ರಾಜಕೀಯ

ಸುಳ್ಯ ಕಾಂಗ್ರೆಸ್ ಗೆ ಹೈಕಮಾಂಡ್ ಬಲ| ಪ್ರಚಾರಕ್ಕೆ ಬರಲಿದ್ದಾರೆ‌ ಎಐಸಿಸಿ ಅಧ್ಯಕ್ಷ ಖರ್ಗೆ

ಸಮಗ್ರ ನ್ಯೂಸ್: ಸುಳ್ಯ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಜಿ.ಕೃಷ್ಣಪ್ಪ ಅವರ ಪರವಾಗಿ ಭರ್ಜರಿ ಚುನಾವಣಾ ಪ್ರಚಾರಕ್ಕೆ ಸುಳ್ಯ ವಿಧಾನ ಸಭಾ ಕ್ಷೇತ್ರದ ಕಾಂಗ್ರೆಸ್ ಚುನಾವಾ ಪ್ರಚಾರ ಸಮಿತಿ ಸಿದ್ಧತೆ ನಡೆಸಿದೆ. ಚುನಾವಣಾ ಪ್ರಚಾರಕ್ಕೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಆಗಮಿಸಲಿದ್ದಾರೆ ಎಂದು ಪಕ್ಷದ ಮೂಲಗಳಿಂದ ತಿಳಿದು ಬಂದಿದೆ. ಮಲ್ಲಿಕಾರ್ಜುನ ಖರ್ಗೆ ಅವರ ಆಪ್ತ ವಲಯದಲ್ಲಿ ಗುರುತಿಸಿಕೊಂಡಿರುವ ಜಿ.ಕೃಷ್ಣಪ್ಪ ಅವರ ಚುನಾವಣಾ ಪ್ರಚಾರಕ್ಕೆ ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ತಾರಾ ಪ್ರಚಾರಕರನ್ನು ಕರೆ ತರುವ ಬಗ್ಗೆ ಚರ್ಚೆ […]

ಸುಳ್ಯ ಕಾಂಗ್ರೆಸ್ ಗೆ ಹೈಕಮಾಂಡ್ ಬಲ| ಪ್ರಚಾರಕ್ಕೆ ಬರಲಿದ್ದಾರೆ‌ ಎಐಸಿಸಿ ಅಧ್ಯಕ್ಷ ಖರ್ಗೆ Read More »

ವಿಧಾನ ಕದನ: ಆಪ್ ನಿಂದ 40 ಸ್ಟಾರ್ ಪ್ರಚಾರಕರ ಪಟ್ಟಿ‌ ಬಿಡುಗಡೆ

ಸಮಗ್ರ ನ್ಯೂಸ್: ಕರ್ನಾಟಕ ವಿಧಾನಸಭಾ ಚುನಾವಣೆಗೆ ಬಿಜೆಪಿ, ಕಾಂಗ್ರೆಸ್, ಜೆಡಿಎಸ್ ಪಕ್ಷದಿಂದ ಸ್ಟಾರ್ ಪ್ರಚಾರಕರ ಪಟ್ಟಿಯನ್ನು ಬಿಡುಗಡೆ ಮಾಡಲಾಗಿರುವ ಬೆನ್ನಲ್ಲೇ ವಿಧಾನಸಭಾ ಚುನಾವಣೆಗೆ ಆಮ್ ಆದ್ಮಿ ಪಕ್ಷದಿಂದ 40 ಸ್ಟಾರ್ ಪ್ರಚಾರಕರ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ. ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿರುವ ಎಎಪಿಯು, ರಾಜ್ಯ ವಿಧಾನಸಭಾ ಚುನಾವಣೆಗೆ ಪಕ್ಷದಿಂದ ಸ್ಟಾರ್ ಪ್ರಚಾರವನ್ನು ನಡೆಸಲಾಗುತ್ತಿದೆ. 40 ಸ್ಟಾರ್ ಪ್ರಚಾರಕರು ಚುನಾವಣಾ ಪ್ರಚಾರದಲ್ಲಿ ತೊಡಗಲಿದ್ದಾರೆ ಎಂದು ತಿಳಿಸಿದೆ. ಹೀಗಿದೆ ಎಎಪಿಯ 40 ಸ್ಟಾರ್ ಪ್ರಚಾರಕರ ಪಟ್ಟಿ:-ದೆಹಲಿ ಆಮ್

ವಿಧಾನ ಕದನ: ಆಪ್ ನಿಂದ 40 ಸ್ಟಾರ್ ಪ್ರಚಾರಕರ ಪಟ್ಟಿ‌ ಬಿಡುಗಡೆ Read More »

ವಿಧಾನಸಭಾ ಚುನಾವಣೆ| 3632 ಅಭ್ಯರ್ಥಿಗಳಿಂದ ಉಮೇದುವಾರಿಕೆ| ಇಂದು ನಾಮಪತ್ರ ಪರಿಶೀಲನೆ

ಸಮಗ್ರ ನ್ಯೂಸ್: ರಾಜ್ಯ ವಿಧಾನಸಭೆ ಚುನಾವಣೆಗೆ ನಾಮಪತ್ರ ಸಲ್ಲಿಕೆ ಮುಕ್ತಾಯವಾಗಿದ್ದು, 3632 ಮಂದಿ ಚುನಾವಣೆಗೆ ಸ್ಪರ್ಧಿಸಿದ್ದಾರೆ. ಇಂದು(ಎ.21) ನಾಮಪತ್ರ ಪರಿಶೀಲನೆ ಕಾರ್ಯ ನಡೆಯಲಿದೆ. ಬಿಜೆಪಿಯಿಂದ 224 ಅಭ್ಯರ್ಥಿಗಳು ಕಣಕ್ಕಿಳಿದಿದ್ದಾರೆ. 75 ಹೊಸ ಮುಖಗಳಿಗೆ ಅವಕಾಶ ನೀಡಲಾಗಿದೆ. 68 ಮಂದಿ ಲಿಂಗಾಯಿತರಿಗೆ ಬಿಜೆಪಿ ಟಿಕೆಟ್ ನೀಡಲಾಗಿದ್ದು, 134 ಪದವೀಧರರು, 37 ಸ್ನಾತಕೋತ್ತರ ಪದವೀಧರರು ಸೇರಿದ್ದಾರೆ. ಕಾಂಗ್ರೆಸ್ 223 ಕ್ಷೇತ್ರಗಳಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದೆ. 53 ಹೊಸ ಮುಖಗಳಿಗೆ ಅವಕಾಶ ನೀಡಲಾಗಿದೆ. 53 ಒಕ್ಕಲಿಗರಿಗೆ, 51 ಮಂದಿ ಲಿಂಗಾಯಿತರಿಗೆ, 14 ಮುಸ್ಲಿಮರಿಗೆ

ವಿಧಾನಸಭಾ ಚುನಾವಣೆ| 3632 ಅಭ್ಯರ್ಥಿಗಳಿಂದ ಉಮೇದುವಾರಿಕೆ| ಇಂದು ನಾಮಪತ್ರ ಪರಿಶೀಲನೆ Read More »

ಮಹತ್ವದ ಬೆಳವಣಿಗೆ; ಕನಕಪುರದಿಂದ ಡಿ.ಕೆ ಸುರೇಶ್ ನಾಮಪತ್ರ ಸಲ್ಲಿಕೆ

ಸಮಗ್ರ ನ್ಯೂಸ್: ಮಹತ್ವದ ಬೆಳವಣಿಗೆಯೊಂದರಲ್ಲಿ ಕನಕಪುರ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸಂಸದ ಡಿ.ಕೆ. ಸುರೇಶ್ ನಾಮಪತ್ರ ಸಲ್ಲಿಸಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರ ನಾಮಪತ್ರ ತಿರಸ್ಕೃತಗೊಳ್ಳುವ ಸಾಧ್ಯತೆ ಹಿನ್ನೆಲೆಯಲ್ಲಿ ಯಾವುದೇ ಕಾರಣಕ್ಕೂ ಚುನಾವಣಾ ಅಖಾಡದಿಂದ ಹಿಂದೆ ಸರಿಯಬಾರದು ಎಂಬ ನಿಟ್ಟಿನಲ್ಲಿ ಕಾಂಗ್ರೆಸ್ ಹೈಕಮಾಂಡ್ ಸೂಚನೆ ಮೇರೆಗೆ ಮುಂಜಾಗೃತಾ ಕ್ರಮವಾಗಿ ಇದೀಗ ಡಿ.ಕೆ.ಸುರೇಶ್ ಕನಕಪುರದಿಂದ ನಾಮಪತ್ರ ಸಲ್ಲಿಸಿದ್ದಾರೆ. ಬಳಿಕ ಮಾತನಾಡಿದ ಅವರು,ಬಿಜೆಪಿಯ ಕುತಂತ್ರಕ್ಕೆ ತಕ್ಕ ಉತ್ತರ ಕೊಡಬೇಕಿದೆ. ಹೀಗಾಗಿ ಕೆಲವೊಂದು ಮಾಹಿತಿ ಆಧಾರದ ಮೇಲೆ ನಾಮಪತ್ರ ಸಲ್ಲಿಸಿದ್ದೇನೆ.

ಮಹತ್ವದ ಬೆಳವಣಿಗೆ; ಕನಕಪುರದಿಂದ ಡಿ.ಕೆ ಸುರೇಶ್ ನಾಮಪತ್ರ ಸಲ್ಲಿಕೆ Read More »

ಮಂಗಳೂರು: ಕೈ ಕೊಟ್ಟ ಕಾಂಗ್ರೆಸ್ ಟಿಕೆಟ್| ಜೆಡಿಎಸ್ ನಿಂದ ಸ್ಪರ್ಧೆಗಿಳಿದ ಮೊಯ್ದಿನ್ ಬಾವಾ

ಸಮಗ್ರ ನ್ಯೂಸ್: ಮಂಗಳೂರು ಉತ್ತರ ಕ್ಷೇತ್ರದಲ್ಲಿ ಕಾಂಗ್ರೆಸ್ ಟಿಕೆಟ್ ವಂಚಿತರಾಗಿರುವ ಮಾಜಿ ಶಾಸಕ ಮೊಯ್ದಿನ್ ಬಾವಾ ಅವರು ಕಾಂಗ್ರೆಸ್ ತೊರೆದು ಜೆಡಿಎಸ್ ಸೇರ್ಪಡೆಯಾಗಲು ನಿರ್ಧರಿಸಿದ್ದಾರೆ. ಜೆಡಿಎಸ್ ಪಕ್ಷದಿಂದ ಮಂಗಳೂರು ಉತ್ತರ ಕ್ಷೇತ್ರದಲ್ಲಿ ಸ್ಪರ್ಧಿಸುವುದಾಗಿ ಅವರು ತಿಳಿಸಿದ್ದಾರೆ. ಕಾಂಗ್ರೆಸ್ ಪಕ್ಷ ಬಳಸಿ ಬಿಸಾಡಿದೆ. ದುಡ್ಡಿನ ಆಸೆಗಾಗಿ ಕಾಂಗ್ರೆಸ್ ನಾಯಕರು ನನ್ನ ಬೆನ್ನಿಗೆ ಚೂರಿ ಹಾಕಿದ್ದಾರೆ. 80% ಜನಾಭಿಪ್ರಾಯ ಇದ್ದರು ನನಗೆ ಟಿಕೆಟ್ ಕೊಡದೆ 7% ಜನರ ಒಲವು ಇರುವ ವ್ಯಕ್ತಿಗೆ ಟಿಕೆಟ್ ಕೊಟ್ಟಿದ್ದಾರೆ ಎಂದರು. ರಂಝಾನ್ ಅವಧಿಯಲ್ಲಿ ಕಳೆದ

ಮಂಗಳೂರು: ಕೈ ಕೊಟ್ಟ ಕಾಂಗ್ರೆಸ್ ಟಿಕೆಟ್| ಜೆಡಿಎಸ್ ನಿಂದ ಸ್ಪರ್ಧೆಗಿಳಿದ ಮೊಯ್ದಿನ್ ಬಾವಾ Read More »

ಬಿಜೆಪಿಯಿಂದ ಶಿವಮೊಗ್ಗದಲ್ಲಿ ಒಂದೇ ಕಲ್ಲಿಗೆ ಎರಡು ಹಕ್ಕಿ; ಮಾನ್ವಿಯಲ್ಲಿ ಆಮದು ಅಭ್ಯರ್ಥಿ| ಮಗನಿಗೆ ಟಿಕೆಟ್ ನಿರೀಕ್ಷೆಯಲ್ಲಿದ್ದ ಈಶ್ವರಪ್ಪಗೆ ಬಿಗ್ ಶಾಕ್

ಸಮಗ್ರ ನ್ಯೂಸ್: ಶಿವಮೊಗ್ಗದಲ್ಲಿ ಹೊಸ ಅಭ್ಯರ್ಥಿಗೆ ಮಣೆ ಹಾಕಿದ್ರೆ, ಇತ್ತ ಮಾನ್ವಿಯಲ್ಲಿ ಆಮದು ಆಮದು ಅಭ್ಯರ್ಥಿ ಬಿ.ವಿ ನಾಯಕ್​​ಗೆ ಟಿಕೆಟ್​ ಕೊಟ್ಟು ಫೈಟ್​ಗೆ ಬಿಜೆಪಿ ಸಜ್ಜಾಗಿದೆ. ನಾಮಪತ್ರಕ್ಕೆ ಕೊನೆದಿನಕ್ಕೂ ಮುನ್ನವೇ ಅಭ್ಯರ್ಥಿ ಫೈನಲ್​ ಮಾಡಿದೆ. ತೀವ್ರ ಕುತೂಹಲ ಸೃಷ್ಟಿಸಿದ್ದ ಶಿವಮೊಗ್ಗ ವಿಧಾನಸಭಾ ಕ್ಷೇತ್ರಕ್ಕೆ ಬಿಜೆಪಿ ಟಿಕೆಟ್​ ಘೊಷಿಸಿದೆ.. ಜೊತೆಗೆ ರಾಯಚೂರಿನ ಮಾನ್ವಿ ಕ್ಷೇತ್ರಕ್ಕೂ ಅಭ್ಯರ್ಥಿ ಪ್ರಕಟಿಸಿದೆ. ಎಲ್ಲಾ 224 ಕ್ಷೇತ್ರಗಳಿಗೂ ಅಭ್ಯರ್ಥಿಗಳನ್ನು ಕಣಕ್ಕಿಳಿಸಿ ಬಿಜೆಪಿ ಚುನಾವಣಾ ಯುದ್ದಕ್ಕೆ ಸೇನೆ ಸಜ್ಜುಗೊಳಿಸಿದೆ. ಮಲೆನಾಡ ಹೆಬ್ಬಾಗಿಲು ಶಿವಮೊಗ್ಗ ಕ್ಷೇತ್ರ ಸಾಕಷ್ಟು

ಬಿಜೆಪಿಯಿಂದ ಶಿವಮೊಗ್ಗದಲ್ಲಿ ಒಂದೇ ಕಲ್ಲಿಗೆ ಎರಡು ಹಕ್ಕಿ; ಮಾನ್ವಿಯಲ್ಲಿ ಆಮದು ಅಭ್ಯರ್ಥಿ| ಮಗನಿಗೆ ಟಿಕೆಟ್ ನಿರೀಕ್ಷೆಯಲ್ಲಿದ್ದ ಈಶ್ವರಪ್ಪಗೆ ಬಿಗ್ ಶಾಕ್ Read More »

ಕಾಂಗ್ರೆಸ್ ನ ಅಭ್ಯರ್ಥಿಗಳ ಅಂತಿಮ ಪಟ್ಟಿ ಬಿಡುಗಡೆ| ಮಂಗಳೂರು ಉತ್ತರ ಕ್ಷೇತ್ರಕ್ಕೆ ಹೊಸ ಮುಖ

ಸಮಗ್ರ ನ್ಯೂಸ್: ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್’ನ ಅಂತಿಮ ಪಟ್ಟಿ ಬಿಡುಗಡೆಯಾಗಿದ್ದು, ನಿರೀಕ್ಷೆಯಂತೆ ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರಕ್ಕೆ ಇನಾಯತ್ ಅಲಿ ಅವರಿಗೆ ಟಿಕೆಟ್ ನೀಡಲಾಗಿದೆ.‌ ಈ ಕ್ಷೇತ್ರದಲ್ಲಿ ಇನಾಯತ್ ಅಲಿ ಮತ್ತು ಮೊಯ್ದೀನ್ ಬಾವ ನಡುವೆ ಟಿಕೆಟ್ ಗಾಗಿ ತೀವ್ರ ಪೈಪೋಟಿ ಏರ್ಪಟ್ಟಿತ್ತು. ಕೊನೆಗೂ ಈ ಸ್ಪರ್ಧೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ಆಪ್ತ ಇನಾಯತ್ ಅಲಿ ಜಯಗಳಿಸಿ ಟಿಕೆಟ್ ಗಿಟ್ಟಿಸಿಕೊಂಡಿದ್ದಾರೆ. ಟಿಕೆಟ್ ವಂಚಿತ ಮೊಯ್ದೀನ್ ಬಾವ ಯಾವ ನಿರ್ಧಾರ ಕೈಗೊಳ್ಳಲಿದ್ದಾರೆ ಎಂಬುದನ್ನು ಕಾದುನೋಡಬೇಕಾಗಿದೆ. ಉಳಿದಂತೆ ರಾಯಚೂರು –

ಕಾಂಗ್ರೆಸ್ ನ ಅಭ್ಯರ್ಥಿಗಳ ಅಂತಿಮ ಪಟ್ಟಿ ಬಿಡುಗಡೆ| ಮಂಗಳೂರು ಉತ್ತರ ಕ್ಷೇತ್ರಕ್ಕೆ ಹೊಸ ಮುಖ Read More »

ಕೊನೆಗೂ ಮಾನ್ವಿ, ಶಿವಮೊಗ್ಗಕ್ಕೆ ಅಭ್ಯರ್ಥಿಗಳ ಘೋಷಿಸಿದ ಬಿಜೆಪಿ

ಸಮಗ್ರ ನ್ಯೂಸ್: ರಾಜ್ಯ ವಿಧಾನಸಭಾ ಚುನಾವಣೆಗೆಗಾಗಿ ಬಿಜೆಪಿಯಿಂದ ಬಾಕಿ ಎರಡು ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಿಸಿದೆ. ಇಂದು ಪಟ್ಟಿ ಬಿಡುಗಡೆ ಮಾಡಿರುವ ಬಿಜೆಪಿ, ತೀವ್ರ ಕುತೂಹಲ ಕೆರಳಿಸಿದ್ದಂತ ಶಿವಮೊಗ್ಗ ಕ್ಷೇತ್ರಕ್ಕೆ ಚೆನ್ನ ಬಸಪ್ಪಗೆ ಟಿಕೆಟ್ ನೀಡಿದೆ. ಈ ಮೂಲಕ ಕೆ.ಎಸ್ ಈಶ್ವರಪ್ಪ, ಆಯನೂರು ಮಂಜುನಾಥ್ ಗೆ ಬಿಗ್ ಶಾಕ್ ನೀಡಿದೆ. ಇನ್ನೂ ಮಾನ್ವಿ ಎಸ್ಟಿ ಮೀಸಲು ಕ್ಷೇತ್ರಕ್ಕೆ ಬಿ.ವಿ ನಾಯ್ಕ್ ಗೆ ಟಿಕೆಟ್ ನೀಡಲಾಗಿದೆ. ಒಟ್ಟಾರೆ ಬಿಜೆಪಿಯಿಂದ 224 ಕ್ಷೇತ್ರಗಳಿಗೆ ಅಂತಿಮ ಪಟ್ಟಿ ಬಿಡುಗಡೆ ಮಾಡಿದೆ.

ಕೊನೆಗೂ ಮಾನ್ವಿ, ಶಿವಮೊಗ್ಗಕ್ಕೆ ಅಭ್ಯರ್ಥಿಗಳ ಘೋಷಿಸಿದ ಬಿಜೆಪಿ Read More »

ಸುಳ್ಯ: ದಶಕ‌ ಕಳೆದರೂ ಸಿಗದ ಪಹಣಿ| ಗ್ರಾಮಸ್ಥರಿಂದ ಮತ ಬಹಿಷ್ಕಾರಕ್ಕೆ ನಿರ್ಧಾರ

ಸಮಗ್ರ ನ್ಯೂಸ್: ದಶಕಗಳಿಂದ ಬೇಡಿಕೆ ಸಲ್ಲಿಸುತ್ತಾ ಬಂದರೂ ವಾಸಸ್ಥಳಕ್ಕೆ ಪಹಣಿ ಮಾಡಿಕೊಡದ ಕಾರಣ ಗ್ರಾಮಸ್ಥರು ಮತದಾನ ಬಹಿಷ್ಕಾರಕ್ಕೆ ನಿರ್ಧರಿಸಿದ ಘಟನೆ ಸುಳ್ಯ ತಾಲೂಕಿನ ಅಜ್ಜಾವರ ಗ್ರಾಮದ ಅಜ್ಜಾವರ ಗ್ರಾಮದ ಅಡ್ಪಂಗಾಯ ಕಾಲೋನಿಯಲ್ಲಿ ನಡೆದಿದೆ. ಗ್ರಾಮದ ಮಹಾಮ್ಮಾಯಿ‌ ದೇವಸ್ಥಾನ ಹಾಗೂ ಅಲ್ಲಿನ ಪ.ಜಾತಿ ಕಾಲೋನಿಯಲ್ಲಿ ವಾಸಿಸುತ್ತಿರುವ 20 ಕುಟುಂಬದವರ ಮನೆಯ ಅಡಿಸ್ಥಳ ಇದುವರೆಗೂ ಪಹಣಿ‌ಯಾಗಿರುವುದಿಲ್ಲ. ಅರ್ಜಿ ಸಲ್ಲಿಸಿದರೂ ವಿಳಂಬ ನೀತಿ ಅನುಸರಿಸುತ್ತಿರುವ ಆಡಳಿತ ಮತ್ತು ನಿರ್ಲಕ್ಷ್ಯ ಧೋರಣೆ ವಹಿಸುತ್ತಿರುವ ಜನಪ್ರತಿನಿಧಿಗಳ ವಿರುದ್ಧ ಮತದಾನ ಬಹಿಷ್ಕರಿಸಿ ಹೋರಾಡಲು ಗ್ರಾಮಸ್ಥರು ನಿರ್ಧರಿಸಿದ್ದಾರೆ.

ಸುಳ್ಯ: ದಶಕ‌ ಕಳೆದರೂ ಸಿಗದ ಪಹಣಿ| ಗ್ರಾಮಸ್ಥರಿಂದ ಮತ ಬಹಿಷ್ಕಾರಕ್ಕೆ ನಿರ್ಧಾರ Read More »

ಕಾಗವಾಡ:ನಾಮಪತ್ರ ಸಲ್ಲಿಕೆ ಮಾಡಿದ ಶ್ರೀಮಂತ ಪಾಟೀಲ

ಸಮಗ್ರ ನ್ಯೂಸ್: ಕಾಗವಾಡ ತಾಲೂಕಾ ಪಟ್ಟಣದಲ್ಲಿರುವ ಚುಣಾವಣಾ ಅಧಿಕಾರಿಯ ಕಚೇರಿಯಲ್ಲಿ ಬಿಜೆಪಿ ಪಕ್ಷದ ಅಭ್ಯರ್ಥಿಯಾದ ಶ್ರೀಮಂತ ಪಾಟೀಲ ಅವರು ಬೃಹತ್ ಬೈಕ್ ರ‍್ಯಾಲಿ ಮಾಡುವ ಮೂಲಕ ಎ.19ರಂದು ನಾಮಪತ್ರವನ್ನು ಸಲ್ಲಿಕೆ ಮಾಡಿದರು ನಂತರ ಶಾಂತಿಸಾಗರ ಪ್ರಾಥಮಿಕ ಶಾಲಾ ಆವರಣದಲ್ಲಿ ಆಯೋಜಿಸಲಾಗಿದ್ದು ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದ ಅವರು ಇವತ್ತಿನ ನನಗೆ ತುಂಬಾ ಖುಷಿ ತಂದ ದಿನವಾಗಿದ್ದು ನನ್ನ ಮತಕ್ಷೇತ್ರದಲ್ಲಿ ಈಗಾಗಲೇ 70 ರಷ್ಟು ಕೆಲಸ ಮಾಡಿದ್ದೇನೆ ಮುಂದಿನ ಸಲ ನಿವು ನನಗೆ ಮತ್ತೋಮ್ಮೆ ಆಶಿರ್ವಾದ ಮಾಡಿ ಎಂದು ಮತದಾರರಲ್ಲಿ

ಕಾಗವಾಡ:ನಾಮಪತ್ರ ಸಲ್ಲಿಕೆ ಮಾಡಿದ ಶ್ರೀಮಂತ ಪಾಟೀಲ Read More »