ಮೀನುಗಾರಿಕೆಗೆ ಈ ವರ್ಷವೂ ಆರಂಭದಲ್ಲೇ ಅಡ್ಡಿ| ಕಡಲಿಗಿಳಿಯದೆ ದಡದಲ್ಲೇ ಉಳಿದ ಬೋಟುಗಳು|ಹೋದ ದೋಣಿಗಳೂ ಬರಿಗೈಯಲ್ಲಿ ವಾಪಸ್
ಉಡುಪಿ: ಮಳೆ, ಗಾಳಿಯಿಂದಾಗಿ ಸಮುದ್ರ ಪ್ರಕ್ಷುಬ್ಧವಾಗಿದ್ದು, ಯಾಂತ್ರಿಕ ಮೀನುಗಾರಿಕೆ ಆರಂಭದ ದಿನದಲ್ಲೇ ಅಡಚಣೆ ಉಂಟಾಗಿದೆ. 61 ದಿನಗಳ ರಜೆಯ ಬಳಿಕ ಬಹು ನಿರೀಕ್ಷೆಯೊಂದಿಗೆ ಆ. 1ರಿಂದ ಕಡಲಿಗಿಳಿಯಬೇಕಿದ್ದ ಮೀನುಗಾರರಿಗೆ ನಿರಾಶೆಯಾಗಿದೆ. ದೋಣಿಗಳನ್ನು ಕಡಲಿಗೆ ಇಳಿಸುವುದು ವಿಳಂಬವಾಗುತ್ತಿರುವುದರಿಂದ ಮಂಜುಗಡ್ಡೆ ವ್ಯವಹಾರ, ಮೀನು ಸಾಗಾಟ ವ್ಯವಸ್ಥೆ, ಮಾರಾಟಗಾರರು ಸೇರಿದಂತೆ ಮೀನುಗಾರಿಕೆಗೆ ಅವಲಂಬಿತ ಕ್ಷೇತ್ರಗಳೆಲ್ಲವೂ ಹಿನ್ನೆಡೆ ಕಂಡಿವೆ. ಕಳೆದ ಋತುವಿನಲ್ಲಿ ಮೀನಿನ ಕ್ಷಾಮದ ಜತೆಗೆ ಚಂಡಮಾರುತದಿಂದಾಗಿ ಪದೇಪದೆ ಸಮುದ್ರ ಪ್ರಕ್ಷುಬ್ಧವಾಗಿದ್ದು ಮೀನುಗಾರರು ಸಂಕಷ್ಟ ಎದುರಿಸಿದ್ದರು. ಈ ಋತುವಿನ ಆರಂಭವೂ ಅದೇ ರೀತಿ […]

