ಗಣೇಶೋತ್ಸವ ಮೆರವಣಿಗೆ ವೇಳೆ ಯುವಕನಿಗೆ ಚೂರಿ ಇರಿದು ಕೊಲೆ

ಸಮಗ್ರ ನ್ಯೂಸ್: ಗಣೇಶೋತ್ಸವ ಮೆರವಣಿಗೆಯ ಸಂದರ್ಭದಲ್ಲಿ ಯುವಕನೊಬ್ಬನಿಗೆ ಚೂರಿ ಇರಿದು ಕೊಲೆ ಮಾಡಿರುವ ದಾರುಣ ಘಟನೆ ಜಿಲ್ಲೆಯ ತೋಟಂದಾರ್ಯ ಮಠದ ಬಳಿ ನಿನ್ನೆ(ಸೆ. 9) ತಡರಾತ್ರಿ ನಡೆದಿದೆ. ಕೊಲಯಾದ ಯುವಕನನ್ನು ಸುದೀಪ್ ಮುಡೆವಾಡಿ(22) ಎಂದು ಗುರುತಿಸಲಾಗಿದೆ. ಗಣೇಶ ವಿಸರ್ಜನೆಯ ಸಂದರ್ಭದಲ್ಲಿ ಸುದೀಪ್ ಸ್ನೇಹಿತರೇ ಚಾಕುವಿನಲ್ಲಿ ಇರಿದು ಕೊಲೆ ಮಾಡಿದ್ದು, ರಕ್ತದ ಮಡುವಿನಲ್ಲೇ ಬಿದ್ದು ಸುದೀಪ್ ಸಾವನ್ನಪ್ಪಿದ್ದಾನೆ. ಶಹರಾ ಠಾಣೆಯ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದು, ಕೊಲೆಗೆ ಕಾರಣ ತಿಳಿದು ಬಂದಿಲ್ಲ ಎನ್ನಲಾಗಿದೆ.

ಗಣೇಶೋತ್ಸವ ಮೆರವಣಿಗೆ ವೇಳೆ ಯುವಕನಿಗೆ ಚೂರಿ ಇರಿದು ಕೊಲೆ Read More »