Mangalore

Mangaluru : ಪೊಲೀಸರಿಗೆ ಕಾರು ಡಿಕ್ಕಿ, ಓರ್ವ ಗಂಭೀರ 

ಸಮಗ್ರ ನ್ಯೂಸ್ : ನಗರದ ಮಣ್ಣಗುಡ್ಡದ ಗೋದಾಮು ಸಮೀಪ ಮೇ. 27ರ ರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಕರ್ತವ್ಯದಲ್ಲಿದ್ದ ಇಬ್ಬರು ಸಂಚಾರ ಪೊಲೀಸರು ಗಾಯಗೊಂಡಿದ್ದು, ಓರ್ವರ ಸ್ಥಿತಿ ಗಂಭೀರವಾಗಿದೆ. ಮಂಗಳೂರು ನಗರ ಸಂಚಾರ ಪಶ್ಚಿಮ ಠಾಣೆಯ ಹೆಡ್ ಕಾನ್‌ಸ್ಟೆಬಲ್ ವಿಠಲ್ ದಾಸ್ ಹಾಗೂ ಕಾನ್‌ಸ್ಟೆಬಲ್ ಕುಮಾರ್ ಗಾಯಗೊಂಡವರು. ಇವರಲ್ಲಿ ವಿಠಲ್ ದಾಸ್ ಅವರಿಗೆ ಗಂಭೀರ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಪೊಲೀಸರ ಮಾಹಿತಿ ಪ್ರಕಾರ, ಮಂಗಳವಾರ ರಾತ್ರಿ ಸುಮಾರು 11 ಗಂಟೆ ವೇಳೆಗೆ ಮತ್ತೊಂದು […]

Mangaluru : ಪೊಲೀಸರಿಗೆ ಕಾರು ಡಿಕ್ಕಿ, ಓರ್ವ ಗಂಭೀರ  Read More »

ದುಬೈನಲ್ಲಿ ರಸ್ತೆ ಅಪಘಾತ: ಕೋಮಾದಲ್ಲಿದ್ದ ಮಂಗಳೂರಿನ ಯುವತಿ ಸಾವು

ಸಮಗ್ರ ನ್ಯೂಸ್ : ದುಬೈನಲ್ಲಿ ನಡೆದ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು, ಕೆಲವು ತಿಂಗಳುಗಳಿಂದ ಕೋಮಾದಲ್ಲಿದ್ದ ಯುವತಿಯೊಬ್ಬರು ಮೇ 24 ರಂದು ನಿಧನರಾಗಿದ್ದಾರೆ. ಮೃತರನ್ನು ಕಿನ್ನಿಗೋಳಿಯ ಪುನರೂರಿನ ವಾಸುದೇವ ಅಗ್ರಹಾರ ನಿವಾಸಿ ಶ್ರೀಲತಾ ತಂತ್ರಿ (26) ಎಂದು ಗುರುತಿಸಲಾಗಿದೆ. ಇವರು ಭರತನಾಟ್ಯ ಹಾಗೂ ಯಕ್ಷಗಾನ ಕಲಾವಿದೆಯಾಗಿದ್ದು, ನಿರೂಪಕಿಯಾಗಿಯೂ ಗುರುತಿಸಿಕೊಂಡಿದ್ದರು. ದುಬೈನಲ್ಲಿ ಉದ್ಯೋಗದಲ್ಲಿದ್ದ ಶ್ರೀಲತಾ ಅವರು ಕಳೆದ ವರ್ಷ ನವೆಂಬರ್‌ನಲ್ಲಿ ಅಲ್ಲಿ ನಡೆದ ರಸ್ತೆ ಅಪಘಾತವೊಂದರಲ್ಲಿ ಗಂಭೀರವಾಗಿ ಗಾಯಗೊಂಡು ಕೋಮಾ ಸ್ಥಿತಿಗೆ ತಲುಪಿದ್ದರು. ಪ್ರಾರಂಭದಲ್ಲಿ ಅವರಿಗೆ ದುಬೈನಲ್ಲೇ ಚಿಕಿತ್ಸೆ ನೀಡಲಾಗಿತ್ತು.

ದುಬೈನಲ್ಲಿ ರಸ್ತೆ ಅಪಘಾತ: ಕೋಮಾದಲ್ಲಿದ್ದ ಮಂಗಳೂರಿನ ಯುವತಿ ಸಾವು Read More »

ಎಬೋಲಾ ವೈರಸ್ ಬೀತಿ| ಮಂಗಳೂರಿನಲ್ಲಿ ಹೈ ಅಲರ್ಟ್ 

ಸಮಗ್ರ ನ್ಯೂಸ್ : ಎಬೋಲಾ ವೈರಸ್ ಪ್ರಕರಣಗಳು ವೇಗವಾಗಿ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮಂಗಳೂರಿನಲ್ಲಿ ಅಧಿಕಾರಿಗಳು ಮಂಗಳೂರಿನಲ್ಲಿ ಹೈ ಅಲರ್ಟ್ ಯಾಗಿದ್ದಾರೆ. ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಿಶೇಷ ಸ್ಕ್ರೀನಿಂಗ್ ಪ್ರೋಟೋಕಾಲ್‌ಗಳನ್ನು ಜಾರಿಗೆ ತರಲಾಗಿದ್ದೂ, ಕೇಂದ್ರ ಸರ್ಕಾರದ ಸ್ಪಷ್ಟ ಸೂಚನೆಗಳ ಪ್ರಕಾರ, ಆರೋಗ್ಯ ಇಲಾಖೆಯ ಅಧಿಕಾರಿಗಳು ಡೆನ್ಮಾರ್ಕ್, ಕಾಂಗೋ, ಉಗಾಂಡಾ ಮತ್ತು ದಕ್ಷಿಣ ಸುಡಾನ್ ದೇಶಗಳಿಂದ ಬರುವ ಅಥವಾ ಅವುಗಳ ಮೂಲಕ ಸಾಗುವ ಎಲ್ಲಾ ಪ್ರಯಾಣಿಕರಿಗೆ ಕಠಿಣ ಆರೋಗ್ಯ ತಪಾಸಣೆ ನಡೆಸುತ್ತಿದ್ದಾರೆ . ರೋಗಲಕ್ಷಣ ಅಥವಾ ಸೋಂಕಿತ ವ್ಯಕ್ತಿಗಳ ರಕ್ತ

ಎಬೋಲಾ ವೈರಸ್ ಬೀತಿ| ಮಂಗಳೂರಿನಲ್ಲಿ ಹೈ ಅಲರ್ಟ್  Read More »

ಮಂಗಳೂರು ಏರ್‌ಪೋರ್ಟ್ ಬಳಿ ಹೊಸ ರೈಲು ನಿಲ್ದಾಣ : ಸಚಿವ ವಿ. ಸೋಮಣ್ಣ

ಸಮಗ್ರ ನ್ಯೂಸ್ : ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಸಮೀಪದಲ್ಲೇ ಪ್ರಯಾಣಿಕರ ಅನುಕೂಲಕ್ಕಾಗಿ ಮತ್ತೊಂದು ಹೊಸ ರೈಲು ನಿಲ್ದಾಣವನ್ನು ನಿರ್ಮಿಸುವ ಕುರಿತು ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ವಿ. ಸೋಮಣ್ಣ ತಿಳಿಸಿದ್ದಾರೆ. ಶನಿವಾರ ಮಂಗಳೂರು ಜಂಕ್ಷನ್ ರೈಲ್ವೆ ನಿಲ್ದಾಣಕ್ಕೆ ಭೇಟಿ ನೀಡಿ, ‘ಅಮೃತ್ ಭಾರತ್ ಸ್ಟೇಷನ್’ ಯೋಜನೆಯಡಿ ನಡೆಯುತ್ತಿರುವ ಅಭಿವೃದ್ಧಿ ಕಾಮಗಾರಿಗಳನ್ನು ಪರಿಶೀಲಿಸಿದ ಬಳಿಕ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು. ಮಂಗಳೂರು ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರ ವಿಶೇಷ ಪ್ರಸ್ತಾವನೆಯ ಮೇರೆಗೆ ಈ ಹೊಸ ನಿಲ್ದಾಣದ

ಮಂಗಳೂರು ಏರ್‌ಪೋರ್ಟ್ ಬಳಿ ಹೊಸ ರೈಲು ನಿಲ್ದಾಣ : ಸಚಿವ ವಿ. ಸೋಮಣ್ಣ Read More »

ಸಂಪಾಜೆ: ಗೂನಡ್ಕದಲ್ಲಿ ಚಾಲಕನ ನಿಯಂತ್ರಣ ತಪ್ಪಿ ಹೋಟೆಲ್‍ಗೆ ಕಾರು ಢಿಕ್ಕಿ

ಸಮಗ್ರ ನ್ಯೂಸ್ : ಚಾಲಕನ ನಿಯಂತ್ರಣ ತಪ್ಪಿ ಕಾರು ರಸ್ತೆ ಬದಿಯ ಹೋಟೆಲ್‍ಗೆ ಢಿಕ್ಕಿ ಹೊಡೆದು ಪಲ್ಟಿಯಾದ ಘಟನೆ ದ.ಕ. ಸಂಪಾಜೆ ಗ್ರಾಮದ ಗೂನಡ್ಕದಲ್ಲಿ ಮಾ.11ರಂದು ಸಂಭವಿಸಿದೆ. ಸುಳ್ಯದಿಂದ ಮಡಿಕೇರಿ ಕಡೆಗೆ ತೆರಳುತ್ತಿದ್ದ ಸಂಪಾಜೆ ಮಸೀದಿಯ ಜಮಾಲುದ್ದೀನ್ ಎಂಬವರ ಕಾರು ಗೂನಡ್ಕದಲ್ಲಿ ಚಾಲಕನ ನಿಯಂತ್ರಣ ತಪ್ಪಿ ಹನೀಫ್ ಎಂಬವರ ಹೋಟೆಲ್‍ಗೆ ಢಿಕ್ಕಿ ಹೊಡೆದು ಪಲ್ಟಿಯಾಗಿದ್ದು, ಕಾರಿನಲ್ಲಿದ್ದ ನಾಲ್ಕು ಜನ ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯವಾಗಿದ್ದು, ಅವರನ್ನು ಸುಳ್ಯದ ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಎಂದು ತಿಳಿದುಬಂದಿದೆ.

ಸಂಪಾಜೆ: ಗೂನಡ್ಕದಲ್ಲಿ ಚಾಲಕನ ನಿಯಂತ್ರಣ ತಪ್ಪಿ ಹೋಟೆಲ್‍ಗೆ ಕಾರು ಢಿಕ್ಕಿ Read More »

ಮಂಗಳೂರು: ವೇಶ್ಯಾವಾಟಿಕೆ ಅಡ್ಡೆಗೆ ದಾಳಿ| ಮಹಿಳೆ ಸೇರಿ ನಾಲ್ವರ ಬಂಧನ

ಸಮಗ್ರ ನ್ಯೂಸ್: ಯುವತಿಯರನ್ನು ಇಟ್ಟು ವೇಶ್ಯಾವಾಟಿಕೆ ನಡೆಸುತ್ತಿದ್ದುದಲ್ಲದೆ ಮಾಂಸ ಧಂದೆ ನಡೆಸುತ್ತಿದ್ದ ಅಡ್ಡೆಗೆ ಉಳ್ಳಾಲ ಪೊಲೀಸರು ದಾಳಿ ನಡೆಸಿ ದಂಪತಿ ಸಹಿತ ನಾಲ್ವರನ್ನ ಬಂಧಿಸಿದ ಘಟನೆ ಮಂಗಳೂರಿನ ಉಳ್ಳಾಲದ ಕೋಟೆಕಾರು ಬೀರಿಯ ಪ್ರಾಥಮಿಕ ಆರೋಗ್ಯ ಕೇಂದ್ರದ ಬಳಿಯ ಬಾಡಿಗೆ ಮನೆಯೊಂದರಲ್ಲಿ ನಡೆದಿದೆ. ಬೀರಿ ಬಾಡಿಗೆ ಮನೆ ನಿವಾಸಿ ಮೊಹಮ್ಮದ್ ಇಕ್ಬಾಲ್, ಆತನ ಪತ್ನಿ ಅಲಿಮಮ್ಮ, ಉಳ್ಳಾಲ ನಿವಾಸಿ ಶರ್ಫುದ್ದೀನ್, ಇರ್ಶಾದ್ ಅಡ್ಯನಡ್ಕ ಬಂಧಿತರು. ಆರೋಪಿಗಳನ್ನು ಪೊಲೀಸರು ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ. ಮೊಹಮ್ಮದ್ ಇಕ್ಬಾಲ್ ಈ ಪ್ರಕರಣದ ಮುಖ್ಯ

ಮಂಗಳೂರು: ವೇಶ್ಯಾವಾಟಿಕೆ ಅಡ್ಡೆಗೆ ದಾಳಿ| ಮಹಿಳೆ ಸೇರಿ ನಾಲ್ವರ ಬಂಧನ Read More »

ಮಂಗಳೂರು: ಮತಾಂತರಗೊಳಿಸಿ ಲೈಂಗಿಕ ಕಿರುಕುಳ| ಮುಸ್ಲಿಂ ಯುವಕನ ವಿರುದ್ದ ದೂರಿತ್ತ ಯುವತಿ

ಸಮಗ್ರ ನ್ಯೂಸ್: ಮತಾಂತರಗೊಳಿಸಿ ಲೈಂಗಿಕ ಕಿರುಕುಳ ನೀಡಿರುವ ಬಗ್ಗೆ ಯುವತಿಯೋರ್ವಳು ಮಂಗಳೂರು ಮಹಿಳಾ ಠಾಣೆಗೆ ದೂರು ನೀಡಿದ್ದಾರೆ. ಬಿಕರ್ನಕಟ್ಟೆಯಲ್ಲಿರುವ ಅಂಗಡಿಯೊಂದರಲ್ಲಿ ಕೆಲಸ ಮಾಡಿಕೊಂಡಿದ್ದಾಗ ಬಿಕರ್ನಕಟ್ಟೆಯ ಕೈಕಂಬದಲ್ಲಿರುವ ಖಲೀಲ್‌ನ ಮೊಬೈಲ್‌ ಶಾಪ್‌ನಲ್ಲೇ ಮೊಬೈಲ್‌ ರಿಚಾರ್ಜ್‌ ಮಾಡುತ್ತಿದ್ದೆ.ಆಗ ಖಲೀಲ್‌ನ ಪರಿಚಯವಾಗಿತ್ತು. 2021ರ ಜ.14ರಂದು ಖಲೀಲ್‌ ಒಳ್ಳೆಯ ಕೆಲಸ ಮತ್ತು ಹಣ ಕೊಡುವುದಾಗಿ ಆಮಿಷವೊಡ್ಡಿ ಪುಸಲಾಯಿಸಿ ಆತನ ಕುಟುಂಬದ ಮನೆಯಾದ ಕಲ್ಲಾಪುಗೆ ಕರೆದುಕೊಂಡು ಹೋಗಿ ಅಲ್ಲಿದ್ದ ಮಹಿಳೆಯರಿಗೆ ಪರಿಚಯಿಸಿದ. ಮುಸ್ಲಿಂ ಧರ್ಮಕ್ಕೆ ಮತಾಂತರವಾಗಲು, ಕುರಾನ್‌ ಓದಲು ಒತ್ತಾಯ ಮಾಡಿ ನಮಾಝ್ ಮಾಡಿಸಿದ್ದ.

ಮಂಗಳೂರು: ಮತಾಂತರಗೊಳಿಸಿ ಲೈಂಗಿಕ ಕಿರುಕುಳ| ಮುಸ್ಲಿಂ ಯುವಕನ ವಿರುದ್ದ ದೂರಿತ್ತ ಯುವತಿ Read More »

ತೀವ್ರ ವಿರೋಧದ ಹಿನ್ನೆಲೆ| ಬೆಂಗಳೂರಿನಲ್ಲಿ ನಡೆಯಬೇಕಿದ್ದ ಕೊರಗಜ್ಜ ನೇಮ ರದ್ದು

ಸಮಗ್ರ ನ್ಯೂಸ್: ಬೆಂಗಳೂರಿನ ಯಲಹಂಕದಲ್ಲಿ ಕೊರಗಜ್ಜ ನೇಮ ಆಚರಣೆ ಮಾಡಲು ನಿರ್ಧರಿಸಲಾಗಿದ್ದ‌ ಕೊರಗಜ್ಜ ನೇಮಕ್ಕೆ ತುಳುನಾಡಿನ ಕೆಲವರಿಂದ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ನೇಮೋತ್ಸವವನ್ನು ರದ್ದುಪಡಿಸಲಾಗಿದೆ. ಬೆಂಗಳೂರಿನ ಯಲಹಂಕದ ಚೊಕ್ಕನಹಳ್ಳಿಯಲ್ಲಿ ಇಂದು (ನವೆಂಬರ್ 26) ಕೆಲವರು ಕೊರಗಜ್ಜ ನೇಮ ಆಚರಿಸಲು ಮುಂದಾಗಿದ್ದರು. ಆದರೆ, ಇದಕ್ಕೆ ತುಳುವರಿಂದ ವಿರೋಧ ವ್ಯಕ್ತವಾಯಿತು. ‘ಇದನ್ನು ನಾವು ಸ್ವಾಗತಿಸುವುದಿಲ್ಲ. ಈ ರೀತಿಯ ಕಾರ್ಯಕ್ರಮಗಳಿಂದ ಸಂಘಟಕರು ಹಣ ಮಾಡುತ್ತಿದ್ದಾರೆ. ದೈವಾರಾಧನೆ ಎಂದರೆ ದೇವತಾರಾಧನೆ ಎಂದರ್ಥ. ದೇವತೆ ನೆಲೆಸಿರುವ ಭೂಮಿಯಲ್ಲಿ ಮಾತ್ರ ಅದನ್ನು ಮಾಡಬೇಕು’ ಎಂದು ತುಳು

ತೀವ್ರ ವಿರೋಧದ ಹಿನ್ನೆಲೆ| ಬೆಂಗಳೂರಿನಲ್ಲಿ ನಡೆಯಬೇಕಿದ್ದ ಕೊರಗಜ್ಜ ನೇಮ ರದ್ದು Read More »

ಮಂಗಳೂರು: ವಿವಾದಿತ ಮಳಲಿ ಮಸೀದಿ ತೀರ್ಪು ಅ.17ರವರೆಗೆ ಕಾಯ್ದಿರಿಸಿದ ಕೋರ್ಟ್

ಸಮಗ್ರ ನ್ಯೂಸ್: ಮಂಗಳೂರು ನಗರದ ಹೊರವಲಯದ ಗಂಜಿಮಠ ಬಳಿಯ ಮಳಲಿ ಮಸೀದಿ ವಿವಾದ ಹಿನ್ನೆಲೆ ಸ್ಥಳದಲ್ಲಿ ಸರ್ವೇ ಮಾಡಿಸುವಂತೆ ಕೋರಿ ವಿಶ್ವ ಹಿಂದೂ ಪರಿಷತ್ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ್ದ 3ನೇ ಹೆಚ್ಚುವರಿ ಸಿವಿಲ್ ಕೋರ್ಟ್, ಆದೇಶವನ್ನು ಕಾಯ್ದಿರಿಸಿದೆ. ಅಲ್ಲದೆ ಅ.17ರಂದು ಆದೇಶ ಹೊರಡಿಸುವುದಾಗಿ ಸ್ಪಷ್ಟಪಡಿಸಿದೆ. ಏಪ್ರಿಲ್ 21ರಂದು ನಗರದ ಹೊರವಲಯದ ಮಳಲಿಯಲ್ಲಿರುವ ಅಸಯ್ಯಿದ್ ಅಬ್ದುಲ್ಲಾಹಿಲ್ ಮದನಿ ಮಸೀದಿಯನ್ನು ನವೀಕರಣ ಹಿನ್ನೆಲೆಯಲ್ಲಿ ಕೆಡವಿ ಹಾಕಲಾಗಿತ್ತು. ನವೀಕರಣಕ್ಕೆ ಮುಂದಾದಾಗ ಹಿಂದೂ ದೇಗುಲ ಹೋಲುವ ಆಕೃತಿಯ ವಾಸ್ತುಶಿಲ್ಪದ ಕಟ್ಟಡ ಪತ್ತೆಯಾಗಿತ್ತು.‌

ಮಂಗಳೂರು: ವಿವಾದಿತ ಮಳಲಿ ಮಸೀದಿ ತೀರ್ಪು ಅ.17ರವರೆಗೆ ಕಾಯ್ದಿರಿಸಿದ ಕೋರ್ಟ್ Read More »

ಪ್ರಧಾನಿ ಮೋದಿ ಸ್ವಾಗತಕ್ಕೆ ಕುಡ್ಲ ಸಜ್ಜು| ಇಂದಿನ ಕಾರ್ಯಕ್ರಮಗಳು ಹೀಗಿರಲಿವೆ…

ಸಮಗ್ರ ನ್ಯೂಸ್: ಪ್ರಧಾನಿ ನರೇಂದ್ರ ಮೋದಿ ಇಂದು ಮಂಗಳೂರು ಭೇಟಿ ನೀಡಲಿದ್ದಾರೆ. ಕೊಚ್ಚಿನ್​ನಿಂದ ವಿಶೇಷ ವಿಮಾನದ ಮೂಲಕ ಪ್ರಧಾನಿ ಮಧ್ಯಾಹ್ನ 12.55ರ ಸುಮಾರಿಗೆ ಮಂಗಳೂರು ವಿಮಾನ ನಿಲ್ದಾಣ ತಲುಪಲಿದ್ದಾರೆ. ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೇರಿದಂತೆ ರಾಜ್ಯ, ಕೇಂದ್ರ ಸಚಿವರು ಪ್ರಧಾನಿ ಮೋದಿಯವರನ್ನು ಸ್ವಾಗತಿಸಲಿದ್ದಾರೆ. ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಮಧ್ಯಾಹ್ನ 1.20ಕ್ಕೆ ಸೇನಾ ಹೆಲಿಕಾಪ್ಟರ್ ಮೂಲಕ ಪ್ರಧಾನಿ ಮೋದಿ ಪಣಂಬೂರುನಲ್ಲಿರುವ ಎನ್​.ಎಂ.ಪಿ.ಎ ಹೆಲಿಪ್ಯಾಡ್​ಗೆ ಬರಲಿದ್ದಾರೆ. ಮಧ್ಯಾಹ್ನ 1.30 ಗಂಟೆಗೆ ಎನ್​.ಎಂ.ಪಿ.ಎ ಹೆಲಿಪ್ಯಾಡ್​ನಿಂದ ಒಂದೂವರೆ ಕಿ.ಮೀ

ಪ್ರಧಾನಿ ಮೋದಿ ಸ್ವಾಗತಕ್ಕೆ ಕುಡ್ಲ ಸಜ್ಜು| ಇಂದಿನ ಕಾರ್ಯಕ್ರಮಗಳು ಹೀಗಿರಲಿವೆ… Read More »