ಪರಾಜಿತ ಅಭ್ಯರ್ಥಿ ಜಿ ಕೃಷ್ಣಪ್ಪ ರವರು ಸುಳ್ಯದ ಕಾಂಗ್ರೆಸ್ ಕಾರ್ಯಕರ್ತರ ಮೇಲೆ ಸವಾರಿ ಮಾಡಲು ಬಂದರೆ ಸಹಿಸಲ್ಲ : ಸತ್ಯಕುಮಾರ್ ಆಡಿಂಜ
ಸಮಗ್ರ ನ್ಯೂಸ್: ಸುಳ್ಯ ಕ್ಷೇತ್ರದಲ್ಲಿ ಟಿಕೆಟ್ ಗೆ ಪಟ್ಟು ಹಿಡಿದು, ಪ್ರಭಾವ ಬಳಸಿ ಅಭ್ಯರ್ಥಿಯಾಗಿ ಕಾರ್ಯಕರ್ತರ, ಜನಾಭಿಪ್ರಾಯವಿಲ್ಲದೆ ಅಭ್ಯರ್ಥಿಯಾಗಿ ಸ್ಪರ್ಧಿಸಿ ಹೀನಾಯವಾಗಿ ಸೋಲನುಭವಿಸಿದ ಕೃಷ್ಣಪ್ಪರವರು ಸುಳ್ಯದ ಕಾಂಗ್ರೆಸ್ ಪಕ್ಷದಲ್ಲಿ ಪ್ರಾಮಾಣಿಕವಾಗಿ ದುಡಿಯುತ್ತಿರುವ ಕಾರ್ಯಕರ್ತರ ಮೇಲೆ ಆರೋಪ ಹೊರಿಸಿ ಕಿರುಕುಳ ನೀಡುತ್ತಿರುವ ಕೃಷ್ಣಪ್ಪರವರು ಮೊದಲು ತಮ್ಮನ್ನು ತಾವು ಅವಲೋಕನ ಮಾಡಿಕೊಳ್ಳಬೇಕು. ಒಬ್ಬ ಅಭ್ಯರ್ಥಿ ಗೆದ್ದರೂ ಸೋತರೂ ಪಕ್ಷದಲ್ಲಿ ಹೇಗಿರಬೇಕು? ಹೇಗೆ ತಪ್ಪನ್ನು ಸರಿಪಡಿಸಿಕೊಂಡು ಪಕ್ಷ ಸಂಘಟನೆ ಮಾಡಬೇಕೆಂದು ತಿಳಿದು ಕೊಳ್ಳಬೇಕು.ಆದರೆ ಪಕ್ಷಕ್ಕಾಗಿ ಪ್ರಾಮಾಣಿಕವಾಗಿ ಕೆಲಸ ಮಾಡುತ್ತಿರುವ ಕಾರ್ಯಕರ್ತರನ್ನು ಉಚ್ಚಾಟಿಸಲು […]