ ಆಮ್ ಆದ್ಮಿ/ ಐದು ಕ್ಷೇತ್ರಗಳಿಗೆ ಅಭ್ಯರ್ಥಿ ಘೋಷಣೆ

ಸಮಗ್ರ ನ್ಯೂಸ್: ಆಮ್ ಆದ್ಮಿ ಪಕ್ಷವು ಲೋಕಸಭಾ ಚುನಾವಣೆಗೆ ಸಿದ್ದಗೊಳ್ಳುತ್ತಿದ್ದು, ದೆಹಲಿ ಮತ್ತು ಹರಿಯಾಣದ ಒಟ್ಟು ಐದು ಲೋಕಸಭಾ ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಿಸಿದೆ. ಕುಲದೀಪ್ ಕುಮಾರ್ ಪೂರ್ವ ದೆಹಲಿಯಿಂದ, ಸೋಮನಾಥ್ ಭಾರ್ತಿ ಅವರನ್ನು ನವದೆಹಲಿಯಿಂದ ಪಕ್ಷ ಕಣಕ್ಕಿಳಿಸಿದೆ. ಮಾಜಿ ಕಾಂಗ್ರೆಸ್ ಸಂಸದ ಮಹಾಬಲ್ ಮಿಶ್ರಾ ಪಶ್ಚಿಮ ದೆಹಲಿಯಿಂದ ಎಎಪಿ ಟಿಕೆಟ್ ನಲ್ಲಿ ಸ್ಪರ್ಧಿಸುತ್ತಿದ್ದಾರೆ. ಮತ್ತೊಬ್ಬ ಶಾಸಕ ಸಾಹಿ ರಾಮ್ ಪಹಲ್ವಾನ್ ದಕ್ಷಿಣ ದೆಹಲಿಯಲ್ಲಿ ಸ್ಪರ್ಧಿಸುತ್ತಿದ್ದಾರೆ. ಹರಿಯಾಣದಲ್ಲಿ ಎಎಪಿ ಮಾಜಿ ರಾಜ್ಯಸಭಾ ಸಂಸದ ಸುಶೀಲ್ ಗುಪ್ತಾ ಅವರನ್ನು ಕುರುಕ್ಷೇತ್ರದಿಂದ

ಲೋಕಸಭಾ ಚುನಾವಣೆಗೆ ಸಿದ್ಧಗೊಂಡ ಆಮ್ ಆದ್ಮಿ/ ಐದು ಕ್ಷೇತ್ರಗಳಿಗೆ ಅಭ್ಯರ್ಥಿ ಘೋಷಣೆ Read More »

ರಾಜ್ಯಸಭಾ ಚುನಾವಣೆ ಫಲಿತಾಂಶ ಪ್ರಕಟ| ಕಾಂಗ್ರೆಸ್ ಗೆ 3, ಬಿಜೆಪಿಗೆ 1 ಸ್ಥಾನ ಗೆಲುವು

ಸಮಗ್ರ ನ್ಯೂಸ್: ಕರ್ನಾಟಕ ರಾಜ್ಯಸಭಾ ಚುನಾವಣೆಯ ಫಲಿತಾಂಶ ಹೊರಬಿದ್ದಿದ್ದು, ಕಾಂಗ್ರೆಸ್‌ ಪಕ್ಷ ಮೂರು ಹಾಗೂ ಬಿಜೆಪಿ ಒಂದು ಸ್ಥಾನವನ್ನು ಗೆದ್ದುಕೊಂಡಿದೆ. ಕಾಂಗ್ರೆಸ್​ನ ಅಜಯ್ ಮಾಕನ್ -47, ನಾಸೀರ್ ಹುಸೈನ್ – 47, ಜಿ.ಸಿ. ಚಂದ್ರಶೇಖರ್ – 45 ಮತಗಳೊಂದಿಗೆ ಗೆಲುವು ಸಾಧಿಸಿದರೆ, ಬಿಜೆಪಿಯ ನಾರಾಯಣಸಾ ಭಾಂಡಗೆ 47 ಮತಗಳನ್ನ ಪಡೆದುಕೊಳ್ಳುವ ಮೂಲಕ ಗೆಲುವಿನ ನಗೆ ಬೀರಿದ್ದಾರೆ. ಐದನೇ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಕುಪೇಂದ್ರ ರೆಡ್ಡಿ ಅವರಿಗೆ 36 ಮತಗಳು ಬಿದ್ದಿವೆ ಎಂದು ತಿಳಿದು ಬಂದಿದೆ.

ರಾಜ್ಯಸಭಾ ಚುನಾವಣೆ ಫಲಿತಾಂಶ ಪ್ರಕಟ| ಕಾಂಗ್ರೆಸ್ ಗೆ 3, ಬಿಜೆಪಿಗೆ 1 ಸ್ಥಾನ ಗೆಲುವು Read More »