ರಾಜಕೀಯ

ಮಂಗಳೂರು: ಹೊಸತಾಗಿ ಆಯ್ಕೆಯಾದ ಶಾಸಕರಿಗೆ ಮೂರು ದಿನಗಳ ಕಾಲ ತರಬೇತಿ – ವಿಧಾನಸಭಾ ಸ್ಪೀಕರ್ ಯು.ಟಿ. ಖಾದರ್

ಸಮಗ್ರನ್ಯೂಸ್: ಹೊಸತಾಗಿ ಶಾಸಕರಾಗಿ ಆಯ್ಕೆಯಾದ ಯುವಕರಿಗೆ ಮತ್ತು ಹೊಸ ಮುಖಗಳಿಗೆ ಸಭೆಯಲ್ಲಿ ಹೆಚ್ಚು ಅವಕಾಶ ನೀಡಲು ಪ್ರಯತ್ನ ಮಾಡುತ್ತೇನೆ ಎಂದು ನೂತನವಾಗಿ ಆಯ್ಕೆಯಾದ ವಿಧಾನಸಭಾ ಸ್ಪೀಕರ್ ಯು.ಟಿ. ಖಾದರ್ ಹೇಳಿದರು. ವಿಧಾನಸಭಾ ಸ್ಪೀಕರ್ ಆಗಿ ಆಯ್ಕೆಯಾದ ಬಳಿಕ ಮೊದಲ ಬಾರಿಗೆ ಮಂಗಳೂರಿಗೆ ಆಗಮಿಸಿದ ಸಂದರ್ಭದಲ್ಲಿ ಮಾಧ್ಯಮದೊಂದಿಗೆ ಮಾತನಾಡಿದ ಅವರು, ವಿಧಾನಸಭೆಗೆ ಆಯ್ಕೆಯಾದ ಹೊಸ ಶಾಸಕರಿಗೆ ಮೂರು ದಿನಗಳ ಕಾಲ ತರಬೇತಿ ಆಯೋಜಿಸಲಾಗುವುದು. ಹಲವು ಮಂದಿ ಹೊಸ ಶಾಸಕರು ಈ ಬಾರಿಯ ಸದನದಲ್ಲಿದ್ದಾರೆ. ಸಂಸದೀಯ ವ್ಯವಸ್ಥೆಯಲ್ಲಿನ ನಿಯಮಗಳು, ಅದನ್ನು […]

ಮಂಗಳೂರು: ಹೊಸತಾಗಿ ಆಯ್ಕೆಯಾದ ಶಾಸಕರಿಗೆ ಮೂರು ದಿನಗಳ ಕಾಲ ತರಬೇತಿ – ವಿಧಾನಸಭಾ ಸ್ಪೀಕರ್ ಯು.ಟಿ. ಖಾದರ್ Read More »

ಮಂಗಳೂರು: ರಾಜ್ಯ ವಿಧಾನಸಭೆ ಸ್ಪೀಕರ್ ಆಗಿ ಕಾಂಗ್ರೆಸ್ ನ ಯು.ಟಿ. ಖಾದರ್

ಸಮಗ್ರನ್ಯೂಸ್: ರಾಜ್ಯ ವಿಧಾನಸಭೆ ಸ್ಪೀಕರ್ ಆಗಿ ಕಾಂಗ್ರೆಸ್ ನ ಯು.ಟಿ. ಖಾದರ್ ಅವರು ಮೇ.24ರಂದು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಖಾದರ್ ಅವರು ಸ್ಪೀಕರ್ ಸ್ಥಾನಕ್ಕೆ ಮೇ.24ರಂದು ನಾಮಪತ್ರ ಸಲ್ಲಿಸಿದ್ದರು. ಪ್ರತಿಪಕ್ಷದಿಂದ ಯಾರೂ ನಾಮಪತ್ರ ಸಲ್ಲಿಸದ ಹಿನ್ನೆಲೆಯಲ್ಲಿ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ನೂತನ ಸ್ಪೀಕರ್ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಅಭಿನಂದನೆ ಸಲ್ಲಿಸಿದ್ದಾರೆ. ಖಾದರ್ ಅವರು ರಾಜ್ಯದ ಮೊದಲ ಮುಸ್ಲಿಂ ಸ್ಪೀಕರ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

ಮಂಗಳೂರು: ರಾಜ್ಯ ವಿಧಾನಸಭೆ ಸ್ಪೀಕರ್ ಆಗಿ ಕಾಂಗ್ರೆಸ್ ನ ಯು.ಟಿ. ಖಾದರ್ Read More »

‘ಕನ್ನಡಿಗರ ಏಟಿಗೆ ಬಿಜೆಪಿ ಚಿಕಿತ್ಸೆ ಪಡೆಯುವುದು ಒಳಿತು’ | ‘ಸೋಲಿನ ಹೊಣೆ ಹೊತ್ತು ರಾಜೀನಾಮೆ ಕೊಡುವವರು ಬಿಜೆಪಿಯಲ್ಲಿಲ್ಲ’| ಕಮಲ ಪಾಳಯವನ್ನು ಕಿಂಡಲ್ ಮಾಡಿದ ‘ಕೈ’ ಟ್ವೀಟ್

ಸಮಗ್ರ ನ್ಯೂಸ್: ”ನಾವು ಘೋಷಿಸಿದ 5 ಗ್ಯಾರಂಟಿಗಳನ್ನು ಜಾರಿಗೊಳಿಸುವುದು ಗ್ಯಾರಂಟಿ. ನಾವು ನಮ್ಮ ಜನರ ಹಿತ ಕಾಪಾಡುವ ಬದ್ಧತೆ ಹೊಂದಿದ್ದೇವೆ. ಬಿಜೆಪಿ ನಾಯಕರು ಕನ್ನಡಿಗರು ನೀಡಿದ ಏಟಿಗೆ ಚಿಕಿತ್ಸೆ ಪಡೆದು ರೆಸ್ಟ್ ಮಾಡಲಿ, ಹಾಗೆಯೇ ‘ವಿರೋಧಪಕ್ಷದ ನಾಯಕ’ ಸ್ಥಾನಕ್ಕೆ ಸೂಕ್ತ ವ್ಯಕ್ತಿಯನ್ನು ಹುಡುಕಿಕೊಳ್ಳಲಿ” ಎಂದು ಕಾಂಗ್ರೆಸ್ ಟ್ವೀಟ್ ಮಾಡಿ ಗಾಯದ ಮೇಲೆ ಬರೆ ಎಳೆದಿದೆ. ”ಚುನಾವಣೆಯಲ್ಲಿ ಹೀನಾಯ ಸೋಲಿನ ಹೊಣೆ ಹೊರುವವರು, ಹೊಣೆ ಹೊತ್ತು ರಾಜೀನಾಮೆ ಕೊಡುವವರು ಯಾರೂ ಇಲ್ಲವೇ ಬಿಜೆಪಿಯಲ್ಲಿ!? ಸೋಲಿನ ಹೊಣೆ ಯಾರದ್ದು ಬಿಜೆಪಿಯವರೇ?

‘ಕನ್ನಡಿಗರ ಏಟಿಗೆ ಬಿಜೆಪಿ ಚಿಕಿತ್ಸೆ ಪಡೆಯುವುದು ಒಳಿತು’ | ‘ಸೋಲಿನ ಹೊಣೆ ಹೊತ್ತು ರಾಜೀನಾಮೆ ಕೊಡುವವರು ಬಿಜೆಪಿಯಲ್ಲಿಲ್ಲ’| ಕಮಲ ಪಾಳಯವನ್ನು ಕಿಂಡಲ್ ಮಾಡಿದ ‘ಕೈ’ ಟ್ವೀಟ್ Read More »

ರಾಜ್ಯ ಸಚಿವ ಸಂಪುಟ ವಿಸ್ತರಣೆ| ಶನಿವಾರ(ಮೇ.27) 24 ಮಂದಿ ನೂತನ ಸಚಿವರಾಗಿ ಪದಗ್ರಹಣ

ಸಮಗ್ರ ನ್ಯೂಸ್: ಬೆಂಗಳೂರು ಶನಿವಾರ (ಮೇ.27) ಬೆಳಗ್ಗೆ 11.45ಕ್ಕೆ ನೂತನ 24 ಸಚಿವರ ಪದಗ್ರಹಣ ಸಮಾರಂಭ ನಡೆಯಲಿದೆ. ಸರ್ಕಾರದ ಮನವಿಗೆ ರಾಜ್ಯಪಾಲರು ಒಪ್ಪಿಗೆ ಸೂಚಿಸಿದ್ದು, ಸಂಪುಟ ವಿಸ್ತರಣೆಗೆ ಶನಿವಾರ ಮುಹೂರ್ತ ಫಿಕ್ಸ್ ಆಗಿದೆ. ನವದೆಹಲಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಪಕ್ಷದ ಹೈಕಮಾಂಡ್ ನಾಯಕರೊಂದಿಗೆ ಸಮಾಲೋಚನೆ ನಡೆಸಿದ್ದಾರೆ. ಸಮಾಲೋಚನೆಯ ಬಳಿಕ ಸಂಪುಟಕ್ಕೆ 24 ಮಂದಿಯನ್ನು ಸೇರ್ಪಡೆ ಮಾಡಿಕೊಳ್ಳಲು ತೀರ್ಮಾನಿಸಲಾಗಿದೆ. ಶನಿವಾರ ನೂತನ ಸಚಿವರು ಪ್ರಮಾಣವಚನ ಸ್ವೀಕರಿಸಲಿದ್ದಾರೆ ಎಂದು ಹೇಳಲಾಗಿದೆ. ನೂತನ ಸಚಿವರು ಯಾರು?ಈಶ್ವರ ಖಂಡ್ರೆ, ಲಕ್ಷ್ಮೀ

ರಾಜ್ಯ ಸಚಿವ ಸಂಪುಟ ವಿಸ್ತರಣೆ| ಶನಿವಾರ(ಮೇ.27) 24 ಮಂದಿ ನೂತನ ಸಚಿವರಾಗಿ ಪದಗ್ರಹಣ Read More »

ಸುರತ್ಕಲ್: ಫ್ಲೆಕ್ಸ್ ನಲ್ಲಿದ್ದ ಬಿಜೆಪಿ ಯುವಮೋರ್ಚಾ ಮುಖಂಡನ ಭಾವಚಿತ್ರಕ್ಕೆ ಮತಾಂಧರಿಂದ ಹಾನಿ!

ಸಮಗ್ರ ನ್ಯೂಸ್: ಪೊಲೀಸ್ ಠಾಣಾ ವ್ಯಾಪ್ತಿಯ ಕೃಷ್ಣಾಪುರ ಆರನೇ ಬ್ಲಾಕ್ ಶ್ರೀ ಕೃಷ್ಣ ಭಜನಾ ಮಂದಿರ ಮುಂಭಾಗ ಮಂಗಳೂರು ಉತ್ತರ ಶಾಸಕ ಡಾ.ಭರತ್ ವೈ. ಶೆಟ್ಟಿಯವರಿಗೆ ಶುಭಾಶಯ ಕೋರಿ ಹಾಕಲಾಗಿದ್ದ ಬ್ಯಾನರ್ ನಲ್ಲಿ ಯುವಮೋರ್ಚಾ ಮುಖಂಡ ಭರತ್ ರಾಜ್ ಕೃಷ್ಣಾಪುರ ಅವರ ಭಾವಚಿತ್ರಕ್ಕೆ ಚೂರಿಯಿಂದ ಹಾನಿ ಮಾಡಲಾದ ಘಟನೆ ಇಂದು ಬೆಳಕಿಗೆ ಬಂದಿದೆ. ಭರತ್ ರಾಜ್ ಕೃಷ್ಣಾಪುರ ಬಿಜೆಪಿ ಯುವಮೋರ್ಚಾ ಮಂಗಳೂರು ಉತ್ತರ ಮಂಡಲದ ಅಧ್ಯಕ್ಷರಾಗಿದ್ದು ಕೆಲವು ತಿಂಗಳ ಹಿಂದೆ ಇದೇ ರೀತಿ ಬ್ಯಾನರ್ ನಲ್ಲಿದ್ದ ಅವರ

ಸುರತ್ಕಲ್: ಫ್ಲೆಕ್ಸ್ ನಲ್ಲಿದ್ದ ಬಿಜೆಪಿ ಯುವಮೋರ್ಚಾ ಮುಖಂಡನ ಭಾವಚಿತ್ರಕ್ಕೆ ಮತಾಂಧರಿಂದ ಹಾನಿ! Read More »

ಕೇಸರಿ ಪಾಳಯಕ್ಕೆ ಶಾಕ್ ನೀಡಿದ ಸಿದ್ದು‌ ಸರ್ಕಾರ| ಮತ್ತೊಂದು 40% ಅಕ್ರಮದ ವಿರುದ್ದ ದೂರು ದಾಖಲು

ಸಮಗ್ರ ನ್ಯೂಸ್: ಬಿಜೆಪಿ ಸರ್ಕಾರದ ಅವಧಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮದ ತನಿಖೆಗೆ ಕಾಂಗ್ರೆಸ್‌ ಮುಂದಾಗಿದ್ದು ಮೊದಲ ಎಫ್‌ಐಆರ್‌ ದಾಖಲಾಗಿದೆ. ಅಂಬೇಡ್ಕರ್ ಅಭಿವೃದ್ದಿ ನಿಗಮ ಗಂಗಾ ಕಲ್ಯಾಣ ಯೋಜನೆಯಲ್ಲಿ ಅಕ್ರಮ ನಡೆದಿದೆ ಎಂದು ಆರೋಪಿಸಿ ವಿಧಾನಸೌಧ ಪೊಲೀಸ್‌ ಠಾಣೆಯಲ್ಲಿ ದೂರು ನೀಡಿದ್ದು ಎಫ್‌ಐಆರ್‌ ದಾಖಲಾಗಿದೆ. ಶೀಘ್ರವೇ ಈ ಪ್ರಕರಣ ಸಿಐಡಿಗೆ ವರ್ಗಾವಣೆಯಾಗುವ ಸಾಧ್ಯತೆಯಿದೆ. 2 ರಿಂದ 5 ಎಕರೆ ವ್ಯಾಪ್ತಿಯೊಳಗಡೆ ಜಮೀನಿರುವವರಿಗೆ ಗಂಗಾಕಲ್ಯಾಣ ಯೋಜನೆಯಡಿ ಕೊಳವೆ ಬಾವಿ ನಿರ್ಮಾಣ ಮಾಡುವ ಮೂಲಕ ಅವರಿಗೆ ನೆರವಾಗುವ ಕೆಲಸ ಮಾಡಲಾಗುತ್ತಿದೆ. ಆದರೆ

ಕೇಸರಿ ಪಾಳಯಕ್ಕೆ ಶಾಕ್ ನೀಡಿದ ಸಿದ್ದು‌ ಸರ್ಕಾರ| ಮತ್ತೊಂದು 40% ಅಕ್ರಮದ ವಿರುದ್ದ ದೂರು ದಾಖಲು Read More »

ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ವಿರುದ್ಧ ನಿಂದನಾತ್ಮಕ ಬರಹ| ಸುಳ್ಯದ ಯುವಕನ ಮನೆಗೆ ಶಾಸಕರ ಅಭಿಮಾನಿಗಳ ದಂಡು| ಡಿವೈಎಸ್ಪಿ ಗಾನಾ ಪಿ.ಕುಮಾರ್ ಸಮ್ಮುಖದಲ್ಲಿ ಇತ್ಯರ್ಥ

ಸಮಗ್ರ ನ್ಯೂಸ್: ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಯವರ ಕುರಿತು ನಿಂದನಾತ್ಮಕ ಬರಹವನ್ನು ಹಂಚಿಕೊಂಡಿದ್ದಾರೆ ಎಂದು ಆರೋಪಿಸಿ ಮೇ 24 ರಂದು ರಾತ್ರಿ ಸುಮಾರು 8 ಗಂಟೆಗೆ ಪುತ್ತೂರುನಿಂದ ಶಾಸಕರ ಅಭಿಮಾನಿ ಬಳಗದ ಸುಮಾರು 15ಕ್ಕೂ ಹೆಚ್ಚು ಯುವಕರ ತಂಡ ಸುಳ್ಯ ಜಯನಗರ ಪ್ರಮೀತ್ ರವರ ಮನೆಗೆ ತೆರಳಿ ಫೇಸ್ಬುಕ್ಕಿನಲ್ಲಿ ಬರೆದ ಪೋಸ್ಟನ್ನು ಡಿಲೀಟ್ ಮಾಡುವಂತೆ ಮತ್ತು ಶಾಸಕರ ಬಳಿ ಕ್ಷಮೆ ಕೇಳುವಂತೆ ಒತ್ತಾಯಿಸಿದ್ದು,ವಿಷಯ ತಿಳಿದ ಸುಳ್ಯ ಪೊಲೀಸರು ಘಟನಾ ಸ್ಥಳಕ್ಕೆ ಬಂದು ಎರಡು ತಂಡದವರನ್ನು

ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ವಿರುದ್ಧ ನಿಂದನಾತ್ಮಕ ಬರಹ| ಸುಳ್ಯದ ಯುವಕನ ಮನೆಗೆ ಶಾಸಕರ ಅಭಿಮಾನಿಗಳ ದಂಡು| ಡಿವೈಎಸ್ಪಿ ಗಾನಾ ಪಿ.ಕುಮಾರ್ ಸಮ್ಮುಖದಲ್ಲಿ ಇತ್ಯರ್ಥ Read More »

‘ಮುಸ್ಲಿಂ ಓಟು ಬೇಡ ಎನ್ನುವವರೇ ಅವರ ಜೊತೆ ತೆರೆಮರೆಯಲ್ಲಿ ವ್ಯವಹಾರ ಕುದುರಿಸುತ್ತಾರೆ, ಇದೇನಾ ಹಿಂದುತ್ವ?’ | ಶಾಸಕ ಹರೀಶ್ ಪೂಂಜಾರ ವಿರುದ್ದ ಕಿಡಿಕಾರಿದ ಸತ್ಯಜಿತ್ ಸುರತ್ಕಲ್

ಸಮಗ್ರ ನ್ಯೈಸ್: ‘ಕಾಂಗ್ರೆಸ್ ಪರ ಪ್ರಚಾರ ನಡೆಸುವ ಯಾವ ಅಗತ್ಯ ನನಗಿಲ್ಲ. ಹಾಗಿದ್ದಲ್ಲಿ ನಾನು ಕಾಂಗ್ರೆಸ್ ಪಕ್ಷದಿಂದಲೇ ಚುನಾವಣೆಗೆ ಸ್ಪರ್ಧಿಸುತ್ತಿದ್ದೆ’ ಎಂದು ಹಿಂದು ಮುಖಂಡ ಸತ್ಯಜಿತ್‌ ಸುರತ್ಕಲ್‌ ಹೇಳಿದ್ದಾರೆ.ಕಾಂಗ್ರೆಸ್ ಪರ ಪ್ರಚಾರ ಮಾಡಿದ್ದಾರೆ ಎಂದಿದ್ದಾರೆ. ನನ್ನನ್ನ ‘ಅಣ್ಣಾ’ ಎಂದು ಪೂಂಜ ಸಂಬೋಧನೆ ಮಾಡಿದ್ದಾರೆ. ಆ ರೀತಿಯ ಸಂಬಂಧ ಹರೀಶ್ ಪೂಂಜ ನನ್ನ ಜೊತೆ ಇಟ್ಟು ಕೊಂಡಿದ್ದಾರಾ?. 2018ರಲ್ಲಿ ಬಿಜೆಪಿ ಟಿಕೆಟ್ ಸಿಗುವ ಮೊದಲು ಸೀಟ್ ನನಗೆ ಸಿಗಬಹುದಾ ಯಾರ ಹತ್ತಿರ ಮಾತನಾಡಬಹುದು ಅಂತ ದಿನಕ್ಕೆರಡು ಬಾರಿ ಕೇಳುತ್ತಿದ್ದರು.

‘ಮುಸ್ಲಿಂ ಓಟು ಬೇಡ ಎನ್ನುವವರೇ ಅವರ ಜೊತೆ ತೆರೆಮರೆಯಲ್ಲಿ ವ್ಯವಹಾರ ಕುದುರಿಸುತ್ತಾರೆ, ಇದೇನಾ ಹಿಂದುತ್ವ?’ | ಶಾಸಕ ಹರೀಶ್ ಪೂಂಜಾರ ವಿರುದ್ದ ಕಿಡಿಕಾರಿದ ಸತ್ಯಜಿತ್ ಸುರತ್ಕಲ್ Read More »

ಇಂದಿರಾ ಕ್ಯಾಂಟೀನ್ ಗೆ ಮರುಜೀವ| ಊಟ-ಉಪಹಾರಕ್ಕೆ ಕೊಂಚ ದರ ಏರಿಸಲು ನಿರ್ಧಾರ

ಸಮಗ್ರ ನ್ಯೂಸ್: ಬಿಜೆಪಿ ನೇತೃತ್ವದ ಸರ್ಕಾರದ ಅವಧಿಯಲ್ಲಿ ಬಡ ಜನರಿಗೆ ಹಸಿವು ನೀಗಿಸುವ ಕಡಿಮೆ ದರದಲ್ಲಿ ಊಟ, ತಿಂಡಿ ಒದಗಿಸುವಂತ ಇಂದಿರಾ ಕ್ಯಾಂಟೀನ್ ಗಳಿಗೆ ಅನುದಾನ ಒದಗಿಸದೇ ಅಲ್ಲಲ್ಲಿ ಮುಚ್ಚುವಂತೆ ಆಗಿತ್ತು. ಈಗ ಕಾಂಗ್ರೆಸ್ ನೇತೃತ್ವದ ಸರ್ಕಾರ ಅಸ್ತಿತ್ವಕ್ಕೆ ಬಂದ ನಂತ್ರ, ಮತ್ತೆ ಇಂದಿರಾ ಕ್ಯಾಂಟೀನ್ ಗಳಿಗೆ ಜೀವ ತುಂಬುವ ಕೆಲಸವನ್ನು ಮಾಡಲಾಗಿದೆ. ಈಗಾಗಲೇ ಈ ಬಗ್ಗೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಟ್ವಿಟ್ ಮಾಡಿ ಮಾಹಿತಿ ನೀಡಿದ್ದರು. ನಗರ-ಪಟ್ಟಣಗಳಲ್ಲಿರುವ ಮತ್ತು ಕಾರ್ಯನಿಮಿತ್ತ ನಗರಗಳಿಗೆ ಬರುವ ಬಡವರ ಹಸಿವು ತಣಿಸುವ

ಇಂದಿರಾ ಕ್ಯಾಂಟೀನ್ ಗೆ ಮರುಜೀವ| ಊಟ-ಉಪಹಾರಕ್ಕೆ ಕೊಂಚ ದರ ಏರಿಸಲು ನಿರ್ಧಾರ Read More »

ಉಚಿತ ಭರವಸೆ ಕೊಟ್ಟು ಅಧಿಕಾರ ಹಿಡಿದ ಕಾಂಗ್ರೆಸ್ ನ ನಿಜಬಣ್ಣ ಬಯಲಾಗ್ತಿದೆ – ಹೆಚ್.ಡಿ. ಕುಮಾರಸ್ವಾಮಿ

ಸಮಗ್ರ ನ್ಯೂಸ್: ಗ್ಯಾರಂಟಿಗಳ ಮೂಲಕ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಸರಕಾರದ ನೈಜಬಣ್ಣ ಒಂದು ವಾರದಲ್ಲಿಯೇ ಬಯಲಿಗೆ ಬಂದಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಕಿಡಿಕಾರಿದರು. ವಿಧಾನಸೌಧದಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ಅವರು, ಮೊದಲ ಸಂಪುಟ ಸಭೆಯಲ್ಲಿಯೇ ಗ್ಯಾರಂಟಿಗಳನ್ನು ಜಾರಿಗೆ ತಂದೇ ತರುತ್ತೇವೆ ಎಂದು ಹೇಳಿದ್ದ ಈಗಿನ ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿಗಳು ಈಗ ವರಸೆ ಬದಲಿಸಿ, ಷರತ್ತುಗಳು ಅನ್ವಯ ಆಗುತ್ತವೆ ಎನ್ನುತ್ತಿದ್ದಾರೆ! ಇದ್ಯಾವ ನ್ಯಾಯ? ಎಂದು ಪ್ರಶ್ನಿಸಿದರು. ಗ್ಯಾರಂಟಿಗಳ ಭರವಸೆ ನೀಡಿದ್ದೀರಿ. ಜಾರಿ ಮಾಡಿ ಎಂದು ಜನರು

ಉಚಿತ ಭರವಸೆ ಕೊಟ್ಟು ಅಧಿಕಾರ ಹಿಡಿದ ಕಾಂಗ್ರೆಸ್ ನ ನಿಜಬಣ್ಣ ಬಯಲಾಗ್ತಿದೆ – ಹೆಚ್.ಡಿ. ಕುಮಾರಸ್ವಾಮಿ Read More »