ರಾಜಕೀಯ

ಪ್ರವೀಣ್ ನಿವಾಸಕ್ಕೆ ಭೇಟಿ ನೀಡಿದ ಸಿಎಂ| ಕಾರ್ಯಕರ್ತರಿಂದ ನಳಿನ್ ಗೆ ದಿಕ್ಕಾರ

ಸಮಗ್ರ ನ್ಯೂಸ್: ಬಿಜೆಪಿ ಯುವಮೋರ್ಚಾದ ಕಾರ್ಯಕರ್ತ ಹಂತಕರಿಂದ ಹತ್ಯೆಗೈಯಲ್ಪಟ್ಟ ಪ್ರವೀಣ್ ಕುಮಾರ್ ನೆಟ್ಟಾರು ಮನೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭೇಟಿ ನೀಡಿ‌ ಸಾಂತ್ವನ ಹೇಳಿದರು. ಪ್ರವೀಣ್ ಪತ್ನಿ ನೂತನಾ ಹಾಗೂ ಕುಟುಂಬಸ್ಥರನ್ನು ಸಾಂತ್ವನಗೈದ ಸಿಎಂ ಆದಷ್ಟು ಬೇಗ ದುಷ್ಕರ್ಮಿಗಳನ್ನು ಬಂಧಿಸಿ ಶಿಕ್ಷಿಸುವ ಭರವಸೆ ನೀಡಿದರು. ಇದೇ ವೇಳೆ ಕಾರ್ಯಕರ್ತರನ್ನು ಮಾತನಾಡಿಸಿದ ಸಿಎಂ ನಿನ್ನೆ ನಡೆದ ಲಾಠಿಚಾರ್ಜ್ ಪ್ರಕರಣಕ್ಕೆ ಸಂಬಂಧಿಸಿದಂತೆ ತಪ್ಪು ಮಾಡಿರುವ ಪೊಲೀಸರ ಮೇಲೆ ಕ್ರಮ ಕೈಗೊಳ್ಳುವ ಭರವಸೆ ನೀಡಿದರು. ಪ್ರವೀಣ್ ಕೊಲೆ‌ ಪ್ರಕರಣವನ್ನು ಎನ್ಐಎ ಗೆ […]

ಪ್ರವೀಣ್ ನಿವಾಸಕ್ಕೆ ಭೇಟಿ ನೀಡಿದ ಸಿಎಂ| ಕಾರ್ಯಕರ್ತರಿಂದ ನಳಿನ್ ಗೆ ದಿಕ್ಕಾರ Read More »

ಪ್ರವೀಣ್ ಹತ್ಯೆಗೆ ಡಿ.ಕೆ ಶಿ ಸಂತಾಪ| ನಿರ್ದಾಕ್ಷಿಣ್ಯ ಕ್ರಮಕ್ಕೆ ಆಗ್ರಹ

ಸಮಗ್ರ ನ್ಯೂಸ್: ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಡಿಕೆ ಶಿವಕುಮಾರ್ ಟ್ವೀಟ್ ಮೂಲಕ ಸಂತಾಪ ಸೂಚಿಸಿದ್ದಾರೆ. ಪ್ರವೀಣ್ ನೆಟ್ಟಾರು ಭೀಕರ ಹತ್ಯೆಗೀಡಾಗಿದ್ದು ಬೇಸರದ ಸಂಗತಿ. ಪ್ರವೀಣ್ ನೆಟ್ಟಾರು ಕುಟುಂಬ, ಸ್ನೇಹಿತ ವರ್ಗಕ್ಕೆ ಸಂತಾಪಗಳು. ಕೃತ್ಯದಲ್ಲಿ ಯಾರೇ ಭಾಗಿಯಾಗಿದ್ರೂ ನಿರ್ದಾಕ್ಷಿಣ್ಯ ಕ್ರಮಕೈಗೊಳ್ಳಲಿ ಎಂದು ಟ್ವೀಟ್ ಮಾಡಿದ್ದಾರೆ.

ಪ್ರವೀಣ್ ಹತ್ಯೆಗೆ ಡಿ.ಕೆ ಶಿ ಸಂತಾಪ| ನಿರ್ದಾಕ್ಷಿಣ್ಯ ಕ್ರಮಕ್ಕೆ ಆಗ್ರಹ Read More »

ಪ್ರವೀಣ್ ಹತ್ಯೆ ನೋವು ತಂದಿದೆ; ಹಂತಕರಿಗೆ ತಕ್ಕ ಶಿಕ್ಷೆಗೆ ಕ್ರಮ| ಬೆಳ್ಳಾರೆಯಲ್ಲಿ ಬಿ.ವೈ ವಿಜಯೇಂದ್ರ ಹೇಳಿಕೆ

ಸಮಗ್ರ ನ್ಯೂಸ್: ಪ್ರವೀಣ್ ಅವರ ಹತ್ಯೆ ಬಹಳ ನೋವು ತಂದಿದೆ ಹಾಗೂ ಇದು ರಾಜ್ಯ ಸರಕಾರ ಇದೀಗ ಹಿಂದೂ ಕಾರ್ಯಕರ್ತರ ಕೋಪಕ್ಕೆ ಗುರಿಯಾಗಿದೆ. ನಾವು ಈ ಹತ್ಯೆಯನ್ನು ಗಂಭೀರವಾಗಿ ಪರಿಗಣಿಸಿ ತಪ್ಪಿತಸ್ಥರ ವಿರುದ್ದ ಕಠೀಣವಾದ ಕ್ರಮ ಕೈಗೊಳ್ಳುತ್ತೇವೆ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ ವಿಜಯೇಂದ್ರ ಹೇಳಿದ್ದಾರೆ. ಬೆಳ್ಳಾರೆಯ ನೆಟ್ಟಾರು ಪ್ರವೀಣ್ ಮನೆಗೆ ಭೇಟಿ‌ ನೀಡಿದ ಬಳಿಕ ಸುದ್ದಿಗಾರರ ಜೊತೆ ಮಾತನಾಡಿ ಈ ವಿಷಯ ತಿಳಿಸಿದರು. ಪ್ರವೀಣ್ ಬಡ ಕುಟುಂಬದ ಯುವಕ ನಮ್ಮ ಪಕ್ಷದ ಕಾರ್ಯಕರ್ತ ಹಾಗಾಗಿ

ಪ್ರವೀಣ್ ಹತ್ಯೆ ನೋವು ತಂದಿದೆ; ಹಂತಕರಿಗೆ ತಕ್ಕ ಶಿಕ್ಷೆಗೆ ಕ್ರಮ| ಬೆಳ್ಳಾರೆಯಲ್ಲಿ ಬಿ.ವೈ ವಿಜಯೇಂದ್ರ ಹೇಳಿಕೆ Read More »

ಪುತ್ತೂರು: ಸಾಮಾನ್ಯ ಸಭೆ ಬಹಿಷ್ಕಾರ

ಸಮಗ್ರ ನ್ಯೂಸ್: ಜು.28ರಂದು ನಡೆಯಬೇಕಿದ್ದ ದ.ಕ ಜಿಲ್ಲೆಯ ಪುತ್ತೂರು ತಾಲೂಕಿನ ನೆಟ್ಟಣಿಗೆ ಮುಡ್ನೂರು ಗ್ರಾ.ಪಂ ಸಾಮಾನ್ಯ ಸಭೆಯನ್ನು ಬಿಜೆಪಿ ಬೆಂಬಲಿತ ಪಂಚಾಯತ್ ಸದಸ್ಯರು ಬಹಿಷ್ಕಾರ ಮಾಡಿದ್ದಾರೆ. ಸಾಲು ಸಾಲು ಹಿಂದೂ ಕಾರ್ಯಕರ್ತರ ಹತ್ಯೆಯಾದರೂ ಕೂಡ ಕರ್ನಾಟಕದ ಬಿಜೆಪಿ ನಾಯಕರ ಮೌನ ಹಾಗೂ ಕಠಿಣ ಕ್ರಮ ಎಂಬ ಬಾಯಿ ಮಾತಿಗೆ ಮನನೊಂದು ಈ ನಿರ್ಧಾರ ಕೈಗೊಂಡಿದ್ದಾರೆ. ಬಿಜೆಪಿಯ ಬೆಂಬಲಿತರಾದ ಚಂದ್ರಹಾಸ ಈಶ್ವರಮಂಗಲ, ಪ್ರದೀಪ್ ರೈ ಕರ್ನೂರು, ಪ್ರಫುಲ್ಲ ಕರ್ನೂರು, ಕುಮಾರನಾಥ, ಪೂಜಾರಿ ಕರ್ನೂರು, ವೆಂಕಪ್ಪ ನಾಯ್ಕ, ಶಶಿಕಲಾ, ಸವಿತಾ,

ಪುತ್ತೂರು: ಸಾಮಾನ್ಯ ಸಭೆ ಬಹಿಷ್ಕಾರ Read More »

ಪ್ರವೀಣ್ ಮನೆಗೆ ಇಂದು ಸಿಎಂ ಬೊಮ್ಮಾಯಿ ಭೇಟಿ

ಸಮಗ್ರ ನ್ಯೂಸ್: ದುಷ್ಕರ್ಮಿಗಳಿಂದ ಹತ್ಯೆಗೀಡಾದ ಬಿಜೆಪಿ ಯುವ ಮುಂದಾಳು ಪ್ರವೀಣ್ ನೆಟ್ಟಾರು ಮನೆಗೆ ಇಂದು ಸಿಎಂ ಬಸವರಾಜ ಬೊಮ್ಮಾಯಿ ಭೇಟಿ ನೀಡಲಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರ‌ ಜೊತೆ ಈ ವಿಷಯ ತಿಳಿಸಿದ್ದು, ಮಧ್ಯಾಹ್ನ 3.15ಕ್ಕೆ ಮಂಗಳೂರಿಗೆ ವಿಶೇಷ ವಿಮಾನದಲ್ಲಿ ಪ್ರಯಾಣಿಸಿ ಅಲ್ಲಿಂದ ರಸ್ತೆ ಮಾರ್ಗವಾಗಿ ನೆಟ್ಟಾರಿಗೆ ತೆರಳುತ್ತಿದ್ದೇನೆ ಎಂದು ತಿಳಿಸಿದರು. ಸಿಎಂ ಜೊತೆ ಇನ್ನಿತರ ಪಕ್ಷದ ಮುಖಂಡರು ಆಗಮಿಸಲಿದ್ದು, ಮೃತರ ಕುಟುಂಬಕ್ಕೆ ಸಾಂತ್ವನ ಹೇಳಲಿದ್ದಾರೆ.

ಪ್ರವೀಣ್ ಮನೆಗೆ ಇಂದು ಸಿಎಂ ಬೊಮ್ಮಾಯಿ ಭೇಟಿ Read More »

ಪ್ರವೀಣ್ ಹತ್ಯೆ ಹಿನ್ನಲೆ| ಜನೋತ್ಸವ ಸಮಾವೇಶ ರದ್ದುಗೊಳಿಸಿದ ರಾಜ್ಯ ಸರ್ಕಾರ

ಸಮಗ್ರ ನ್ಯೂಸ್: ಬಸವರಾಜ ಬೊಮ್ಮಾಯಿ ಮುಖ್ಯಮಂತ್ರಿ ಆಗಿ ಒಂದು ವರ್ಷ ಪೂರ್ಣಗೊಂಡಿದ್ದು, ವರ್ಷಾಚರಣೆ ನಿಮಿತ್ತ ಹಮ್ಮಿಕೊಂಡಿದ್ದ ಜನೋತ್ಸವ ಸಮಾವೇಶವನ್ನು ರದ್ದುಗೊಳಿಸಲಾಗಿದೆ. ತಡರಾತ್ರಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ 12.30 ಕ್ಕೆ ತುರ್ತು ಸುದ್ದಿಗೋಷ್ಠಿ ನಡೆಸಿ ಈ ವಿಷಯ ಪ್ರಕಟಿಸಿದ್ದಾರೆ. ಪ್ರವೀಣ್ ಹತ್ಯೆ ನನಗೆ ನೋವು ಹಾಗೂ ಸಂಕಟ ತಂದಿದ್ದು, ಮನಸ್ಸಿಗೆ ತುಂಬಾ ಘಾಸಿಯಾಗಿರುವುದರಿಂದ ದೊಡ್ಡಬಳ್ಳಾಪುರದಲ್ಲಿ ಬಿಜೆಪಿ ಜನೋತ್ಸವ ಕಾರ್ಯಕ್ರಮವನ್ನು ರದ್ದುಪಡಿಸಲಾಗಿದೆ. ಸರ್ಕಾರದ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ವರ್ಷಾಚರಣೆಯನ್ನು ರದ್ದುಗೊಳಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ. ದಕ್ಷಿಣ ಕನ್ನಡದಲ್ಲಿ ಬಿಜೆಪಿ ಯುವ ಮುಖಂಡ

ಪ್ರವೀಣ್ ಹತ್ಯೆ ಹಿನ್ನಲೆ| ಜನೋತ್ಸವ ಸಮಾವೇಶ ರದ್ದುಗೊಳಿಸಿದ ರಾಜ್ಯ ಸರ್ಕಾರ Read More »

“ಪಕ್ಷಕ್ಕಿಂತ ಹಿಂದುತ್ವ ಮುಖ್ಯ, ಬಿಜೆಪಿ ನಪುಂಸಕ ನಾಯಕರಿಂದ ಕಠಿಣ ಕ್ರಮದ ಮಾತು ಮಾತ್ರ” ಬಿಜೆಪಿ ಯುವಮೋರ್ಚಾ ಸ್ಥಾನಕ್ಕೆ ರಾಜೀನಾಮೆ ನೀಡಿದ ಯುವ ಮುಂದಾಳು ಚಂದ್ರಹಾಸ ಈಶ್ವರಮಂಗಲ

ಸಮಗ್ರ ನ್ಯೂಸ್: “ಪಕ್ಷಕ್ಕಿಂತ ಹಿಂದುತ್ವ ಮುಖ್ಯ, ಬಿಜೆಪಿ ನಾಯಕರು ನಪುಂಸಕರು” ಎಂದು ಹೇಳಿರುವ ಬಿಜೆಪಿ ಯುವಮೋರ್ಚಾ ಮಂಡಲ ಕಾರ್ಯದರ್ಶಿ ಚಂದ್ರಹಾಸ ಈಶ್ವರಮಂಗಲ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. “ಪಕ್ಷಕ್ಕಿಂತ ಹಿಂದುತ್ವ ಮುಖ್ಯ, ಇನ್ನೆಷ್ಟು ಹೆಣಗಳು ಬೇಕು? ಸಾಮಾನ್ಯ ಕಾರ್ಯಕರ್ತರದ್ದು ಇಂದು ಪ್ರವೀಣ್ ನೆಟ್ಟಾರು ನಾಳೆ ನಾವು, ಇಷ್ಟೇ ಜೀವನ ನನಗೆ ಜೀವ ಬೆದರಿಕೆ‌ ಬಂದು ಸುಮಾರು ಆರು ತಿಂಗಳುಗಳೇ ಕಳೆದು ಹೋದರೂ ಕೂಡ ಇಲ್ಲಿಯವರೆಗೆ ಪೋಲೀಸ್ ಇಲಾಖೆಯವರಿಗೆ ಅಇಥಾಾ ನಮ್ಮ ಸರಕಾರಕ್ಕೆ ಕಂಡು ಹಿಡಿಯಲು ಸಾಧ್ಯವಾಗಿಲ್ಲ. ಇಂದು

“ಪಕ್ಷಕ್ಕಿಂತ ಹಿಂದುತ್ವ ಮುಖ್ಯ, ಬಿಜೆಪಿ ನಪುಂಸಕ ನಾಯಕರಿಂದ ಕಠಿಣ ಕ್ರಮದ ಮಾತು ಮಾತ್ರ” ಬಿಜೆಪಿ ಯುವಮೋರ್ಚಾ ಸ್ಥಾನಕ್ಕೆ ರಾಜೀನಾಮೆ ನೀಡಿದ ಯುವ ಮುಂದಾಳು ಚಂದ್ರಹಾಸ ಈಶ್ವರಮಂಗಲ Read More »

ಹುಸಿಯಾದ ಕಠಿಣ ಕ್ರಮದ ಭರವಸೆ| ರಾಜ್ಯಾದ್ಯಂತ ‌ಬಿಜೆಪಿ ಕಾರ್ಯಕರ್ತರ ರಾಜಿನಾಮೆ ಶುರು

ಸಮಗ್ರ ನ್ಯೂಸ್: ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿಯಲ್ಲಿ ರಾಜಿನಾಮೆ‌ ಟ್ರೆಂಡ್ ಶುರುವಾಗಿದೆ. ಯುವಮೋರ್ಚಾದ ಹಲವರು ರಾಜೀನಾಮೆ ನೀಡಲು ಶುರು ಮಾಡಿದ್ದಾರೆ. ತಮಗೆ ನೀಡಿದ ಜವಾಬ್ದಾರಿಗೆ ರಾಜೀನಾಮೆ ನೀಡುತ್ತಿದ್ದು, ‘ಜವಾಬ್ದಾರಿಗೆ ರಾಜೀನಾಮೆ’ ಹೆಸರಲ್ಲಿ ರಾಜೀನಾಮೆ ಪರ್ವ ಶುರುವಾಗಿದೆ. ಕಠಿಣ ಕ್ರಮದ ಹೇಳಿಕೆಗಷ್ಟೆ ಬಿಜೆಪಿ ಸರ್ಕಾರ ಇದೆ, ಕಾರ್ಯಕರ್ತರ ಜೀವದ ಜೊತೆ ಚೆಲ್ಲಾಟ ಆಡುತ್ತಿದ್ದಾರೆ. ವಾಜಪೇಯಿ, ಅಡ್ವಾಣಿ ಹೆಸರನ್ನು ಹಾಳು ಮಾಡಲಾಗುತ್ತಿದೆ‌,ಈಗಲಾದರೂ ಕಠಿಣ ಕ್ರಮ ಕೈಗೊಳ್ಳಿ ಎಂದು ಹಲವರ ರಾಜೀನಾಮೆ ನೀಡುತ್ತಿದ್ದಾರೆ.

ಹುಸಿಯಾದ ಕಠಿಣ ಕ್ರಮದ ಭರವಸೆ| ರಾಜ್ಯಾದ್ಯಂತ ‌ಬಿಜೆಪಿ ಕಾರ್ಯಕರ್ತರ ರಾಜಿನಾಮೆ ಶುರು Read More »

ಮಂಗಳೂರು: ಪ್ರವೀಣ್ ಹಂತಕರ ಪತ್ತೆಗೆ ಐದು ವಿಶೇಷ ತಂಡ ರಚನೆ

ಸಮಗ್ರ ನ್ಯೂಸ್: ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ಹಂತಕರ ಪತ್ತೆಗೆ ಪೊಲೀಸರು ಐದು ವಿಶೇಷ ತಂಡಗಳನ್ನು ರಚಿಸಿದ್ದಾರೆ. ಆರೋಪಿಗಳ ಬೆನ್ನು ಹತ್ತಿ ಕೇರಳ, ಮಡಿಕೇರಿ, ಹಾಸನಕ್ಕೆ ಪೊಲೀಸರು ಮೂರು ತಂಡಗಳು ತೆರಳಿವೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರುಷಿಕೇಷ್ ಸೋನಾವಣೆ ಮಾಹಿತಿ ನೀಡಿದ್ದಾರೆ. ಕೊಲೆ ಆರೋಪಿಗಳಿಗಾಗಿ ಕೇರಳ ಗಡಿ ಪ್ರದೇಶ ಹಾಗೂ ಪುತ್ತೂರಿನ ಸುತ್ತಮುತ್ತ ನಾಕಾಬಂದಿ ಹಾಕಿ ವಾಹನಗಳನ್ನು ತಲಾಶ್ ಮಾಡಲಾಗುತ್ತಿದೆ. ಪ್ರವೀಣ್ ನೆಟ್ಟಾರು ಹತ್ಯೆಯ ನಂತರ ಸುಳ್ಯ ತಾಲ್ಲೂಕಿನ ಬೆಳ್ಳಾರೆ ಗ್ರಾಮದಲ್ಲಿ ಉದ್ವಿಗ್ನ

ಮಂಗಳೂರು: ಪ್ರವೀಣ್ ಹಂತಕರ ಪತ್ತೆಗೆ ಐದು ವಿಶೇಷ ತಂಡ ರಚನೆ Read More »

ದ.ಕ ಜಿಲ್ಲೆಯಲ್ಲಿ ಹಿಂದೂ ಕಾರ್ಯಕರ್ತನ ಹತ್ಯೆ ಪ್ರಕರಣ| “ಇನ್ನು ಸಹಿಸಲಸಾಧ್ಯ; ಕಠಿಣ ಶಿಕ್ಷೆ ಖಂಡಿತ” – ಸಿಎಂ ಬೊಮ್ಮಾಯಿ ಟ್ವೀಟ್

ಸಮಗ್ರ ನ್ಯೂಸ್: ದಕ್ಷಿಣ ಕನ್ನಡ ಜಿಲ್ಲೆ ಸುಳ್ಯದ ನಮ್ಮ ಪಕ್ಷದ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಅವರ ಬರ್ಬರ ಹತ್ಯೆ ಖಂಡನೀಯ. ಇಂಥ ಹೇಯಕೃತ್ಯ ಎಸಗಿರುವ ದುಷ್ಕರ್ಮಿಗಳನ್ನು ಶೀಘ್ರವಾಗಿ ಬಂಧಿಸಿ ಕಾನೂನಿನ ಅಡಿಯಲ್ಲಿ ಶಿಕ್ಷಿಸಲಾಗುವುದು ಅಂತ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದ್ದಾರೆ. ಈ ಸಂಬಂಧ ಸಿಎಂ ಅವರ ಅಧಿಕೃತ ಟ್ವಿಟ್ಟರ್‌ ಖಾತೆಯಲ್ಲಿ ಬರೆದುಕೊಂಡಿರುವ ಬೊಮ್ಮಾಯಿ, ದಕ್ಷಿಣ ಕನ್ನಡ ಜಿಲ್ಲೆ ಸುಳ್ಯದ ನಮ್ಮ ಪಕ್ಷದ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಅವರ ಬರ್ಬರ ಹತ್ಯೆ ಖಂಡನೀಯ. ಇಂಥ ಹೇಯಕೃತ್ಯ ಎಸಗಿರುವ

ದ.ಕ ಜಿಲ್ಲೆಯಲ್ಲಿ ಹಿಂದೂ ಕಾರ್ಯಕರ್ತನ ಹತ್ಯೆ ಪ್ರಕರಣ| “ಇನ್ನು ಸಹಿಸಲಸಾಧ್ಯ; ಕಠಿಣ ಶಿಕ್ಷೆ ಖಂಡಿತ” – ಸಿಎಂ ಬೊಮ್ಮಾಯಿ ಟ್ವೀಟ್ Read More »